Homeಕರ್ನಾಟಕನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

ನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

- Advertisement -
- Advertisement -

ತುಮಕೂರು ಜಿಲ್ಲೆ ತಮ್ಮ ಕಾರ್ಯಕ್ಷೇತ್ರವಾದರೂ, ರಾಜ್ಯದ ರಾಜಕಾರಣದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿ ಬೆಳೆದು ಗುರುತಿಸಿಕೊಂಡವರು ಡಾ. ಜಿ ಪರಮೇಶ್ವರ್. ದೀರ್ಘಕಾಲದವರೆಗೆ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದವರು. ಶಾಸಕ, ಸಚಿವ, ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಅಲಂಕರಿಸಿ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಡಾ. ಜಿ. ಪರಮೇಶ್ವರ್ ಮೂಲತಃ ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯ ಗ್ರಾಮದವರು. ತಂದೆ ಹೆಚ್.ಎಂ. ಗಂಗಾಧರಯ್ಯನವರು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಭೀಷ್ಮ ಎಂದೇ ಹೆಸರಾಗಿದ್ದರು. ದಲಿತ ಕುಟುಂಬದಲ್ಲಿ ಹುಟ್ಟಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಿದ್ಧಾರ್ಥ ಹೆಸರಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಕಟ್ಟಿಬೆಳೆಸಿದರು. ಹೆಚ್.ಎಂ. ಗಂಗಾಧರಯ್ಯನವರ ನಂತರ ಅವರ ಹಿರಿಯ ಪುತ್ರ ಡಾ. ಜಿ ಶಿವಪ್ರಸಾದ್ ಹಾಗೂ ಪರಮೇಶ್ವರ್‌ರವರು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯನ್ನು ಹೊತ್ತುಕೊಂಡರು. ಅಣ್ಣ ನಿಧನರಾದ ನಂತರ ಈಗ ಸಂಪೂರ್ಣವಾಗಿ ಪರಮೇಶ್ವರ್‌ರವರೇ ಸಂಸ್ಥೆಗಳ ಹೊಣೆಗಾರಿಕೆ ಹೊತ್ತಿದ್ದಾರೆ.

ಡಾ. ಜಿ. ಪರಮೇಶ್ವರ್ ತುಮಕೂರು ರಾಜಕಾರಣದ ಹಳೆಯ ಹೆಸರು ಎನ್ನಬಹುದು. ಅವರದ್ದು ಒಂದು ರೀತಿಯ ಶಿಸ್ತುಬದ್ಧ ರಾಜಕೀಯ ಜೀವನ ಎನ್ನಬಹುದು.

1987ರಲ್ಲಿ ಸಿದ್ಧಾರ್ಥ ಸಂಸ್ಥೆಯ ಕಾರ್ಯಕ್ರಮವೊಂದಕ್ಕೆ ಬಂದಿದ್ದ ರಾಜೀವ್ ಗಾಂಧಿಯವರಿಂದ ಪ್ರಭಾವಿತರಾಗಿ ರಾಜಕೀಯದಲ್ಲಿ ಸಕ್ರಿಯರಾದ ಪರಮೇಶ್ವರ್ ಮುಂದೆ ದೊಡ್ಡದೊಡ್ಡ ಜವಾಬ್ದಾರಿಯುತ ಹುದ್ದೆಗಳನ್ನೇ ಕಾಂಗ್ರೆಸ್ ಪಕ್ಷದಲ್ಲಿ ನಿಭಾಯಿಸಿದ್ದಾರೆ.

ರಾಜ್ಯದ ಪ್ರಮುಖ ದಲಿತ ರಾಜಕಾರಣಿಗಳಲ್ಲಿ ಒಬ್ಬರಾದ ಡಾ.ಜಿ. ಪರಮೇಶ್ವರ್‌ರವರಿಗೆ ರಾಜಕೀಯ ಜೀವನವನ್ನು ನೀಡಿದ ಕ್ಷೇತ್ರ ಮಧುಗಿರಿ. ಡಿ.ಎಂ. ನಂಜುಂಡಪ್ಪನವರ ವರದಿಯ ಪ್ರಕಾರ ಅತಿ ಹಿಂದುಳಿದ ತಾಲ್ಲೂಕಾದ ಮಧುಗಿರಿ ಮೀಸಲು ಕ್ಷೇತ್ರ, ಹಿಂದುಳಿದ ಮತ್ತು ದಲಿತ ಸಮುದಾಯಗಳು ಅತಿಹೆಚ್ಚು ಮತದಾರರನ್ನು ಹೊಂದಿದೆ. ಪರಮೇಶ್ವರ್‌ರವರು ಇಲ್ಲಿಂದ ಮೂರು ಬಾರಿ ಗೆದ್ದು ಶಾಸಕರಾಗಿದ್ದಾರೆ. 1988ರಲ್ಲಿ ಮೊದಲಬಾರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾದ ಇವರು 1999, 2004ರಲ್ಲಿಯೂ ಸಹ ಶಾಸಕರಾಗಿ ಮರು ಆಯ್ಕೆಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿ, ಸಚಿವರನ್ನಾಗಿಸಿದ ಕ್ಷೇತ್ರಕ್ಕೆ ವಿಶೇಷವಾಗಿ ಏನೂ ಮಾಡಿಲ್ಲವೆಂಬುದು ಸ್ಥಳೀಯರ ಸಿಟ್ಟು ಸಹ ಇದೆ. ಅದೇ ರೀತಿ ಇಂದಿಗೂ ಇವರ ಅಭಿಮಾನಿಗಳು ಕ್ಷೇತ್ರದಲ್ಲಿ ಇರುವುದು ವಿಶೇಷ.

ಇದನ್ನೂ ಓದಿ: ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು…

1993ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಪರಮೇಶ್ವರ್, 1999ರಲ್ಲಿ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾಗಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಿಕ್ಕ ಖಾತೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ಕಾರಣ ಪರಮೇಶ್ವರ್ ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯಿತು.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ.

ಕ್ಷೇತ್ರ ವಿಂಗಡಣೆಯ ಕಾರಣದಿಂದ ಮಧುಗಿರಿ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರವಾಗಿ ಬದಲಾಗುತ್ತದೆ. ಆಗ ಪರಮೇಶ್ವರ್‌ರವರು ಕ್ಷೇತ್ರ ಬದಲಾವಣೆ ಮಾಡಿ ಪಕ್ಕದ ಕೊರಟಗೆರೆಯ ಕಡೆ ಮುಖ ಮಾಡುತ್ತಾರೆ. 2008ರಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಬಂದ ಪರಮೇಶ್ವರ್ ಅಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದೂ ಸೋಲನುಭವಿಸಬೇಕಾಗಿ ಬಂದಿತ್ತು. ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದರೂ, ಸೋತಿದ್ದರಿಂದ ಮುಖ್ಯಮಂತ್ರಿ ಸ್ಥಾನವೂ ತಪ್ಪಿತು ಎಂಬ ಚರ್ಚೆಗಳಿವೆ. ವಿಧಾನಪರಿಷತ್ ಸದಸ್ಯರಾಗಿ 2013ರ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಮತ್ತು ಕ್ರೀಡೆ, ಬೆಂಗಳೂರು ನಗರಾಭಿವೃದ್ದಿ ಖಾತೆಗಳನ್ನು ನಿಭಾಯಿಸುತ್ತಾರೆ.

ಎಷ್ಟೋ ಬಾರಿ ಸ್ವಪಕ್ಷದವರಿಂದಲೇ ಮತ್ತು ಬೇರೆ ಪಕ್ಷದವರಿಂದಲೂ ತೀವ್ರ ಟೀಕೆಗಳಿಗೆ ಗುರಿಯಾದಾಗಲೂ ವಾಪಸ್ಸು ಟೀಕಿಸದೆ ಶಾಂತಚಿತ್ತದಿಂದಲೂ ಇರುವ ಪರಮೇಶ್ವರ್ ಮಿತಿಮೀರಿದಾಗ ಮಾತ್ರ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಏನೇ ಆಗಲಿ ಜನರಿಗೆ ತಳ ಸಮುದಾಯಗಳ ಸಿಟ್ಟು ದುರಹಂಕಾರವೆಂಬಂತೆ ಕಾಣುವುದು, ಮೇಲ್ಜಾತಿಗಳೆನಿಸಿಕೊಂಡ ಸಮುದಾಯಗಳ ಸಿಟ್ಟು ಸಾಮಾನ್ಯ ನಡವಳಿಕೆ ಎಂಬಂತೆ ಕಾಣುವುದು ನಮ್ಮ ಸಮಾಜದ ದುರಂತ ವಾಸ್ತವ. ಇಂತಹ ಮನೋಧರ್ಮಕ್ಕೆ ಪರಮೇಶ್ವರ್ ಅವರೂ ಹಲವು ಬಾರಿ ತುತ್ತಾಗಿದ್ದಾರೆ. ತುಮಕೂರು ಜಿಲ್ಲೆಯ ಮಟ್ಟಿಗೆ ಎಲ್ಲಾ ಸಮುದಾಯಗಳೂ ಪರಮೇಶ್ವರ್ ಅವರ ಮೇಲೆ ಅಭಿಮಾನ ಇರಿಸಿಕೊಂಡಿರುವುದು ನಿಜ. ಇವರ ದಕ್ಷತೆಯ ಕಾರಣದಿಂದಾಗಿ ತುಮಕೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಸಾವಿರಾರು ಜನರಿಗೆ ನೆರವಾಗಿದೆ.

ಸುದೀರ್ಘವಾದ ರಾಜಕೀಯ ಜೀವನದಲ್ಲಿ ಯಾವುದೇ ಗುರುತರವಾದ ಹಗರಣ ಅಥವಾ ಭ್ರಷ್ಟಾಚಾರದ ಆರೋಪ ತಮ್ಮ ಮೇಲೆ ಇಲ್ಲದಂತೆ ರಾಜಕೀಯ ಜೀವನವನ್ನು ಪರಮೇಶ್ವರ್ ರೂಪಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಹೊಣೆಯ ಜೊತೆಜೊತೆಗೆ ರಾಜಕಾರಣವನ್ನು ಸಮಚಿತ್ತದಿಂದ ಮಾಡಿಕೊಂಡು ಬಂದವರು.

ವೈಟ್‌ಕಾಲರ್ ರಾಜಕಾರಣಿ, ಶ್ರೀಮಂತ ರಾಜಕಾರಣಿ, ಜನರ ಸಂಪರ್ಕಕ್ಕೆ ಬಾರದ ರಾಜಕಾರಣಿ ಎಂಬ ಟೀಕೆಗಳು ಡಾ.ಜಿ. ಪರಮೇಶ್ವರ್‌ರವರ ಮೇಲೆ ಇರುವುದೂ ನಿಜ. ಸ್ವತಃ ದಲಿತರಾಗಿದ್ದರೂ ದಲಿತ ಯುವಕರನ್ನು ಬೆಳೆಸುವಲ್ಲಿ, ದಲಿತರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ, ದಲಿತರ ಪರವಾಗಿ ಗಟ್ಟಿ ದನಿಯಲ್ಲಿ ಮಾತಾಡುವಲ್ಲಿ ಬಹಳ ಹಿಂದೆ ಬಿದ್ದಿದ್ದಾರೆ ಎಂಬ ಆರೋಪಗಳು ಸಹ ಇವೆ. ಕ್ಷೇತ್ರದ ವಿಷಯಕ್ಕೆ ಬಂದರೆ ಮೇಲ್ಜಾತಿ ಸಮುದಾಯದ ಮೂರು ನಾಲ್ಕು ಜನರ ತಂಡ ಇಡೀ ಕ್ಷೇತ್ರದ ಕೆಲಸಗಳನ್ನು ನಿಭಾಯಿಸುವುದು ಬಿಟ್ಟರೆ ಗೆದ್ದಮೇಲೆ ನಾಪತ್ತೆಯಾಗುತ್ತಾರೆ ಎಂಬ ಆರೋಪಗಳೂ ಇವೆ. ಆದರೆ ಕಳೆದೆರಡು ವರ್ಷಗಳಲ್ಲಿ ಅತಿ ಹೆಚ್ಚು ಜನಸಂಪರ್ಕದಲ್ಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ತೊಡಗಿಸಿಕೊಂಡಿದ್ದರು; ಹಾಗಾಗಿಯೇ ಈ ಬಾರಿ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಪರಮೇಶ್ವರ್‌ರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನವನ್ನು ಮಾಡಿತಾದರೂ ಅದರಲ್ಲಿ ಯಶಸ್ಸು ಕಾಣಲಿಲ್ಲ. ಉಳಿದಂತೆ ಜಿಲ್ಲೆಯಲ್ಲಿ ಸಜ್ಜನ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಯೊಂದಿಗೆ ಈ ಬಾರಿಯೂ ಸಚಿವರಾಗಿ ಮುಂದುವರಿಯುತ್ತಿದ್ದಾರೆ. ಸಚಿವರಾದ್ದರಿಂದ ಜಿಲ್ಲೆ ಮತ್ತು ಕ್ಷೇತ್ರದಲ್ಲಿ ಭಾರಿ ನಿರೀಕ್ಷೆಯೂ ಸಹ ಮೂಡಿದೆ.

ಇದನ್ನೂ ಓದಿ: ಬಿಕ್ಕಟ್ಟಿನಲ್ಲೂ ಸೆಕ್ಯುಲರ್ ಮೌಲ್ಯಗಳನ್ನು ಬಿಡದ ಎತ್ತರದ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...