Homeಕರ್ನಾಟಕನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

ನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾರ್ಚ್ 07, 1948ರಂದು ಆಗಿನ ಕೋಲಾರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್. ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ 1969ರಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕೋಶದ ಉಪಾಧ್ಯಕ್ಷರಾಗಿ ತಮ್ಮ ರಾಜಕೀಯವನ್ನು ಆರಂಭಿಸಿದರು.

ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದ ಮುನಿಯಪ್ಪನವರು ದೆಹಲಿಯ ಸಂಪರ್ಕ ಬೆಳೆಸಿಕೊಂಡಿದ್ದರು. ಇತ್ತ ಶಿಡ್ಲಘಟ್ಟದ ಅಂದಿನ ಶಾಸಕರಾಗಿದ್ದ ವಿ.ಮುನಿಯಪ್ಪನವರಿಗೂ ಹತ್ತಿರವಾಗಿದ್ದರು. ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೇ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಆದರೆ ಅಲ್ಲಿಂದ ಆರಿಸಿ ಬರುತ್ತಿದ್ದವರೆಲ್ಲರೂ ದಲಿತರಲ್ಲಿನ ಸ್ಪೃಶ್ಯ ಸಮುದಾಯದವರೇ ಆಗಿದ್ದರು. ಹೆಚ್ಚಿನ ಜನಸಂಖ್ಯೆ ಇರುವ ಎಸ್‌ಸಿ ಅಸ್ಪೃಶ್ಯ ಸಮುದಾಯದವರು ಅಧಿಕಾರಕ್ಕೆ ಬರಬೇಕು ಎಂಬ ಕೂಗು ಎದ್ದಿತು. ಅಂದಿಗೆ, ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯಾಗಿದ್ದ ಕಾರಣ ಕಾಂಗ್ರೆಸ್ ಪರ ಅಲೆಯೂ ಇತ್ತು. ಆ ಸಂದರ್ಭದಲ್ಲಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ಕೋಲಾರದ ಟಿಕೆಟ್ ಗಿಟ್ಟಿಸಿ 1991ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆನಂತರ 2019ರವರೆಗೂ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. 1996, 1998, 1999, 2004, 2009, 2014ರ ಚುನಾವಣೆಗಳಲ್ಲಿ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರದ್ದು.

ರಮೇಶ್ ಕುಮಾರ್

1991ರಲ್ಲಿ ಮೊದಲ ಬಾರಿಗೆ ಸಂಸದರಾದ ಅವರು ಇತ್ತ ರಾಜ್ಯದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರಾಗುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಸ್ಥಾನ ಪಡೆಯುತ್ತಾರೆ. 1994ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿ ಆಗುತ್ತಾರೆ. 1999ರವರೆಗೂ ಕೈಗಾರಿಕೆ, ಉಕ್ಕು ಮತ್ತು ಅದಿರು, ಸಮಾಜ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದಂತಹ ಸಚಿವಾಲಯಗಳ ಸ್ಥಾಯಿ ಸಮಿತಿ, ಸಲಹಾ ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದರು. 2004ರಲ್ಲಿ ಸಾಗಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕೋಲಾರದಲ್ಲಿ ಬಣ ರಾಜಕೀಯ

ಸಂಸತ್ ಚುನಾವಣೆಗಳಲ್ಲಿ ಸತತ ಗೆಲ್ಲುತ್ತಿದ್ದ ಮತ್ತು ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪನವರು ಕೋಲಾರ ಜಿಲ್ಲೆಯ ರಾಜಕಾರಣದಲ್ಲಿ ಬಲವಾದ ಹಿಡಿತ ಹೊಂದಿದ್ದರು. ಜನತಾ ಪರಿವಾರದ ನಾಯಕರಾಗಿದ್ದ ಎಚ್.ಡಿ ದೇವೇಗೌಡ ಮತ್ತು ಸಿ. ಭೈರೇಗೌಡರ ಜೊತೆ ಹೊಂದಾಣಿಕೆ ರಾಜಕೀಯದ ಕಾರಣದಿಂದಲೇ ಅವರು ಸತತವಾಗಿ ಗೆಲ್ಲುತ್ತಾರೆ ಎಂಬ ಮಾತುಗಳಿದ್ದವು. ಆದರೆ 2003ರಲ್ಲಿ ಸಿ.ಭೈರೇಗೌಡರ ನಿಧನದ ನಂತರ ಅವರ ಪುತ್ರ ಕೃಷ್ಣಭೈರೇಗೌಡ, ಕೋಲಾರದ ಕೆ.ಶ್ರೀನಿವಾಸ್‌ಗೌಡ, ಶ್ರೀನಿವಾಸಪುರದ ಕೆ.ಆರ್ ರಮೇಶ್ ಕುಮಾರ್ ಸೇರಿ ಒಂದು ಬಣವಾದರು. ತಮ್ಮನ್ನು ಕಡೆಗಣಿಸಿ ಮೂಲ ಕಾಂಗ್ರೆಸ್ಸಿಗರಿಗೆ ಮಾತ್ರ ಮಣೆ ಹಾಕುತ್ತಾರೆ ಎಂಬ ಆರೋಪವನ್ನು ಮುನಿಯಪ್ಪ ಎದುರಿಸುತ್ತಿದ್ದರು. ಅದು ನಂತರ ಮೂಲ ಕಾಂಗ್ರೆಸ್ಸಿಗರು (ಮುನಿಯಪ್ಪ ಬಣ) ಮತ್ತು ವಲಸಿಗ ಕಾಂಗ್ರೆಸ್ಸಿಗರು (ರಮೇಶ್ ಕುಮಾರ್ ಬಣ) ಎಂಬ ಎರಡು ಬಣಗಳಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ಮೊದಲ ಸೋಲು

ಮುನಿಯಪ್ಪನವರು ಕೋಲಾರದಲ್ಲಿ ಅನ್ಯ ಪಕ್ಷಗಳ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಹಾಗಾಗಿ ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಎದುರು ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಸ್ವಾಮಿ

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್. ಮುನಿಯಪ್ಪನವರು ಸಿ.ಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸದ್ಯಕ್ಕೆ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...