Homeಕರ್ನಾಟಕನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

ನಮ್ಮ ಸಚಿವರಿವರು; ಕರ್ನಾಟಕ ಕಾಂಗ್ರೆಸ್‌ನಲ್ಲಿ ಕ್ರಿಶ್ಚಿಯನ್ ಸಮುದಾಯದ ಏಕೈಕ ಶಾಸಕ ಹಿರಿಯ ಮುಖಂಡ ಕೆ.ಜೆ. ಜಾರ್ಜ್

- Advertisement -
- Advertisement -

ಉದ್ಯಮ ಹಾಗೂ ರಾಜಕಾರಣವನ್ನು ಜೊತೆ ಜೊತೆಯಾಗಿಯೇ ಮುನ್ನಡೆಸುವ ಹಾಗೂ ಎರಡರಲ್ಲೂ ಯಶಸ್ಸು ಕಾಣುವ ಮುಖಂಡರ ಪೈಕಿ ಕೆ.ಜೆ ಜಾರ್ಜ್ ಮುಂಚೂಣಿಯ ನಾಯಕರು. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದ ಗದ್ದುಗೆಗೆ ಏರಿ, ಯಾರೇ ಮುಖ್ಯಮಂತ್ರಿಯಾಗಲಿ ಕೆ.ಜೆ ಜಾರ್ಜ್ ಅವರಿಗೆ ಪ್ರಮುಖ ಖಾತೆ ಖಚಿತ ಎಂಬ ಮಾತು ಸಾಮಾಜಿಕ ವಲಯದಲ್ಲಿ ಜನಜನಿತವಾಗುವಷ್ಟು ಅವರು ತಮ್ಮ ವರ್ಚಸ್ಸನ್ನು ಕಳೆದ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ವೃದ್ಧಿಸಿಕೊಂಡಿದ್ದರು. ಈ ಹಿಂದಿನ ಸರ್ಕಾರದಲ್ಲಿ ಅವರು ಪ್ರಮುಖ ಗೃಹ ಇಲಾಖೆಯ ನಂತರ ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಈಗ ಇಂಧನ ಖಾತೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಆರು ಬಾರಿ ಶಾಸಕರಾಗಿದ್ದರೂ, ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಲ್ಲಿ 2003ರಿಂದ ಸತತ ನಾಲ್ಕು ಬಾರಿ ಪುನರಾಯ್ಕೆಯಾಗುವ ಮೂಲಕ ಸೋಲಿಲ್ಲದ ಸರದಾರ ಎಂದೇ ಖ್ಯಾತರಾಗಿರುವ ಕೆ.ಜೆ ಜಾರ್ಜ್ ಅವರ ಬದುಕು ಮತ್ತು ಕರ್ನಾಟಕ ರಾಜಕೀಯದಲ್ಲಿ ಅವರು ಕಂಡ ಯಶಸ್ಸು ಸಾಕಷ್ಟು ರೋಚಕ.

ಕೆ.ಜೆ ಜಾರ್ಜ್ ಅವರ ಪೂರ್ಣ ಹೆಸರು ಕೇಳಚಂದ್ರ ಜೋಸೆಫ್ ಜಾರ್ಜ್. ನನಾಯ ಸಿರಿಯನ್ ಜಾಕೋಬೈಟ್ ಕ್ರಿಶ್ಚಿಯನ್ ಸಮುದಾಯದ ಜೋಸೆಫ್ ಕೇಳಚಂದ್ರ ಚಾಕೋ ಮತ್ತು ಮರಿಯಮ್ಮ ದಂಪತಿ ಪುತ್ರನಾಗಿ 1946ರಂದು ಕೇರಳದ ಕೊಟ್ಟಾಯಂನ ಚಿಂಗವನಂನಲ್ಲಿ ಆಗಸ್ಟ್ ತಿಂಗಳಲ್ಲಿ ಅವರು ಜನಿಸಿದರು. ಈ ಕುಟುಂಬ 1960ರ ಸುಮಾರಿಗೆ ಕೊಡಗಿಗೆ ಬಂದು ನೆಲೆಸಿತ್ತು.

ಬಾಲ್ಯವನ್ನು ಕೊಡಗಿನಲ್ಲೇ ಕಳೆದ ಜಾರ್ಜ್ 1968ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಗೋಣಿಕೊಪ್ಪಲು ಪಟ್ಟಣದಿಂದ ಆರಂಭಿಸಿದರು. 1969ರಲ್ಲಿ ಗೋಣಿಕೊಪ್ಪಲು ಪಟ್ಟಣದ ಯುವ ಕಾಂಗ್ರೆಸ್ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಿದರು. 1971-77ರವರೆಗೆ ಇಲ್ಲಿನ ವಿರಾಜಪೇಟೆ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿಭಾಯಿಸಿದರು.

1975-78ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಖಜಾಂಚಿಯಾಗಿ, 1982-85ರವರೆಗೆ ಕರ್ನಾಟಕ ಯುವ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದರು. ತಮ್ಮ 37ನೇ ವಯಸ್ಸಿನಲ್ಲಿ 1983ರ ವಿಧಾನಸಭೆ ಚುನಾವಣೆಯಲ್ಲಿ ಆಗಿನ ಭಾರತಿನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಾರ್ಜ್ ಸ್ಪರ್ಧಿಸಿದ್ದರು. ಆದರೆ ಮೊದಲ ಚುನಾವಣೆಯಲ್ಲೇ ಅವರಿಗೆ ಸೋಲು ಎದುರಾಯಿತು. ಜಾರ್ಜ್ ಫರ್ನಾಂಡಿಸ್ ಸಹೋದರ ಜನತಾ ಪಾರ್ಟಿಯ ಮೈಕಲ್ ಫರ್ನಾಂಡಿಸ್ ವಿರುದ್ಧ ಅವರು ಸೋಲು ಕಂಡರು.

ಇದನ್ನೂ ಓದಿ: ಮುಸ್ಲಿಂ ಸಮುದಾಯಕ್ಕೆ ಸೇರಿದ ಮೊದಲ ಸ್ಪೀಕರ್ ಯು.ಟಿ. ಖಾದರ್

1985ರಲ್ಲಿ ನಡೆದ ಚುನಾವಣೆಯಲ್ಲಿ ಬೆಂಗಳೂರಿನ ಇದೇ ಭಾರತಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಮೊದಲ ಬಾರಿಗೆ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದರು. 1989-94ರವರೆಗೆ ಮತ್ತೊಂದು ಅವಧಿಗೆ ಭಾರತಿನಗರ ವಿಧಾನಸಭಾ ಕ್ಷೇತ್ರ ಪ್ರತಿನಿಧಿಸಿ ಗೆದ್ದರು. ಕಳೆದ ಐದು ದಶಕಗಳ ರಾಜಕೀಯ ಜೀವನದಲ್ಲಿ ಅನೇಕ ಏಳು ಬೀಳುಗಳನ್ನು ಸಹ ಕೆಜೆ ಜಾರ್ಜ್ ಕಂಡಿದ್ದಾರೆ. ಹಲವು ಮಹತ್ವದ ಖಾತೆಗಳನ್ನು ನಿಭಾಯಿಸಿದ್ದಾರೆ. ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸಾರಿಗೆ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಎಸ್.ಬಂಗಾರಪ್ಪ ಸರ್ಕಾರದಲ್ಲಿ ವಸತಿ ಮತ್ತು ನಗರಾಭಿವೃದ್ಧಿ ಖಾತೆ ಕ್ಯಾಬಿನೆಟ್ ಸಚಿವರಾಗಿ ಸೇವೆ ಸಲ್ಲಿಸಿದ ಹೆಗ್ಗಳಿಕೆ ಕೆಜೆ ಜಾರ್ಜ್ ಅವರಿಗಿದೆ.

1994ರಲ್ಲಿ ಕಾಂಗ್ರೆಸ್ ತ್ಯಜಿಸಿ ಬಂಗಾರಪ್ಪನವರ ಕರ್ನಾಟಕ ಕಾಂಗ್ರೆಸ್ ಪಕ್ಷ ಸೇರಿದ್ದ ಜಾರ್ಜ್ ಮತ್ತೊಮ್ಮೆ ಸೋಲು ಕಾಣುವಂತಾಗಿತ್ತು. ಈ ಸೋಲಿನಿಂದ ಶೀಘ್ರವೇ ಸುಧಾರಿಸಿದ್ದ ಜಾರ್ಜ್ ಮತ್ತೆ ಮಾತೃ ಪಕ್ಷಕ್ಕೆ ಹಿಂತಿರುಗಿದ್ದರು. ಸೋನಿಯಾ ಗಾಂಧಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡರು. ಅವರ ಕುಟುಂಬಕ್ಕೂ ಹತ್ತಿರವಾಗುವ ಮೂಲಕ ರಾಜ್ಯ ಕಾಂಗ್ರೆಸ್‌ನಲ್ಲಿ ಅಜಾತಶತ್ರುವಾಗಿ ಬೆಳೆದುನಿಂತಿದ್ದಾರೆ.

2013ರಲ್ಲಿ ಮೊದಲ ಬಾರಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸರ್ಕಾರ ರಚಿಸಿದಾಗ ಕೆ.ಜೆ ಜಾರ್ಜ್ ಅವರಿಗೆ ಮಹತ್ವದ ಗೃಹ ಇಲಾಖೆಯ ಜವಾಬ್ದಾರಿ ನೀಡಲಾಗಿತ್ತು. ಆದರೆ, ಈ ವೇಳೆ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣ ದೊಡ್ಡ ಮಟ್ಟದ ಸದ್ದು ಮಾಡಿತ್ತು. ಗಣಪತಿ ಆತ್ಮಹತ್ಯೆಗೆ ಜಾರ್ಜ್ ಅವರೇ ಕಾರಣ ಎಂದು ವಿರೋಧ ಪಕ್ಷಗಳ ನಾಯಕರು ವಾಗ್ದಾಳಿ ನಡೆಸಿದ್ದರು. ಅಲ್ಲದೆ, ಅವರ ರಾಜೀನಾಮೆಗೂ ಒತ್ತಾಯಿಸಿದ್ದರು. ಹೀಗಾಗಿ ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದು ಜಾರ್ಜ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಪ್ರಕರಣದ ತನಿಖೆ ನಡೆಸಿದ ಸಿಬಿಐ ಪೊಲೀಸರು ಕೊನೆಗೂ ಜಾರ್ಜ್ ಅವರಿಗೆ ಕ್ಲೀನ್‌ಚಿಟ್ ನೀಡಿತ್ತು. ಅದೇ ಸರ್ಕಾರದಲ್ಲಿ ನಂತರದ ಅವಧಿಯಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. 2018ರ ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವರಾಗಿದ್ದ ಜಾರ್ಜ್ ಅವರಿಗೆ ಪ್ರಸಕ್ತ ಸಂಪುಟದಲ್ಲಿ ಇಂಧನ ಖಾತೆ ಸಿಕ್ಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...