Homeಅಂತರಾಷ್ಟ್ರೀಯ'ನಮ್ಮ ಭೂಮಿ ಮಾರಾಟಕ್ಕಿಲ್ಲ' : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

‘ನಮ್ಮ ಭೂಮಿ ಮಾರಾಟಕ್ಕಿಲ್ಲ’ : ಬ್ರೆಝಿಲ್ ಹವಾಮಾನ ಶೃಂಗಸಭೆಗೆ ನುಗ್ಗಿ ಸ್ಥಳೀಯ ಬುಡಕಟ್ಟು ಜನರಿಂದ ಪ್ರತಿಭಟನೆ

- Advertisement -
- Advertisement -

ಬ್ರೆಝಿಲ್‌ನ ಬೆಲೆಮ್‌ನಲ್ಲಿ ನಡೆಯುತ್ತಿರುವ 30ನೇ ಹವಾಮಾನ ಶೃಂಗಸಭೆಯಲ್ಲಿ (COP30) ಸ್ಥಳೀಯ ಬುಡಕಟ್ಟು ಸಮುದಾಯಗಳು ಜನರು ಶುಕ್ರವಾರ (ನವೆಂಬರ್ 14) ಎರಡನೇ ಬಾರಿಗೆ ಪ್ರತಿಭಟನೆ ನಡೆಸಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಜಾಗದ ಪ್ರವೇಶದ್ವಾರದಲ್ಲಿ ನೂರಾರು ಜನರು ಜಮಾಯಿಸಿ ಅಮೆಜಾನ್‌ನಲ್ಲಿನ ತಮ್ಮ ದುಃಸ್ಥಿತಿಯ ಬಗ್ಗೆ ಜಗತ್ತು ಗಮನ ಹರಿಸಬೇಕೆಂದು ಒತ್ತಾಯಿಸಿದ್ದಾರೆ.

ಶೃಂಗಸಭೆಗೆ ಹತ್ತಾರು ಸಾವಿರ ಪ್ರತಿನಿಧಿಗಳು ಆಗಮಿಸುತ್ತಿದ್ದಂತೆ, ಸಾಂಪ್ರದಾಯಿಕ ಉಡುಪುಗಳು ಮತ್ತು ಶಿರಸ್ತ್ರಾಣಗಳನ್ನು ಧರಿಸಿದ ಸುಮಾರು 60 ಪುರುಷರು ಮತ್ತು ಮಹಿಳೆಯರು, ಕೆಲವರು ಮಕ್ಕಳನ್ನು ಹೊತ್ತುಕೊಂಡು ಮುಖ್ಯ ದ್ವಾರದಲ್ಲಿ ಮಾನವ ಬ್ಯಾರಿಕೇಡ್ ರಚಿಸಿದ್ದರು.

ಬ್ರೆಝಿಲ್ ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಸಭೆ ನಡೆಸಬೇಕೆಂದು ಪ್ರತಿಭಟನಾ ನಿರತರ ಗುಂಪು ಒತ್ತಾಯಿಸಿದೆ. ಮುಖ್ಯದ್ವಾರದಲ್ಲಿ ಪ್ರತಿಭಟನೆ ಹಿನ್ನೆಲೆ, ವಿವಿಧ ದೇಶಗಳ ಪ್ರತಿನಿಧಿಗಳನ್ನು ಸಂಘಟಕರು ಪಕ್ಕದ ಬಾಗಿಲುಗಳ ಮೂಲಕ ಕರೆದೊಯ್ಯುಲು ಪ್ರಯತ್ನಿಸಿದಾಗ, ಅಲ್ಲೂ ತಡೆಯೊಡ್ಡಿ ಜನರು ತಮ್ಮ ಬೇಡಿಕೆ ಮುಂದಿಟ್ಟಿದ್ದಾರೆ ವರದಿಯಾಗಿದೆ.

ವಿಶ್ವದ ಅತಿದೊಡ್ಡ ಮಳೆಕಾಡಿನ ಹೆಬ್ಬಾಗಿಲು ಮತ್ತು ಅಮೆಜಾನ್ ನದಿಯ ದಂಡೆಯ ನಗರವಾದ ಬೆಲೆಮ್‌ನಲ್ಲಿ ಹವಾಮಾನ ಮಾತುಕತೆಗೆ ಸ್ಥಳೀಯರು ಅಡ್ಡಿಪಡಿಸಿದ್ದು ಈ ವಾರದಲ್ಲಿ ಇದು ಎರಡನೇ ಬಾರಿಯಾಗಿದೆ.

ಪ್ರತಿಭಟನಾಕಾರರ ಬೇಡಿಕೆ ‘ಅತ್ಯಂತ ನ್ಯಾಯಸಮ್ಮತವಾಗಿದೆ ಮತ್ತು ಬಲವಾಗಿದೆ’ ಎಂದು ಸಿಒಪಿ-30ರ ಅಧ್ಯಕ್ಷ ಆಂಡ್ರೆ ಕೊರ್ರಿಯಾ ಡೊ ಲಾಗೋ ಹೇಳಿದ್ದಾರೆ. ಶುಕ್ರವಾರ ಬೆಳಿಗ್ಗೆಯ ಕಾರ್ಯಕ್ರಮವನ್ನು ತೊರೆದು ಸಭಾಂಗಣದ ಹೊರಗೆ ಹೋಗಿ ಅವರು ಪ್ರತಿಭಟನಾ ನಿರತರನ್ನು ಭೇಟಿ ಮಾಡಿದ್ದಾರೆ.

ಶೃಂಗಸಭೆ ನಡೆಯುತ್ತಿರುವ ಸಭಾಂಗಣದ ಪಕ್ಕದ ಹಾಲ್‌ನಲ್ಲಿ ಪ್ರತಿಭಟನಾ ನಿರತರ ಜೊತೆ ಕೊರಿಯಾ ಡೊ ಲಾಗೊ ಅವರು ಶುಕ್ರವಾರ ಸಭೆ ನಡೆಸಿದ್ದಾರೆ. ಅದಕ್ಕೂ ಮುನ್ನ ಪ್ರತಿಭಟನಾಕಾರರು ಅವರ ಬೇಡಿಕೆಗಳ ಪತ್ರವನ್ನು ಲಾಗೊ ಅವರಿಗೆ ನೀಡಿದ್ದಾರೆ. ಪ್ರತಿಭಟನೆಯಲ್ಲಿ ಎಲ್ಲಾ ವಯಸ್ಸಿನ ಜನರಿದ್ದರು. ಅವರು ಬಡುಕಟ್ಟು ಸಮುದಾಯದ ಸಾಂಪ್ರಾದಾಯಿಕ ಹಾಡು, ನೃತ್ಯಗಳ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

“ನಾವು ತುಂಬಾ ಸಕಾರಾತ್ಮಕ, ಅತ್ಯಂತ ರಚನಾತ್ಮಕ ಸಂವಾದ ನಡೆಸಿದ್ದೇವೆ. ಅವರಿಗೆ (ಬುಡಕಟ್ಟು ಜನರಿಗೆ) ಇರುವ ಎಲ್ಲಾ ಕಳವಳಗಳನ್ನು ಪರಿಹರಿಸಲು ನಾವು ಪ್ರಯತ್ನಿಸುತ್ತೇವೆ” ಎಂದು ಸಭೆಯ ನಂತರ ಕೊರಿಯಾ ಡೊ ಲಾಗೊ ಹೇಳಿದ್ದಾರೆ.

ನೂರಾರು ಸಶಸ್ತ್ರ ಸೈನಿಕರು ಮತ್ತು ಮಿಲಿಟರಿ ಪೊಲೀಸರು ಶೃಂಗಸಭೆಯ ಪ್ರವೇಶದ್ವಾರದಲ್ಲಿ ಕಾವಲು ಕಾಯುತ್ತಿದ್ದಾರೆ. ಸಭೆಗೆ ಆಗಮಿಸುವವರಿಗೆ ಯಾವುದೇ ಸಮಸ್ಯೆಗಳು ಆಗುವುದಿಲ್ಲ ಎಂದು ವಿಶ್ವಸಂಸ್ಥೆ ಹೇಳಿದೆ.

ಮುಂಡುರುಕು ಎಂಬ ಆದಿವಾಸಿ ಸಮುದಾಯದ ಪ್ರತಿಭಟನಾಕಾರರು, ತಮ್ಮ ಪೂರ್ವಜರಿಂದಲೂ ಬಳಸಿಕೊಂಡು ಬಂದಿರುವ ಸಾಂಪ್ರದಾಯಿಕ ತವರು ಭೂಮಿಗಳನ್ನು ಅಧಿಕೃತವಾಗಿ ಗುರುತಿಸಿ ಗಡಿ ನಿರ್ಣಯ ಮಾಡುವ ಪ್ರಕ್ರಿಯೆಯನ್ನು ಮುಂದುವರಿಸಬೇಕೆಂದು ಒತ್ತಾಯಿಸಿದ್ದಾರೆ.

ಧಾನ್ಯ ಉತ್ಪಾದನೆಯನ್ನು ಸಾಗಿಸುವ ಸಲುವಾಗಿ ಬ್ರೆಝಿಲ್ ಅನ್ನು ಪಶ್ಚಿಮದಿಂದ ಪೂರ್ವಕ್ಕೆ ಸಂಪರ್ಕಿಸಲು ಉದ್ದೇಶಿಸಲಾದ ಸುಮಾರು 1,000 ಕಿಲೋಮೀಟರ್ (620 ಮೈಲಿ) ಉದ್ದದ ರೈಲ್ವೆ ಯೋಜನೆ ಫೆರೋಗ್ರಾವ್‌ಗೆ ಮುಂಡುರುಕು ಸಮುದಾಯ ತೀವ್ರ ವಿರೋಧ ವ್ಯಕ್ತಪಡಿಸಿದೆ.

“ನಮ್ಮ ಭೂಮಿಗಾಗಿ ಮಾಡುತ್ತಿರುವ ಹೋರಾಟ, ನಮ್ಮ ಜೀವಕ್ಕಾಗಿ ಮಾಡುತ್ತಿರುವ ಹೋರಾಟವಾಗಿದೆ” ಎಂದು ಮುಂಡುರುಕು ಪ್ರತಿಭಟನಾಕಾರರೊಬ್ಬರು ಹಿಡಿದಿದ್ದ ಬ್ಯಾನರ್‌ನಲ್ಲಿ ಬರೆಯಲಾಗಿತ್ತು ಎಂದು ವರದಿಗಳು ವಿವರಿಸಿವೆ.

“ಬನ್ನಿ ಲುಲಾ (ಅಧ್ಯಕ್ಷ ಲೂಯಿಝ್ ಇನಾಸಿಯೊ ಲುಲಾ ಡ ಸಿಲ್ವಾ) ನೀವು ಇಲ್ಲಿ ಬಂದು ಮುಖ ತೋರಿಸಿ!” ಎಂದು ಆದಿವಾಸಿ ನಾಯಕಿ ಅಲೆಸ್ಸಾಂಡ್ರಾ ಕೊರಾಪ್ ಪ್ರತಿಭಟನೆ ವೇಳೆ ಜೋರಾಗಿ ಕೂಗಿದ್ದಾರೆ. “ನಮ್ಮ ಮಾತನ್ನು ಆಲಿಸಬೇಕು, ನಮ್ಮನ್ನೂ ಮಾತುಕತೆಗಳಲ್ಲಿ ಭಾಗಿಯಾಗಿಸಬೇಕು, ನಮಗೆ ತುಂಬಾನೇ ಸಮಸ್ಯೆಗಳಿವೆ” ಎಂದು ಅವರು ಆಗ್ರಹಿಸಿದ್ದಾರೆ. “ತಾನು ಆದಿವಾಸಿಗಳ ಪರ” ಎಂದು ಅಧ್ಯಕ್ಷ ಲುಲಾ ಹೇಳಿದ್ದಾರೆ ಎಂದು ವರದಿಗಳು ಹೇಳಿವೆ.

ಅವರು ಬುಡಕಟ್ಟು ಗುಂಪುಗಳನ್ನು ಗುರುತಿಸುವಲ್ಲಿ ಪ್ರಗತಿಪರರಾಗಿದ್ದಾರೆ, ಅಮೆಜಾನ್‌ನಲ್ಲಿ ಅರಣ್ಯನಾಶವನ್ನು ಕಡಿತಗೊಳಿಸಿದ್ದಾರೆ ಮತ್ತು ಸ್ಥಳೀಯ ಜನರ ಮೊದಲ ಸಚಿವಾಲಯದ ಮುಖ್ಯಸ್ಥರಾಗಿ ವ್ಯಾಪಕವಾಗಿ ಗೌರವಿಸಲ್ಪಟ್ಟ ವ್ಯಕ್ತಿಯನ್ನು ನೇಮಿಸಿದ್ದಾರೆ.

ಅವರು (ಲುಲಾ) ಆದಿವಾಸಿ ಬುಡಕಟು ಗುಂಪುಗಳನ್ನು ಸರ್ಕಾರದಿಂದ ಅಧಿಕೃತವಾಗಿ ಮತ್ತು ಸುಧಾರಿತ ರೀತಿಯಲ್ಲಿ ಗುರುತಿಸುವ ಕೆಲಸವನ್ನು ಮುಂದುವರಿಸಿದ್ದಾರೆ. ಅಮೆಜಾನ್ ಕಾಡುಗಳಲ್ಲಿ ಮರಗಳ ಕಡಿಯುವಿಕೆಯನ್ನು (ಕಾಡುನಾಶ) ಬಹಳಷ್ಟು ಕಡಿಮೆಗೊಳಿಸಿದ್ದಾರೆ ಮತ್ತು ಮೊದಲ ಬಾರಿಗೆ ರಚಿಸಲಾದ ಆದಿವಾಸಿ ಜನಾಂಗಗಳ ಸಚಿವಾಲಯಕ್ಕೆ ಎಲ್ಲೆಡೆ ಗೌರವ ಮತ್ತು ಒಪ್ಪಿಗೆ ಗಳಿಸಿರುವ ಒಬ್ಬ ಪ್ರಮುಖ ವ್ಯಕ್ತಿಯನ್ನು ಸಚಿವರಾಗಿ ನೇಮಿಸಿದ್ದಾರೆ. ಆದರೆ, ಸ್ಥಳೀಯರ ಭೂಮಿಯನ್ನು ಅಧಿಕೃತವಾಗಿ ಗುರುತಿಸುವ ಪ್ರಕ್ರಿಯೆಯು ತುಂಬಾ ನಿಧಾನವಾಗಿ ಸಾಗುತ್ತಿದೆ ಎಂಬುದನ್ನು ಮತ್ತು ಅಮೆಜಾನ್ ನದಿಯ ಬಳಿ ಅಕ್ಟೋಬರ್ ತಿಂಗಳಲ್ಲಿ ಆರಂಭಿಸಲಾದ ತೈಲ ಪರಿಶೋಧನೆಯನ್ನು ಬುಡಕಟ್ಟು ಜನರು ತೀವ್ರವಾಗಿ ವಿರೋಧಿಸಿದ್ದಾರೆ.

ಬುಧವಾರ, ಪ್ರಸಿದ್ಧ ಆದಿವಾಸಿ ಮುಖಂಡ ರಾವೋನಿ ಅವರು, ತೈಲ ಯೋಜನೆ ಮತ್ತು ಫೆರೋಗ್ರಾವ್‌ ಕುರಿತು ಲುಲಾ ಅವರೊಂದಿಗೆ ಸಭೆ ನಿಗದಿಪಡಿಸುವುದಾಗಿ ಹೇಳಿದ್ದಾರೆ. ಅಗತ್ಯವಿದ್ದರೆ, ಅವರಿಗೆ ಒಳ್ಳೆಯ ಉಪದೇಶವನ್ನು ಕೊಡುತ್ತೇನೆ ಎಂದು ಹೇಳಿದ್ದಾರೆ.

ಬುಧವಾರ ಆದಿವಾಸಿಗಳ ಪ್ರತಿಭಟನೆ ಹಿನ್ನೆಲೆ ಶೃಂಗಸಭೆಯ ಸಭಾಂಗಣದ ಹೊರಗೆ ಸೂರ್ಯನ ಬಿಸಿಲಿನಲ್ಲಿ ಕಾಯುತ್ತಿದ್ದ ಸಾವಿರಾರು ಪ್ರತಿನಿಧಿಗಳು ಸುಮಾರು ಎರಡು ಗಂಟೆಗಳ ನಂತರ ಮುಖ್ಯ ದ್ವಾರದ ಮೂಲಕ ಸಭಾಂಗಣ ಪ್ರವೇಶಿಸಲು ಸಾಧ್ಯವಾಯಿತು ಎಂದು ವರದಿಯಾಗಿದೆ.

ಇದಕ್ಕೂ ಮುನ್ನ ಮಂಗಳವಾರ ಸಂಜೆ, ಸ್ಥಳೀಯ ಪ್ರತಿಭಟನಾಕಾರರು ಮತ್ತು ಅವರ ಬೆಂಬಲಿಗರು ಶೃಂಗಸಭೆಗೆ ನುಗ್ಗಿ ಭದ್ರತಾ ಪಡೆಗಳೊಂದಿಗೆ ಘರ್ಷಣೆ ನಡೆಸಿದ್ದರು. ಇದು ಹವಾಮಾನ ಶೃಂಗದಲ್ಲಿ ಕಂಡು ಬಂದ ಅಪರೂಪದ ಬೆಳವಣಿಗೆಯಾಗಿದೆ.

ಹವಾಮಾನ ಶೃಂಗಸಭೆ ನಡೆಯುತ್ತಿರುವ ಬೆಲೆಮ್‌ನಲ್ಲಿ ಪ್ರತಿಭಟನೆ ಹಿನ್ನೆಲೆ ಭದ್ರತೆ ಹೆಚ್ಚಿಸುತ್ತೀರ ಎಂದು ಗುರುವಾರ ಸುದ್ದಿ ಸಂಸ್ಥೆ ಎಎಫ್‌ಪಿ ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ್ದ ಅಧ್ಯಕ್ಷ ಕೊರಿಯಾ ಡೊ ಲಾಗೊ “ಅಗತ್ಯವಿಲ್ಲ, ಇದು ನಿಜವಾಗಿಯೂ ಒಂದು ಸಣ್ಣ ಘಟನೆ” ಎಂದು ಹೇಳಿದ್ದರು.

COP30 | ವಿಶ್ವ ಹವಾಮಾನ ಶೃಂಗದಲ್ಲಿ ಭಾಗವಹಿಸಿದ ಪ್ರತಿ 25ರಲ್ಲಿ ಒಬ್ಬ ‘ಪಳೆಯುಳಿಕೆ ಇಂಧನ ಲಾಬಿದಾರ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...