Homeಕರ್ನಾಟಕನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

- Advertisement -
- Advertisement -

ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ ಜಾರ್ಜ್ ಅವರಿಗೆ ಪ್ರಮುಖ ಖಾತೆ ಖಚಿತ ಎಂಬ ಮಾತು ಸಾಮಾಜಿಕ ವಲಯದಲ್ಲಿ ಜನಜನಿತವಾಗುವಷ್ಟು ಅವರು ತಮ್ಮ ವರ್ಚಸ್ಸನ್ನು ಕಳೆದ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವೃದ್ಧಿಸಿಕೊಂಡಿದ್ದರು. ಈ ಹಿಂದಿನ ಸರ್ಕಾರದಲ್ಲಿ ಅವರು ಪ್ರಮುಖ ಗೃಹ ಇಲಾಖೆಯ ನಂತರ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರು ಬಾರಿ ಶಾಸಕರಾಗಿದ್ದರೂ, ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಲ್ಲಿ 2003ರಿಂದ ಸತತ ನಾಲ್ಕು ಬಾರಿ ಪುನರಾಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೆ.ಜೆ ಜಾರ್ಜ್ ಅವರ ಬದುಕು ಮತ್ತು ಕರ್ನಾಟಕ ರಾಜಕೀಯದಲ್ಲಿ ಅವರು ಕಂಡ ಯಶಸ್ಸು ಸಾಕಷ್ಟು ರೋಚಕ.

ಕೆ.ಜೆ ಜಾರ್ಜ್ ಅವರ ಪೂರ್ಣ ಹೆಸರು ಕೇಳಚಂದ್ರ ಜೋಸೆಫ್ ಜಾರ್ಜ್. ನನಾಯ ಸಿರಿಯನ್ ಜಾಕೋಬೈಟ್ ಕ್ರಿಶ್ಚಿಯನ್ ಸಮುದಾಯದ ಜೋಸೆಫ್ ಕೇಳಚಂದ್ರ ಚಾಕೋ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ 1946ರಂದು ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಆಗಸ್ಟ್ ತಿಂಗಳಲ್ಲಿ ಅವರು ಜನಿಸಿದರು. ಈ ಕುಟುಂಬ 1960ರ ಸುಮಾರಿಗೆ ಕೊಡಗಿಗೆ ಬಂದು ನೆಲೆಸಿತ್ತು.

ಬಾಲ್ಯವನ್ನು ಕೊಡಗಿನಲ್ಲೇ ಕಳೆದ ಜಾರ್ಜ್ 1968ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಗೋಣಿಕೊಪ್ಪಲು ಪಟ್ಟಣದಿಂದ ಆರಂಭಿಸಿದರು. 1969ರಲ್ಲಿ ಗೋಣಿಕೊಪ್ಪಲು ಪಟ್ಟಣದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದರು. 1971-77ರವರೆಗೆ ಇಲ್ಲಿನ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದರು.

1975-78ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಖಜಾಂಚಿಯಾಗಿ, 1982-85ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು. ತಮ್ಮ 37ನೇ ವಯಸ್ಸಿನಲ್ಲಿ 1983ರ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಭಾರತಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾರ್ಜ್ ಸ್ಪರ್ಧಿಸಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲು ಎದುರಾಯಿತು. ಜಾರ್ಜ್ ಫರ್ನಾಂಡಿಸ್ ಸಹೋದರ ಜನತಾ ಪಾರ್ಟಿಯ ಮೈಕಲ್ ಫರ್ನಾಂಡಿಸ್ ವಿರುದ್ಧ ಅವರು ಸೋಲು ಕಂಡರು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

1985ರಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ಇದೇ ಭಾರತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದರು. 1989-94ರವರೆಗೆ ಮತ್ತೊಂದು ಅವಧಿಗೆ ಭಾರತಿನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿ ಗೆದ್ದರು. ಕಳೆದ ಐದು ದಶಕಗಳ ರಾಜಕೀಯ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಸಹ ಕೆಜೆ ಜಾರ್ಜ್ ಕಂಡಿದ್ದಾರೆ. ಹಲವು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಎಸ್.ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಕೆಜೆ ಜಾರ್ಜ್ ಅವರಿಗಿದೆ.

1994ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರಿದ್ದ ಜಾರ್ಜ್ ಮತ್ತೊಮ್ಮೆ ಸೋಲು ಕಾಣುವಂತಾಗಿತ್ತು. ಈ ಸೋಲಿನಿಂದ ಶೀಘ್ರವೇ ಸುಧಾರಿಸಿದ್ದ ಜಾರ್ಜ್ ಮತ್ತೆ ಮಾತೃ ಪಕ್ಷಕ್ಕೆ ಹಿಂತಿರುಗಿದ್ದರು. ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡರು. ಅವರ ಕುಟುಂಬಕ್ಕೂ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಜಾತಶತ್ರುವಾಗಿ ಬೆಳೆದುನಿಂತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಿದಾಗ ಕೆ.ಜೆ ಜಾರ್ಜ್ ಅವರಿಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ವೇಳೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಗಣಪತಿ ಆತ್ಮಹತ್ಯೆಗೆ ಜಾರ್ಜ್ ಅವರೇ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿದ್ದರು. ಹೀಗಾಗಿ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು ಕೊನೆಗೂ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ನೀಡಿತ್ತು. ಅದೇ ಸರ್ಕಾರದಲ್ಲಿ ನಂತರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಅವರಿಗೆ ಪ್ರಸಕ್ತ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...