Homeಕರ್ನಾಟಕನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

ನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾರ್ಚ್ 07, 1948ರಂದು ಆಗಿನ ಕೋಲಾರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್. ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ 1969ರಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕೋಶದ ಉಪಾಧ್ಯಕ್ಷರಾಗಿ ತಮ್ಮ ರಾಜಕೀಯವನ್ನು ಆರಂಭಿಸಿದರು.

ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದ ಮುನಿಯಪ್ಪನವರು ದೆಹಲಿಯ ಸಂಪರ್ಕ ಬೆಳೆಸಿಕೊಂಡಿದ್ದರು. ಇತ್ತ ಶಿಡ್ಲಘಟ್ಟದ ಅಂದಿನ ಶಾಸಕರಾಗಿದ್ದ ವಿ.ಮುನಿಯಪ್ಪನವರಿಗೂ ಹತ್ತಿರವಾಗಿದ್ದರು. ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೇ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಆದರೆ ಅಲ್ಲಿಂದ ಆರಿಸಿ ಬರುತ್ತಿದ್ದವರೆಲ್ಲರೂ ದಲಿತರಲ್ಲಿನ ಸ್ಪೃಶ್ಯ ಸಮುದಾಯದವರೇ ಆಗಿದ್ದರು. ಹೆಚ್ಚಿನ ಜನಸಂಖ್ಯೆ ಇರುವ ಎಸ್‌ಸಿ ಅಸ್ಪೃಶ್ಯ ಸಮುದಾಯದವರು ಅಧಿಕಾರಕ್ಕೆ ಬರಬೇಕು ಎಂಬ ಕೂಗು ಎದ್ದಿತು. ಅಂದಿಗೆ, ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯಾಗಿದ್ದ ಕಾರಣ ಕಾಂಗ್ರೆಸ್ ಪರ ಅಲೆಯೂ ಇತ್ತು. ಆ ಸಂದರ್ಭದಲ್ಲಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ಕೋಲಾರದ ಟಿಕೆಟ್ ಗಿಟ್ಟಿಸಿ 1991ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆನಂತರ 2019ರವರೆಗೂ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. 1996, 1998, 1999, 2004, 2009, 2014ರ ಚುನಾವಣೆಗಳಲ್ಲಿ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರದ್ದು.

ರಮೇಶ್ ಕುಮಾರ್

1991ರಲ್ಲಿ ಮೊದಲ ಬಾರಿಗೆ ಸಂಸದರಾದ ಅವರು ಇತ್ತ ರಾಜ್ಯದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರಾಗುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಸ್ಥಾನ ಪಡೆಯುತ್ತಾರೆ. 1994ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿ ಆಗುತ್ತಾರೆ. 1999ರವರೆಗೂ ಕೈಗಾರಿಕೆ, ಉಕ್ಕು ಮತ್ತು ಅದಿರು, ಸಮಾಜ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದಂತಹ ಸಚಿವಾಲಯಗಳ ಸ್ಥಾಯಿ ಸಮಿತಿ, ಸಲಹಾ ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದರು. 2004ರಲ್ಲಿ ಸಾಗಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕೋಲಾರದಲ್ಲಿ ಬಣ ರಾಜಕೀಯ

ಸಂಸತ್ ಚುನಾವಣೆಗಳಲ್ಲಿ ಸತತ ಗೆಲ್ಲುತ್ತಿದ್ದ ಮತ್ತು ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪನವರು ಕೋಲಾರ ಜಿಲ್ಲೆಯ ರಾಜಕಾರಣದಲ್ಲಿ ಬಲವಾದ ಹಿಡಿತ ಹೊಂದಿದ್ದರು. ಜನತಾ ಪರಿವಾರದ ನಾಯಕರಾಗಿದ್ದ ಎಚ್.ಡಿ ದೇವೇಗೌಡ ಮತ್ತು ಸಿ. ಭೈರೇಗೌಡರ ಜೊತೆ ಹೊಂದಾಣಿಕೆ ರಾಜಕೀಯದ ಕಾರಣದಿಂದಲೇ ಅವರು ಸತತವಾಗಿ ಗೆಲ್ಲುತ್ತಾರೆ ಎಂಬ ಮಾತುಗಳಿದ್ದವು. ಆದರೆ 2003ರಲ್ಲಿ ಸಿ.ಭೈರೇಗೌಡರ ನಿಧನದ ನಂತರ ಅವರ ಪುತ್ರ ಕೃಷ್ಣಭೈರೇಗೌಡ, ಕೋಲಾರದ ಕೆ.ಶ್ರೀನಿವಾಸ್‌ಗೌಡ, ಶ್ರೀನಿವಾಸಪುರದ ಕೆ.ಆರ್ ರಮೇಶ್ ಕುಮಾರ್ ಸೇರಿ ಒಂದು ಬಣವಾದರು. ತಮ್ಮನ್ನು ಕಡೆಗಣಿಸಿ ಮೂಲ ಕಾಂಗ್ರೆಸ್ಸಿಗರಿಗೆ ಮಾತ್ರ ಮಣೆ ಹಾಕುತ್ತಾರೆ ಎಂಬ ಆರೋಪವನ್ನು ಮುನಿಯಪ್ಪ ಎದುರಿಸುತ್ತಿದ್ದರು. ಅದು ನಂತರ ಮೂಲ ಕಾಂಗ್ರೆಸ್ಸಿಗರು (ಮುನಿಯಪ್ಪ ಬಣ) ಮತ್ತು ವಲಸಿಗ ಕಾಂಗ್ರೆಸ್ಸಿಗರು (ರಮೇಶ್ ಕುಮಾರ್ ಬಣ) ಎಂಬ ಎರಡು ಬಣಗಳಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ಮೊದಲ ಸೋಲು

ಮುನಿಯಪ್ಪನವರು ಕೋಲಾರದಲ್ಲಿ ಅನ್ಯ ಪಕ್ಷಗಳ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಹಾಗಾಗಿ ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಎದುರು ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಸ್ವಾಮಿ

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್. ಮುನಿಯಪ್ಪನವರು ಸಿ.ಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸದ್ಯಕ್ಕೆ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...