Homeಕರ್ನಾಟಕನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

- Advertisement -
- Advertisement -

ಬಿಜೆಪಿ ಸರ್ಕಾರದ ಭ್ರಷ್ಟಾಚಾರ-ಹಗರಣಗಳ ವಿರುದ್ಧ ಸತತ ನಾಲ್ಕು ವರ್ಷಗಳ ಕಾಲ ದನಿಯೆತ್ತಿದ್ದ, ಆರ್‌ಎಸ್‌ಎಸ್-ಹಿಂದುತ್ವ ಸಂಘಟನೆಗಳ ಅನಾಚಾರದ ವಿರುದ್ಧ ರಾಜಿರಹಿತ ಹೋರಾಟ ನಡೆಸಿದ, ಕೊಲೆ ಬೆದರಿಕೆಯಂತಹ ಷಡ್ಯಂತ್ರಗಳನ್ನು ದಿಟ್ಟವಾಗಿ ಎದುರಿಸಿದ ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆ ಸಿಎಂ ಸಿದ್ದರಾಮಯ್ಯನವರ ಸರ್ಕಾರದಲ್ಲಿ ಸಂಪುಟ ದರ್ಜೆಯ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಬಡ ಅಸ್ಪೃಶ್ಯ ಕುಟುಂಬದಲ್ಲಿ ಹುಟ್ಟಿ, ಗಲಭೆಯಲ್ಲಿ ತಾಯಿ ಮತ್ತು ಸಹೋದರಿಯರನ್ನು ಕಳೆದುಕೊಂಡು, ಕೂಲಿ ಮಾಡಿ ಕಾಲೇಜು ಶಿಕ್ಷಣ ಪಡೆದು, ಮಿಲ್ ಕಾರ್ಮಿಕರ ಸಂಘಟನೆ ಕಟ್ಟಿ, ಆರ್‌ಪಿಐ ಪಕ್ಷದಿಂದ ಸ್ಥಳೀಯ ಚುನಾವಣೆಗಳಲ್ಲಿ ರಾಜಕೀಯಕ್ಕೆ ಪಾದಾರ್ಪಣೆ ಮಾಡಿ, ಕಾಂಗ್ರೆಸ್ ಸೇರಿ ಸತತ 9 ಸಲ ಶಾಸಕರಾಗಿ, ಎರಡು ಬಾರಿ ಸಂಸದರಾಗಿ, ಕೇಂದ್ರ ಸಚಿವರಾಗಿ, ರಾಜ್ಯಸಭೆಯ ಸದಸ್ಯರಾಗಿ, ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿ ಮತ್ತು ಈಗ ಎಐಸಿಸಿ ಅಧ್ಯಕ್ಷರಾಗಿರುವ ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಧಾಬಾಯಿ ಖರ್ಗೆಯವರ ಪುತ್ರನಾಗಿ ಪ್ರಿಯಾಂಕ ಖರ್ಗೆ ನವೆಂಬರ್ 22, 1978ರಂದು ಜನಿಸಿದರು. ಡಿಪ್ಲೊಮಾ ಇನ್ ಗ್ರಾಫಿಕ್ಸ್ ಅಂಡ್ ಎನಿಮೇಷನ್ ಪದವಿ ಪಡೆದಿರುವ ಅವರು ದೇಶ ಹಾಗೂ ವಿದೇಶಗಳ ಕಾರ್ಪೊರೆಟ್ ಕಂಪನಿಗಳಲ್ಲಿ ಕೆಲಸ ಮಾಡಿದ್ದಾರೆ. ಹಲವಾರು ಸ್ಟಾರ್ಟ್‌ಅಪ್ ಕಂಪನಿಗಳನ್ನು ಸಹ ಆರಂಭಿಸಿ ಮುನ್ನಡೆಸಿರುವ ಹೆಗ್ಗಳಿಕೆ ಅವರದ್ದು.

ತಮ್ಮ 20ನೇ ವಯಸ್ಸಿನಲ್ಲಿ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕ ಎನ್‌ಎಸ್‌ಯುಐ ಸದಸ್ಯತ್ವ ಪಡೆದ ಪ್ರಿಯಾಂಕ್, 2001ರ ವೇಳೆಗೆ ಕಾಲೇಜು ಕಾರ್ಯದರ್ಶಿಯಾಗಿ ಕೆಲಸ ಮಾಡಿದರು. 2005ರಲ್ಲಿ ಎನ್‌ಎಸ್‌ಯುಐ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದರು. ಆನಂತರ 2007ರಲ್ಲಿ ಯೂತ್ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಆಯ್ಕೆಯಾದರು. 2011ರಲ್ಲಿ ಯೂತ್ ಕಾಂಗ್ರೆಸ್ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದಾರೆ.

2009ರಲ್ಲಿ ಚಿತ್ತಾಪುರದ ಶಾಸಕರಾಗಿದ್ದ ಮಲ್ಲಿಕಾರ್ಜುನ ಖರ್ಗೆಯವರು ಕಲಬುರಗಿ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿದ ಕಾರಣ ತೆರವಾದ ಸ್ಥಾನಕ್ಕೆ ಪ್ರಿಯಾಂಕ ಖರ್ಗೆ ಮೊದಲ ಬಾರಿಗೆ ಸ್ಪರ್ಧಿಸಿದರು. ಆದರೆ ಬಿಜೆಪಿಯ ವಾಲ್ಮೀಕಿ ನಾಯಕ್ ಎದುರು ಸೋಲು ಕಂಡರು. ಧೃತಿಗೆಡದೆ ಕಾಂಗ್ರೆಸ್ ಪಕ್ಷ ಕಟ್ಟುವುದರಲ್ಲಿ ತೊಡಗಿಸಿಕೊಂಡ ಪ್ರಿಯಾಂಕ್, 2013ರಲ್ಲಿ ಚಿತ್ತಾಪುರ ಕ್ಷೇತ್ರದಲ್ಲಿ ಅದೇ ವಾಲ್ಮೀಕಿ ನಾಯಕ್‌ರವರನ್ನು 31,191 ಮತಗಳ ಅಂತರದಿಂದ ಸೋಲಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

2016ರಲ್ಲಿ ಅಂದಿನ ಸಿ.ಎಂ ಸಿದ್ದರಾಮಯ್ಯನವರ ಸಂಪುಟದಲ್ಲಿ ಐಟಿ, ಬಿಟಿ ಹಾಗೂ ಪ್ರವಾಸೋದ್ಯಮ ಸಚಿವರಾಗುವ ಮೂಲಕ ಅತ್ಯಂತ ಕಿರಿಯ ಸಚಿವ ಎಂಬ ಖ್ಯಾತಿಗೆ ಪಾತ್ರರಾದರು. ಆಗ ಅವರಿಗೆ 38 ವರ್ಷ ವಯಸ್ಸಾಗಿತ್ತು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

2018ರ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಪ್ರಿಯಾಂಕ ಖರ್ಗೆ ಬಿಜೆಪಿಯ ವಾಲ್ಮೀಕಿ ನಾಯಕ್ ಎದುರು 4,393 ಮತಗಳ ಅಂತರದಿಂದ ಗೆದ್ದು ಬಂದರು. ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾಗಿ ಕಾರ್ಯನಿರ್ವಹಿಸಿದರು. ಈ ಅವಧಿಯಲ್ಲಿ ಅವರು ಐರಾವತ, ಪ್ರಬುದ್ಧ, ಪ್ರಗತಿ, ಸಮೃದ್ಧಿ ಹಾಗೂ ಉನ್ನತಿ ಎಂಬ ದಲಿತರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದರು.

ಸಮ್ಮಿಶ್ರ ಸರ್ಕಾರ ಪತನಗೊಂಡ ನಂತರ ಕೆಪಿಸಿಸಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷರಾದ ಪ್ರಿಯಾಂಕ ಖರ್ಗೆಯವರು ಬಿಜೆಪಿ ಸರ್ಕಾರದ ಹಗರಣಗಳನ್ನು ಬಯಲಿಗೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಪಿಎಸ್‌ಐ ಹಗರಣ, ಬಿಟ್‌ಕಾಯಿನ್ ಹಗರಣದ ವಿರುದ್ಧ ಸಾಕ್ಷಿ ಸಮೇತ ದನಿಯೆತ್ತಿದರು. ಆರ್‌ಎಸ್‌ಎಸ್ ಅವಾಂತರಗಳನ್ನು ಎಳೆಎಳೆಯಾಗಿ ಜನರೆದುರು ಬಿಚ್ಚಿಟ್ಟರು. ಅದಕ್ಕಾಗಿ ಮಣಿಕಂಠ ರಾಥೋಡ್ ಎಂಬ ರೌಡಿ ಶೀಟರ್ ಪ್ರಿಯಾಂಕ ಖರ್ಗೆಯನ್ನು ಶೂಟ್ ಮಾಡುತ್ತೇನೆಂಬ ಕೊಲೆ ಬೆದರಿಕೆ ಕೂಡ ಹಾಕಿದ್ದರು. ಆನಂತರ ಅದೇ ವ್ಯಕ್ತಿ ಈ ವರ್ಷದ ವಿಧಾನಸಭಾ ಚುನಾವಣೆಯಲ್ಲಿ ಚಿತ್ತಾಪುರದ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕ್ ವಿರುದ್ಧ ಸ್ಪರ್ಧಿಸಿದ್ದರು. ಆ ಸಮಯದಲ್ಲಿಯೂ ಕೂಡ ಖರ್ಗೆ ಕುಟುಂಬವನ್ನು ಸಾಫ್ ಮಾಡ್ತೀನಿ ಎಂದು ಹೇಳಿದ್ದ ಆಡಿಯೋ ವೈರಲ್ ಆಗಿತ್ತು. ಚುನಾವಣಾ ಸಮಯದಲ್ಲಿಯೇ ಪ್ರಿಯಾಂಕ ಖರ್ಗೆ ಪತ್ನಿ ಶ್ರುತಿ ಖರ್ಗೆಯವರ ಆರೋಗ್ಯ ಹದಗೆಟ್ಟಿತ್ತು. ಇಷ್ಟೆಲ್ಲ ಪ್ರತಿಕೂಲ ಪರಿಸ್ಥಿತಿಯಲ್ಲಿ ಚುನಾವಣೆ ಎದುರಿಸಿದ ಪ್ರಿಯಾಂಕ ಖರ್ಗೆ ಕೊನೆಗೂ 13,640 ಮತಗಳ ಅಂತರದಿಂದ ಗೆದ್ದು ಹ್ಯಾಟ್ರಿಕ್ ಸಾಧಿಸಿದರು.

10 ವರ್ಷಗಳ ಕಾಲ ಶಾಸಕರಾಗಿರುವ ಮತ್ತು ಈಗಾಗಲೇ ಎರಡು ಬಾರಿ ಸಚಿವರಾಗಿರುವ ಪ್ರಿಯಾಂಕ ಖರ್ಗೆ ವಾಡಿ ಹಾಗೂ ಚಿತ್ತಾಪುರಗಳನ್ನು ಉತ್ತಮ ಶೈಕ್ಷಣಿಕ ಕೇಂದ್ರಗಳಾಗಿ ಅಭಿವೃದ್ಧಿಪಡಿಸಲು ನೆರವಾಗಿದ್ದಾರೆ. ಬೆಂಗಳೂರಿನಲ್ಲಿ ’ಬೆಂಗಳೂರು ಡಾ. ಬಿ.ಆರ್. ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿ’ (ಬಿಎಎಸ್‌ಇ) ತೆರೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಎರಡು ವರ್ಷಗಳ ಕಾಲ ಅದರ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

ತಮ್ಮ ಚಿತ್ತಾಪುರ ಕ್ಷೇತ್ರದ ಶೈಕ್ಷಣಿಕ ಅಭಿವೃದ್ಧಿಯ ಜೊತೆಗೆ, ಸಂಪರ್ಕ ರಸ್ತೆ ನಿರ್ಮಾಣಕ್ಕೆ ಹಾಗೂ ಕುಡಿಯುವ ನೀರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಂತಹ ಮೂಲಸೌಲಭ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಮಳೆಯಾಧಾರಿತ ಜಮೀನುಗಳಿಗೆ ನೀರಾವರಿ ಒದಗಿಸಲು ಯತ್ನಿಸಿದ್ದಾರೆ.

ಪ್ರಿಯಾಂಕ ಖರ್ಗೆಯವರದು ಯಾವಾಗಲೂ ಜನಪರ, ಜಾತ್ಯತೀತ ಮತ್ತು ಜೀವಪರ ನಿಲುವು. ಬುದ್ಧಾನುಯಾಯಿಯಾದ ಅವರು ಸಂವಿಧಾನ ವಿರೋಧಿ ಶಕ್ತಿಗಳಿಗೆ ನಡುಕ ಹುಟ್ಟಿಸಿದ್ದಾರೆ. ಹಾಗಾಗಿ ಅವರಿಗೆ ಸಿದ್ದರಾಮಯ್ಯ ಸಂಪುಟದಲ್ಲಿ ಗೃಹ ಖಾತೆ ದೊರೆಯಬಹುದು ಎಂಬ ಚರ್ಚೆಗಳು ಕೂಡ ಚಾಲ್ತಿಯಲ್ಲಿವೆ.

ಇದನ್ನೂ ಓದಿ: ಬಿಕ್ಕಟ್ಟಿನಲ್ಲೂ ಸೆಕ್ಯುಲರ್ ಮೌಲ್ಯಗಳನ್ನು ಬಿಡದ ಎತ್ತರದ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...