Homeಕರ್ನಾಟಕನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

- Advertisement -
- Advertisement -

ಗಡಿ ಜಿಲ್ಲೆ, ಕರ್ನಾಟಕದ ಕಿರೀಟ ಎಂದೇ ಖ್ಯಾತವಾದ ಬೀದರ್‌ಗೆ ಎರಡೆರಡು ಸಚಿವ ಸ್ಥಾನ ನೀಡಲಾಗಿದೆ. ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಬೀದರ್ ಶಾಸಕ ರಹೀಂ ಖಾನ್ ಇವರಿಬ್ಬರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ರಹೀಂ ಖಾನ್ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಿದ ವಿದ್ಯಮಾನ ಬಹಳ ಕುತೂಹಲಕಾರಿಯಾದದ್ದು. ಏಕೆಂದರೆ ಬೀದರ್ ಹಾಗೂ ಕಲಬುರಗಿ ಭಾಗದ ಮುಸ್ಲಿಂ ಸಮುದಾಯ ಹೈದರಾಬಾದ್‌ನತ್ತ ಹೆಚ್ಚು ಒಲವು ಹೊಂದಿರುತ್ತಾರೆ. ಆ ಭಾಗದ ಜನರಿಗೆ ಬೆಂಗಳೂರಿಗಿಂತ ಹೈದರಾಬಾದ್ ಜೊತೆಗೆ ನಿಕಟ ಸಂಪರ್ಕವಿರುತ್ತದೆ. ಹಾಗಾಗಿ ವ್ಯಾಪಾರ-ವಹಿವಾಟುಗಳಿಗೆ ಆ ನಗರಕ್ಕೆ ಅವರ ಹೆಚ್ಚು ಅವಲಂಬನೆ. ಆದರೆ ರಹೀಂ ಖಾನ್ ಅವರ ತಂದೆಯ ಸೋದರ ಸಂಬಂಧಿಯೊಬ್ಬರು ಮಾತ್ರ ಬೆಂಗಳೂರಿನತ್ತ ಮುಖ ಮಾಡಿದ್ದರು. ಅವರು ವಿಧಾನಸೌಧದಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದರು. ಆ ವೇಳೆ ತನ್ನ ಸಂಬಂಧಿಗಳಿಗೆ ಕಾಲೇಜು ತೆರೆಯಲು ಸರ್ಕಾರದ ಮಟ್ಟದಲ್ಲಿ ಸಹಾಯ ಮಾಡಿದ್ದರು. ಆಗಲೇ ರಹೀಂ ಖಾನ್ ಹಾಗೂ ಅವರ ತಂದೆ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು.

ಆ ಬಳಿಕ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಸಂಪರ್ಕದೊಂದಿಗೆ ರಹೀಂ ಖಾನ್ ಅವರು ಹತ್ತಾರು ಕಾಲೇಜುಗಳನ್ನು ಸ್ಥಾಪನೆ ಮಾಡಿದರು. ಬೆಂಗಳೂರು, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಕಾಲೇಜುಗಳನ್ನು ತೆರೆದರು. ಅತಿ ಹೆಚ್ಚು ನರ್ಸಿಂಗ್ ಕಾಲೇಜುಗಳನ್ನು ತೆರೆದು, ಈ ಶಿಕ್ಷಣ ಸಂಸ್ಥೆಗಳನ್ನೇ ತಮ್ಮ ಆದಾಯದ ಮೂಲ ಮಾಡಿಕೊಂಡ ರಹೀಂ ಖಾನ್ ಆರ್ಥಿಕವಾಗಿ ಪ್ರಬಲರಾದರು.

ಈಶ್ವರ ಖಂಡ್ರೆ

ರಹೀಂ ಖಾನ್ ಅವರು ಎಸ್‌ಎಸ್‌ಎಲ್‌ಸಿವರೆಗೆ ಮಾತ್ರ ಓದಿದ್ದಾರೆ. ಶೈಕ್ಷಣಿಕವಾಗಿ ಯಾವುದೇ ಪದವಿ ಗಳಿಸಿಲ್ಲವಾದರೂ ರೂಹಿ ಹೆಸರಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ. ಇವರಿಗೆ ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳು ಇದ್ದಾರೆ.

ಆರ್ಥಿಕವಾಗಿ ಸಾಕಷ್ಟು ಬಲಾಢ್ಯರಾಗಿ ಬೆಳೆದ ರಹೀಂ ಖಾನ್ ಅವರು ರಾಜಕೀಯದತ್ತ ಮುಖ ಮಾಡಿದರು. ಕಲ್ಯಾಣ ಕರ್ನಾಟಕ ಭಾಗದ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಅವರಿಗೆ ಯುವಜನ ಮತ್ತು ಕ್ರೀಡಾ ಇಲಾಖೆ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೆ ಸಚಿವರಾಗಿದ್ದು ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಹೀಂ ಖಾನ್ ಅವರು ಗೆದ್ದಿದ್ದು ಪಕ್ಷದ ವರ್ಚಸ್ಸಿಗಿಂತ ಅವರ ಸ್ವಂತ ವರ್ಚಿಸ್ಸಿನ ಮೇಲೆ ಎಂದು ಹೇಳಬಹುದು. ಏಕೆಂದರೆ ಅವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡವರು. ಎದುರಾಳಿ ಪಕ್ಷಗಳ ಮುಖಂಡರು ಅವರನ್ನು ಎಷ್ಟು ಕಟುವಾಗಿ ಟೀಕಿಸಿದರೂ ಅವರು ಎಂದಿಗೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದವರಲ್ಲ; ವಿವಾದಗಳಿಂದ ಯಾವಾಗಲೂ ದೂರವುಳಿಯುವ ರಹೀಂ ಖಾನ್, ರಾಜಕೀಯ ವಿರೋಧಿಗಳ ಜೊತೆ ಎಂದಿಗೂ ವೈರತ್ವ ಕಟ್ಟಿಕೊಂಡಿಲ್ಲ. ಹೀಗಾಗಿ, ಸಹಜವಾಗಿ ಅವರು ಕ್ಷೇತ್ರದಲ್ಲಿ ಬಹಳ ವರ್ಚಸ್ವಿ ನಾಯಕರಾಗಿ ಬೆಳೆದಿದ್ದಾರೆ.

ಜಿಲ್ಲಾ ಕೇಂದ್ರ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 2,20,000 ಮತದಾರರಿದ್ದು ಅವರಲ್ಲಿ 80,000ದಷ್ಟು ಮುಸ್ಲಿಂ ಮತದಾರರಿದ್ದಾರೆ. ರಹೀಂ ಖಾನ್ ಅವರು ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡು ಯಾವತ್ತೂ ರಾಜಕಾರಣ ಮಾಡಿದವರಲ್ಲ. ಅವರು ತಮ್ಮ ಸಮುದಾಯದ ಜನಗಳ ಜೊತೆಗಿರುವಷ್ಟೇ ಬಹುಸಂಖ್ಯಾತ ಹಿಂದೂಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗೆಯೇ ಸಾರ್ವಜನಿಕವಾಗಿ ಧಾರ್ಮಿಕ ಆಚರಣೆಗಳಿಂದಲೂ ದೂರ ಉಳಿಯುವುದರಿಂದ, ಕೆಲವು ಸಂಪ್ರದಾಯವಾದಿ ಮುಸ್ಲಿಮರ ಟೀಕೆಗೆ ಗುರಿಯಾಗಿದ್ದೂ ಇದೆ. ಕ್ಷೇತ್ರದಲ್ಲಿ ಈ ಹಿಂದೆ ಕೋಮು ಗಲಭೆಗಳು ಘಟಿಸಿದ ಸಂದರ್ಭದಲ್ಲಿ ರಹೀಂ ಖಾನ್ ಅವರು ಎಂದಿಗೂ ಒಂದು ಧರ್ಮದ ಪಕ್ಷ ವಹಿಸಿದವರಲ್ಲ; ಬದಲಿಗೆ ಅಧಿಕಾರಿಗಳಿಗೆ ಪೂರ್ತಿ ಜವಾಬ್ದಾರಿ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಕ್ರಮಗಳನ್ನು ಹೆಚ್ಚು ನೆಚ್ಚಿಕೊಳ್ಳುತ್ತಿದ್ದರು ಎಂಬ ಮಾತು ಸಾಮಾನ್ಯವಾಗಿದೆ. ಈ ನಿಟ್ಟನಲ್ಲಿ ಅವರು ಎಲ್ಲಾ ಸಮುದಾಯಗಳಿಗೂ ಸಲ್ಲುವ ನಾಯಕರಾಗಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ…

ಕ್ಷೇತ್ರದಲ್ಲಿ ಯಾರೇ ಹಣಕಾಸಿನ ಸಹಾಯ ಕೇಳಿ ಬಂದರೂ ಅವರನ್ನು ರಹೀಂ ಖಾನ್ ಬರಿಗೈಯಿಂದ ಮರಳಿ ಕಳುಹಿಸಿದ ಉದಾಹರಣೆಗಳಿಲ್ಲ ಎಂಬ ಮಾತಿದೆ. ಹಿಂದೆ ಈ ಭಾಗದಲ್ಲಿ ಬರಗಾಲ ಬಂದಾಗ ಕ್ಷೇತ್ರದ ಅನೇಕ ಹಳ್ಳಿಗಳಿಗೆ ತಮ್ಮ ಜಮೀನಿನಲ್ಲಿನ ಬಾವಿಗಳಿಂದ ನೀರು ತುಂಬಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಅದಕ್ಕಾಗಿ ಈಗಲೂ ಅಲ್ಲಿಯ ಜನರು ರಹೀಂ ಖಾನ್ ಅವರನ್ನು ನೆನೆಯುತ್ತಾರೆ.

ಈ ಹಿಂದೆ ಬೀದರ್ ಜಿಲ್ಲಾಧಿಕಾರಿಯಾಗಿದ್ದ ಹರ್ಷ ಗುಪ್ತಾ ಅವರು 4,000 ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದರು. ಆ ಸಂದರ್ಭದಲ್ಲಿ ಜನರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೂ ರಹೀಂ ಖಾನ್ ಹರ್ಷ ಗುಪ್ತಾ ಅವರಿಗೆ ಪ್ರಶ್ನೆ ಮಾಡಲಿಲ್ಲ, ನಿಮಗೆ ಸರಿ ಅನಿಸಿದ್ದನ್ನು ಮಾಡಿ ಎಂದು ಹೇಳಿದರು. ಹೀಗೆ ಅಧಿಕಾರಿಗಳಿಗೆ ಹೆಚ್ಚಿನ ಮನ್ನಣೆ ನೀಡುತ್ತಾರೆ ಎನ್ನುತ್ತಾರೆ ಜನ. ಈ ಕಾರಣಕ್ಕಾಗಿ ರಹೀಂ ಖಾನ್ ಅವರ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನದ ಅಭಿಪ್ರಾಯವೂ ಇದೆ.

ರಾಜಕೀಯ ಹಾದಿ

2008ರಲ್ಲಿ ಬೀದರ್ ಉತ್ತರ ಮತಕ್ಷೇತ್ರದಲ್ಲಿ ರಹೀಂ ಖಾನ್ ಅವರು ಬಿಎಸ್‌ಪಿಯಿಂದ ಸ್ಪರ್ಧೆ ಮಾಡಿದ್ದರು. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು.

2009ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದರ್ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆಗ 2009ರಲ್ಲಿ ಉಪ ಚುನಾವಣೆಯಲ್ಲಿ ರಹೀಂ ಖಾನ್ ಅವರು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

2013ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಅವರು ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ರಹೀಂ ಖಾನ್ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಸೋಲು ಕಂಡರು.

ಗುರುಪಾದಪ್ಪ ನಾಗಮಾರಪಳ್ಳಿ

2013ರಲ್ಲಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅಕಾಲಿಕವಾಗಿ ನಿಧನರಾದರು. ಆಗ ನಡೆದ ಉಪಚುನಾವಣೆಯಲ್ಲಿ ರಹೀಂ ಖಾನ್ ಅವರು ಗೆಲುವು ಕಂಡರು.

2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತ್ತೆ ರಹೀಂ ಖಾನ್ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ರಹೀಮ್ ಖಾನ್ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಹೀಂ ಖಾನ್ ಅವರು ಡಿಸೆಂಬರ್ 22, 2018ರಿಂದ ಜುಲೈ 8, 2019ರವರೆಗೆ ಕರ್ನಾಟಕದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.

27 ಮೇ 2023ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಹೀಂ ಖಾನ್, ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರಾಗಿ ನೇತೃತ್ವ ವಹಿಸಿಕೊಂಡಿದ್ದಾರೆ.

ಹಜ್ ಮುಖ್ಯಸ್ಥರಾಗಿರುವ ರಹೀಂ ಖಾನ್ ಅವರು ಈಗ ತಮ್ಮ ಸಮುದಾಯಕ್ಕೆ ಯಾವೆಲ್ಲಾ ಕೊಡುಗೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಮುಸ್ಲಿಂ ಸಮುದಾಯದವರೇ ಕೇಳುತ್ತಿದ್ದಾರೆ. ಹಿಂದೂಗಳ ಮತಗಳಿಸಲು ತಮ್ಮ ಮುಸ್ಲಿಂ ಐಡೆಂಟಿಟಿಯನ್ನು ರಹೀಂ ಖಾನ್ ಮರೆಮಾಚುತ್ತಾರೆ ಎನ್ನುವ ಟೀಕೆಗಳನ್ನು ಕೆಲವು ಮುಸ್ಲಿಂ ನಾಯಕರು ಆಗಾಗ ಮಾಡುತ್ತಿರುತ್ತಾರೆ. ಏಕಕಾಲಕ್ಕೆ ಟೀಕೆ ಮತ್ತು ಹೊಗಳಿಕೆ ಎರಡನ್ನೂ ಪಡೆಯುವ ರಹೀಂ ಖಾನ್ ಅವರು ಈಗ ತಮ್ಮ ಮೇಲಿರುವ ಎರಡೂ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...