Homeಕರ್ನಾಟಕನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

ನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾರ್ಚ್ 07, 1948ರಂದು ಆಗಿನ ಕೋಲಾರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್. ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ 1969ರಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕೋಶದ ಉಪಾಧ್ಯಕ್ಷರಾಗಿ ತಮ್ಮ ರಾಜಕೀಯವನ್ನು ಆರಂಭಿಸಿದರು.

ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದ ಮುನಿಯಪ್ಪನವರು ದೆಹಲಿಯ ಸಂಪರ್ಕ ಬೆಳೆಸಿಕೊಂಡಿದ್ದರು. ಇತ್ತ ಶಿಡ್ಲಘಟ್ಟದ ಅಂದಿನ ಶಾಸಕರಾಗಿದ್ದ ವಿ.ಮುನಿಯಪ್ಪನವರಿಗೂ ಹತ್ತಿರವಾಗಿದ್ದರು. ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೇ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಆದರೆ ಅಲ್ಲಿಂದ ಆರಿಸಿ ಬರುತ್ತಿದ್ದವರೆಲ್ಲರೂ ದಲಿತರಲ್ಲಿನ ಸ್ಪೃಶ್ಯ ಸಮುದಾಯದವರೇ ಆಗಿದ್ದರು. ಹೆಚ್ಚಿನ ಜನಸಂಖ್ಯೆ ಇರುವ ಎಸ್‌ಸಿ ಅಸ್ಪೃಶ್ಯ ಸಮುದಾಯದವರು ಅಧಿಕಾರಕ್ಕೆ ಬರಬೇಕು ಎಂಬ ಕೂಗು ಎದ್ದಿತು. ಅಂದಿಗೆ, ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯಾಗಿದ್ದ ಕಾರಣ ಕಾಂಗ್ರೆಸ್ ಪರ ಅಲೆಯೂ ಇತ್ತು. ಆ ಸಂದರ್ಭದಲ್ಲಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ಕೋಲಾರದ ಟಿಕೆಟ್ ಗಿಟ್ಟಿಸಿ 1991ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆನಂತರ 2019ರವರೆಗೂ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. 1996, 1998, 1999, 2004, 2009, 2014ರ ಚುನಾವಣೆಗಳಲ್ಲಿ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರದ್ದು.

ರಮೇಶ್ ಕುಮಾರ್

1991ರಲ್ಲಿ ಮೊದಲ ಬಾರಿಗೆ ಸಂಸದರಾದ ಅವರು ಇತ್ತ ರಾಜ್ಯದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರಾಗುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಸ್ಥಾನ ಪಡೆಯುತ್ತಾರೆ. 1994ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿ ಆಗುತ್ತಾರೆ. 1999ರವರೆಗೂ ಕೈಗಾರಿಕೆ, ಉಕ್ಕು ಮತ್ತು ಅದಿರು, ಸಮಾಜ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದಂತಹ ಸಚಿವಾಲಯಗಳ ಸ್ಥಾಯಿ ಸಮಿತಿ, ಸಲಹಾ ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದರು. 2004ರಲ್ಲಿ ಸಾಗಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕೋಲಾರದಲ್ಲಿ ಬಣ ರಾಜಕೀಯ

ಸಂಸತ್ ಚುನಾವಣೆಗಳಲ್ಲಿ ಸತತ ಗೆಲ್ಲುತ್ತಿದ್ದ ಮತ್ತು ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪನವರು ಕೋಲಾರ ಜಿಲ್ಲೆಯ ರಾಜಕಾರಣದಲ್ಲಿ ಬಲವಾದ ಹಿಡಿತ ಹೊಂದಿದ್ದರು. ಜನತಾ ಪರಿವಾರದ ನಾಯಕರಾಗಿದ್ದ ಎಚ್.ಡಿ ದೇವೇಗೌಡ ಮತ್ತು ಸಿ. ಭೈರೇಗೌಡರ ಜೊತೆ ಹೊಂದಾಣಿಕೆ ರಾಜಕೀಯದ ಕಾರಣದಿಂದಲೇ ಅವರು ಸತತವಾಗಿ ಗೆಲ್ಲುತ್ತಾರೆ ಎಂಬ ಮಾತುಗಳಿದ್ದವು. ಆದರೆ 2003ರಲ್ಲಿ ಸಿ.ಭೈರೇಗೌಡರ ನಿಧನದ ನಂತರ ಅವರ ಪುತ್ರ ಕೃಷ್ಣಭೈರೇಗೌಡ, ಕೋಲಾರದ ಕೆ.ಶ್ರೀನಿವಾಸ್‌ಗೌಡ, ಶ್ರೀನಿವಾಸಪುರದ ಕೆ.ಆರ್ ರಮೇಶ್ ಕುಮಾರ್ ಸೇರಿ ಒಂದು ಬಣವಾದರು. ತಮ್ಮನ್ನು ಕಡೆಗಣಿಸಿ ಮೂಲ ಕಾಂಗ್ರೆಸ್ಸಿಗರಿಗೆ ಮಾತ್ರ ಮಣೆ ಹಾಕುತ್ತಾರೆ ಎಂಬ ಆರೋಪವನ್ನು ಮುನಿಯಪ್ಪ ಎದುರಿಸುತ್ತಿದ್ದರು. ಅದು ನಂತರ ಮೂಲ ಕಾಂಗ್ರೆಸ್ಸಿಗರು (ಮುನಿಯಪ್ಪ ಬಣ) ಮತ್ತು ವಲಸಿಗ ಕಾಂಗ್ರೆಸ್ಸಿಗರು (ರಮೇಶ್ ಕುಮಾರ್ ಬಣ) ಎಂಬ ಎರಡು ಬಣಗಳಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ಮೊದಲ ಸೋಲು

ಮುನಿಯಪ್ಪನವರು ಕೋಲಾರದಲ್ಲಿ ಅನ್ಯ ಪಕ್ಷಗಳ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಹಾಗಾಗಿ ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಎದುರು ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಸ್ವಾಮಿ

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್. ಮುನಿಯಪ್ಪನವರು ಸಿ.ಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸದ್ಯಕ್ಕೆ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...