Homeಕರ್ನಾಟಕನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

ನಮ್ಮ ಸಚಿವರಿವರು; ಸಜ್ಜನ ರಾಜಕಾರಣಿಯಾಗಿ ಮೇಲೆದ್ದು ಬಂದ ಡಾ. ಜಿ. ಪರಮೇಶ್ವರ್

- Advertisement -
- Advertisement -

ತುಮಕೂರು ಜಿಲ್ಲೆ ತಮ್ಮ ಕಾರ್ಯಕ್ಷೇತ್ರವಾದರೂ, ರಾಜ್ಯದ ರಾಜಕಾರಣದಲ್ಲಿ ಕಾಂಗ್ರೆಸ್‌ನ ಹಿರಿಯ ಮುಖಂಡರಾಗಿ ಬೆಳೆದು ಗುರುತಿಸಿಕೊಂಡವರು ಡಾ. ಜಿ ಪರಮೇಶ್ವರ್. ದೀರ್ಘಕಾಲದವರೆಗೆ ಕಾಂಗ್ರೆಸ್ ಪಕ್ಷದ ಜೊತೆ ಗುರುತಿಸಿಕೊಂಡು, ಪಕ್ಷದ ವಿವಿಧ ಹುದ್ದೆಗಳನ್ನು ನಿಭಾಯಿಸಿದವರು. ಶಾಸಕ, ಸಚಿವ, ಉಪ ಮುಖ್ಯಮಂತ್ರಿ ಸ್ಥಾನಗಳನ್ನು ಅಲಂಕರಿಸಿ ನಂತರ ಕರ್ನಾಟಕ ಪ್ರದೇಶ ಕಾಂಗ್ರೆಸ್‌ನ ಅಧ್ಯಕ್ಷರಾಗಿಯೂ ಕೆಲಸ ಮಾಡಿದ್ದಾರೆ.

ಡಾ. ಜಿ. ಪರಮೇಶ್ವರ್ ಮೂಲತಃ ತುಮಕೂರು ಜಿಲ್ಲೆಯ ಗೊಲ್ಲಹಳ್ಳಿಯ ಗ್ರಾಮದವರು. ತಂದೆ ಹೆಚ್.ಎಂ. ಗಂಗಾಧರಯ್ಯನವರು ವಿವಿಧ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಶಿಕ್ಷಣ ಭೀಷ್ಮ ಎಂದೇ ಹೆಸರಾಗಿದ್ದರು. ದಲಿತ ಕುಟುಂಬದಲ್ಲಿ ಹುಟ್ಟಿ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಸಿದ್ಧಾರ್ಥ ಹೆಸರಿನ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಕಟ್ಟಿಬೆಳೆಸಿದರು. ಹೆಚ್.ಎಂ. ಗಂಗಾಧರಯ್ಯನವರ ನಂತರ ಅವರ ಹಿರಿಯ ಪುತ್ರ ಡಾ. ಜಿ ಶಿವಪ್ರಸಾದ್ ಹಾಗೂ ಪರಮೇಶ್ವರ್‌ರವರು ಶಿಕ್ಷಣ ಸಂಸ್ಥೆಗಳ ಜವಾಬ್ದಾರಿಯನ್ನು ಹೊತ್ತುಕೊಂಡರು. ಅಣ್ಣ ನಿಧನರಾದ ನಂತರ ಈಗ ಸಂಪೂರ್ಣವಾಗಿ ಪರಮೇಶ್ವರ್‌ರವರೇ ಸಂಸ್ಥೆಗಳ ಹೊಣೆಗಾರಿಕೆ ಹೊತ್ತಿದ್ದಾರೆ.

ಡಾ. ಜಿ. ಪರಮೇಶ್ವರ್ ತುಮಕೂರು ರಾಜಕಾರಣದ ಹಳೆಯ ಹೆಸರು ಎನ್ನಬಹುದು. ಅವರದ್ದು ಒಂದು ರೀತಿಯ ಶಿಸ್ತುಬದ್ಧ ರಾಜಕೀಯ ಜೀವನ ಎನ್ನಬಹುದು.

1987ರಲ್ಲಿ ಸಿದ್ಧಾರ್ಥ ಸಂಸ್ಥೆಯ ಕಾರ್ಯಕ್ರಮವೊಂದಕ್ಕೆ ಬಂದಿದ್ದ ರಾಜೀವ್ ಗಾಂಧಿಯವರಿಂದ ಪ್ರಭಾವಿತರಾಗಿ ರಾಜಕೀಯದಲ್ಲಿ ಸಕ್ರಿಯರಾದ ಪರಮೇಶ್ವರ್ ಮುಂದೆ ದೊಡ್ಡದೊಡ್ಡ ಜವಾಬ್ದಾರಿಯುತ ಹುದ್ದೆಗಳನ್ನೇ ಕಾಂಗ್ರೆಸ್ ಪಕ್ಷದಲ್ಲಿ ನಿಭಾಯಿಸಿದ್ದಾರೆ.

ರಾಜ್ಯದ ಪ್ರಮುಖ ದಲಿತ ರಾಜಕಾರಣಿಗಳಲ್ಲಿ ಒಬ್ಬರಾದ ಡಾ.ಜಿ. ಪರಮೇಶ್ವರ್‌ರವರಿಗೆ ರಾಜಕೀಯ ಜೀವನವನ್ನು ನೀಡಿದ ಕ್ಷೇತ್ರ ಮಧುಗಿರಿ. ಡಿ.ಎಂ. ನಂಜುಂಡಪ್ಪನವರ ವರದಿಯ ಪ್ರಕಾರ ಅತಿ ಹಿಂದುಳಿದ ತಾಲ್ಲೂಕಾದ ಮಧುಗಿರಿ ಮೀಸಲು ಕ್ಷೇತ್ರ, ಹಿಂದುಳಿದ ಮತ್ತು ದಲಿತ ಸಮುದಾಯಗಳು ಅತಿಹೆಚ್ಚು ಮತದಾರರನ್ನು ಹೊಂದಿದೆ. ಪರಮೇಶ್ವರ್‌ರವರು ಇಲ್ಲಿಂದ ಮೂರು ಬಾರಿ ಗೆದ್ದು ಶಾಸಕರಾಗಿದ್ದಾರೆ. 1988ರಲ್ಲಿ ಮೊದಲಬಾರಿಗೆ ಮಧುಗಿರಿ ವಿಧಾನಸಭಾ ಕ್ಷೇತ್ರದಿಂದ ಶಾಸಕರಾದ ಇವರು 1999, 2004ರಲ್ಲಿಯೂ ಸಹ ಶಾಸಕರಾಗಿ ಮರು ಆಯ್ಕೆಯಾಗಿದ್ದಾರೆ. ಮೂರು ಬಾರಿ ಶಾಸಕರಾಗಿ, ಸಚಿವರನ್ನಾಗಿಸಿದ ಕ್ಷೇತ್ರಕ್ಕೆ ವಿಶೇಷವಾಗಿ ಏನೂ ಮಾಡಿಲ್ಲವೆಂಬುದು ಸ್ಥಳೀಯರ ಸಿಟ್ಟು ಸಹ ಇದೆ. ಅದೇ ರೀತಿ ಇಂದಿಗೂ ಇವರ ಅಭಿಮಾನಿಗಳು ಕ್ಷೇತ್ರದಲ್ಲಿ ಇರುವುದು ವಿಶೇಷ.

ಇದನ್ನೂ ಓದಿ: ಕರ್ನಾಟಕದ ಪೂರ್ಣಾವಧಿ ಸಿಎಂ ಆದವರು ಮೂರು ಜನ ಮಾತ್ರ: ಹೆಚ್ಚು ದಿನ ಅಧಿಕಾರ ನಡೆಸಿದವರು…

1993ರಲ್ಲಿ ವೀರಪ್ಪ ಮೊಯ್ಲಿ ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಶಿಕ್ಷಣ ಸಚಿವರಾಗಿದ್ದ ಪರಮೇಶ್ವರ್, 1999ರಲ್ಲಿ ಎಸ್.ಎಂ ಕೃಷ್ಣರವರು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಉನ್ನತ ಶಿಕ್ಷಣ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾಗಿ, ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿಯೂ ಕೆಲಸ ಮಾಡಿದ್ದಾರೆ. ಸಿಕ್ಕ ಖಾತೆಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಿದ ಕಾರಣ ಪರಮೇಶ್ವರ್ ಅವರ ಪ್ರಭಾವ ಕಾಂಗ್ರೆಸ್ ಪಕ್ಷದಲ್ಲಿ ಹಾಗೂ ತುಮಕೂರು ಜಿಲ್ಲೆಯಲ್ಲಿ ಹೆಚ್ಚಾಯಿತು.

ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರು ಪೆದ್ದನಹಳ್ಳಿಗೆ ಭೇಟಿ ನೀಡಿ ಸಂತ್ರಸ್ತ ಕುಟುಂಬಕ್ಕೆ ಸಂತ್ವಾನ ಹೇಳಿದ್ದಾರೆ.

ಕ್ಷೇತ್ರ ವಿಂಗಡಣೆಯ ಕಾರಣದಿಂದ ಮಧುಗಿರಿ ಮೀಸಲು ಕ್ಷೇತ್ರದಿಂದ ಸಾಮಾನ್ಯ ಕ್ಷೇತ್ರವಾಗಿ ಬದಲಾಗುತ್ತದೆ. ಆಗ ಪರಮೇಶ್ವರ್‌ರವರು ಕ್ಷೇತ್ರ ಬದಲಾವಣೆ ಮಾಡಿ ಪಕ್ಕದ ಕೊರಟಗೆರೆಯ ಕಡೆ ಮುಖ ಮಾಡುತ್ತಾರೆ. 2008ರಲ್ಲಿ ಕೊರಟಗೆರೆ ಕ್ಷೇತ್ರಕ್ಕೆ ಬಂದ ಪರಮೇಶ್ವರ್ ಅಲ್ಲಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. 2013ರಲ್ಲಿ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷರಾಗಿದ್ದೂ ಸೋಲನುಭವಿಸಬೇಕಾಗಿ ಬಂದಿತ್ತು. ಕಾಂಗ್ರೆಸ್ ಪಕ್ಷ ಬಹುಮತ ಸಾಧಿಸಿದರೂ, ಸೋತಿದ್ದರಿಂದ ಮುಖ್ಯಮಂತ್ರಿ ಸ್ಥಾನವೂ ತಪ್ಪಿತು ಎಂಬ ಚರ್ಚೆಗಳಿವೆ. ವಿಧಾನಪರಿಷತ್ ಸದಸ್ಯರಾಗಿ 2013ರ ಸಿದ್ದರಾಮಯ್ಯನವರ ಸಂಪುಟದಲ್ಲಿ ಗೃಹ ಮತ್ತು ಕ್ರೀಡೆ, ಬೆಂಗಳೂರು ನಗರಾಭಿವೃದ್ದಿ ಖಾತೆಗಳನ್ನು ನಿಭಾಯಿಸುತ್ತಾರೆ.

ಎಷ್ಟೋ ಬಾರಿ ಸ್ವಪಕ್ಷದವರಿಂದಲೇ ಮತ್ತು ಬೇರೆ ಪಕ್ಷದವರಿಂದಲೂ ತೀವ್ರ ಟೀಕೆಗಳಿಗೆ ಗುರಿಯಾದಾಗಲೂ ವಾಪಸ್ಸು ಟೀಕಿಸದೆ ಶಾಂತಚಿತ್ತದಿಂದಲೂ ಇರುವ ಪರಮೇಶ್ವರ್ ಮಿತಿಮೀರಿದಾಗ ಮಾತ್ರ ಖಡಕ್ ಆಗಿ ತಿರುಗೇಟು ನೀಡಿದ್ದಾರೆ. ಏನೇ ಆಗಲಿ ಜನರಿಗೆ ತಳ ಸಮುದಾಯಗಳ ಸಿಟ್ಟು ದುರಹಂಕಾರವೆಂಬಂತೆ ಕಾಣುವುದು, ಮೇಲ್ಜಾತಿಗಳೆನಿಸಿಕೊಂಡ ಸಮುದಾಯಗಳ ಸಿಟ್ಟು ಸಾಮಾನ್ಯ ನಡವಳಿಕೆ ಎಂಬಂತೆ ಕಾಣುವುದು ನಮ್ಮ ಸಮಾಜದ ದುರಂತ ವಾಸ್ತವ. ಇಂತಹ ಮನೋಧರ್ಮಕ್ಕೆ ಪರಮೇಶ್ವರ್ ಅವರೂ ಹಲವು ಬಾರಿ ತುತ್ತಾಗಿದ್ದಾರೆ. ತುಮಕೂರು ಜಿಲ್ಲೆಯ ಮಟ್ಟಿಗೆ ಎಲ್ಲಾ ಸಮುದಾಯಗಳೂ ಪರಮೇಶ್ವರ್ ಅವರ ಮೇಲೆ ಅಭಿಮಾನ ಇರಿಸಿಕೊಂಡಿರುವುದು ನಿಜ. ಇವರ ದಕ್ಷತೆಯ ಕಾರಣದಿಂದಾಗಿ ತುಮಕೂರು ವಿಶ್ವವಿದ್ಯಾಲಯ ಪ್ರಾರಂಭವಾಗಿ ಸಾವಿರಾರು ಜನರಿಗೆ ನೆರವಾಗಿದೆ.

ಸುದೀರ್ಘವಾದ ರಾಜಕೀಯ ಜೀವನದಲ್ಲಿ ಯಾವುದೇ ಗುರುತರವಾದ ಹಗರಣ ಅಥವಾ ಭ್ರಷ್ಟಾಚಾರದ ಆರೋಪ ತಮ್ಮ ಮೇಲೆ ಇಲ್ಲದಂತೆ ರಾಜಕೀಯ ಜೀವನವನ್ನು ಪರಮೇಶ್ವರ್ ರೂಪಿಸಿಕೊಂಡಿದ್ದಾರೆ. ಶಿಕ್ಷಣ ಸಂಸ್ಥೆಗಳ ಹೊಣೆಯ ಜೊತೆಜೊತೆಗೆ ರಾಜಕಾರಣವನ್ನು ಸಮಚಿತ್ತದಿಂದ ಮಾಡಿಕೊಂಡು ಬಂದವರು.

ವೈಟ್‌ಕಾಲರ್ ರಾಜಕಾರಣಿ, ಶ್ರೀಮಂತ ರಾಜಕಾರಣಿ, ಜನರ ಸಂಪರ್ಕಕ್ಕೆ ಬಾರದ ರಾಜಕಾರಣಿ ಎಂಬ ಟೀಕೆಗಳು ಡಾ.ಜಿ. ಪರಮೇಶ್ವರ್‌ರವರ ಮೇಲೆ ಇರುವುದೂ ನಿಜ. ಸ್ವತಃ ದಲಿತರಾಗಿದ್ದರೂ ದಲಿತ ಯುವಕರನ್ನು ಬೆಳೆಸುವಲ್ಲಿ, ದಲಿತರ ಆಶೋತ್ತರಗಳಿಗೆ ಸ್ಪಂದಿಸುವಲ್ಲಿ, ದಲಿತರ ಪರವಾಗಿ ಗಟ್ಟಿ ದನಿಯಲ್ಲಿ ಮಾತಾಡುವಲ್ಲಿ ಬಹಳ ಹಿಂದೆ ಬಿದ್ದಿದ್ದಾರೆ ಎಂಬ ಆರೋಪಗಳು ಸಹ ಇವೆ. ಕ್ಷೇತ್ರದ ವಿಷಯಕ್ಕೆ ಬಂದರೆ ಮೇಲ್ಜಾತಿ ಸಮುದಾಯದ ಮೂರು ನಾಲ್ಕು ಜನರ ತಂಡ ಇಡೀ ಕ್ಷೇತ್ರದ ಕೆಲಸಗಳನ್ನು ನಿಭಾಯಿಸುವುದು ಬಿಟ್ಟರೆ ಗೆದ್ದಮೇಲೆ ನಾಪತ್ತೆಯಾಗುತ್ತಾರೆ ಎಂಬ ಆರೋಪಗಳೂ ಇವೆ. ಆದರೆ ಕಳೆದೆರಡು ವರ್ಷಗಳಲ್ಲಿ ಅತಿ ಹೆಚ್ಚು ಜನಸಂಪರ್ಕದಲ್ಲಿದ್ದು ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ತೊಡಗಿಸಿಕೊಂಡಿದ್ದರು; ಹಾಗಾಗಿಯೇ ಈ ಬಾರಿ ಗೆಲ್ಲಲು ಸಾಧ್ಯವಾಯಿತು. ಈ ಬಾರಿ ಪರಮೇಶ್ವರ್‌ರನ್ನು ಸೋಲಿಸಲು ಬಿಜೆಪಿ ಸಾಕಷ್ಟು ಪ್ರಯತ್ನವನ್ನು ಮಾಡಿತಾದರೂ ಅದರಲ್ಲಿ ಯಶಸ್ಸು ಕಾಣಲಿಲ್ಲ. ಉಳಿದಂತೆ ಜಿಲ್ಲೆಯಲ್ಲಿ ಸಜ್ಜನ ಸಂಭಾವಿತ ರಾಜಕಾರಣಿ ಎಂಬ ಹೆಗ್ಗಳಿಕೆಯೊಂದಿಗೆ ಈ ಬಾರಿಯೂ ಸಚಿವರಾಗಿ ಮುಂದುವರಿಯುತ್ತಿದ್ದಾರೆ. ಸಚಿವರಾದ್ದರಿಂದ ಜಿಲ್ಲೆ ಮತ್ತು ಕ್ಷೇತ್ರದಲ್ಲಿ ಭಾರಿ ನಿರೀಕ್ಷೆಯೂ ಸಹ ಮೂಡಿದೆ.

ಇದನ್ನೂ ಓದಿ: ಬಿಕ್ಕಟ್ಟಿನಲ್ಲೂ ಸೆಕ್ಯುಲರ್ ಮೌಲ್ಯಗಳನ್ನು ಬಿಡದ ಎತ್ತರದ ನಾಯಕ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...