Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...