Homeಕರ್ನಾಟಕನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್...

ನಮ್ಮ ಸಚಿವರಿವರು; ಎರಡನೇ ಬಾರಿಗೆ ಮಂತ್ರಿ ಖಾತೆ ತೆರೆದ ವೀರಶೈವ ಲಿಂಗಾಯತ ಪ್ರಭಾವಿ ನಾಯಕ ಈಶ್ವರ್ ಖಂಡ್ರೆ

- Advertisement -
- Advertisement -

ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಈಶ್ವರ್ ಖಂಡ್ರೆ ಅವರು ಕಲ್ಯಾಣ ಕರ್ನಾಟಕದ ಭಾಲ್ಕಿ ವಿಧಾನಸಭಾ ಕ್ಷೇತ್ರದ ಶಾಸಕರು. ಹಲವು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು, ಆ ಭಾಗದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಆನೆ ಬಲ ತುಂಬುವ ವ್ಯಕ್ತಿಯಾಗಿಯೇ ಚಿರಪರಿಚಿತ. ಸದ್ಯ ಅವರು ಸಿದ್ದರಾಮಯ್ಯನವರ ಸಂಪುಟದಲ್ಲಿ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಖಂಡ್ರೆ ಅವರ ಕುಟುಂಬಕ್ಕೂ ರಾಜಕೀಯಕ್ಕೂ ಅವಿನಾಭಾವ ಸಂಬಂಧವಿದೆ. ಕರ್ನಾಟಕ ವಿಧಾನಸಭೆಗೆ ಖಂಡ್ರೆ ಕುಟುಂಬದಿಂದ ಆಯ್ಕೆಯಾದವರಲ್ಲಿ ಈಶ್ವರ್ ಖಂಡ್ರೆ ಅವರು ಮೂರನೇ ಸದಸ್ಯರಾಗಿದ್ದಾರೆ. ಹಾಗಾಗಿ ಅವರಿಗೆ ರಾಜಕೀಯ ಕ್ಷೇತ್ರ ಹೊಸದಾಗಿರಲಿಲ್ಲ. ಈಶ್ವರ್ ಖಂಡ್ರೆ ಅವರ ತಂದೆ ಮಾಜಿ ಸಚಿವರಾಗಿದ್ದರು ಮತ್ತು ಈ ಕ್ಷೇತ್ರದ ಪ್ರಭಾವಿ ರಾಜಕಾರಣಿಯಾಗಿದ್ದರು. ತಂದೆಯ ನಂತರ ಈಶ್ವರ್ ಸಹೋದರ ವಿಜಯಕುಮಾರ್ ಖಂಡ್ರೆ ಅವರು ಎರಡು ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ. ತಂದೆಯ ಹಾದಿಯಲ್ಲಿ ಮುಂದುವರಿಯುತ್ತಿರುವ ಇವರು ಅದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾ ಗೆಲುವು ಕಾಣುತ್ತಿದ್ದಾರೆ.

ಭೀಮಣ್ಣ ಖಂಡ್ರೆ

ಪೂರ್ತಿ ಹೆಸರು ಈಶ್ವರ ಭೀಮಣ್ಣ ಖಂಡ್ರೆ. 1962 ಜನವರಿ 15ರಂದು ಖಂಡ್ರೆ ಅವರು ಭಾಲ್ಕಿಯಲ್ಲಿ ಜನಿಸಿದರು. ತಂದೆ ಮಾಜಿ ಸಚಿವ ಭೀಮಣ್ಣ ಖಂಡ್ರೆ ಮತ್ತು ತಾಯಿ ಲಕ್ಷ್ಮೀಬಾಯಿ. ಇಬ್ಬರು ಮಕ್ಕಳಲ್ಲಿ ಈಶ್ವರ ಖಂಡ್ರೆ ಎರಡನೆಯವರು. ಅವರು 1985ರಲ್ಲಿ ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಇಂಜಿನಿಯರಿಂಗ್ ಪದವಿ ಪಡೆದರು. ಇಂಜಿನಿಯರಿಂಗ್ ಮುಗಿಸಿ ಕೃಷಿ, ಸಮಾಜಸೇವೆಯಲ್ಲಿ ತೊಡಗಿಸಿಕೊಂಡರು. ಆರಂಭದಲ್ಲಿ ಈಶ್ವರ್ ಖಂಡ್ರೆ ಅವರಿಗೆ ರಾಜಕೀಯ ಪ್ರವೇಶ ಮಾಡುವುದು ಸುತರಾಂ ಇಷ್ಟವಿರಲಿಲ್ಲ ಎನ್ನಲಾಗುತ್ತದೆ; ಸರ್ಕಾರಿ ಆಡಳಿತದಲ್ಲಿ ಉನ್ನತ ಹುದ್ದೆ ಅಲಂಕರಿಸುವ ಕನಸಿನಲ್ಲಿದ್ದರು. ಆದರೆ, ತಂದೆ ಭೀಮಣ್ಣ ಖಂಡ್ರೆ ಹಾಗೂ ಸಹೋದರ ದಿವಂಗತ ಡಾ.ವಿಜಯಕುಮಾರ ಖಂಡ್ರೆ ಅವರು ರಾಜಕೀಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಮಾಜ ಪರ ಕೆಲಸ ಕೈಗೊಂಡಿದ್ದರು. ಹಾಗಾಗಿ ಅವರ ನಂತರ ಅನಿರೀಕ್ಷಿತವಾಗಿ ರಾಜಕೀಯಕ್ಕೆ ಬರುವಂತೆ ಮಾಡಿತು.

ಈಶ್ವರ್ ಖಂಡ್ರೆ ಅವರು ನಡೆದುಬಂದ ರಾಜಕೀಯ ಹಾದಿ

1979ರಲ್ಲಿ ಮೊದಲ ಬಾರಿಗೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಸಕ್ರಿಯ ಸದಸ್ಯರಾಗಿ ಸೇರಿದರು.

1985ರಲ್ಲಿ ಕೋಲ್ಕತ್ತದಲ್ಲಿ ನಡೆದ ಕಾಂಗ್ರೆಸ್ ಸೇವಾದಳದ ಶಿಬಿರದಲ್ಲಿ ಪಾಲ್ಗೊಂಡಿದ್ದರು. 1987ರಲ್ಲಿ ಭಾಲ್ಕಿ ಪಟ್ಟಣದಲ್ಲಿ ಜಿಲ್ಲಾಮಟ್ಟದ ಸೇವಾದಳ ಕ್ಯಾಂಪ್ ಆಯೋಜಿಸಿ ಅಂದಿನ ಕೇಂದ್ರ ಸಚಿವರಾಗಿದ್ದ ಜಾಫರ್ ಶರೀಫ್ ಅವರನ್ನು ಆಹ್ವಾನಿಸಿದರು.

ಇದನ್ನೂ ಓದಿ: ನಮ್ಮ ಸಚಿವರಿವರು; ಅಂಬೇಡ್ಕರ್‌ವಾದಿ, ಯುವ ಕಾಂಗ್ರೆಸ್ ನಾಯಕ ಪ್ರಿಯಾಂಕ ಖರ್ಗೆಯವರ ರಾಜಕೀಯ ಹಾದಿ

1989ರಲ್ಲಿ ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಸೇವಾದಳದ ಸಂಘಟನಾ ಕಾರ್ಯದರ್ಶಿಯಾಗಿ ನಾಮನಿರ್ದೇಶನಗೊಂಡರು. ಅದೇ ವರ್ಷ ನಡೆದ ಸ್ಥಳೀಯ ಸಂಸ್ಥೆಗಳ, ವಿಧಾನಸಭೆ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರ ಮಾಡಿದ್ದರು.

1998ರಲ್ಲಿ ಕಾಂಗ್ರೆಸ್ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರನ್ನು ಭಾಲ್ಕಿಗೆ ಆಹ್ವಾನಿಸಿ ಕಿಸಾನ್ ರ್‍ಯಾಲಿ ನಡೆಸಿದರು. ಈಶ್ವರ್ ಖಂಡ್ರೆ ಅವರು ಮೊದಲ ಬಾರಿಗೆ 2004ರಲ್ಲಿ ಭಾಲ್ಕಿ ವಿಧಾನಸಭೆಯಿಂದ ಸ್ಪರ್ಧಿಸಿ ಸೋಲು ಕಂಡರು.

ವಿಜಯಕುಮಾರ್ ಖಂಡ್ರೆ

2008ರ ವಿಧಾನಸಭೆ ಚುನಾವಣೆಯಲ್ಲಿ ಎರಡನೇ ಬಾರಿಗೆ ಸ್ಪರ್ಧಿಸಿದ ಈಶ್ವರ ಖಂಡ್ರೆ ಅವರು ಗೆದ್ದು ಮೊದಲ ಬಾರಿಗೆ ವಿಧಾನಸಭೆ ಪವೇಶಿಸಿದರು. 2013ರ ಚುನಾವಣೆಯಲ್ಲಿಯೂ ಗೆದ್ದು 2ನೇ ಬಾರಿಗೆ ವಿಧಾನಸಭೆಗೆ ಪ್ರವೇಶಿಸಿದ ಖಂಡ್ರೆ ಅವರನ್ನು ಅದೇ ವರ್ಷ ಜಿಲ್ಲಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು. ಬಳಿಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಈಶ್ವರ ಖಂಡ್ರೆ ಅವರು 22 ತಿಂಗಳ ಕಾಲ ಪೌರಾಡಳಿತ ಇಲಾಖೆ ಸಚಿವ ಹಾಗೂ ಬೀದರ್ ಉಸ್ತುವಾರಿ ಸಚಿವರಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ನಾನಾ ಯೋಜನೆ ರೂಪಿಸಿದರು.

2018ರ ಚುನಾವಣೆಯಲ್ಲಿ ಹ್ಯಾಟ್ರಿಕ್ ಗೆಲುವು ಸಾಧಿಸಿದ ಈಶ್ವರ ಖಂಡ್ರೆ ಅವರನ್ನು ಎರಡನೇ ಅವಧಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಹೈಕಮಾಂಡ್ ನೇಮಕ ಮಾಡಿತು. 2023ರಲ್ಲಿ ಸತತ ನಾಲ್ಕನೇ ಬಾರಿ ಖಂಡ್ರೆ ಅವರು ವಿಧಾನಸಭೆಗೆ ಆಯ್ಕೆಯಾದರು ಇದೀಗ ಸಂಪುಟ ದರ್ಜೆಯ ಅರಣ್ಯ, ಜೈವಿಕ ಹಾಗೂ ಪರಿಸರ ಸಚಿವರಾಗಿದ್ದಾರೆ.

ಸ್ಪೀಕರ್ ಕಾಗೇರಿ ವಿರುದ್ಧ ಹೋರಾಟ

2023ರ ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನದ ವೇಳೆ ಸಿದ್ದರಾಮಯ್ಯನವರನ್ನು ಟಿಪ್ಪುವಿನಂತೆ ಇಲ್ಲವಾಗಿಸಿ ಎಂಬರ್ಥದಲ್ಲಿ ಬಹಿರಂಗ ಸಭೆಯಲ್ಲಿ ಕರೆನೀಡಿದ್ದ ಅಂದಿನ ಉನ್ನತ ಶಿಕ್ಷಣ ಸಚಿವ ಅಶ್ವಥನಾರಾಯಣ್ ವಿರುದ್ಧ ವಿಧಾನಸಭಾ ಅಧಿವೇಶನದಲ್ಲಿ ರೋಷಾವೇಶದಿಂದ ಮಾತನಾಡಿದ್ದರು. ಇದರಿಂದ ಕೋಪಗೊಂಡಿದ್ದ ಆಗಿನ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, “ನಿಮ್ಮಂತಹವರು ಶಾಸಕರಾಗಿ ಆಯ್ಕೆಯಾಗಿ ಬರುವುದು ಸದನಕ್ಕೆ ಅಗೌರವ, ಯಾರು ನಿಮ್ಮನ್ನು ಆಯ್ಕೆ ಮಾಡಿದ್ದು?” ಎಂದು ಅವಹೇಳನ ಮಾಡಿದ್ದರು. ಆಗ ಸ್ಪೀಕರ್ ಸ್ಥಾನದಲ್ಲಿ ಕುಳಿತ ಕಾಗೇರಿ ಒಂದು ಪಕ್ಷದ ವಕ್ತಾರರಂತೆ ಮಾತನಾಡುತ್ತಾರೆ, ಪಕ್ಷಪಾತ ಮಾಡುತ್ತಾರೆ ಎಂದು ಖಂಡ್ರೆ ಪರವಾಗಿ ದೊಡ್ಡ ಪ್ರತಿಭಟನೆಗಳು ನಡೆದಿದ್ದವು. ಭಾಲ್ಕಿ ಪಟ್ಟಣ ಬಂದ್ ಮಾಡಲಾಗಿತ್ತು. ಅಲ್ಲದೇ ಚುನಾವಣೆಯಲ್ಲಿ ಖಂಡ್ರೆಯವರನ್ನು ದೊಡ್ಡ ಅಂತರದಲ್ಲಿ ಅಲ್ಲಿನ ಜನ ಮತ್ತೊಮ್ಮೆ ಗೆಲ್ಲಿಸಿ ಕಳುಹಿಸಿದರು. ಆದರೆ ಈ ಚುನಾವಣೆಯಲ್ಲಿ ಕಾಗೇರಿಯವರು ಸೋಲಬೇಕಾಗಿ ಬಂತು.

ಈಶ್ವರ ಖಂಡ್ರೆ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕೆಲಸ ನಿರ್ವಹಿಸಿದ ಅನುಭವವಿರುವ ಅವರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ರಾಜ್ಯದಾದ್ಯಂತ ಪಕ್ಷವನ್ನು ಬಲಪಡಿಸಿ, ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ಕಾಣಲು ಸಾಧ್ಯವಾಗಿರುವುದಕ್ಕೆ ಅವರ ಕೊಡುಗೆಯೂ ಮಹತ್ವದ್ದಾಗಿದೆ. ವೀರಶೈವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕರಾಗಿರುವ ಅವರು ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಸಮುದಾಯದ ಮತಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೆಳೆಯಲು ಕೂಡ ಕಾರಣರಾಗಿದ್ದಾರೆ.

ಕಲ್ಯಾಣ ಕರ್ನಾಟಕದ ಅಭಿವೃದ್ಧಿ, ಭಾಲ್ಕಿ ಕ್ಷೇತ್ರದಲ್ಲಿನ ಅರಣ್ಯೀಕರಣಕ್ಕೆ ಆದ್ಯತೆ, ರೈತರಿಗೆ ಕಾರಂಜಾದಿಂದ ನೀರು ಪೂರೈಕೆಗೆ ಪೂರ್ಣಪ್ರಮಾಣದ ವ್ಯವಸ್ಥೆ, ಪ್ರವಾಸಿತಾಣಗಳ ಅಭಿವೃದ್ಧಿ, ಕಾರಂಜಾ ಸಂತ್ರಸ್ತರಿಗೆ ಪರಿಹಾರ, ಗೋದಾವರಿ ನದಿ ನೀರಿನ ಸದ್ಬಳಕೆಗೆ ಯೋಜನೆ, ಬೆಳೆ ಹಾನಿ ಪರಿಹಾರ, ರೈತ ಪರ ನೀರಾವರಿ ಯೋಜನೆಗಳ ಜಾರಿ ಸೇರಿದಂತೆ ರಾಜ್ಯದ ಹಲವಾರು ಪ್ರಗತಿಪರ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಜವಾಬ್ದಾರಿ ಅವರ ಮೇಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಸೋಲಿನ ಬಳಿಕ ‘ಇಂಡಿಯಾದ ಆಸರೆ’ ಬಯಸಿದ ಮಮತಾ

2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿನ ನಂತರ ಮಮತಾ ಬ್ಯಾನರ್ಜಿ ಅವರು ಇದ್ದಕ್ಕಿದ್ದಂತೆ ‘ಇಂಡಿಯಾ’ (INDIA) ಒಕ್ಕೂಟ ಮತ್ತು ರಾಷ್ಟ್ರೀಯ ಮಟ್ಟದ ವಿರೋಧ ಪಕ್ಷಗಳ ಒಗ್ಗಟ್ಟಿಗೆ ಇಷ್ಟೊಂದು ಪ್ರಾಮುಖ್ಯತೆ ನೀಡುತ್ತಿರುವುದು ಏಕೆ? ದೀರ್ಘಕಾಲದವರೆಗೆ...

ಪಶ್ಚಿಮ ಬಂಗಾಳ| ಮತದಾರರ ಪಟ್ಟಿಯಿಂದ ಡಿಲೀಟ್‌ ಆದವರಿಗೆ ಪಡಿತರ ಪ್ರಯೋಜನಗಳಿಲ್ಲ

ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಯಿಂದಾಗಿ ಪಶ್ಚಿಮ ಬಂಗಾಳದ ಚುನಾವಣಾ ಪ್ರಕ್ರಿಯೆಯಿಂದ ಹೊರಗುಳಿದವರಿಗೆ ಈಗ ಎರಡು ಹೊಡೆತ ಎದುರಾಗಿದೆ. ರಾಜ್ಯ ಸರ್ಕಾರವು ಈಗ ಅವರ ಪಡಿತರ ಚೀಟಿಗಳನ್ನು ಸಹ ನಿಷ್ಕ್ರಿಯಗೊಳಿಸಲು...

ಇಂಡಿಯಾ ಮೈತ್ರಿಕೂಟದ ಸಭೆ: ಎಸ್‌ಐಆರ್, ಬೆಲೆ ಏರಿಕೆ, ನಿರುದ್ಯೋಗದ ಕುರಿತು ಖರ್ಗೆ ಕಳವಳ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ರಾಜಕೀಯ, ಆರ್ಥಿಕ, ಸಾಮಾಜಿಕ ಮತ್ತು ವಿದೇಶಾಂಗ ನೀತಿ ರಂಗಗಳಲ್ಲಿ ಮೋದಿ ಸರ್ಕಾರದ ವೈಫಲ್ಯಗಳನ್ನು ಎದುರಿಸಲು ತನ್ನ ಒಗ್ಗಟ್ಟನ್ನು ಬಲಪಡಿಸಿಕೊಳ್ಳುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ (ಜೂ.8) ಇಂಡಿಯಾ ಮೈತ್ರಿಕೂಟಕ್ಕೆ ಕರೆ...

ಟೆಹ್ರಾನ್ ಮೇಲಿನ ದಾಳಿಗೆ ಪ್ರತೀಕಾರ: ಇಸ್ರೇಲ್ ಮೇಲೆ ಕ್ಷಿಪಣಿ ಹಾರಿಸಿದ ಇರಾನ್

ಟೆಹ್ರಾನ್, ತಬ್ರಿಜ್ ಮತ್ತು ಇಸ್ಫಹಾನ್‌ ಮೇಲಿನ ದಾಲಿಗಳಿಗೆ ಪ್ರತೀಕಾರವಾಗಿ, ಇರಾನ್ ಸೇನೆಯು ಇಸ್ರೇಲ್‌ ಮೇಲೆ ಎರಡನೇ ತರಂಗದ ಕ್ಷಿಪಣಿಗಳನ್ನು ಹಾರಿಸಿದೆ. ದೇಶಾದ್ಯಂತ ಸೈರನ್‌ಗಳು ಮೊಳಗುತ್ತಿವೆ ಎಂದು ಇಸ್ರೇಲ್ ಮಿಲಿಟರಿ ಹೇಳಿದೆ ಎಂದು ಅಂತರಾಷ್ಟ್ರೀಯ...

ಭಾರತದಲ್ಲಿ ಬೆಂಕಿ ದುರಂತ ‘ದಿನವೊಂದಕ್ಕೆ ಬಲಿಯಾಗುತ್ತಿವೆ 16 ಜೀವಗಳು’ NCRB ವರದಿ

ಇತ್ತೀಚೆಗೆ ದೆಹಲಿಯ ಮಾಳವೀಯ ನಗರದ ಹೋಟೆಲ್‌ ಒಂದರಲ್ಲಿ ನಡೆದ ಭೀಕರ ಬೆಂಕಿ ದುರಂತ (ಇದರಲ್ಲಿ 22 ಜನರು ಸಜೀವ ದಹನವಾಗಿದ್ದರು) ಇಡೀ ದೇಶವನ್ನೇ ನಡುಗಿಸಿದೆ. ಈ ದುರಂತದ ಬೆನ್ನಲ್ಲೇ ಕರ್ನಾಟಕದಲ್ಲೂ ವಾಣಿಜ್ಯ ಮತ್ತು...

ಈದ್ ಹಬ್ಬದ ವೇಳೆ ಮುಸ್ಲೀಮರನ್ನು ಗುರಿಯಾಗಿಸಿ 46 ದ್ವೇಷ ಅಪರಾಧಗಳು, ಮೂವರ ಹತ್ಯೆ: APCR ಆತಂಕಕಾರಿ ವರದಿ

ಇತ್ತೀಚಿನ ಬಕ್ರೀದ್ (ಈದ್ ಉಲ್-ಅಧಾ) ಹಬ್ಬದ ಆಚರಣೆಯ ಸಂದರ್ಭದಲ್ಲಿ ದೇಶದ ವಿವಿಧೆಡೆ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ನಡೆದ ಕೋಮು ಕಿರುಕುಳ, ದ್ವೇಷ ಭಾಷಣ ಹಾಗೂ ಹಿಂಸಾಚಾರದ ಘಟನೆಗಳ ಕುರಿತು 'ನಾಗರಿಕ ಹಕ್ಕುಗಳ ರಕ್ಷಣಾ ಸಂಘ'...

ಗ್ರೇಟ್ ನಿಕೋಬಾರ್ : ಕಾರ್ಪೊರೇಟ್ ಹಿತಾಸಕ್ತಿಗೆ ಬಲಿಯಾಗುತ್ತಿರುವ ಪರಿಸರ, ಆದಿವಾಸಿಗಳ ಅಸ್ತಿತ್ವ

ಬಂಗಾಳಕೊಲ್ಲಿಯಲ್ಲಿರುವ ಭಾರತದ ದಕ್ಷಿಣ ತುದಿಯ ದ್ವೀಪದ ಸಮಗ್ರ ಅಭಿವೃದ್ಧಿಯ ಹೆಸರಿನಲ್ಲಿ ಕೇಂದ್ರ ಸರ್ಕಾರ ಬರೋಬ್ಬರಿ 72 ಸಾವಿರದಿಂದ 81 ಸಾವಿರ ಕೋಟಿ ರೂಪಾಯಿ ವೆಚ್ಚದ ’ಗ್ರೇಟ್ ನಿಕೋಬಾರ್ ದ್ವೀಪ ಅಭಿವೃದ್ಧಿ ಯೋಜನೆ’ಯನ್ನು ರೂಪಿಸಿದೆ.ಈ...

ಅಸ್ಸಾಂನ ನಾಲ್ವರು ಮುಸ್ಲಿಂ ಮಹಿಳೆಯರ ಗಡೀಪಾರು ಪ್ರಕ್ರಿಯೆಗೆ ಸುಪ್ರೀಂ ತಡೆ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ನೋಟಿಸ್‌

ಅಸ್ಸಾಂನಲ್ಲಿ 'ವಿದೇಶಿಯರು' ಎಂದು ಘೋಷಿತರಾಗಿ ಗಡೀಪಾರು ಭೀತಿ ಎದುರಿಸುತ್ತಿದ್ದ ನಾಲ್ವರು ಮುಸ್ಲಿಂ ಮಹಿಳೆಯರ ವಿಚಾರದಲ್ಲಿ ಭಾರತದ ಸುಪ್ರೀಂ ಕೋರ್ಟ್ ಮಹತ್ವದ ಮಧ್ಯಪ್ರವೇಶ ಮಾಡಿದೆ. ಈ ಮಹಿಳೆಯರನ್ನು ದೇಶದಿಂದ ಹೊರಹಾಕುವ (ಗಡೀಪಾರು ಮಾಡುವ) ಪ್ರಕ್ರಿಯೆಗೆ...

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...