Homeಕರ್ನಾಟಕನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್...

ನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ

- Advertisement -
- Advertisement -

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತುಂಬುವ ವ್ಯಕ್ತಿಯಾಗಿಯೇ ಚಿರಪರಿಚಿತ. ಸದ್ಯ ಅವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಖಂಡ್ರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಕರ್ನಾಟಕ ವಿಧಾನಸಭೆಗೆ ಖಂಡ್ರೆ ಕುಟುಂಬದಿಂದ ಆಯ್ಕೆಯಾದವರಲ್ಲಿ ಈಶ್ವರ್ ಖಂಡ್ರೆ ಅವರು ಮೂರನೇ ಸದಸ್ಯರಾಗಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದಾಗಿರಲಿಲ್ಲ. ಈಶ್ವರ್ ಖಂಡ್ರೆ ಅವರ ತಂದೆ ಮಾಜಿ ಸಚಿವರಾಗಿದ್ದರು ಮತ್ತು ಈ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾಗಿದ್ದರು. ತಂದೆಯ ನಂತರ ಈಶ್ವರ್ ಸಹೋದರ ವಿಜಯಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ತಂದೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಇವರು ಅದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾ ಗೆಲುವು ಕಾಣುತ್ತಿದ್ದಾರೆ.

ಭೀಮಣ್ಣ ಖಂಡ್ರೆ

ಪೂರ್ತಿ ಹೆಸರು ಈಶ್ವರ ಭೀಮಣ್ಣ ಖಂಡ್ರೆ. 1962 ಜನವರಿ 15ರಂದು ಖಂಡ್ರೆ ಅವರು ಭಾಲ್ಕಿಯಲ್ಲಿ ಜನಿಸಿದರು. ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ತಾಯಿ ಲಕ್ಷ್ಮೀಬಾಯಿ. ಇಬ್ಬರು ಮಕ್ಕಳಲ್ಲಿ ಈಶ್ವರ ಖಂಡ್ರೆ ಎರಡನೆಯವರು. ಅವರು 1985ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ಮುಗಿಸಿ ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು. ಆರಂಭದಲ್ಲಿ ಈಶ್ವರ್ ಖಂಡ್ರೆ ಅವರಿಗೆ ರಾಜಕೀಯ ಪ್ರವೇಶ ಮಾಡುವುದು ಸುತರಾಂ ಇಷ್ಟವಿರಲಿಲ್ಲ ಎನ್ನಲಾಗುತ್ತದೆ; ಸರ್ಕಾರಿ ಆಡಳಿತದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸಿನಲ್ಲಿದ್ದರು. ಆದರೆ, ತಂದೆ ಭೀಮಣ್ಣ ಖಂಡ್ರೆ ಹಾಗೂ ಸಹೋದರ ದಿವಂಗತ ಡಾ.ವಿಜಯಕುಮಾರ ಖಂಡ್ರೆ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರ ಕೆಲಸ ಕೈಗೊಂಡಿದ್ದರು. ಹಾಗಾಗಿ ಅವರ ನಂತರ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರುವಂತೆ ಮಾಡಿತು.

ಈಶ್ವರ್ ಖಂಡ್ರೆ ಅವರು ನಡೆದುಬಂದ ರಾಜಕೀಯ ಹಾದಿ

1979ರಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಸೇರಿದರು.

1985ರಲ್ಲಿ ಕೋಲ್ಕತ್ತದಲ್ಲಿ ನಡೆದ ಕಾಂಗ್ರೆಸ್ ಸೇವಾದಳದ ಶಿಬಿರದಲ್ಲಿ ಪಾಲ್ಗೊಂಡಿದ್ದರು. 1987ರಲ್ಲಿ ಭಾಲ್ಕಿ ಪಟ್ಟಣದಲ್ಲಿ ಜಿಲ್ಲಾಮಟ್ಟದ ಸೇವಾದಳ ಕ್ಯಾಂಪ್ ಆಯೋಜಿಸಿ ಅಂದಿನ ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಅವರನ್ನು ಆಹ್ವಾನಿಸಿದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

1989ರಲ್ಲಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ನಾಮನಿರ್ದೇಶನಗೊಂಡರು. ಅದೇ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದ್ದರು.

1998ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾಲ್ಕಿಗೆ ಆಹ್ವಾನಿಸಿ ಕಿಸಾನ್ ರ್‍ಯಾಲಿ ನಡೆಸಿದರು. ಈಶ್ವರ್ ಖಂಡ್ರೆ ಅವರು ಮೊದಲ ಬಾರಿಗೆ 2004ರಲ್ಲಿ ಭಾಲ್ಕಿ ವಿಧಾನಸಭೆಯಿಂದ ಸ್ಪರ್ಧಿಸಿ ಸೋಲು ಕಂಡರು.

ವಿಜಯಕುಮಾರ್ ಖಂಡ್ರೆ

2008ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ ಈಶ್ವರ ಖಂಡ್ರೆ ಅವರು ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪವೇಶಿಸಿದರು. 2013ರ ಚುನಾವಣೆಯಲ್ಲಿಯೂ ಗೆದ್ದು 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಖಂಡ್ರೆ ಅವರನ್ನು ಅದೇ ವರ್ಷ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು 22 ತಿಂಗಳ ಕಾಲ ಪೌರಾಡಳಿತ ಇಲಾಖೆ ಸಚಿವ ಹಾಗೂ ಬೀದರ್ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದರು.

2018ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಈಶ್ವರ ಖಂಡ್ರೆ ಅವರನ್ನು ಎರಡನೇ ಅವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತು. 2023ರಲ್ಲಿ ಸತತ ನಾಲ್ಕನೇ ಬಾರಿ ಖಂಡ್ರೆ ಅವರು ವಿಧಾನಸಭೆಗೆ ಆಯ್ಕೆಯಾದರು ಇದೀಗ ಸಂಪುಟ ದರ್ಜೆಯ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಸ್ಪೀಕರ್ ಕಾಗೇರಿ ವಿರುದ್ಧ ಹೋರಾಟ

2023ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನದ ವೇಳೆ ಸಿದ್ದರಾಮಯ್ಯನವರನ್ನು ಟಿಪ್ಪುವಿನಂತೆ ಇಲ್ಲವಾಗಿಸಿ ಎಂಬರ್ಥದಲ್ಲಿ ಬಹಿರಂಗ ಸಭೆಯಲ್ಲಿ ಕರೆನೀಡಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ರೋಷಾವೇಶದಿಂದ ಮಾತನಾಡಿದ್ದರು. ಇದರಿಂದ ಕೋಪಗೊಂಡಿದ್ದ ಆಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ನಿಮ್ಮಂತಹವರು ಶಾಸಕರಾಗಿ ಆಯ್ಕೆಯಾಗಿ ಬರುವುದು ಸದನಕ್ಕೆ ಅಗೌರವ, ಯಾರು ನಿಮ್ಮನ್ನು ಆಯ್ಕೆ ಮಾಡಿದ್ದು?” ಎಂದು ಅವಹೇಳನ ಮಾಡಿದ್ದರು. ಆಗ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಒಂದು ಪಕ್ಷದ ವಕ್ತಾರರಂತೆ ಮಾತನಾಡುತ್ತಾರೆ, ಪಕ್ಷಪಾತ ಮಾಡುತ್ತಾರೆ ಎಂದು ಖಂಡ್ರೆ ಪರವಾಗಿ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಭಾಲ್ಕಿ ಪಟ್ಟಣ ಬಂದ್ ಮಾಡಲಾಗಿತ್ತು. ಅಲ್ಲದೇ ಚುನಾವಣೆಯಲ್ಲಿ ಖಂಡ್ರೆಯವರನ್ನು ದೊಡ್ಡ ಅಂತರದಲ್ಲಿ ಅಲ್ಲಿನ ಜನ ಮತ್ತೊಮ್ಮೆ ಗೆಲ್ಲಿಸಿ ಕಳುಹಿಸಿದರು. ಆದರೆ ಈ ಚುನಾವಣೆಯಲ್ಲಿ ಕಾಗೇರಿಯವರು ಸೋಲಬೇಕಾಗಿ ಬಂತು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಅನುಭವವಿರುವ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಾಣಲು ಸಾಧ್ಯವಾಗಿರುವುದಕ್ಕೆ ಅವರ ಕೊಡುಗೆಯೂ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ಕೂಡ ಕಾರಣರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಭಾಲ್ಕಿ ಕ್ಷೇತ್ರದಲ್ಲಿನ ಅರಣ್ಯೀಕರಣಕ್ಕೆ ಆದ್ಯತೆ, ರೈತರಿಗೆ ಕಾರಂಜಾದಿಂದ ನೀರು ಪೂರೈಕೆಗೆ ಪೂರ್ಣಪ್ರಮಾಣದ ವ್ಯವಸ್ಥೆ, ಪ್ರವಾಸಿತಾಣಗಳ ಅಭಿವೃದ್ಧಿ, ಕಾರಂಜಾ ಸಂತ್ರಸ್ತರಿಗೆ ಪರಿಹಾರ, ಗೋದಾವರಿ ನದಿ ನೀರಿನ ಸದ್ಬಳಕೆಗೆ ಯೋಜನೆ, ಬೆಳೆ ಹಾನಿ ಪರಿಹಾರ, ರೈತ ಪರ ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ರಾಜ್ಯದ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...