Homeಕರ್ನಾಟಕನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

ನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

- Advertisement -
- Advertisement -

ತುಮಕೂರು ಜಿಲ್ಲೆ ತಮ್ಮ ಕಾರ್ಯಕ್ಷೇತ್ರವಾದರೂ, ರಾಜ್ಯದ ರಾಜಕಾರಣದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿ ಬೆಳೆದು ಗುರುತಿಸಿಕೊಂಡವರು ಡಾ. ಜಿ ಪರಮೇಶ್ವರ್. ದೀರ್ಘಕಾಲದವರೆಗೆ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದವರು. ಶಾಸಕ, ಸಚಿವ, ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಅಲಂಕರಿಸಿ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಡಾ. ಜಿ. ಪರಮೇಶ್ವರ್ ಮೂಲತಃ ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯ ಗ್ರಾಮದವರು. ತಂದೆ ಹೆಚ್.ಎಂ. ಗಂಗಾಧರಯ್ಯನವರು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಭೀಷ್ಮ ಎಂದೇ ಹೆಸರಾಗಿದ್ದರು. ದಲಿತ ಕುಟುಂಬದಲ್ಲಿ ಹುಟ್ಟಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಿದ್ಧಾರ್ಥ ಹೆಸರಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಕಟ್ಟಿಬೆಳೆಸಿದರು. ಹೆಚ್.ಎಂ. ಗಂಗಾಧರಯ್ಯನವರ ನಂತರ ಅವರ ಹಿರಿಯ ಪುತ್ರ ಡಾ. ಜಿ ಶಿವಪ್ರಸಾದ್ ಹಾಗೂ ಪರಮೇಶ್ವರ್‌ರವರು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯನ್ನು ಹೊತ್ತುಕೊಂಡರು. ಅಣ್ಣ ನಿಧನರಾದ ನಂತರ ಈಗ ಸಂಪೂರ್ಣವಾಗಿ ಪರಮೇಶ್ವರ್‌ರವರೇ ಸಂಸ್ಥೆಗಳ ಹೊಣೆಗಾರಿಕೆ ಹೊತ್ತಿದ್ದಾರೆ.

ಡಾ. ಜಿ. ಪರಮೇಶ್ವರ್ ತುಮಕೂರು ರಾಜಕಾರಣದ ಹಳೆಯ ಹೆಸರು ಎನ್ನಬಹುದು. ಅವರದ್ದು ಒಂದು ರೀತಿಯ ಶಿಸ್ತುಬದ್ಧ ರಾಜಕೀಯ ಜೀವನ ಎನ್ನಬಹುದು.

1987ರಲ್ಲಿ ಸಿದ್ಧಾರ್ಥ ಸಂಸ್ಥೆಯ ಕಾರ್ಯಕ್ರಮವೊಂದಕ್ಕೆ ಬಂದಿದ್ದ ರಾಜೀವ್ ಗಾಂಧಿಯವರಿಂದ ಪ್ರಭಾವಿತರಾಗಿ ರಾಜಕೀಯದಲ್ಲಿ ಸಕ್ರಿಯರಾದ ಪರಮೇಶ್ವರ್ ಮುಂದೆ ದೊಡ್ಡದೊಡ್ಡ ಜವಾಬ್ದಾರಿಯುತ ಹುದ್ದೆಗಳನ್ನೇ ಕಾಂಗ್ರೆಸ್ ಪಕ್ಷದಲ್ಲಿ ನಿಭಾಯಿಸಿದ್ದಾರೆ.

ರಾಜ್ಯದ ಪ್ರಮುಖ ದಲಿತ ರಾಜಕಾರಣಿಗಳಲ್ಲಿ ಒಬ್ಬರಾದ ಡಾ.ಜಿ. ಪರಮೇಶ್ವರ್‌ರವರಿಗೆ ರಾಜಕೀಯ ಜೀವನವನ್ನು ನೀಡಿದ ಕ್ಷೇತ್ರ ಮಧುಗಿರಿ. ಡಿ.ಎಂ. ನಂಜುಂಡಪ್ಪನವರ ವರದಿಯ ಪ್ರಕಾರ ಅತಿ ಹಿಂದುಳಿದ ತಾಲ್ಲೂಕಾದ ಮಧುಗಿರಿ ಮೀಸಲು ಕ್ಷೇತ್ರ, ಹಿಂದುಳಿದ ಮತ್ತು ದಲಿತ ಸಮುದಾಯಗಳು ಅತಿಹೆಚ್ಚು ಮತದಾರರನ್ನು ಹೊಂದಿದೆ. ಪರಮೇಶ್ವರ್‌ರವರು ಇಲ್ಲಿಂದ ಮೂರು ಬಾರಿ ಗೆದ್ದು ಶಾಸಕರಾಗಿದ್ದಾರೆ. 1988ರಲ್ಲಿ ಮೊದಲಬಾರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾದ ಇವರು 1999, 2004ರಲ್ಲಿಯೂ ಸಹ ಶಾಸಕರಾಗಿ ಮರು ಆಯ್ಕೆಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿ, ಸಚಿವರನ್ನಾಗಿಸಿದ ಕ್ಷೇತ್ರಕ್ಕೆ ವಿಶೇಷವಾಗಿ ಏನೂ ಮಾಡಿಲ್ಲವೆಂಬುದು ಸ್ಥಳೀಯರ ಸಿಟ್ಟು ಸಹ ಇದೆ. ಅದೇ ರೀತಿ ಇಂದಿಗೂ ಇವರ ಅಭಿಮಾನಿಗಳು ಕ್ಷೇತ್ರದಲ್ಲಿ ಇರುವುದು ವಿಶೇಷ.

ಇದನ್ನೂ ಓದಿ: ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು…

1993ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಪರಮೇಶ್ವರ್, 1999ರಲ್ಲಿ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾಗಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಿಕ್ಕ ಖಾತೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ಕಾರಣ ಪರಮೇಶ್ವರ್ ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯಿತು.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ.

ಕ್ಷೇತ್ರ ವಿಂಗಡಣೆಯ ಕಾರಣದಿಂದ ಮಧುಗಿರಿ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರವಾಗಿ ಬದಲಾಗುತ್ತದೆ. ಆಗ ಪರಮೇಶ್ವರ್‌ರವರು ಕ್ಷೇತ್ರ ಬದಲಾವಣೆ ಮಾಡಿ ಪಕ್ಕದ ಕೊರಟಗೆರೆಯ ಕಡೆ ಮುಖ ಮಾಡುತ್ತಾರೆ. 2008ರಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಬಂದ ಪರಮೇಶ್ವರ್ ಅಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದೂ ಸೋಲನುಭವಿಸಬೇಕಾಗಿ ಬಂದಿತ್ತು. ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದರೂ, ಸೋತಿದ್ದರಿಂದ ಮುಖ್ಯಮಂತ್ರಿ ಸ್ಥಾನವೂ ತಪ್ಪಿತು ಎಂಬ ಚರ್ಚೆಗಳಿವೆ. ವಿಧಾನಪರಿಷತ್ ಸದಸ್ಯರಾಗಿ 2013ರ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಮತ್ತು ಕ್ರೀಡೆ, ಬೆಂಗಳೂರು ನಗರಾಭಿವೃದ್ದಿ ಖಾತೆಗಳನ್ನು ನಿಭಾಯಿಸುತ್ತಾರೆ.

ಎಷ್ಟೋ ಬಾರಿ ಸ್ವಪಕ್ಷದವರಿಂದಲೇ ಮತ್ತು ಬೇರೆ ಪಕ್ಷದವರಿಂದಲೂ ತೀವ್ರ ಟೀಕೆಗಳಿಗೆ ಗುರಿಯಾದಾಗಲೂ ವಾಪಸ್ಸು ಟೀಕಿಸದೆ ಶಾಂತಚಿತ್ತದಿಂದಲೂ ಇರುವ ಪರಮೇಶ್ವರ್ ಮಿತಿಮೀರಿದಾಗ ಮಾತ್ರ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಏನೇ ಆಗಲಿ ಜನರಿಗೆ ತಳ ಸಮುದಾಯಗಳ ಸಿಟ್ಟು ದುರಹಂಕಾರವೆಂಬಂತೆ ಕಾಣುವುದು, ಮೇಲ್ಜಾತಿಗಳೆನಿಸಿಕೊಂಡ ಸಮುದಾಯಗಳ ಸಿಟ್ಟು ಸಾಮಾನ್ಯ ನಡವಳಿಕೆ ಎಂಬಂತೆ ಕಾಣುವುದು ನಮ್ಮ ಸಮಾಜದ ದುರಂತ ವಾಸ್ತವ. ಇಂತಹ ಮನೋಧರ್ಮಕ್ಕೆ ಪರಮೇಶ್ವರ್ ಅವರೂ ಹಲವು ಬಾರಿ ತುತ್ತಾಗಿದ್ದಾರೆ. ತುಮಕೂರು ಜಿಲ್ಲೆಯ ಮಟ್ಟಿಗೆ ಎಲ್ಲಾ ಸಮುದಾಯಗಳೂ ಪರಮೇಶ್ವರ್ ಅವರ ಮೇಲೆ ಅಭಿಮಾನ ಇರಿಸಿಕೊಂಡಿರುವುದು ನಿಜ. ಇವರ ದಕ್ಷತೆಯ ಕಾರಣದಿಂದಾಗಿ ತುಮಕೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಸಾವಿರಾರು ಜನರಿಗೆ ನೆರವಾಗಿದೆ.

ಸುದೀರ್ಘವಾದ ರಾಜಕೀಯ ಜೀವನದಲ್ಲಿ ಯಾವುದೇ ಗುರುತರವಾದ ಹಗರಣ ಅಥವಾ ಭ್ರಷ್ಟಾಚಾರದ ಆರೋಪ ತಮ್ಮ ಮೇಲೆ ಇಲ್ಲದಂತೆ ರಾಜಕೀಯ ಜೀವನವನ್ನು ಪರಮೇಶ್ವರ್ ರೂಪಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಹೊಣೆಯ ಜೊತೆಜೊತೆಗೆ ರಾಜಕಾರಣವನ್ನು ಸಮಚಿತ್ತದಿಂದ ಮಾಡಿಕೊಂಡು ಬಂದವರು.

ವೈಟ್‌ಕಾಲರ್ ರಾಜಕಾರಣಿ, ಶ್ರೀಮಂತ ರಾಜಕಾರಣಿ, ಜನರ ಸಂಪರ್ಕಕ್ಕೆ ಬಾರದ ರಾಜಕಾರಣಿ ಎಂಬ ಟೀಕೆಗಳು ಡಾ.ಜಿ. ಪರಮೇಶ್ವರ್‌ರವರ ಮೇಲೆ ಇರುವುದೂ ನಿಜ. ಸ್ವತಃ ದಲಿತರಾಗಿದ್ದರೂ ದಲಿತ ಯುವಕರನ್ನು ಬೆಳೆಸುವಲ್ಲಿ, ದಲಿತರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ, ದಲಿತರ ಪರವಾಗಿ ಗಟ್ಟಿ ದನಿಯಲ್ಲಿ ಮಾತಾಡುವಲ್ಲಿ ಬಹಳ ಹಿಂದೆ ಬಿದ್ದಿದ್ದಾರೆ ಎಂಬ ಆರೋಪಗಳು ಸಹ ಇವೆ. ಕ್ಷೇತ್ರದ ವಿಷಯಕ್ಕೆ ಬಂದರೆ ಮೇಲ್ಜಾತಿ ಸಮುದಾಯದ ಮೂರು ನಾಲ್ಕು ಜನರ ತಂಡ ಇಡೀ ಕ್ಷೇತ್ರದ ಕೆಲಸಗಳನ್ನು ನಿಭಾಯಿಸುವುದು ಬಿಟ್ಟರೆ ಗೆದ್ದಮೇಲೆ ನಾಪತ್ತೆಯಾಗುತ್ತಾರೆ ಎಂಬ ಆರೋಪಗಳೂ ಇವೆ. ಆದರೆ ಕಳೆದೆರಡು ವರ್ಷಗಳಲ್ಲಿ ಅತಿ ಹೆಚ್ಚು ಜನಸಂಪರ್ಕದಲ್ಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ತೊಡಗಿಸಿಕೊಂಡಿದ್ದರು; ಹಾಗಾಗಿಯೇ ಈ ಬಾರಿ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಪರಮೇಶ್ವರ್‌ರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನವನ್ನು ಮಾಡಿತಾದರೂ ಅದರಲ್ಲಿ ಯಶಸ್ಸು ಕಾಣಲಿಲ್ಲ. ಉಳಿದಂತೆ ಜಿಲ್ಲೆಯಲ್ಲಿ ಸಜ್ಜನ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಯೊಂದಿಗೆ ಈ ಬಾರಿಯೂ ಸಚಿವರಾಗಿ ಮುಂದುವರಿಯುತ್ತಿದ್ದಾರೆ. ಸಚಿವರಾದ್ದರಿಂದ ಜಿಲ್ಲೆ ಮತ್ತು ಕ್ಷೇತ್ರದಲ್ಲಿ ಭಾರಿ ನಿರೀಕ್ಷೆಯೂ ಸಹ ಮೂಡಿದೆ.

ಇದನ್ನೂ ಓದಿ: ಬಿಕ್ಕಟ್ಟಿನಲ್ಲೂ ಸೆಕ್ಯುಲರ್ ಮೌಲ್ಯಗಳನ್ನು ಬಿಡದ ಎತ್ತರದ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...