Homeಕರ್ನಾಟಕನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

ನಮ್ಮ ಸಚಿವರಿವರು; ಮಂಡ್ಯಕ್ಕೊಬ್ಬ ಸಮರ್ಥನಾಯಕ ಎನ್. ಚಲುವರಾಯಸ್ವಾಮಿ

- Advertisement -
- Advertisement -

ಮಂಡ್ಯ ಜಿಲ್ಲೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡ ಕೃಷಿ ಮಂತ್ರಿ ಎನ್. ಚಲುವರಾಯಸ್ವಾಮಿ ಸರಕಾರ ರಚನೆಯಾದ ಒಂದೇ ವಾರಕ್ಕೆ ಸಕ್ಕರೆ ಕಾರ್ಖಾನೆಗೆ ಐವತ್ತು ಕೋಟಿ ಹಣ ಬಿಡುಗಡೆ ಮಾಡಿಸಿ ತಾವೊಬ್ಬ ಸಮರ್ಥ ಮಂತ್ರಿ ಎಂಬ ಭರವಸೆಯನ್ನು ಮೂಡಿಸುವತ್ತ ಮುಂದಡಿಯಿಟ್ಟಿದ್ದಾರೆ!

ಮಂಡ್ಯ ಜಿಲ್ಲಾಪಂಚಾಯ್ತಿಗೆ ಆಯ್ಕೆಯಾಗುವುದರ ಮುಖಾಂತರ ರಾಜಕೀಯ ಪ್ರವೇಶ ಪಡೆದ ಚಲುವರಾಯಸ್ವಾಮಿ ಅಂದು ಜಿಲ್ಲಾ ಮಂತ್ರಿಯಾಗಿದ್ದ ಎಸ್.ಡಿ ಜಯರಾಮರ ಬೆಂಬಲದಿಂದ ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷರಾಗಿ ನಾಗಮಂಗಲ ಕ್ಷೇತ್ರದ ಕೆಲಸಗಳನ್ನು ಮಾಡುತ್ತ ಜನಪ್ರಿಯತೆ ಗಳಿಸತೊಡಗಿದರು. ಸಹಜವಾಗಿ ಅಂದಿನ ಶಾಸಕರು ಮತ್ತು ಬಿಡಿಎ ಛೇರ್ಮನ್ ಆಗಿದ್ದ ಶಿವರಾಮೇಗೌಡರು ತನ್ನ ಪ್ರತಿಸ್ಪರ್ಧಿಯ ವಿಷಯವಾಗಿ ಹೆಚ್ಚು ಪ್ರಚಾರ ಕೊಡತೊಡಗಿದರು; ಅದಾಗಲೇ ವಕೀಲ ಮತ್ತು ಪತ್ರಕರ್ತ ಗಂಗಾಧರಮೂರ್ತಿ ಕೊಲೆ ಆಪಾದನೆಯಿಂದ ಬಿಡುಗಡೆಯಾಗಿದ್ದ ಶಿವರಾಮೇಗೌಡರು ಹೊಸ ಹುಮ್ಮಸ್ಸಿನಿಂದ ನಾನು ಅಂತಹವನಲ್ಲ ಎಂದು ಸಾಬೀತುಮಾಡುವ ಭರದಲ್ಲಿ ಚಲುವರಾಯಸ್ವಾಮಿಗೇ ಹೆಚ್ಚು ಪ್ರಚಾರಕೊಟ್ಟರು. ಜನಕ್ಕೆ ಚಲುವರಾಯಸ್ವಾಮಿ ಹೇಗಿರಬಹುದೆಂಬ ಕುತೂಹಲ ಜಾಸ್ತಿಯಾಗಿ ತಮ್ಮ ಊರಿನ ಹಬ್ಬ, ಕ್ರೀಡೆ ಮತ್ತಿತರ ಸಾಂಸ್ಕೃತಿಕ ಚಟುವಟಿಕೆಗಳಿಗೆ ಕರೆಯತೊಡಗಿದರು; ಆಗ ಜನರಿಗೆ ತಮ್ಮ ನಾಯಕನಾಗಲು ಈತನೇ ಸರಿ ಅನ್ನಿಸತೊಡಗಿತು. ಮುಂದೆ 1999ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಜೆಡಿಎಸ್‌ನಿಂದ ಸ್ಪರ್ಧಿಸಿ ಶೀವರಾಮೇಗೌಡರ ಎದುರು 16 ಸಾವಿರ ಮತಗಳ ಮುನ್ನಡೆಯಿಂದ ಗೆದ್ದರು. ಆಗ ಕುಮಾರಸ್ವಾಮಿ ದೇವೇಗೌಡರಾದಿಯಾಗಿ ಸೋತು ಹೋಗಿದ್ದರಿಂದ ಚಲುವರಾಯಸ್ವಾಮಿ ಮಂಡ್ಯ ಜಿಲ್ಲೆ ಗುರುತಿಸುವ ನಾಯಕರಾಗಿ ಬೆಳೆಯತೊಡಗಿದ್ದರು.

ವಿರೋಧ ಪಕ್ಷದಲ್ಲಿದ್ದುಕೊಂಡೇ ಎಸ್‌ಎಂ ಕೃಷ್ಣರ ಸರಕಾರದಿಂದ ತಾಲೂಕಿಗೆ ಬೇಕಾದ ಕೆಲಸ ಮಾಡುತ್ತ ಐದು ವರ್ಷ ತುಂಬಿಸಿದಾಗ ಮತ್ತೆ ಚುನಾವಣೆ ಬಂತು. 2004ರಲ್ಲಿ ಮತ್ತೆ ಗೆದ್ದ ಚಲುವರಾಯಸ್ವಾಮಿ ಧರ್ಮಸಿಂಗ್ ನೇತೃತ್ವದ ಸಮ್ಮಿಶ್ರ ಸರಕಾರದಲ್ಲಿ ಆರೋಗ್ಯ ಸಚಿವರಾದರು. ಆಗ ಮಂಡ್ಯ ಜಿಲ್ಲೆಗೆ ಮೆಡಿಕಲ್ ಕಾಲೇಜು ತಂದುದಲ್ಲದೆ ನಾಗಮಂಗಲದ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿ ಸುಮಾರು ಐದು ಊರುಗಳಿಗೆ ಪ್ರಾಥಮಿಕ ಆರೋಗ್ಯದ ಘಟಕಗಳನ್ನು ತಂದರು. ಇದರ ಜೊತೆಗೆ ರಾಜ್ಯದ ಇನ್ನಿತರ ಕಡೆಯ ಜವಾಬ್ದಾರಿಯನ್ನು ನೋಡಬೇಕಿದ್ದುದರಿಂದ ಆರೋಗ್ಯ ಇಲಾಖೆಯನ್ನು ಸುಸ್ಥಿತಿಗೆ ತರುವ ಸಮಯದಲ್ಲಿ ಸಮ್ಮಿಶ್ರ ಸರಕಾರವೇ ಹೈಜಾಕಾದಂತಾಗಿ ಧರ್ಮಸಿಂಗ್ ಮನೆಗೆ ಹೋದರು. ಬಹುಶಃ ಕರ್ನಾಟಕದ ರಾಜಕಾರಣ ತನ್ನ ಪಥವನ್ನು ಬದಲಿಸಿಕೊಂಡು ಪತನದ ಹಾದಿ ಹಿಡಿಯಲು ಇದೇ ಕಾರಣ. ಕುಮಾರಸ್ವಾಮಿಯವರು ಬಿಜೆಪಿಗಳೊಟ್ಟಿಗೆ ಸರಕಾರ ಮಾಡಿದರು.

ದೇವೇಗೌಡ

ಆಗ ಕುಮಾರಸ್ವಾಮಿ ಸುತ್ತ ಸಮರ್ಥರ ದಂಡೇ ನೆರೆದಿತ್ತು; ಜಮೀರ್ ಅಹಮದ್, ಬಾಲಕೃಷ್ಣ, ಚಲುವರಾಯಸ್ವಾಮಿ ಹೀಗೆ; ಇವರೆಲ್ಲಾ ತಮ್ಮ ಮಗನನ್ನು ಮೀರಿಸುವ ನಾಯಕರಾಗಿ ಹೊರಹೊಮ್ಮುತ್ತಿದ್ದಂತೆ ಕಂಡಿದ್ದರಿಂದ ಆತಂಕಗೊಂಡ ದೇವೇಗೌಡರು ಮಗನೊಂದಿಗೆ ರಾಜಿಯಾಗಿ ಅಧಿಕಾರದ ಸೂತ್ರ ಕೈಗೆ ತೆಗೆದುಕೊಳ್ಳತೊಡಗಿದರು. ಚಲುವರಾಯಸ್ವಾಮಿ ಆಗ ಸಾರಿಗೆ ಸಚಿವರಾಗಿದ್ದರು. ಆಗಾಗಲೇ ನಾಗಮಂಗಲಕ್ಕೆ ಕೆಎಸ್‌ಆರ್‌ಟಿಸಿ ಡಿಪೋ ತಂದು ಆರ್‌ಟಿಓ ಆಫೀಸ್ ತೆರೆದಿದ್ದರು ಮತ್ತು ಬಸ್ಸನ್ನೇ ನೋಡದಂತಹ ಹಳ್ಳಿಗಳಿಗೂ ಬಸ್ಸು ಹೋಗಿ ಬರುವಂತೆ ಮಾಡಿದ್ದರು. ಕೆ.ಇ.ಬಿಯ ಇ.ಇ ಆಫೀಸು (ಎಕ್ಸೆಕ್ಯುಟಿವ್ ಇಂಜಿನಿಯರ್ ಆಫೀಸು) ಪಾಂಡವಪುರದಲ್ಲಿತ್ತು. ಅದನ್ನು ನಾಗಮಂಗಲಕ್ಕೂ ತಂದರು.

ಆಗ ಅಸಿಸ್ಟೆಂಟ್ ಕಮೀಷನರ್ ಕಚೇರಿ ಪಾಂಡವಪುರದಲ್ಲಿದ್ದು ನಾಗಮಂಗಲ ಪ್ರಾಂತ್ಯದ ಜನ ತಮ್ಮ ವ್ಯಾಜ್ಯಗಳ ಇತ್ಯರ್ಥಕ್ಕೆ ಪಾಂಡವಪುರಕ್ಕೆ ಅಲೆಯಬೇಕಾಗಿತ್ತು. ಚಲುವರಾಯಸ್ವಾಮಿಯವರು ಎ.ಸಿ. ಕಚೇರಿಯೇ ವಾರಕ್ಕೊಮ್ಮೆ ನಾಗಮಂಗಲಕ್ಕೆ ಬಂದು ಕೆಲಸ ಮಾಡುವಂತೆ ಮಾಡಿದರು. ಅಲ್ಲದೆ ತಾಲೂಕಿನ ದೊಡ್ಡ ಊರುಗಳಿಗೆ ಹೈಸ್ಕೂಲು ತಂದರು. ಅಷ್ಟರಲ್ಲಿ ಇವರುಗಳ ಇಲಾಖೆಯ ಕೆಲಸಗಳಿಗೆ ಅಡೆತಡೆಗಳು ಶುರುವಾದವು. ಗೌಡರಿಗೆ ಚಲುವರಾಯಸ್ವಾಮಿ ಎಲ್ಲೋ ತಮ್ಮ ಮಗನನ್ನೇ ಒವರ್‌ಟೇಕ್ ಮಾಡುವಂತೆ ಕಂಡಿತು; ಹಾಗಾಗಿ ದೇವೇಗೌಡರ ಅಭಿಮಾನಿಗಳು ಮತ್ತು ರೇವಣ್ಣನ ಹಿಂಬಾಲಕರು ಮುಂದಿನ 2008ರ ಚುನಾವಣೆಯಲ್ಲಿ ಚಲುವರಾಯಸ್ವಾಮಿ ವಿರುದ್ಧ ಕೆಲಸ ಮಾಡಿದ್ದರು ಎಂಬ ಮಾತು ಜನಜನಿತವಾಗಿದೆ. ಇದೆಲ್ಲಕ್ಕಿಂತ ಮುಖ್ಯವಾಗಿ ಹಿಂದೆ ಮುಂದೆ ಪಹರೆ ವಾಹನದ ನಡುವೆ ಸೈರನ್ ಮೊಳಗಿಸಿಕೊಂಡು ಹೋಗುವ ಮಂತ್ರಿ ಬಗ್ಗೆ ನಿಷ್ಕಾರಣದ ತಾತ್ಸಾರ ಬೆಳೆದುಕೊಂಡಿದ್ದು ಒಂದು ಕಾರಣವಾಗಿ ಆ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಸೋತರು. ಇಷ್ಟೊಂದು ಕೆಲಸ ಮಾಡಿಯೂ ಜನ ಸೋಲಿಸಿದರಲ್ಲಾ ಎಂಬ ನಿರಾಶೆಗೆ ಚಲುವರಾಯಸ್ವಾಮಿ ಒಳಗಾಗಿದ್ದರು. ಬೇರೆ ಕಾರಣಗಳೂ ಇದ್ದವು. ಆ ಕಾರಣಗಳು ಮುಂದೆ ಬೃಹದಾಕಾರವಾಗಿ ಎದ್ದುನಿಂತು ದೇವೇಗೌಡರು ನಾಗಮಂಗಲ ಕ್ಷೇತ್ರದ ದೇವಸ್ಥಾನ ಉದ್ಘಾಟನೆ, ತಿಥಿ, ಮದುವೆಗೆಲ್ಲಾ ಬಂದು ಚಲುವರಾಯಸ್ವಾಮಿಯನ್ನು ಮೂಲೆಗುಂಪು ಮಾಡಲು ಶತಾಯಗತಾಯ ಪ್ರಯತ್ನಿಸಿದರು. ಆಗ ಬೆಂಗಳೂರಿನ ಎಚ್‌ಎಎಲ್ ಕಾರ್ಖಾನೆ ನೌಕರರ ವಸತಿ ನಿರ್ಮಾಣದ ಸೊಸೈಟಿಯಲ್ಲಿ ಹೆಸರು ಮಾಡಿದ್ದ ಸುರೇಶ್‌ಗೌಡರು ಬಂದು ಚಲುವರಾಯಸ್ವಾಮಿ ಎದುರು ನಿಂತು ಗೆದ್ದರು. 2013ರಲ್ಲಿ ಚಲುವರಾಯಸ್ವಾಮಿ ಮತ್ತೆ ಜೆಡಿಎಸ್‌ನಿಂದ ಗೆದ್ದರೂ ಆಗ ಕಾಂಗ್ರೆಸ್ ಸರ್ಕಾರ ಬಂತು. ಮುಂದೆ ಅದುಲುಬದಲಾಗಿ ಸುರೇಶ್‌ಗೌಡ ಜನತಾದಳಕ್ಕೆ ಹೋದರೆ ಚಲುವರಾಯಸ್ವಾಮಿ ಕಾಂಗ್ರೆಸ್‌ಗೆ ಹೋದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಂತರ 2018ರ ಚುನಾವಣೆಯಲ್ಲಿ ಸುರೇಶ್‌ಗೌಡರು ದಾಖಲೆಯ ನಲವತ್ತೇಳುವರೆ ಸಾವಿರ ಲೀಡನಲ್ಲಿ ಗೆದ್ದರು. ಚಲುವರಾಯಸ್ವಾಮಿ ಗೌಡರಿಗೆ ದ್ರೋಹ ಬಗೆದು ಕಾಂಗ್ರೆಸ್ಸಿಗೆ ಹೋದರೆಂದು ದೇವೇಗೌಡರ ಕಡೆಯವರು ಮತದಾರರನ್ನು ಕೆರಳಿಸಿ ಗೆಲುವು ಸಾಧಿಸಿದ್ದರು. ಮುಂದೆ ಸಮ್ಮಿಶ್ರ ಸರಕಾರ ಬಂತು; 80 ಸೀಟು ಗೆದ್ದಿದ್ದ ಕಾಂಗ್ರೆಸ್ ಮೂವತ್ತು ಚಿಲ್ಲರೆ ಸೀಟು ಗೆದ್ದಿದ್ದ ದಳಕ್ಕೆ ಸಪೋರ್ಟಟು ಮಾಡಿ ಕುಮಾರಸ್ವಾಮಿಯವರನ್ನು ಮುಖ್ಯಮಂತ್ರಿ ಮಾಡಿತ್ತು. ಚಲುವರಾಯಸ್ವಾಮಿಯವರನ್ನು ಮೂಲೆಗುಂಪು ಮಾಡಿ ಮಂಡ್ಯವನ್ನು ಕೈಗೆ ತೆಗೆದುಕೊಳ್ಳುವ ಪ್ಲಾನ್ ಮಾಡಿದ ದೇವೇಗೌಡರು ಮತ್ತು ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿಯವರನ್ನು ಲೋಕಸಭಾ ಅಭ್ಯರ್ಥಿಯನ್ನಾಗಿಸಿದರು. ಅವರಗೂ ಓಟು ಕೇಳುವಂತಹ ಸ್ಥಿತಿ ಚಲುವರಾಯಸ್ವಾಮಿಗೆ ಬಂತು. ಆದರೆ ಮಂಡ್ಯದ ಕಾಂಗ್ರೆಸ್ಸಿಗರು ಮೈತ್ರಿ ಅಭ್ಯರ್ಥಿಯಾದ ನಿಖಿಲ್‌ಗೆ ಕೆಲಸ ಮಾಡುವುದರ ಬದಲು ಸುಮಲತಾಗೆ ವರ್ಕ್ ಮಾಡಿದ್ದರಿಂದ ನಿಖಿಲ್ ಒಂದೂಕಾಲು ಲಕ್ಷದ ಅಂತರದಿಂದ ಸೋತರು. ಇದರಲ್ಲಿ ಚಲುವರಾಯಸ್ವಾಮಿ ಶ್ರಮವೂ ಇತ್ತು.

ಸುರೇಶ್‌ಗೌಡ

ಮುಂದೆ ರಾಹುಲ್ ಗಾಂಧಿಯವರ ಭಾರತ್ ಜೋಡೊ ಯಾತ್ರೆ ನಾಗಮಂಗಲದ ಮುಖಾಂತರ ಹಾದುಹೋಗುವಾಗ ಅದರ ಜವಾಬ್ದಾರಿ ಚಲುವರಾಯಸ್ವಾಮಿ ಮೇಲೆ ಬಿತ್ತು. ಈ ಐತಿಹಾಸಿಕ ಘಟನೆಯನ್ನು ಸಮರ್ಥವಾಗಿ ನಿಭಾಯಿಸಿದ ಚಲುವರಾಯಸ್ವಾಮಿ ರಾಹುಲಗಾಂಧಿಗೆ ಹತ್ತಿರವಾದರು.

ಈ ಬಾರಿ ಚಲುವರಾಯಸ್ವಾಮಿ ಎದುರಿಸಿದ ನಾಗಮಂಗಲದ ಚುನಾವಣೆ ಹಿಂದಿಗಿಂತಲೂ ಬಿರುಸಾಗಿತ್ತು. ಗೆಲ್ಲುವ ಎಲ್ಲ ಸೂಚನೆಗಳಿದ್ದರೂ ಕಡೆ ಗಳಿಗೆಯಲ್ಲಿ ನಾಗಮಂಗಲಕ್ಕೆ ಬಂದು ರೋಡ್‌ಶೋ ಮಾಡಿದ ದೇವೇಗೌಡರು, ಚಲುವರಾಯಸ್ವಾಮಿಯನ್ನು ಸೋಲಿಸಲು ಕರೆಕೊಟ್ಟಿದ್ದಲ್ಲದೆ, ಗದ್ಗರಿತವಾಗಿ ಕೇಳಿಕೊಂಡರು. ಅವರ ಸಭೆಗೆ ಸೇರಿದ್ದ ಜನಸ್ತೋಮ ನೋಡಿದ ಜನರು ಸುರೇಶ್‌ಗೌಡರ ಗೆಲುವಿನ ಬಗ್ಗೆ ಯಾವ ಸಂಶಯವನ್ನು ಇಟ್ಟುಕೊಳ್ಳದೆ ಮನಸ್ಸಿಗೆ ಬಂದಷ್ಟು ಬೆಟ್ ಕಟ್ಟಿ ಸೋತುಹೋದರು. ಬೆಳ್ಳೂರು, ನಾಗಮಂಗಲ ಮತ್ತು ಕೊಪ್ಪ ಹೋಬಳಿ ಚಲುವರಾಯಸ್ವಾಮಿಯವರ ಕೈಹಿಡಿದಿದ್ದರಿಂದ ಅವರು ನಾಲ್ಕುವರೆ ಸಾವಿರ ವೋಟುಗಳ ಅಂತರದಲ್ಲಿ ಗೆದ್ದರು. ಈಗ ಎಲ್ಲ ಅಡೆತಡೆಗಳನ್ನು ನಿಭಾಯಿಸಿಕೊಂಡು ಗೆದ್ದು ಸಚಿವರಾಗಿರುವ ಮಂಡ್ಯ ಜಿಲ್ಲೆಯ ನಾಯಕರಾದ ಚಲುವರಾಯಸ್ವಾಮಿಯನ್ನು ಮಂಡ್ಯದ ಕರ್ನಾಟಕ ಸಂಘ ಸನ್ಮಾನಿಸಿದೆ. ಕೃಷಿ ಸಮಾಜದಿಂದ ಬಂದ ಭೈರೇಗೌಡರ ನಂತರ ಚಲುವರಾಯಸ್ವಾಮಿ ಆ ಇಲಾಖೆಗೆ ಜೀವ ನೀಡಬೇಕಾಗಿದೆ. ನಾಗಮಂಗಲದ ಶಾಸಕರಾಗಿದ್ದ ಚಲುವರಾಯಸ್ವಾಮಿ ಈಗ ಕೃಷಿಮಂತ್ರಿ ಹಾಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವುದರಿಂದ, ಮಂಡ್ಯದಲ್ಲಿ ನಿರ್ವಹಣೆಯಿಲ್ಲದೆ ಹಾಳುಬಿದ್ದಿರುವ ರೈತ ಸಭಾಂಗಣ, ಕಲಾಮಂದಿರ ಇತ್ಯಾದಿ ಸಾಂಸ್ಕೃತಿಕ ವಲಯಗಳ ಪುನಶ್ಚೇತನಕ್ಕೆ ಕೆಲಸ ಮಾಡಿ, ಮಂಡ್ಯವನ್ನು ಅದರ ಗತಕಾಲದ ವೈಭವಕ್ಕೆ ಮರಳಿ ತರಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...