Homeಕರ್ನಾಟಕನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

ನಮ್ಮ ಸಚಿವರಿವರು; ಕೇಂದ್ರದಿಂದ ರಾಜ್ಯ ರಾಜಕಾರಣಕ್ಕೆ ಬಂದ ಕೆ.ಎಚ್. ಮುನಿಯಪ್ಪ

- Advertisement -
- Advertisement -

ಕಾಂಗ್ರೆಸ್‌ನ ಹಿರಿಯ ದಲಿತ ಮುಖಂಡ, ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪನವರು ರಾಜ್ಯ ರಾಜಕಾರಣಕ್ಕೆ ಕಾಲಿಟ್ಟಿದ್ದು, ಸಂಪುಟ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಸುದೀರ್ಘ ರಾಜಕೀಯ ಜೀವನದ ಇಣುಕು ನೋಟ ಇಲ್ಲಿದೆ.

ಕಂಬದಹಳ್ಳಿ ಹನುಮಪ್ಪ ಮುನಿಯಪ್ಪನವರು ಮಾರ್ಚ್ 07, 1948ರಂದು ಆಗಿನ ಕೋಲಾರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಕಂಬದಹಳ್ಳಿಯ ಹನುಮಪ್ಪ ಹಾಗೂ ವೆಂಕಟಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ದಲಿತ ಎಡಗೈ ಸಮುದಾಯದ ಕೆ.ಎಚ್. ಮುನಿಯಪ್ಪನವರು ವೃತ್ತಿಯಲ್ಲಿ ವಕೀಲರಾಗಿದ್ದ ಸಂದರ್ಭದಲ್ಲಿ 1969ರಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿಗಳು ಮತ್ತು ಪರಿಶಿಷ್ಟ ಪಂಗಡಗಳ ಕೋಶದ ಉಪಾಧ್ಯಕ್ಷರಾಗಿ ತಮ್ಮ ರಾಜಕೀಯವನ್ನು ಆರಂಭಿಸಿದರು.

ಈ ಹಿಂದೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಸತತ ಮೂರು ಸಲ ಸಂಸದರಾಗಿ ಆಯ್ಕೆಯಾಗಿದ್ದ ಬ್ರಾಹ್ಮಣ ಸಮುದಾಯದ ವಿ.ಕೃಷ್ಣರಾವ್‌ರವರ ಆಪ್ತರಾಗಿದ್ದ ಮುನಿಯಪ್ಪನವರು ದೆಹಲಿಯ ಸಂಪರ್ಕ ಬೆಳೆಸಿಕೊಂಡಿದ್ದರು. ಇತ್ತ ಶಿಡ್ಲಘಟ್ಟದ ಅಂದಿನ ಶಾಸಕರಾಗಿದ್ದ ವಿ.ಮುನಿಯಪ್ಪನವರಿಗೂ ಹತ್ತಿರವಾಗಿದ್ದರು. ಅವಿಭಜಿತ ಕೋಲಾರ ಜಿಲ್ಲೆಯು ರಾಜ್ಯದಲ್ಲೇ ಅತ್ಯಂತ ಹೆಚ್ಚು ದಲಿತ ಸಮುದಾಯವಿರುವ ಜಿಲ್ಲೆಗಳಲ್ಲೊಂದು. ಹಾಗಾಗಿಯೇ ಕೋಲಾರ ಲೋಕಸಭಾ ಕ್ಷೇತ್ರವು ಎಸ್.ಸಿ. ಮೀಸಲು ಕ್ಷೇತ್ರವಾಗಿದೆ. ಆದರೆ ಅಲ್ಲಿಂದ ಆರಿಸಿ ಬರುತ್ತಿದ್ದವರೆಲ್ಲರೂ ದಲಿತರಲ್ಲಿನ ಸ್ಪೃಶ್ಯ ಸಮುದಾಯದವರೇ ಆಗಿದ್ದರು. ಹೆಚ್ಚಿನ ಜನಸಂಖ್ಯೆ ಇರುವ ಎಸ್‌ಸಿ ಅಸ್ಪೃಶ್ಯ ಸಮುದಾಯದವರು ಅಧಿಕಾರಕ್ಕೆ ಬರಬೇಕು ಎಂಬ ಕೂಗು ಎದ್ದಿತು. ಅಂದಿಗೆ, ಪ್ರಧಾನಿ ರಾಜೀವ್ ಗಾಂಧಿಯವರ ಹತ್ಯೆಯಾಗಿದ್ದ ಕಾರಣ ಕಾಂಗ್ರೆಸ್ ಪರ ಅಲೆಯೂ ಇತ್ತು. ಆ ಸಂದರ್ಭದಲ್ಲಿ ದೆಹಲಿಯ ಕಾಂಗ್ರೆಸ್ ಮುಖಂಡರ ಪರಿಚಯವಿದ್ದ ಮುನಿಯಪ್ಪನವರು ಕೋಲಾರದ ಟಿಕೆಟ್ ಗಿಟ್ಟಿಸಿ 1991ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದರು. ಆನಂತರ 2019ರವರೆಗೂ ಅವರು ಹಿಂತಿರುಗಿ ನೋಡಿದ್ದೇ ಇಲ್ಲ. 1996, 1998, 1999, 2004, 2009, 2014ರ ಚುನಾವಣೆಗಳಲ್ಲಿ ಸತತ ಏಳು ಬಾರಿ ಸಂಸದರಾಗಿ ಆಯ್ಕೆಯಾದ ಕೀರ್ತಿ ಅವರದ್ದು.

ರಮೇಶ್ ಕುಮಾರ್

1991ರಲ್ಲಿ ಮೊದಲ ಬಾರಿಗೆ ಸಂಸದರಾದ ಅವರು ಇತ್ತ ರಾಜ್ಯದಲ್ಲಿ ಕೆಪಿಸಿಸಿ ಕಾನೂನು ಘಟಕದ ಸದಸ್ಯರಾಗುತ್ತಾರೆ. ತಾಲ್ಲೂಕು ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಗಳಲ್ಲಿ ಸ್ಥಾನ ಪಡೆಯುತ್ತಾರೆ. 1994ರಲ್ಲಿ ಎಐಸಿಸಿಯ ಜಂಟಿ ಕಾರ್ಯದರ್ಶಿ ಆಗುತ್ತಾರೆ. 1999ರವರೆಗೂ ಕೈಗಾರಿಕೆ, ಉಕ್ಕು ಮತ್ತು ಅದಿರು, ಸಮಾಜ ಕಲ್ಯಾಣ ಮತ್ತು ಸಾಮಾಜಿಕ ನ್ಯಾಯದಂತಹ ಸಚಿವಾಲಯಗಳ ಸ್ಥಾಯಿ ಸಮಿತಿ, ಸಲಹಾ ಸಮಿತಿ ಸದಸ್ಯರಾಗಿ ಕೆಲಸ ನಿರ್ವಹಿಸಿದರು. 2004ರಲ್ಲಿ ಸಾಗಣೆ, ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಅವರು 2009ರಲ್ಲಿ ರೈಲ್ವೇ ಸಚಿವರಾದರು. ಆನಂತರ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.

ಕೋಲಾರದಲ್ಲಿ ಬಣ ರಾಜಕೀಯ

ಸಂಸತ್ ಚುನಾವಣೆಗಳಲ್ಲಿ ಸತತ ಗೆಲ್ಲುತ್ತಿದ್ದ ಮತ್ತು ಸಚಿವರಾಗಿದ್ದ ಕೆ.ಎಚ್. ಮುನಿಯಪ್ಪನವರು ಕೋಲಾರ ಜಿಲ್ಲೆಯ ರಾಜಕಾರಣದಲ್ಲಿ ಬಲವಾದ ಹಿಡಿತ ಹೊಂದಿದ್ದರು. ಜನತಾ ಪರಿವಾರದ ನಾಯಕರಾಗಿದ್ದ ಎಚ್.ಡಿ ದೇವೇಗೌಡ ಮತ್ತು ಸಿ. ಭೈರೇಗೌಡರ ಜೊತೆ ಹೊಂದಾಣಿಕೆ ರಾಜಕೀಯದ ಕಾರಣದಿಂದಲೇ ಅವರು ಸತತವಾಗಿ ಗೆಲ್ಲುತ್ತಾರೆ ಎಂಬ ಮಾತುಗಳಿದ್ದವು. ಆದರೆ 2003ರಲ್ಲಿ ಸಿ.ಭೈರೇಗೌಡರ ನಿಧನದ ನಂತರ ಅವರ ಪುತ್ರ ಕೃಷ್ಣಭೈರೇಗೌಡ, ಕೋಲಾರದ ಕೆ.ಶ್ರೀನಿವಾಸ್‌ಗೌಡ, ಶ್ರೀನಿವಾಸಪುರದ ಕೆ.ಆರ್ ರಮೇಶ್ ಕುಮಾರ್ ಸೇರಿ ಒಂದು ಬಣವಾದರು. ತಮ್ಮನ್ನು ಕಡೆಗಣಿಸಿ ಮೂಲ ಕಾಂಗ್ರೆಸ್ಸಿಗರಿಗೆ ಮಾತ್ರ ಮಣೆ ಹಾಕುತ್ತಾರೆ ಎಂಬ ಆರೋಪವನ್ನು ಮುನಿಯಪ್ಪ ಎದುರಿಸುತ್ತಿದ್ದರು. ಅದು ನಂತರ ಮೂಲ ಕಾಂಗ್ರೆಸ್ಸಿಗರು (ಮುನಿಯಪ್ಪ ಬಣ) ಮತ್ತು ವಲಸಿಗ ಕಾಂಗ್ರೆಸ್ಸಿಗರು (ರಮೇಶ್ ಕುಮಾರ್ ಬಣ) ಎಂಬ ಎರಡು ಬಣಗಳಾಗಲು ಕಾರಣವಾಯಿತು.

ಇದನ್ನೂ ಓದಿ: ಸಿದ್ದರಾಮಯ್ಯ ಹತ್ಯೆಗೆ ಕರೆ: ಮಾಜಿ ಸಚಿವ ಅಶ್ವಥ್ ನಾರಾಯಣ್ ವಿರುದ್ಧ ಎಫ್‌ಐಆರ್‌

ಮೊದಲ ಸೋಲು

ಮುನಿಯಪ್ಪನವರು ಕೋಲಾರದಲ್ಲಿ ಅನ್ಯ ಪಕ್ಷಗಳ ಎಂಎಲ್‌ಎ ಅಭ್ಯರ್ಥಿಗಳಿಂದ ಲೋಕಸಭಾ ಚುನಾವಣೆಗಳಿಗೆ ಬೆಂಬಲ ಪಡೆದು, ನಂತರದ ವಿಧಾನಸಭಾ ಚುನಾವಣೆಯಲ್ಲಿ ಸ್ವಪಕ್ಷೀಯರ ವಿರುದ್ಧವೇ ಕೆಲಸ ಮಾಡುತ್ತಾರೆ ಎಂಬ ಆರೋಪ ಬಲವಾಗಿ ಕೇಳಿಬಂದಿತ್ತು. ಹಾಗಾಗಿ ಮುನಿಯಪ್ಪನವರ ಮೇಲೆ ಕೋಪಗೊಂಡಿದ್ದ ಜಿಲ್ಲೆಯ ಕಾಂಗ್ರೆಸ್ ಶಾಸಕರು 2019ರ ಲೋಕಸಭಾ ಚುನಾವಣೆಯಲ್ಲಿ ಅವರ ವಿರುದ್ಧ ಕೆಲಸ ಮಾಡಿದ ಪರಿಣಾಮ ಮುನಿಯಪ್ಪನವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿಸ್ವಾಮಿ ಎದುರು ಸೋತರು. ಜಿಲ್ಲೆಯಲ್ಲಿನ ರಮೇಶ್ ಕುಮಾರ್ ಬಣವೇ ಅದಕ್ಕೆ ಕಾರಣ ಎಂದು ಕೋಪಿಸಿಕೊಂಡಿದ್ದ ಅವರು ಪಕ್ಷ ತೊರೆಯುವ ಸೂಚನೆ ಸಹ ನೀಡಿದ್ದರು. ಆದರೆ ಕಾಂಗ್ರೆಸ್ ಹೈಕಮಾಂಡ್ ಅವರನ್ನು ಸಮಾಧಾನ ಮಾಡಿತ್ತು. ಭಾರತ್ ಜೋಡೋ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಮನವೊಲಿಸಿ ಕಾಂಗ್ರೆಸ್‌ನಲ್ಲಿ ಸೂಕ್ತ ಸ್ಥಾನಮಾನ ನೀಡುವ ಭರವಸೆ ನೀಡಿದ್ದರು. ಅದರ ಫಲವಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ದೇವನಹಳ್ಳಿ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಕಂಡ ಅವರು ಸಿದ್ದರಾಮಯ್ಯನವರ ಸಂಪುಟದ ಭಾಗವಾಗಿದ್ದಾರೆ.

ಮುನಿಸ್ವಾಮಿ

ಮುನಿಯಪ್ಪನವರು ಸಚಿವರಾಗುವ ಮೂಲಕ ದೇವನಹಳ್ಳಿ ತಾಲ್ಲೂಕಿಗೆ ಮೊದಲ ಬಾರಿಗೆ ಮಂತ್ರಿ ಸ್ಥಾನ ದಕ್ಕಿದಂತಾಗಿದೆ. ಕೆ.ಎಚ್. ಮುನಿಯಪ್ಪನವರು ಸಿ.ಎಂ ಸಿದ್ದರಾಮಯ್ಯನವರನ್ನು ಹೊರತುಪಡಿಸಿ ಸದ್ಯಕ್ಕೆ ಸಚಿವ ಸಂಪುಟದಲ್ಲಿನ ಹಿರಿಯ ಮಂತ್ರಿಯಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...