Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಬಂಧನ

ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಮಂಗಳವಾರ (ಫೆ. 24) ಮುಂಜಾನೆ ಸುಮಾರು 4:30ಕ್ಕೆ ಬಂಧಿಸಿದ್ದಾರೆ. ಕಳೆದ ವಾರ ದೆಹಲಿಯ ಭಾರತ್ ಮಂಟಪದಲ್ಲಿ ನಡೆದ...

ಭೂ ವಿವಾದದಲ್ಲಿ ಸಹೋದರರ ಹತ್ಯೆ; ಒಂದೇ ಕುಟುಂಬದ 13 ಮಂದಿಗೆ ಜೀವಾವಧಿ ಶಿಕ್ಷೆ

ಭೂ ವಿವಾದಕ್ಕೆ ಸಂಬಂಧಿಸಿದಂತೆ ಸುಮಾರು 10 ವರ್ಷಗಳ ಹಿಂದೆ ಇಬ್ಬರು ಸಹೋದರರನ್ನು ಹತ್ಯೆಗೈದ ಪ್ರಕರಣದಲ್ಲಿ ಒಂದೇ ಕುಟುಂಬದ 13 ಮಂದಿಗೆ ಉತ್ತರ ಪ್ರದೇಶದ ಸಹರಾನ್‌ಪುರದ ಸ್ಥಳೀಯ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು...

ಉತ್ತರ ಪ್ರದೇಶ: ಬಜರಂಗದಳ ದೂರಿನ ಮೇರೆಗೆ ಮತಾಂತರ ವಿರೋಧಿ ಕಾನೂನಿನಡಿಯಲ್ಲಿ ಕೇರಳ ಮೂಲದ ಪಾದ್ರಿಯ ಬಂಧನ

ಬಜರಂಗದಳ ಸದಸ್ಯರು ನೀಡಿದ ದೂರಿನ ಮೇರೆಗೆ ಧಾರ್ಮಿಕ ಮತಾಂತರದ ಆರೋಪದ ಮೇಲೆ ಕೇರಳದ ಪಾದ್ರಿಯೊಬ್ಬರನ್ನು ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ತಿರುವನಂತಪುರಂ ಮೂಲದ ಪಾದ್ರಿ ಜೋಸ್ ಥಾಮಸ್,...

‘ನಾಚಿಕೆಗೇಡು ಅಂದ್ರೇನು ನಾನು ಹೇಳ್ತೇನೆ’: ಅಮೆರಿಕ ವ್ಯಾಪಾರ ಒಪ್ಪಂದ, ಎಪ್‌ಸ್ಟೀನ್ ಫೈಲ್ಸ್ ಉಲ್ಲೇಖಿಸಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಎಐ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರು ಶರ್ಟ್‌ ಬಿಚ್ಚಿ ಪ್ರತಿಭಟಿಸಿದ್ದನ್ನು 'ಗಲೀಜು, ನಾಚಿಕೆಗೇಡು'ಎಂದಿದ್ದ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಪಕ್ಷ ನಾಯಕ ರಾಹುಲ್ ಗಾಂಧಿ ತಿರುಗೇಟು ನೀಡಿದ್ದಾರೆ. ವಿಡಿಯೋ ಮೂಲಕ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, "ಪ್ರಧಾನಿ...

ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ...

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...