Homeಕರ್ನಾಟಕನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್...

ನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ

- Advertisement -
- Advertisement -

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತುಂಬುವ ವ್ಯಕ್ತಿಯಾಗಿಯೇ ಚಿರಪರಿಚಿತ. ಸದ್ಯ ಅವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಖಂಡ್ರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಕರ್ನಾಟಕ ವಿಧಾನಸಭೆಗೆ ಖಂಡ್ರೆ ಕುಟುಂಬದಿಂದ ಆಯ್ಕೆಯಾದವರಲ್ಲಿ ಈಶ್ವರ್ ಖಂಡ್ರೆ ಅವರು ಮೂರನೇ ಸದಸ್ಯರಾಗಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದಾಗಿರಲಿಲ್ಲ. ಈಶ್ವರ್ ಖಂಡ್ರೆ ಅವರ ತಂದೆ ಮಾಜಿ ಸಚಿವರಾಗಿದ್ದರು ಮತ್ತು ಈ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾಗಿದ್ದರು. ತಂದೆಯ ನಂತರ ಈಶ್ವರ್ ಸಹೋದರ ವಿಜಯಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ತಂದೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಇವರು ಅದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾ ಗೆಲುವು ಕಾಣುತ್ತಿದ್ದಾರೆ.

ಭೀಮಣ್ಣ ಖಂಡ್ರೆ

ಪೂರ್ತಿ ಹೆಸರು ಈಶ್ವರ ಭೀಮಣ್ಣ ಖಂಡ್ರೆ. 1962 ಜನವರಿ 15ರಂದು ಖಂಡ್ರೆ ಅವರು ಭಾಲ್ಕಿಯಲ್ಲಿ ಜನಿಸಿದರು. ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ತಾಯಿ ಲಕ್ಷ್ಮೀಬಾಯಿ. ಇಬ್ಬರು ಮಕ್ಕಳಲ್ಲಿ ಈಶ್ವರ ಖಂಡ್ರೆ ಎರಡನೆಯವರು. ಅವರು 1985ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ಮುಗಿಸಿ ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು. ಆರಂಭದಲ್ಲಿ ಈಶ್ವರ್ ಖಂಡ್ರೆ ಅವರಿಗೆ ರಾಜಕೀಯ ಪ್ರವೇಶ ಮಾಡುವುದು ಸುತರಾಂ ಇಷ್ಟವಿರಲಿಲ್ಲ ಎನ್ನಲಾಗುತ್ತದೆ; ಸರ್ಕಾರಿ ಆಡಳಿತದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸಿನಲ್ಲಿದ್ದರು. ಆದರೆ, ತಂದೆ ಭೀಮಣ್ಣ ಖಂಡ್ರೆ ಹಾಗೂ ಸಹೋದರ ದಿವಂಗತ ಡಾ.ವಿಜಯಕುಮಾರ ಖಂಡ್ರೆ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರ ಕೆಲಸ ಕೈಗೊಂಡಿದ್ದರು. ಹಾಗಾಗಿ ಅವರ ನಂತರ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರುವಂತೆ ಮಾಡಿತು.

ಈಶ್ವರ್ ಖಂಡ್ರೆ ಅವರು ನಡೆದುಬಂದ ರಾಜಕೀಯ ಹಾದಿ

1979ರಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಸೇರಿದರು.

1985ರಲ್ಲಿ ಕೋಲ್ಕತ್ತದಲ್ಲಿ ನಡೆದ ಕಾಂಗ್ರೆಸ್ ಸೇವಾದಳದ ಶಿಬಿರದಲ್ಲಿ ಪಾಲ್ಗೊಂಡಿದ್ದರು. 1987ರಲ್ಲಿ ಭಾಲ್ಕಿ ಪಟ್ಟಣದಲ್ಲಿ ಜಿಲ್ಲಾಮಟ್ಟದ ಸೇವಾದಳ ಕ್ಯಾಂಪ್ ಆಯೋಜಿಸಿ ಅಂದಿನ ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಅವರನ್ನು ಆಹ್ವಾನಿಸಿದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

1989ರಲ್ಲಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ನಾಮನಿರ್ದೇಶನಗೊಂಡರು. ಅದೇ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದ್ದರು.

1998ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾಲ್ಕಿಗೆ ಆಹ್ವಾನಿಸಿ ಕಿಸಾನ್ ರ್‍ಯಾಲಿ ನಡೆಸಿದರು. ಈಶ್ವರ್ ಖಂಡ್ರೆ ಅವರು ಮೊದಲ ಬಾರಿಗೆ 2004ರಲ್ಲಿ ಭಾಲ್ಕಿ ವಿಧಾನಸಭೆಯಿಂದ ಸ್ಪರ್ಧಿಸಿ ಸೋಲು ಕಂಡರು.

ವಿಜಯಕುಮಾರ್ ಖಂಡ್ರೆ

2008ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ ಈಶ್ವರ ಖಂಡ್ರೆ ಅವರು ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪವೇಶಿಸಿದರು. 2013ರ ಚುನಾವಣೆಯಲ್ಲಿಯೂ ಗೆದ್ದು 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಖಂಡ್ರೆ ಅವರನ್ನು ಅದೇ ವರ್ಷ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು 22 ತಿಂಗಳ ಕಾಲ ಪೌರಾಡಳಿತ ಇಲಾಖೆ ಸಚಿವ ಹಾಗೂ ಬೀದರ್ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದರು.

2018ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಈಶ್ವರ ಖಂಡ್ರೆ ಅವರನ್ನು ಎರಡನೇ ಅವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತು. 2023ರಲ್ಲಿ ಸತತ ನಾಲ್ಕನೇ ಬಾರಿ ಖಂಡ್ರೆ ಅವರು ವಿಧಾನಸಭೆಗೆ ಆಯ್ಕೆಯಾದರು ಇದೀಗ ಸಂಪುಟ ದರ್ಜೆಯ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಸ್ಪೀಕರ್ ಕಾಗೇರಿ ವಿರುದ್ಧ ಹೋರಾಟ

2023ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನದ ವೇಳೆ ಸಿದ್ದರಾಮಯ್ಯನವರನ್ನು ಟಿಪ್ಪುವಿನಂತೆ ಇಲ್ಲವಾಗಿಸಿ ಎಂಬರ್ಥದಲ್ಲಿ ಬಹಿರಂಗ ಸಭೆಯಲ್ಲಿ ಕರೆನೀಡಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ರೋಷಾವೇಶದಿಂದ ಮಾತನಾಡಿದ್ದರು. ಇದರಿಂದ ಕೋಪಗೊಂಡಿದ್ದ ಆಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ನಿಮ್ಮಂತಹವರು ಶಾಸಕರಾಗಿ ಆಯ್ಕೆಯಾಗಿ ಬರುವುದು ಸದನಕ್ಕೆ ಅಗೌರವ, ಯಾರು ನಿಮ್ಮನ್ನು ಆಯ್ಕೆ ಮಾಡಿದ್ದು?” ಎಂದು ಅವಹೇಳನ ಮಾಡಿದ್ದರು. ಆಗ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಒಂದು ಪಕ್ಷದ ವಕ್ತಾರರಂತೆ ಮಾತನಾಡುತ್ತಾರೆ, ಪಕ್ಷಪಾತ ಮಾಡುತ್ತಾರೆ ಎಂದು ಖಂಡ್ರೆ ಪರವಾಗಿ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಭಾಲ್ಕಿ ಪಟ್ಟಣ ಬಂದ್ ಮಾಡಲಾಗಿತ್ತು. ಅಲ್ಲದೇ ಚುನಾವಣೆಯಲ್ಲಿ ಖಂಡ್ರೆಯವರನ್ನು ದೊಡ್ಡ ಅಂತರದಲ್ಲಿ ಅಲ್ಲಿನ ಜನ ಮತ್ತೊಮ್ಮೆ ಗೆಲ್ಲಿಸಿ ಕಳುಹಿಸಿದರು. ಆದರೆ ಈ ಚುನಾವಣೆಯಲ್ಲಿ ಕಾಗೇರಿಯವರು ಸೋಲಬೇಕಾಗಿ ಬಂತು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಅನುಭವವಿರುವ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಾಣಲು ಸಾಧ್ಯವಾಗಿರುವುದಕ್ಕೆ ಅವರ ಕೊಡುಗೆಯೂ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ಕೂಡ ಕಾರಣರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಭಾಲ್ಕಿ ಕ್ಷೇತ್ರದಲ್ಲಿನ ಅರಣ್ಯೀಕರಣಕ್ಕೆ ಆದ್ಯತೆ, ರೈತರಿಗೆ ಕಾರಂಜಾದಿಂದ ನೀರು ಪೂರೈಕೆಗೆ ಪೂರ್ಣಪ್ರಮಾಣದ ವ್ಯವಸ್ಥೆ, ಪ್ರವಾಸಿತಾಣಗಳ ಅಭಿವೃದ್ಧಿ, ಕಾರಂಜಾ ಸಂತ್ರಸ್ತರಿಗೆ ಪರಿಹಾರ, ಗೋದಾವರಿ ನದಿ ನೀರಿನ ಸದ್ಬಳಕೆಗೆ ಯೋಜನೆ, ಬೆಳೆ ಹಾನಿ ಪರಿಹಾರ, ರೈತ ಪರ ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ರಾಜ್ಯದ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...