Homeಕರ್ನಾಟಕನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

ನಮ್ಮ ಸಚಿವರಿವರು; ಮಗ್ಗಲು ಬದಲಿಸಿದ ಮಧು ಬಂಗಾರಪ್ಪನವರ ರಾಜಕೀಯ ಬದುಕು

- Advertisement -
- Advertisement -

ಕರ್ನಾಟಕ ರಾಜಕಾರಣದ ದಿಕ್ಕುದೆಸೆಯನ್ನೇ ಬದಲಿಸುವ ತಾಕತ್ತಿನ ಮಾಸ್‌ಲೀಡರ್ ಎನಿಸಿದ್ದ ಸಾರೆಕೊಪ್ಪ ಬಂಗಾರಪ್ಪನವರ ಮುದ್ದಿನ ಮಗ ಮಧು ಬಂಗಾರಪ್ಪರ ಎರಡು ದಶಕದ ಹೊಯ್ದಾಟದ ರಾಜಕಾರಣ ಅಂತೂ ಹಳಿಗೇರಿದೆ; ಮಹತ್ವದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಮಂತ್ರಿಯಾಗುವ ಮೂಲಕ ಮಧು ರಾಜ್ಯ ರಾಜಕಾರಣದ ಮುನ್ನಲೆಗೆ ಬಂದಿದ್ದಾರೆ. ತನ್ಮೂಲಕ ಶಿವಮೊಗ್ಗ ಜಿಲ್ಲೆಯ ರಾಜಕೀಯವೂ ದೀರ್ಘ ಹೊರಳಾಟದ ಬಳಿಕ ಮಗ್ಗಲು ಬದಲಿಸಿದೆ. ಮತೀಯ ಮಸಲತ್ತಿನ ವಿರುದ್ಧ ಗಟ್ಟಿ ಧ್ವನಿಯಲ್ಲಿ ಮಾತಾಡಬಲ್ಲ ಮಧು ಮೇಲ್ವರ್ಗದ ಲಿಂಗಾಯತ ತಂತ್ರಗಾರಿಕೆ ಎದುರಿಸುತ್ತಲೇ ಶಿವಮೊಗ್ಗ ಜಿಲ್ಲೆಯನ್ನು ಕೋಮು ರಾಜಕಾರಣದ ಗುಂಗಿನಿಂದ ಅದು ಹೇಗೆ ಹೊರತರುತ್ತಾರೆಂಬ ಕುತೂಹಲವೀಗ ಮೂಡಿದೆ.

ಹಠ-ಛಲಗಳ ಬಂಗಾರಪ್ಪನವರ ಕೌಟುಂಬಿಕ ಬಿಕ್ಕಟ್ಟಿನ ಕುಲುಮೆಯಲ್ಲಿ ರಾಜಕಾರಣಿಯಾಗಿ ರೂಪುಗೊಂಡ ಮಧು ಮೊದಲು ಸಿನೆಮಾ, ಆಡಿಯೋ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದರು. ಅಣ್ಣ ಕುಮಾರ್ ಬಂಗಾರಪ್ಪನವರಿಗೆ ಅಪ್ಪ ರಾಜಕೀಯ ದೀಕ್ಷೆ ಕೊಟ್ಟಾಗಲೂ ಮಧು ರಾಜಕೀಯದತ್ತ ಆಕರ್ಷಿತರಾದವರಲ್ಲ. ಯಾವಾಗ ಹಿರಿಯ ಮಗ ಮತ್ತು ಬಂಗಾರಪ್ಪರ ನಡುವೆ ಸಾಂಸಾರಿಕ ವೈಷಮ್ಯ ಬೆಳೆಯಿತೋ ಆಗ ಅನಿವಾರ್ಯವಾಗಿ ಮಧು ಅಪ್ಪನ ಆಣತಿಯಂತೆ ರಾಜಕಾರಣ ಮಾಡಬೇಕಾಗಿ ಬಂತು. ಕುಮಾರ್ ನಟ್ಟಿರುಳಿನಲಿ ತನ್ನನ್ನು ಮನೆಯಿಂದ ಹೊರಗಟ್ಟಿದ್ದಾನೆ ಎಂದು ಸೊರಬದ ನೆಲದಲ್ಲಿ ನಿಂತು ಕಣ್ಣೀರುಗರೆಯುತ್ತ ಬಂಗಾರಪ್ಪ ಮಧುರನ್ನು ಉತ್ತರಾಧಿಕಾರಿ ಎಂದು ಘೋಷಿಸಿದ್ದರು.

ಎಸ್ ಬಂಗಾರಪ್ಪ

ಬಂಗಾರಪ್ಪ ಮೂರು ಬಾರಿ ಕುಮಾರ್‌ರನ್ನು ಸೊರಬದ ಶಾಸಕನಾಗಿ ಮಾಡಿದ್ದರು; ಅಲ್ಲೇ ಕುಮಾರ್ ಅವರ ರಾಜಕೀಯಕ್ಕೆ ಇತಿಶ್ರೀ ಹಾಡಲು ಮಧು ಪಟ್ಟಾಭಿಷೇಕಕ್ಕೆ ಶತಾಯಗತಾಯ ಪ್ರಯತ್ನಿಸಿದ್ದರು. ಆದರೆ ಬಂಗಾರಪ್ಪರ ಜೀವಿತಾವಧಿವರೆಗಿದು ಸಾಧ್ಯವಾಗಿರಲಿಲ್ಲ. 2004ರಲ್ಲಿ ಬಂಗಾರಪ್ಪ ಬಿಜೆಪಿ ಸೇರಿದಾಗ ಎಸ್.ಎಂ.ಕೃಷ್ಣ ಸರಕಾರದಲ್ಲಿ ಮಂತ್ರಿಯಾಗಿದ್ದ ಕುಮಾರ್ ತಾನು ಅಪ್ಪನನ್ನು ಹಿಂಬಾಲಿಸುತ್ತೇನೆ ಎನ್ನುತ್ತ ಮಂತ್ರಿಗಿರಿ ತೊರೆದು ಬಿಜೆಪಿ ಬಾಗಿಲಿಗೆ ಹೋಗಿನಿಂತಿದ್ದರು. ಆದರೆ ಬಂಗಾರಪ್ಪ ಕುಮಾರ್‌ಗೆ ಪ್ರವೇಶ ಸಿಗದಂತೆ ಮಾಡಿದರು; ವಾಪಸ್ ಕಾಂಗ್ರೆಸ್ ಸೇರಿಕೊಂಡ ಕುಮಾರ್‌ಗೆ ಎದುರಾಳಿಯಾಗಿ ಮಧುವನ್ನು ಬಿಜೆಪಿ ಅಭ್ಯರ್ಥಿಯಾಗಿ ಬಂಗಾರಪ್ಪ ನಿಲ್ಲಿಸಿದರು. ಪಾರ್ಲಿಮೆಂಟ್ ಮತ್ತು ಅಸೆಂಬ್ಲಿಗೆ ಜತೆಯಾಗಿ ಚುನಾವಣೆ ನಡೆದ ಆ ಸಂದರ್ಭದಲ್ಲಿ ಬಂಗಾರಪ್ಪ ಸಂಸದರಾದರೂ ಮಧುರವರಿಗೆ ಮಾತ್ರ ಗೆಲುವು ದಕ್ಕಲಿಲ್ಲ; ಅಪ್ಪನ ದೈತ್ಯ ಶಕ್ತಿ ಎದುರಿಸಿ ಗೆದ್ದು ಕುಮಾರ್ ಅಚ್ಚರಿ ಮೂಡಿಸಿದ್ದರು.

2008ರ ಚುನಾವಣೆ ಹೊತ್ತಲ್ಲಿ ಬಂಗಾರಪ್ಪ ಜೆಡಿಎಸ್‌ನಲ್ಲಿ ಇದ್ದರು. ಮಧು ಜೆಡಿಎಸ್ ಹುರಿಯಾಳಾದರೆ, ಕುಮಾರ್ ಕಾಂಗ್ರೆಸ್ ಅಭ್ಯರ್ಥಿ; ಬಂಗಾರಪ್ಪರಿಂದಲೆ ಹೊಸನಗರದ ಬಿಜೆಪಿ ಶಾಸಕನಾಗಿದ್ದ ಹರತಾಳು ಹಾಲಪ್ಪ ಗುರುವಿಗೆ ತಿರುಮಂತ್ರ ಹಾಕಿ ಬಿಜೆಪಿಯಿಂದ ಸ್ಪರ್ಧೆಗಿಳಿದಿದ್ದರು. ಅಣ್ಣ-ತಮ್ಮರ ಕಾಳಗದಲ್ಲಿ ದಾಯಾದಿ ಹಾಲಪ್ಪ ಸುಲಭವಾಗಿ ಶಾಸಕನಾದರು. 2013ರ ಚುನಾವಣೆ ವೇಳೆ ಬಂಗಾರಪ್ಪ ಇರಲಿಲ್ಲ; ತಂದೆಯ ಸಾವಿನ ಸಿಂಪಥಿಯಲ್ಲಿ ಮಧು ಜೆಡಿಎಸ್ ಶಾಸಕನಾಗಿ ಚುನಾಯಿತರಾದರು. ಅರಣ್ಯ ಸಾಗುವಳಿ ಮಾಡಿಕೊಂಡು ಬದುಕು ಕಟ್ಟಿಕೊಂಡಿರುವ ರೈತರಿಗೆ ಹಕ್ಕುಪತ್ರ ಕೊಡಿಸಲು ಪಾದಯಾತ್ರೆ ಮಾಡಿದ್ದ ಮಧು ಶಾಸಕನಾಗುತ್ತಲೆ ರಾಜ್ಯ ನಾಯಕನಾಗುವ ಅವಸರಕ್ಕೆ ಬಿದ್ದರು; ರಾಜ್ಯದಾದ್ಯಂತ ಓಡಾಡುತ್ತ ಈಡಿಗರ ಮುಂದಾಳಾಗುವ ಪ್ರಯತ್ನದಲ್ಲಿ ಕ್ಷೇತ್ರದ ಮೇಲಿನ ಹಿಡಿತ ಕಳೆದುಕೊಂಡರು. ಹೀಗಾಗಿ ಮಧು 2018ರಲ್ಲಿ ಪರಾಭವ ಅನುಭವಿಸಬೇಕಾಯಿತು ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.

ಇದನ್ನೂ ಓದಿ: ನಮ್ಮ ಸಚಿವರಿವರು; ನೇರ ನಿಷ್ಠುರಿ, ಅಹಿಂದದ ಮುಂಚೂಣಿ ರಾಜಕಾರಣಿ ಕ್ಯಾತ್ಸಂದ್ರ ಎನ್. ರಾಜಣ್ಣ

ಈ ನಡುವೆ ಎರಡು ಬಾರಿ ಯಡಿಯೂರಪ್ಪರ ಮಗ ರಾಘವೇಂದ್ರ ವಿರುದ್ಧ ಲೋಕಸಭೆಗೆ ಜೆಡಿಎಸ್‌ನಿಂದ ಸ್ಪರ್ಧಿಸಿದ ಮಧು ಸೋಲು ಕಂಡರು. 2018ರಲ್ಲಿ ಕಾಂಗ್ರೆಸ್-ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದಾಗ ಸಿಎಂ ಕುಮಾರಸ್ವಾಮಿ ತನಗೆ ಪುನರ್‌ವಸತಿ ಕಲ್ಪಿಸಲಿಲ್ಲವೆಂದು ಬೇಜಾರು ಮಾಡಿಕೊಂಡ ಮಧು ಅವರಿಗೆ ಆ ಪಕ್ಷದಲ್ಲಿ ಭವಿಷ್ಯವಿಲ್ಲವೆಂಬುದು ಖಾತ್ರಿಯಾಗಿತ್ತು. ಪದೇಪದೇ ತಾನು ಬಂಗಾರಪ್ಪನವರ ಶಿಷ್ಯನೆಂದು ಹೇಳಿಕೊಳ್ಳುವ ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುತ್ತಲೆ ಕಾಂಗ್ರೆಸ್ ಸೇರಿದ ಮಧುರವರಿಗೆ ಅಲ್ಲಿ ಮಹತ್ವವೂ ದೊರೆಯಿತು. ರಾಜ್ಯ ಕಾಂಗ್ರೆಸ್‌ನ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷರಾಗಿ ರಾಜ್ಯ ಸುತ್ತಿದ ಮಧು ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷರಾಗಿದ್ದರು. ಈ ಬಾರಿ ಅಣ್ಣ ಕುಮಾರ್‌ರನ್ನು ಭರ್ಜರಿ 44,352 ಮತದಂತರದಿಂದ ಮಣಿಸಿ ಎಮ್ಮೆಲ್ಲೆಯಾದರು. ಭಾವ (ಅಕ್ಕ ಗೀತಾ ಪತಿ), ಸ್ಯಾಂಡಲ್‌ವುಡ್ ಸೆಲೆಬ್ರಿಟಿ ಶಿವರಾಜ್‌ಕುಮಾರ್‌ರನ್ನು ಕಾಂಗ್ರೆಸ್ ಪ್ರಚಾರಕ್ಕೆ ಬರುವಂತೆ ಮಾಡಿ ಪಕ್ಷದಲ್ಲಿ ವರ್ಚಸ್ಸು ಹೆಚ್ಚಿಸಿಕೊಂಡಿದ್ದ ಮಧು ಪಕ್ಕದ ಶಿರಸಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಪೀಕರ್ ಕಾಗೇರಿ ಎದುರಾಳಿಯಾಗಿದ್ದ ಸೋದರ ಮಾವ ಭೀಮಣ್ಣ ನಾಯ್ಕ್ ಗೆಲುವಿನಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಸತತ ಐದಾರು ಚುನಾವಣೆಯಲ್ಲಿ ಸೋತಿದ್ದ ಭೀಮಣ್ಣ ಈ ಬಾರಿ ಗೆಲ್ಲಲು, ಮಧು ಕ್ಷೇತ್ರದ ಬಹುಸಂಖ್ಯಾತ ದೀವರ ನಾಯಕರಲ್ಲಿ ಒಗ್ಗಟ್ಟು ಮೂಡಿಸಿದ್ದೇ ಕಾರಣವೆಂಬ ಮಾತು ಸಾಮಾನ್ಯವಾಗಿದೆ.

ಕುಮಾರ್ ಬಂಗಾರಪ್ಪ

ಸಿದ್ದರಾಮಯ್ಯ ಮತ್ತು ಡಿಕೆಶಿ ಇಬ್ಬರ ಜತೆಗೂ ಸಮಾನ ಸಂಬಂಧ ಕಾಯ್ದುಕೊಂಡಿದ್ದ ಮಧು ಈಡಿಗ ಸಮುದಾಯದ ಕೋಟಾದಲ್ಲಿ ಬಿ.ಕೆ.ಹರಿಪ್ರಸಾದ್‌ರಂಥ ಹಿರಿಯ ಮತ್ತು ದಿಲ್ಲಿ ದರ್ಬಾರಿನಲ್ಲಿ ಶ್ರಮದಾತರಿದ್ದ ಪ್ರಭಾವಿಯನ್ನು ಹಿಂದಿಕ್ಕಿ ಮಂತ್ರಿಗಿರಿ ಗಳಿಸಲು ಸಫಲರಾಗಿದ್ದಾರೆ. ಒಂದು ಹಂತದಲ್ಲಿ ಸಿದ್ದು ವಿರೋಧಿ ಹರಿ ಪರವಾಗಿ ಡಿಕೆಶಿ ವಕಾಲತ್ತು ಮಾಡಿದ್ದರೆನ್ನಲಾಗುತ್ತಿದೆ; ಆದರೆ ಮಲೆನಾಡು ಮತ್ತು ಉತ್ತರ ಕರಾವಳಿಯಲ್ಲಿ ಗಣನೀಯವಾಗಿರುವ ದೀವರ ಮೇಲೆ ಪ್ರಭಾವ ಬೀರಬಲ್ಲ ಯುವ ನಾಯಕ ಮಧು ಮಂತ್ರಿಯಾದರೆ ಫಾಯ್ದೆ ಜಾಸ್ತಿಯೆಂಬ ಲೆಕ್ಕಾಚಾರ ಸಿದ್ದು ಅವರದಾಗಿತ್ತೆಂಬ ಮಾತು ಕಾಂಗ್ರೆಸ್ ಬಿಡಾರದಿಂದ ಹೊರಬರುತ್ತಿದೆ. ಸ್ವಜಾತಿಗಳವರನ್ನು ಪ್ರಭಾವಿಸುವ ಸಾಮರ್ಥ್ಯ ಹರಿಗಿಂತಲೂ ಮಧುಗೆ ಜಾಸ್ತಿ ಎಂಬ ತರ್ಕ ಕರಾವಳಿ ಮತ್ತು ಮಲೆನಾಡಿನ ರಾಜಕೀಯ ಪಡಸಾಲೆಯಲ್ಲಿದೆ. ಜನಾರ್ದನ ಪೂಜಾರಿ, ಕಾಗೋಡು ತಿಮ್ಮಪ್ಪರಂಥ ಮುತ್ಸದ್ಧಿಗಳ ವಯೋ ಸಹಜ ನಿವೃತ್ತಿ, ಗೋಪಾಲ ಪೂಜಾರಿ, ವಿನಯ್‌ಕುಮಾರ್ ಸೊರಕೆ ಸೋಲು, ಮಾಲಿಕಯ್ಯ ಗುತ್ತೇದಾರ್ ಪಕ್ಷಾಂತರ ಮತ್ತು ಬೇಳೂರು ಗೋಪಾಲಕೃಷ್ಣ ಮತ್ತು ಭೀಮಣ್ಣ ನಾಯ್ಕ್‌ರಿಗೆ ಕ್ಷೇತ್ರದಾಚೆ ಪ್ರಭಾವ ಬೆಳೆಸಿಕೊಳ್ಳಲಾಗದ ನಿರ್ವಾತ ಸಂದರ್ಭದಲ್ಲಿ ಮಧು ಈಡಿಗ ಸಮುದಾಯದ ವರ್ಚಸ್ವಿ ಮುಂದಾಳಾಗಿ ಬೆಳೆಯುವ ಸೂಚನೆಗಳು ಗೋಚರಿಸುತ್ತಿವೆ.

ಮಧು ಉತ್ಸಾಹಿ ತರುಣ; ತಂದೆಯಂತೆ ಹಿಂದುಳಿದವರ ಮುಂದಾಳಾಗಬೇಕೆಂಬ ಒಳ ತುಡಿತದವರು. ಆದರೆ ಸ್ವಪಕ್ಷ ಮತ್ತು ವಿರೋಧ ಪಕ್ಷದಲ್ಲಿ ಘಟಾನುಘಟಿಗಳಿರುವ ಶಿವಮೊಗ್ಗ ರಾಜಕಾರಣದಲ್ಲಿ ಎಚ್ಚರಿಕೆಯ ಹೆಜ್ಜೆಗಳನ್ನಿಡಬೇಕಾದ ಪರಿಸ್ಥಿತಿಯಿದೆ. ಶಿವಮೊಗ್ಗ ಮತೀಯವಾಗಷ್ಟೇ ಅಲ್ಲ, ರಾಜಕೀಯವಾಗಿಯೂ ಸೂಕ್ಷ್ಮವೇ. ಹಿಂದು-ಮುಸ್ಲಿಮ್ ಎರಡೂ ಕಡೆ ಅತಿರೇಕಿಗಳಿರುವ ಶಿವಮೊಗ್ಗ ನಗರದಲ್ಲಿ ಕೋಮು ಸೌಹಾರ್ದ ಬೆಳೆಸುವ ಹೊಣೆಗಾರಿಕೆ ಮಧು ಮೇಲಿದೆ. ಯಾರದೋ ರಾಜಕೀಯ ತೆವಲಿಗೆ ಅಮಾಯಕರ ಬದುಕು ಬರ್ಬಾದ್ ಆಗಬಾರದು. ಅರಣ್ಯ ಸಾಗುವಳಿ ಮಾಡಿ ಬದುಕು ಕಟ್ಟಿಕೊಂಡಿರುವ ರೈತರ ಸಮಸ್ಯೆ ಶಾಶ್ವತ ಪರಿಹಾರ ಕಾಣಬೇಕಾಗಿದೆ. ಜಿಲ್ಲೆಯ ಆರ್ಥಿಕ ಮೂಲವಾದ ಅಡಿಕೆ ತೋಟಗಳಿಗೆ ತಗಲುತ್ತಿರುವ ನಾನಾ ನಮೂನೆಯ ರೋಗ, ಅಡಿಕೆ ನಿಷೇಧ ಭಯ, ವಿದೇಶಿ ಅಡಿಕೆ ಹಾವಳಿ ಮತ್ತು ಅಸ್ಥಿರ ಧಾರಣೆಯಿಂದ ತೋಟ ಮಾಡುವವರು ಕಂಗೆಟ್ಟಿದ್ದಾರೆ. ಕಸ್ತೂರಿರಂಗನ್ ವರದಿ ತೂಗುಗತ್ತಿ ಮಲೆನಾಡಿಗರನ್ನು ಸತಾಯಿಸುತ್ತಿದೆ. ಈ ಸವಾಲುಗಳನ್ನೆಲ್ಲ ಮಧು ಗಂಭೀರವಾಗಿ ಪರಿಗಣಿಸಿ ಜನಪರವಾಗಿ ಉತ್ತರಿಸಿದರಷ್ಟೇ ಶಿವಮೊಗ್ಗದ ರಾಜಕಾರಣದಲ್ಲಿ “ಸ್ಥಿರ”ವಾಗಲು ಸಾಧ್ಯ ಎಂಬ ಮಾತು ಕೇಳಿಬರುತ್ತಿದೆ.

ಭೀಮಣ್ಣ ನಾಯ್ಕ್

ಸಚಿವ ಮಧುರವರಿಗೆ ಸಿಕ್ಕಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯೂ ಸಹ ಗಂಭೀರ ಹೋಮ್ ವರ್ಕ್‌ನ ಅನಿವಾರ್ಯತೆಯದ್ದಾಗಿದೆ. ಹಿಜಾಬ್‌ನಂಥ ಅನವಶ್ಯಕ ವಿವಾದವನ್ನು ಹಿಂದಿನ ಬಿಜೆಪಿ ಸರಕಾರ ಸೃಷ್ಟಿಸಿಹೋಗಿದೆ; ಎಳೆಯರ ಮನಸ್ಸು ಕೆಡಿಸುವ ಕೇಸರಿ ಕೆಸರನ್ನು ಪಠ್ಯಪುಸ್ತಕದಲ್ಲಿ ತುಂಬಲಾಗಿದೆ. ಈ ಸಿಕ್ಕುಗಳನ್ನೆಲ್ಲ ಮಧು ಸೂಕ್ಷ್ಮವಾಗಿ ಬಿಡಿಸಬೇಕಾಗಿದೆ. ಸರಕಾರಿ ಶಾಲೆಗಳು ದುಬಾರಿ ಖಾಸಗಿ ಕಾನ್ವೆಂಟ್‌ಗಳ ಜತೆ ಪೈಪೋಟಿ ನಡೆಸಲಾಗದೆ ಸೋಲುತ್ತಿವೆ. ಕನ್ನಡ ಮಾಧ್ಯಮದಲ್ಲಿ ಕಲಿತರೆ ಹೊಟ್ಟೆಪಾಡಿನ ಉದ್ಯೋಗಕ್ಕೆ ತೊಂದರೆ ಇಲ್ಲ ಎಂಬಂಥ ವಾತಾವರಣ ಸೃಷ್ಟಿ ಆಗಬೇಕಿದೆ.

ಬಂಗಾರಪ್ಪ ಮುಖ್ಯಮಂತ್ರಿಯಾಗಿದ್ದಾಗ ಜಾರಿಗೆ ಬಂದಿರುವ ಗ್ರಾಮೀಣ ಕೃಪಾಂಕ-ಗ್ರಾಮೀಣ ಮೀಸಲಾತಿಯಲ್ಲಿನ ನ್ಯೂನತೆಯನ್ನು ಶಿಕ್ಷಣ ಸಚಿವ ಮಧು ಸರಿಪಡಿಸಬೇಕಾಗಿದೆ. ಬಂಗಾರಪ್ಪ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಈ ಕ್ರಾಂತಿಕಾರಿ ನಿಯಮ ರೂಪಿಸಿದ್ದರು. ಆದರೆ ಗ್ರಾಮೀಣ ಮೀಸಲಾತಿಯನ್ನು ಆಧುನಿಕ ಸಕಲ ಸೌಲಭ್ಯದ ಶಿಕ್ಷಣ ಪೂರೈಸಿರುವ ಅನರ್ಹ ನಗರವಾಸಿಗಳು ಕೂಡ ಲಪಟಾಯಿಸುತ್ತಿದ್ದಾರೆ. ಹಾಸ್ಟೆಲ್ ಮತ್ತಿತರ ಶೈಕ್ಷಣಿಕ ಸೌಲಭ್ಯದ ಕೊರತೆಯಿಂದಾಗಿ ಅನಿವಾರ್ಯವಾಗಿ ಪಟ್ಟಣದ ಶಾಲೆಯಲ್ಲಿ ಕಲಿತ ಅಸಹಾಯಕ ಹಳ್ಳಿಗಾಡಿನ ಅಭ್ಯರ್ಥಿಗಳಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿಲ್ಲ; ಗ್ರಾಮೀಣ ಸಮಸ್ಯೆ-ಸಂಕಷ್ಟ ಒಂಚೂರೂ ಗೊತ್ತಿಲ್ಲದ, ನಗರದ ಸಕಲ ಸವಲತ್ತಲ್ಲಿ ಬೆಳೆದ ವಿದ್ಯಾರ್ಥಿಗಳು, ನಗರದ ಅಂಚಿನ ಹೈ-ಫೈ ಶಾಲೆಯಲ್ಲಿ ವಿದ್ಯಾರ್ಜನೆ ಮಾಡಿದರೂ ಅಂಥವರಿಗೆ ಗ್ರಾಮೀಣ ಮೀಸಲಾತಿ ಸಿಗುತ್ತಿದೆ. ಶಾಲಾ ಕಟ್ಟಡ ಗ್ರಾಮೀಣ ಪ್ರದೇಶದಲ್ಲಿರುವ ಸಂಗತಿಯಷ್ಟೇ ಗ್ರಾಮೀಣ ಮೀಸಲಾತಿ ಮಾನದಂಡ ಆಗಿರುವುದು ಸಾಮಾಜಿಕ ಅನ್ಯಾಯವೇ ಸರಿ. ವಿದ್ಯಾರ್ಥಿಗಳ ಗ್ರಾಮೀಣ ಹಿನ್ನೆಲೆ ಮಾನದಂಡ ಆಗಬೇಕೇ ಹೊರತು ಶಾಲೆಯ ಭೌತಿಕ ಇರುವಿಕೆ ಅಲ್ಲ. ಈ ವಿಪರ್ಯಾಸ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪಗೆ ಅರ್ಥವಾದೀತು ಎಂಬ ನಂಬಿಕೆಯಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...