Homeಕರ್ನಾಟಕನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

ನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

- Advertisement -
- Advertisement -

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ಸರಕಾರ ರಚನೆಯಾದ ಒಂದೇ ವಾರಕ್ಕೆ ಸಕ್ಕರೆ ಕಾರ್ಖಾನೆಗೆ ಐವತ್ತು ಕೋಟಿ ಹಣ ಬಿಡುಗಡೆ ಮಾಡಿಸಿ ತಾವೊಬ್ಬ ಸಮರ್ಥ ಮಂತ್ರಿ ಎಂಬ ಭರವಸೆಯನ್ನು ಮೂಡಿಸುವತ್ತ ಮುಂದಡಿಯಿಟ್ಟಿದ್ದಾರೆ!

ಮಂಡ್ಯ ಜಿಲ್ಲಾಪಂಚಾಯ್ತಿಗೆ ಆಯ್ಕೆಯಾಗುವುದರ ಮುಖಾಂತರ ರಾಜಕೀಯ ಪ್ರವೇಶ ಪಡೆದ ಚಲುವರಾಯಸ್ವಾಮಿ ಅಂದು ಜಿಲ್ಲಾ ಮಂತ್ರಿಯಾಗಿದ್ದ ಎಸ್.ಡಿ ಜಯರಾಮರ ಬೆಂಬಲದಿಂದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ನಾಗಮಂಗಲ ಕ್ಷೇತ್ರದ ಕೆಲಸಗಳನ್ನು ಮಾಡುತ್ತ ಜನಪ್ರಿಯತೆ ಗಳಿಸತೊಡಗಿದರು. ಸಹಜವಾಗಿ ಅಂದಿನ ಶಾಸಕರು ಮತ್ತು ಬಿಡಿಎ ಛೇರ್ಮನ್ ಆಗಿದ್ದ ಶಿವರಾಮೇಗೌಡರು ತನ್ನ ಪ್ರತಿಸ್ಪರ್ಧಿಯ ವಿಷಯವಾಗಿ ಹೆಚ್ಚು ಪ್ರಚಾರ ಕೊಡತೊಡಗಿದರು; ಅದಾಗಲೇ ವಕೀಲ ಮತ್ತು ಪತ್ರಕರ್ತ ಗಂಗಾಧರಮೂರ್ತಿ ಕೊಲೆ ಆಪಾದನೆಯಿಂದ ಬಿಡುಗಡೆಯಾಗಿದ್ದ ಶಿವರಾಮೇಗೌಡರು ಹೊಸ ಹುಮ್ಮಸ್ಸಿನಿಂದ ನಾನು ಅಂತಹವನಲ್ಲ ಎಂದು ಸಾಬೀತುಮಾಡುವ ಭರದಲ್ಲಿ ಚಲುವರಾಯಸ್ವಾಮಿಗೇ ಹೆಚ್ಚು ಪ್ರಚಾರಕೊಟ್ಟರು. ಜನಕ್ಕೆ ಚಲುವರಾಯಸ್ವಾಮಿ ಹೇಗಿರಬಹುದೆಂಬ ಕುತೂಹಲ ಜಾಸ್ತಿಯಾಗಿ ತಮ್ಮ ಊರಿನ ಹಬ್ಬ, ಕ್ರೀಡೆ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕರೆಯತೊಡಗಿದರು; ಆಗ ಜನರಿಗೆ ತಮ್ಮ ನಾಯಕನಾಗಲು ಈತನೇ ಸರಿ ಅನ್ನಿಸತೊಡಗಿತು. ಮುಂದೆ 1999ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶೀವರಾಮೇಗೌಡರ ಎದುರು 16 ಸಾವಿರ ಮತಗಳ ಮುನ್ನಡೆಯಿಂದ ಗೆದ್ದರು. ಆಗ ಕುಮಾರಸ್ವಾಮಿ ದೇವೇಗೌಡರಾದಿಯಾಗಿ ಸೋತು ಹೋಗಿದ್ದರಿಂದ ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆ ಗುರುತಿಸುವ ನಾಯಕರಾಗಿ ಬೆಳೆಯತೊಡಗಿದ್ದರು.

ವಿರೋಧ ಪಕ್ಷದಲ್ಲಿದ್ದುಕೊಂಡೇ ಎಸ್‌ಎಂ ಕೃಷ್ಣರ ಸರಕಾರದಿಂದ ತಾಲೂಕಿಗೆ ಬೇಕಾದ ಕೆಲಸ ಮಾಡುತ್ತ ಐದು ವರ್ಷ ತುಂಬಿಸಿದಾಗ ಮತ್ತೆ ಚುನಾವಣೆ ಬಂತು. 2004ರಲ್ಲಿ ಮತ್ತೆ ಗೆದ್ದ ಚಲುವರಾಯಸ್ವಾಮಿ ಧರ್ಮಸಿಂಗ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಸಚಿವರಾದರು. ಆಗ ಮಂಡ್ಯ ಜಿಲ್ಲೆಗೆ ಮೆಡಿಕಲ್ ಕಾಲೇಜು ತಂದುದಲ್ಲದೆ ನಾಗಮಂಗಲದ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿ ಸುಮಾರು ಐದು ಊರುಗಳಿಗೆ ಪ್ರಾಥಮಿಕ ಆರೋಗ್ಯದ ಘಟಕಗಳನ್ನು ತಂದರು. ಇದರ ಜೊತೆಗೆ ರಾಜ್ಯದ ಇನ್ನಿತರ ಕಡೆಯ ಜವಾಬ್ದಾರಿಯನ್ನು ನೋಡಬೇಕಿದ್ದುದರಿಂದ ಆರೋಗ್ಯ ಇಲಾಖೆಯನ್ನು ಸುಸ್ಥಿತಿಗೆ ತರುವ ಸಮಯದಲ್ಲಿ ಸಮ್ಮಿಶ್ರ ಸರಕಾರವೇ ಹೈಜಾಕಾದಂತಾಗಿ ಧರ್ಮಸಿಂಗ್ ಮನೆಗೆ ಹೋದರು. ಬಹುಶಃ ಕರ್ನಾಟಕದ ರಾಜಕಾರಣ ತನ್ನ ಪಥವನ್ನು ಬದಲಿಸಿಕೊಂಡು ಪತನದ ಹಾದಿ ಹಿಡಿಯಲು ಇದೇ ಕಾರಣ. ಕುಮಾರಸ್ವಾಮಿಯವರು ಬಿಜೆಪಿಗಳೊಟ್ಟಿಗೆ ಸರಕಾರ ಮಾಡಿದರು.

ದೇವೇಗೌಡ

ಆಗ ಕುಮಾರಸ್ವಾಮಿ ಸುತ್ತ ಸಮರ್ಥರ ದಂಡೇ ನೆರೆದಿತ್ತು; ಜಮೀರ್ ಅಹಮದ್, ಬಾಲಕೃಷ್ಣ, ಚಲುವರಾಯಸ್ವಾಮಿ ಹೀಗೆ; ಇವರೆಲ್ಲಾ ತಮ್ಮ ಮಗನನ್ನು ಮೀರಿಸುವ ನಾಯಕರಾಗಿ ಹೊರಹೊಮ್ಮುತ್ತಿದ್ದಂತೆ ಕಂಡಿದ್ದರಿಂದ ಆತಂಕಗೊಂಡ ದೇವೇಗೌಡರು ಮಗನೊಂದಿಗೆ ರಾಜಿಯಾಗಿ ಅಧಿಕಾರದ ಸೂತ್ರ ಕೈಗೆ ತೆಗೆದುಕೊಳ್ಳತೊಡಗಿದರು. ಚಲುವರಾಯಸ್ವಾಮಿ ಆಗ ಸಾರಿಗೆ ಸಚಿವರಾಗಿದ್ದರು. ಆಗಾಗಲೇ ನಾಗಮಂಗಲಕ್ಕೆ ಕೆಎಸ್‌ಆರ್‌ಟಿಸಿ ಡಿಪೋ ತಂದು ಆರ್‌ಟಿಓ ಆಫೀಸ್ ತೆರೆದಿದ್ದರು ಮತ್ತು ಬಸ್ಸನ್ನೇ ನೋಡದಂತಹ ಹಳ್ಳಿಗಳಿಗೂ ಬಸ್ಸು ಹೋಗಿ ಬರುವಂತೆ ಮಾಡಿದ್ದರು. ಕೆ.ಇ.ಬಿಯ ಇ.ಇ ಆಫೀಸು (ಎಕ್ಸೆಕ್ಯುಟಿವ್ ಇಂಜಿನಿಯರ್ ಆಫೀಸು) ಪಾಂಡವಪುರದಲ್ಲಿತ್ತು. ಅದನ್ನು ನಾಗಮಂಗಲಕ್ಕೂ ತಂದರು.

ಆಗ ಅಸಿಸ್ಟೆಂಟ್ ಕಮೀಷನರ್ ಕಚೇರಿ ಪಾಂಡವಪುರದಲ್ಲಿದ್ದು ನಾಗಮಂಗಲ ಪ್ರಾಂತ್ಯದ ಜನ ತಮ್ಮ ವ್ಯಾಜ್ಯಗಳ ಇತ್ಯರ್ಥಕ್ಕೆ ಪಾಂಡವಪುರಕ್ಕೆ ಅಲೆಯಬೇಕಾಗಿತ್ತು. ಚಲುವರಾಯಸ್ವಾಮಿಯವರು ಎ.ಸಿ. ಕಚೇರಿಯೇ ವಾರಕ್ಕೊಮ್ಮೆ ನಾಗಮಂಗಲಕ್ಕೆ ಬಂದು ಕೆಲಸ ಮಾಡುವಂತೆ ಮಾಡಿದರು. ಅಲ್ಲದೆ ತಾಲೂಕಿನ ದೊಡ್ಡ ಊರುಗಳಿಗೆ ಹೈಸ್ಕೂಲು ತಂದರು. ಅಷ್ಟರಲ್ಲಿ ಇವರುಗಳ ಇಲಾಖೆಯ ಕೆಲಸಗಳಿಗೆ ಅಡೆತಡೆಗಳು ಶುರುವಾದವು. ಗೌಡರಿಗೆ ಚಲುವರಾಯಸ್ವಾಮಿ ಎಲ್ಲೋ ತಮ್ಮ ಮಗನನ್ನೇ ಒವರ್‌ಟೇಕ್ ಮಾಡುವಂತೆ ಕಂಡಿತು; ಹಾಗಾಗಿ ದೇವೇಗೌಡರ ಅಭಿಮಾನಿಗಳು ಮತ್ತು ರೇವಣ್ಣನ ಹಿಂಬಾಲಕರು ಮುಂದಿನ 2008ರ ಚುನಾವಣೆಯಲ್ಲಿ ಚಲುವರಾಯಸ್ವಾಮಿ ವಿರುದ್ಧ ಕೆಲಸ ಮಾಡಿದ್ದರು ಎಂಬ ಮಾತು ಜನಜನಿತವಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಹಿಂದೆ ಮುಂದೆ ಪಹರೆ ವಾಹನದ ನಡುವೆ ಸೈರನ್ ಮೊಳಗಿಸಿಕೊಂಡು ಹೋಗುವ ಮಂತ್ರಿ ಬಗ್ಗೆ ನಿಷ್ಕಾರಣದ ತಾತ್ಸಾರ ಬೆಳೆದುಕೊಂಡಿದ್ದು ಒಂದು ಕಾರಣವಾಗಿ ಆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸೋತರು. ಇಷ್ಟೊಂದು ಕೆಲಸ ಮಾಡಿಯೂ ಜನ ಸೋಲಿಸಿದರಲ್ಲಾ ಎಂಬ ನಿರಾಶೆಗೆ ಚಲುವರಾಯಸ್ವಾಮಿ ಒಳಗಾಗಿದ್ದರು. ಬೇರೆ ಕಾರಣಗಳೂ ಇದ್ದವು. ಆ ಕಾರಣಗಳು ಮುಂದೆ ಬೃಹದಾಕಾರವಾಗಿ ಎದ್ದುನಿಂತು ದೇವೇಗೌಡರು ನಾಗಮಂಗಲ ಕ್ಷೇತ್ರದ ದೇವಸ್ಥಾನ ಉದ್ಘಾಟನೆ, ತಿಥಿ, ಮದುವೆಗೆಲ್ಲಾ ಬಂದು ಚಲುವರಾಯಸ್ವಾಮಿಯನ್ನು ಮೂಲೆಗುಂಪು ಮಾಡಲು ಶತಾಯಗತಾಯ ಪ್ರಯತ್ನಿಸಿದರು. ಆಗ ಬೆಂಗಳೂರಿನ ಎಚ್‌ಎಎಲ್ ಕಾರ್ಖಾನೆ ನೌಕರರ ವಸತಿ ನಿರ್ಮಾಣದ ಸೊಸೈಟಿಯಲ್ಲಿ ಹೆಸರು ಮಾಡಿದ್ದ ಸುರೇಶ್‌ಗೌಡರು ಬಂದು ಚಲುವರಾಯಸ್ವಾಮಿ ಎದುರು ನಿಂತು ಗೆದ್ದರು. 2013ರಲ್ಲಿ ಚಲುವರಾಯಸ್ವಾಮಿ ಮತ್ತೆ ಜೆಡಿಎಸ್‌ನಿಂದ ಗೆದ್ದರೂ ಆಗ ಕಾಂಗ್ರೆಸ್ ಸರ್ಕಾರ ಬಂತು. ಮುಂದೆ ಅದುಲುಬದಲಾಗಿ ಸುರೇಶ್‌ಗೌಡ ಜನತಾದಳಕ್ಕೆ ಹೋದರೆ ಚಲುವರಾಯಸ್ವಾಮಿ ಕಾಂಗ್ರೆಸ್‌ಗೆ ಹೋದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಂತರ 2018ರ ಚುನಾವಣೆಯಲ್ಲಿ ಸುರೇಶ್‌ಗೌಡರು ದಾಖಲೆಯ ನಲವತ್ತೇಳುವರೆ ಸಾವಿರ ಲೀಡನಲ್ಲಿ ಗೆದ್ದರು. ಚಲುವರಾಯಸ್ವಾಮಿ ಗೌಡರಿಗೆ ದ್ರೋಹ ಬಗೆದು ಕಾಂಗ್ರೆಸ್ಸಿಗೆ ಹೋದರೆಂದು ದೇವೇಗೌಡರ ಕಡೆಯವರು ಮತದಾರರನ್ನು ಕೆರಳಿಸಿ ಗೆಲುವು ಸಾಧಿಸಿದ್ದರು. ಮುಂದೆ ಸಮ್ಮಿಶ್ರ ಸರಕಾರ ಬಂತು; 80 ಸೀಟು ಗೆದ್ದಿದ್ದ ಕಾಂಗ್ರೆಸ್ ಮೂವತ್ತು ಚಿಲ್ಲರೆ ಸೀಟು ಗೆದ್ದಿದ್ದ ದಳಕ್ಕೆ ಸಪೋರ್ಟಟು ಮಾಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿತ್ತು. ಚಲುವರಾಯಸ್ವಾಮಿಯವರನ್ನು ಮೂಲೆಗುಂಪು ಮಾಡಿ ಮಂಡ್ಯವನ್ನು ಕೈಗೆ ತೆಗೆದುಕೊಳ್ಳುವ ಪ್ಲಾನ್ ಮಾಡಿದ ದೇವೇಗೌಡರು ಮತ್ತು ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿಸಿದರು. ಅವರಗೂ ಓಟು ಕೇಳುವಂತಹ ಸ್ಥಿತಿ ಚಲುವರಾಯಸ್ವಾಮಿಗೆ ಬಂತು. ಆದರೆ ಮಂಡ್ಯದ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿಯಾದ ನಿಖಿಲ್‌ಗೆ ಕೆಲಸ ಮಾಡುವುದರ ಬದಲು ಸುಮಲತಾಗೆ ವರ್ಕ್ ಮಾಡಿದ್ದರಿಂದ ನಿಖಿಲ್ ಒಂದೂಕಾಲು ಲಕ್ಷದ ಅಂತರದಿಂದ ಸೋತರು. ಇದರಲ್ಲಿ ಚಲುವರಾಯಸ್ವಾಮಿ ಶ್ರಮವೂ ಇತ್ತು.

ಸುರೇಶ್‌ಗೌಡ

ಮುಂದೆ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ನಾಗಮಂಗಲದ ಮುಖಾಂತರ ಹಾದುಹೋಗುವಾಗ ಅದರ ಜವಾಬ್ದಾರಿ ಚಲುವರಾಯಸ್ವಾಮಿ ಮೇಲೆ ಬಿತ್ತು. ಈ ಐತಿಹಾಸಿಕ ಘಟನೆಯನ್ನು ಸಮರ್ಥವಾಗಿ ನಿಭಾಯಿಸಿದ ಚಲುವರಾಯಸ್ವಾಮಿ ರಾಹುಲಗಾಂಧಿಗೆ ಹತ್ತಿರವಾದರು.

ಈ ಬಾರಿ ಚಲುವರಾಯಸ್ವಾಮಿ ಎದುರಿಸಿದ ನಾಗಮಂಗಲದ ಚುನಾವಣೆ ಹಿಂದಿಗಿಂತಲೂ ಬಿರುಸಾಗಿತ್ತು. ಗೆಲ್ಲುವ ಎಲ್ಲ ಸೂಚನೆಗಳಿದ್ದರೂ ಕಡೆ ಗಳಿಗೆಯಲ್ಲಿ ನಾಗಮಂಗಲಕ್ಕೆ ಬಂದು ರೋಡ್‌ಶೋ ಮಾಡಿದ ದೇವೇಗೌಡರು, ಚಲುವರಾಯಸ್ವಾಮಿಯನ್ನು ಸೋಲಿಸಲು ಕರೆಕೊಟ್ಟಿದ್ದಲ್ಲದೆ, ಗದ್ಗರಿತವಾಗಿ ಕೇಳಿಕೊಂಡರು. ಅವರ ಸಭೆಗೆ ಸೇರಿದ್ದ ಜನಸ್ತೋಮ ನೋಡಿದ ಜನರು ಸುರೇಶ್‌ಗೌಡರ ಗೆಲುವಿನ ಬಗ್ಗೆ ಯಾವ ಸಂಶಯವನ್ನು ಇಟ್ಟುಕೊಳ್ಳದೆ ಮನಸ್ಸಿಗೆ ಬಂದಷ್ಟು ಬೆಟ್ ಕಟ್ಟಿ ಸೋತುಹೋದರು. ಬೆಳ್ಳೂರು, ನಾಗಮಂಗಲ ಮತ್ತು ಕೊಪ್ಪ ಹೋಬಳಿ ಚಲುವರಾಯಸ್ವಾಮಿಯವರ ಕೈಹಿಡಿದಿದ್ದರಿಂದ ಅವರು ನಾಲ್ಕುವರೆ ಸಾವಿರ ವೋಟುಗಳ ಅಂತರದಲ್ಲಿ ಗೆದ್ದರು. ಈಗ ಎಲ್ಲ ಅಡೆತಡೆಗಳನ್ನು ನಿಭಾಯಿಸಿಕೊಂಡು ಗೆದ್ದು ಸಚಿವರಾಗಿರುವ ಮಂಡ್ಯ ಜಿಲ್ಲೆಯ ನಾಯಕರಾದ ಚಲುವರಾಯಸ್ವಾಮಿಯನ್ನು ಮಂಡ್ಯದ ಕರ್ನಾಟಕ ಸಂಘ ಸನ್ಮಾನಿಸಿದೆ. ಕೃಷಿ ಸಮಾಜದಿಂದ ಬಂದ ಭೈರೇಗೌಡರ ನಂತರ ಚಲುವರಾಯಸ್ವಾಮಿ ಆ ಇಲಾಖೆಗೆ ಜೀವ ನೀಡಬೇಕಾಗಿದೆ. ನಾಗಮಂಗಲದ ಶಾಸಕರಾಗಿದ್ದ ಚಲುವರಾಯಸ್ವಾಮಿ ಈಗ ಕೃಷಿಮಂತ್ರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವುದರಿಂದ, ಮಂಡ್ಯದಲ್ಲಿ ನಿರ್ವಹಣೆಯಿಲ್ಲದೆ ಹಾಳುಬಿದ್ದಿರುವ ರೈತ ಸಭಾಂಗಣ, ಕಲಾಮಂದಿರ ಇತ್ಯಾದಿ ಸಾಂಸ್ಕೃತಿಕ ವಲಯಗಳ ಪುನಶ್ಚೇತನಕ್ಕೆ ಕೆಲಸ ಮಾಡಿ, ಮಂಡ್ಯವನ್ನು ಅದರ ಗತಕಾಲದ ವೈಭವಕ್ಕೆ ಮರಳಿ ತರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾತ್ಯತೀತ ತಾಣ ಬಾಬಾ ಬುಡನ್‌ ಗಿರಿಯಲ್ಲಿ ‘ವೈದಿಕ ಆಚರಣೆ’ಗೆ ವಿರೋಧ; ಕಾಂಗ್ರೆಸ್‌ ಸರ್ಕಾರದ ವಿರುದ್ದ ಪ್ರತಿಭಟನೆ

ಕೋಮುವಾದಿಗಳು ಎಷ್ಟೇ ವಿಷಯ ತಿರುಚುವ ಕೆಲಸ ಮಾಡಿದರೂ ಬಾಬಾ ಬುಡನ್ ಗಿರಿಯ ಜಾತ್ಯತೀತ ಹಿನ್ನೆಲೆಯನ್ನು ಮುಚ್ಚಿಡುವುದಕ್ಕೆ ಸಾಧ್ಯವಿಲ್ಲ. ಅಲ್ಲಿನ ಸೌಹಾರ್ಧ ಪರಂಪರೆಯನ್ನು ಬದಿಗೆ ಸರಿಸಿ, ವೈದಿಕ ಆಚರಣೆಗೆ ಅನುಮತಿ ನೀಡುವ ಮೂಲಕ ಹಿಂದುತ್ವ...

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...