Homeಕರ್ನಾಟಕನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್...

ನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ

- Advertisement -
- Advertisement -

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತುಂಬುವ ವ್ಯಕ್ತಿಯಾಗಿಯೇ ಚಿರಪರಿಚಿತ. ಸದ್ಯ ಅವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಖಂಡ್ರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಕರ್ನಾಟಕ ವಿಧಾನಸಭೆಗೆ ಖಂಡ್ರೆ ಕುಟುಂಬದಿಂದ ಆಯ್ಕೆಯಾದವರಲ್ಲಿ ಈಶ್ವರ್ ಖಂಡ್ರೆ ಅವರು ಮೂರನೇ ಸದಸ್ಯರಾಗಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದಾಗಿರಲಿಲ್ಲ. ಈಶ್ವರ್ ಖಂಡ್ರೆ ಅವರ ತಂದೆ ಮಾಜಿ ಸಚಿವರಾಗಿದ್ದರು ಮತ್ತು ಈ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾಗಿದ್ದರು. ತಂದೆಯ ನಂತರ ಈಶ್ವರ್ ಸಹೋದರ ವಿಜಯಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ತಂದೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಇವರು ಅದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾ ಗೆಲುವು ಕಾಣುತ್ತಿದ್ದಾರೆ.

ಭೀಮಣ್ಣ ಖಂಡ್ರೆ

ಪೂರ್ತಿ ಹೆಸರು ಈಶ್ವರ ಭೀಮಣ್ಣ ಖಂಡ್ರೆ. 1962 ಜನವರಿ 15ರಂದು ಖಂಡ್ರೆ ಅವರು ಭಾಲ್ಕಿಯಲ್ಲಿ ಜನಿಸಿದರು. ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ತಾಯಿ ಲಕ್ಷ್ಮೀಬಾಯಿ. ಇಬ್ಬರು ಮಕ್ಕಳಲ್ಲಿ ಈಶ್ವರ ಖಂಡ್ರೆ ಎರಡನೆಯವರು. ಅವರು 1985ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ಮುಗಿಸಿ ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು. ಆರಂಭದಲ್ಲಿ ಈಶ್ವರ್ ಖಂಡ್ರೆ ಅವರಿಗೆ ರಾಜಕೀಯ ಪ್ರವೇಶ ಮಾಡುವುದು ಸುತರಾಂ ಇಷ್ಟವಿರಲಿಲ್ಲ ಎನ್ನಲಾಗುತ್ತದೆ; ಸರ್ಕಾರಿ ಆಡಳಿತದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸಿನಲ್ಲಿದ್ದರು. ಆದರೆ, ತಂದೆ ಭೀಮಣ್ಣ ಖಂಡ್ರೆ ಹಾಗೂ ಸಹೋದರ ದಿವಂಗತ ಡಾ.ವಿಜಯಕುಮಾರ ಖಂಡ್ರೆ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರ ಕೆಲಸ ಕೈಗೊಂಡಿದ್ದರು. ಹಾಗಾಗಿ ಅವರ ನಂತರ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರುವಂತೆ ಮಾಡಿತು.

ಈಶ್ವರ್ ಖಂಡ್ರೆ ಅವರು ನಡೆದುಬಂದ ರಾಜಕೀಯ ಹಾದಿ

1979ರಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಸೇರಿದರು.

1985ರಲ್ಲಿ ಕೋಲ್ಕತ್ತದಲ್ಲಿ ನಡೆದ ಕಾಂಗ್ರೆಸ್ ಸೇವಾದಳದ ಶಿಬಿರದಲ್ಲಿ ಪಾಲ್ಗೊಂಡಿದ್ದರು. 1987ರಲ್ಲಿ ಭಾಲ್ಕಿ ಪಟ್ಟಣದಲ್ಲಿ ಜಿಲ್ಲಾಮಟ್ಟದ ಸೇವಾದಳ ಕ್ಯಾಂಪ್ ಆಯೋಜಿಸಿ ಅಂದಿನ ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಅವರನ್ನು ಆಹ್ವಾನಿಸಿದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

1989ರಲ್ಲಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ನಾಮನಿರ್ದೇಶನಗೊಂಡರು. ಅದೇ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದ್ದರು.

1998ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾಲ್ಕಿಗೆ ಆಹ್ವಾನಿಸಿ ಕಿಸಾನ್ ರ್‍ಯಾಲಿ ನಡೆಸಿದರು. ಈಶ್ವರ್ ಖಂಡ್ರೆ ಅವರು ಮೊದಲ ಬಾರಿಗೆ 2004ರಲ್ಲಿ ಭಾಲ್ಕಿ ವಿಧಾನಸಭೆಯಿಂದ ಸ್ಪರ್ಧಿಸಿ ಸೋಲು ಕಂಡರು.

ವಿಜಯಕುಮಾರ್ ಖಂಡ್ರೆ

2008ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ ಈಶ್ವರ ಖಂಡ್ರೆ ಅವರು ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪವೇಶಿಸಿದರು. 2013ರ ಚುನಾವಣೆಯಲ್ಲಿಯೂ ಗೆದ್ದು 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಖಂಡ್ರೆ ಅವರನ್ನು ಅದೇ ವರ್ಷ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು 22 ತಿಂಗಳ ಕಾಲ ಪೌರಾಡಳಿತ ಇಲಾಖೆ ಸಚಿವ ಹಾಗೂ ಬೀದರ್ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದರು.

2018ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಈಶ್ವರ ಖಂಡ್ರೆ ಅವರನ್ನು ಎರಡನೇ ಅವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತು. 2023ರಲ್ಲಿ ಸತತ ನಾಲ್ಕನೇ ಬಾರಿ ಖಂಡ್ರೆ ಅವರು ವಿಧಾನಸಭೆಗೆ ಆಯ್ಕೆಯಾದರು ಇದೀಗ ಸಂಪುಟ ದರ್ಜೆಯ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಸ್ಪೀಕರ್ ಕಾಗೇರಿ ವಿರುದ್ಧ ಹೋರಾಟ

2023ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನದ ವೇಳೆ ಸಿದ್ದರಾಮಯ್ಯನವರನ್ನು ಟಿಪ್ಪುವಿನಂತೆ ಇಲ್ಲವಾಗಿಸಿ ಎಂಬರ್ಥದಲ್ಲಿ ಬಹಿರಂಗ ಸಭೆಯಲ್ಲಿ ಕರೆನೀಡಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ರೋಷಾವೇಶದಿಂದ ಮಾತನಾಡಿದ್ದರು. ಇದರಿಂದ ಕೋಪಗೊಂಡಿದ್ದ ಆಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ನಿಮ್ಮಂತಹವರು ಶಾಸಕರಾಗಿ ಆಯ್ಕೆಯಾಗಿ ಬರುವುದು ಸದನಕ್ಕೆ ಅಗೌರವ, ಯಾರು ನಿಮ್ಮನ್ನು ಆಯ್ಕೆ ಮಾಡಿದ್ದು?” ಎಂದು ಅವಹೇಳನ ಮಾಡಿದ್ದರು. ಆಗ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಒಂದು ಪಕ್ಷದ ವಕ್ತಾರರಂತೆ ಮಾತನಾಡುತ್ತಾರೆ, ಪಕ್ಷಪಾತ ಮಾಡುತ್ತಾರೆ ಎಂದು ಖಂಡ್ರೆ ಪರವಾಗಿ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಭಾಲ್ಕಿ ಪಟ್ಟಣ ಬಂದ್ ಮಾಡಲಾಗಿತ್ತು. ಅಲ್ಲದೇ ಚುನಾವಣೆಯಲ್ಲಿ ಖಂಡ್ರೆಯವರನ್ನು ದೊಡ್ಡ ಅಂತರದಲ್ಲಿ ಅಲ್ಲಿನ ಜನ ಮತ್ತೊಮ್ಮೆ ಗೆಲ್ಲಿಸಿ ಕಳುಹಿಸಿದರು. ಆದರೆ ಈ ಚುನಾವಣೆಯಲ್ಲಿ ಕಾಗೇರಿಯವರು ಸೋಲಬೇಕಾಗಿ ಬಂತು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಅನುಭವವಿರುವ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಾಣಲು ಸಾಧ್ಯವಾಗಿರುವುದಕ್ಕೆ ಅವರ ಕೊಡುಗೆಯೂ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ಕೂಡ ಕಾರಣರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಭಾಲ್ಕಿ ಕ್ಷೇತ್ರದಲ್ಲಿನ ಅರಣ್ಯೀಕರಣಕ್ಕೆ ಆದ್ಯತೆ, ರೈತರಿಗೆ ಕಾರಂಜಾದಿಂದ ನೀರು ಪೂರೈಕೆಗೆ ಪೂರ್ಣಪ್ರಮಾಣದ ವ್ಯವಸ್ಥೆ, ಪ್ರವಾಸಿತಾಣಗಳ ಅಭಿವೃದ್ಧಿ, ಕಾರಂಜಾ ಸಂತ್ರಸ್ತರಿಗೆ ಪರಿಹಾರ, ಗೋದಾವರಿ ನದಿ ನೀರಿನ ಸದ್ಬಳಕೆಗೆ ಯೋಜನೆ, ಬೆಳೆ ಹಾನಿ ಪರಿಹಾರ, ರೈತ ಪರ ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ರಾಜ್ಯದ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...