Homeಕರ್ನಾಟಕನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

- Advertisement -
- Advertisement -

ಗಡಿ ಜಿಲ್ಲೆ, ಕರ್ನಾಟಕದ ಕಿರೀಟ ಎಂದೇ ಖ್ಯಾತವಾದ ಬೀದರ್‌ಗೆ ಎರಡೆರಡು ಸಚಿವ ಸ್ಥಾನ ನೀಡಲಾಗಿದೆ. ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಬೀದರ್ ಶಾಸಕ ರಹೀಂ ಖಾನ್ ಇವರಿಬ್ಬರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ರಹೀಂ ಖಾನ್ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಿದ ವಿದ್ಯಮಾನ ಬಹಳ ಕುತೂಹಲಕಾರಿಯಾದದ್ದು. ಏಕೆಂದರೆ ಬೀದರ್ ಹಾಗೂ ಕಲಬುರಗಿ ಭಾಗದ ಮುಸ್ಲಿಂ ಸಮುದಾಯ ಹೈದರಾಬಾದ್‌ನತ್ತ ಹೆಚ್ಚು ಒಲವು ಹೊಂದಿರುತ್ತಾರೆ. ಆ ಭಾಗದ ಜನರಿಗೆ ಬೆಂಗಳೂರಿಗಿಂತ ಹೈದರಾಬಾದ್ ಜೊತೆಗೆ ನಿಕಟ ಸಂಪರ್ಕವಿರುತ್ತದೆ. ಹಾಗಾಗಿ ವ್ಯಾಪಾರ-ವಹಿವಾಟುಗಳಿಗೆ ಆ ನಗರಕ್ಕೆ ಅವರ ಹೆಚ್ಚು ಅವಲಂಬನೆ. ಆದರೆ ರಹೀಂ ಖಾನ್ ಅವರ ತಂದೆಯ ಸೋದರ ಸಂಬಂಧಿಯೊಬ್ಬರು ಮಾತ್ರ ಬೆಂಗಳೂರಿನತ್ತ ಮುಖ ಮಾಡಿದ್ದರು. ಅವರು ವಿಧಾನಸೌಧದಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದರು. ಆ ವೇಳೆ ತನ್ನ ಸಂಬಂಧಿಗಳಿಗೆ ಕಾಲೇಜು ತೆರೆಯಲು ಸರ್ಕಾರದ ಮಟ್ಟದಲ್ಲಿ ಸಹಾಯ ಮಾಡಿದ್ದರು. ಆಗಲೇ ರಹೀಂ ಖಾನ್ ಹಾಗೂ ಅವರ ತಂದೆ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು.

ಆ ಬಳಿಕ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಸಂಪರ್ಕದೊಂದಿಗೆ ರಹೀಂ ಖಾನ್ ಅವರು ಹತ್ತಾರು ಕಾಲೇಜುಗಳನ್ನು ಸ್ಥಾಪನೆ ಮಾಡಿದರು. ಬೆಂಗಳೂರು, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಕಾಲೇಜುಗಳನ್ನು ತೆರೆದರು. ಅತಿ ಹೆಚ್ಚು ನರ್ಸಿಂಗ್ ಕಾಲೇಜುಗಳನ್ನು ತೆರೆದು, ಈ ಶಿಕ್ಷಣ ಸಂಸ್ಥೆಗಳನ್ನೇ ತಮ್ಮ ಆದಾಯದ ಮೂಲ ಮಾಡಿಕೊಂಡ ರಹೀಂ ಖಾನ್ ಆರ್ಥಿಕವಾಗಿ ಪ್ರಬಲರಾದರು.

ಈಶ್ವರ ಖಂಡ್ರೆ

ರಹೀಂ ಖಾನ್ ಅವರು ಎಸ್‌ಎಸ್‌ಎಲ್‌ಸಿವರೆಗೆ ಮಾತ್ರ ಓದಿದ್ದಾರೆ. ಶೈಕ್ಷಣಿಕವಾಗಿ ಯಾವುದೇ ಪದವಿ ಗಳಿಸಿಲ್ಲವಾದರೂ ರೂಹಿ ಹೆಸರಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ. ಇವರಿಗೆ ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳು ಇದ್ದಾರೆ.

ಆರ್ಥಿಕವಾಗಿ ಸಾಕಷ್ಟು ಬಲಾಢ್ಯರಾಗಿ ಬೆಳೆದ ರಹೀಂ ಖಾನ್ ಅವರು ರಾಜಕೀಯದತ್ತ ಮುಖ ಮಾಡಿದರು. ಕಲ್ಯಾಣ ಕರ್ನಾಟಕ ಭಾಗದ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಅವರಿಗೆ ಯುವಜನ ಮತ್ತು ಕ್ರೀಡಾ ಇಲಾಖೆ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೆ ಸಚಿವರಾಗಿದ್ದು ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಹೀಂ ಖಾನ್ ಅವರು ಗೆದ್ದಿದ್ದು ಪಕ್ಷದ ವರ್ಚಸ್ಸಿಗಿಂತ ಅವರ ಸ್ವಂತ ವರ್ಚಿಸ್ಸಿನ ಮೇಲೆ ಎಂದು ಹೇಳಬಹುದು. ಏಕೆಂದರೆ ಅವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡವರು. ಎದುರಾಳಿ ಪಕ್ಷಗಳ ಮುಖಂಡರು ಅವರನ್ನು ಎಷ್ಟು ಕಟುವಾಗಿ ಟೀಕಿಸಿದರೂ ಅವರು ಎಂದಿಗೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದವರಲ್ಲ; ವಿವಾದಗಳಿಂದ ಯಾವಾಗಲೂ ದೂರವುಳಿಯುವ ರಹೀಂ ಖಾನ್, ರಾಜಕೀಯ ವಿರೋಧಿಗಳ ಜೊತೆ ಎಂದಿಗೂ ವೈರತ್ವ ಕಟ್ಟಿಕೊಂಡಿಲ್ಲ. ಹೀಗಾಗಿ, ಸಹಜವಾಗಿ ಅವರು ಕ್ಷೇತ್ರದಲ್ಲಿ ಬಹಳ ವರ್ಚಸ್ವಿ ನಾಯಕರಾಗಿ ಬೆಳೆದಿದ್ದಾರೆ.

ಜಿಲ್ಲಾ ಕೇಂದ್ರ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 2,20,000 ಮತದಾರರಿದ್ದು ಅವರಲ್ಲಿ 80,000ದಷ್ಟು ಮುಸ್ಲಿಂ ಮತದಾರರಿದ್ದಾರೆ. ರಹೀಂ ಖಾನ್ ಅವರು ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡು ಯಾವತ್ತೂ ರಾಜಕಾರಣ ಮಾಡಿದವರಲ್ಲ. ಅವರು ತಮ್ಮ ಸಮುದಾಯದ ಜನಗಳ ಜೊತೆಗಿರುವಷ್ಟೇ ಬಹುಸಂಖ್ಯಾತ ಹಿಂದೂಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗೆಯೇ ಸಾರ್ವಜನಿಕವಾಗಿ ಧಾರ್ಮಿಕ ಆಚರಣೆಗಳಿಂದಲೂ ದೂರ ಉಳಿಯುವುದರಿಂದ, ಕೆಲವು ಸಂಪ್ರದಾಯವಾದಿ ಮುಸ್ಲಿಮರ ಟೀಕೆಗೆ ಗುರಿಯಾಗಿದ್ದೂ ಇದೆ. ಕ್ಷೇತ್ರದಲ್ಲಿ ಈ ಹಿಂದೆ ಕೋಮು ಗಲಭೆಗಳು ಘಟಿಸಿದ ಸಂದರ್ಭದಲ್ಲಿ ರಹೀಂ ಖಾನ್ ಅವರು ಎಂದಿಗೂ ಒಂದು ಧರ್ಮದ ಪಕ್ಷ ವಹಿಸಿದವರಲ್ಲ; ಬದಲಿಗೆ ಅಧಿಕಾರಿಗಳಿಗೆ ಪೂರ್ತಿ ಜವಾಬ್ದಾರಿ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಕ್ರಮಗಳನ್ನು ಹೆಚ್ಚು ನೆಚ್ಚಿಕೊಳ್ಳುತ್ತಿದ್ದರು ಎಂಬ ಮಾತು ಸಾಮಾನ್ಯವಾಗಿದೆ. ಈ ನಿಟ್ಟನಲ್ಲಿ ಅವರು ಎಲ್ಲಾ ಸಮುದಾಯಗಳಿಗೂ ಸಲ್ಲುವ ನಾಯಕರಾಗಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ…

ಕ್ಷೇತ್ರದಲ್ಲಿ ಯಾರೇ ಹಣಕಾಸಿನ ಸಹಾಯ ಕೇಳಿ ಬಂದರೂ ಅವರನ್ನು ರಹೀಂ ಖಾನ್ ಬರಿಗೈಯಿಂದ ಮರಳಿ ಕಳುಹಿಸಿದ ಉದಾಹರಣೆಗಳಿಲ್ಲ ಎಂಬ ಮಾತಿದೆ. ಹಿಂದೆ ಈ ಭಾಗದಲ್ಲಿ ಬರಗಾಲ ಬಂದಾಗ ಕ್ಷೇತ್ರದ ಅನೇಕ ಹಳ್ಳಿಗಳಿಗೆ ತಮ್ಮ ಜಮೀನಿನಲ್ಲಿನ ಬಾವಿಗಳಿಂದ ನೀರು ತುಂಬಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಅದಕ್ಕಾಗಿ ಈಗಲೂ ಅಲ್ಲಿಯ ಜನರು ರಹೀಂ ಖಾನ್ ಅವರನ್ನು ನೆನೆಯುತ್ತಾರೆ.

ಈ ಹಿಂದೆ ಬೀದರ್ ಜಿಲ್ಲಾಧಿಕಾರಿಯಾಗಿದ್ದ ಹರ್ಷ ಗುಪ್ತಾ ಅವರು 4,000 ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದರು. ಆ ಸಂದರ್ಭದಲ್ಲಿ ಜನರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೂ ರಹೀಂ ಖಾನ್ ಹರ್ಷ ಗುಪ್ತಾ ಅವರಿಗೆ ಪ್ರಶ್ನೆ ಮಾಡಲಿಲ್ಲ, ನಿಮಗೆ ಸರಿ ಅನಿಸಿದ್ದನ್ನು ಮಾಡಿ ಎಂದು ಹೇಳಿದರು. ಹೀಗೆ ಅಧಿಕಾರಿಗಳಿಗೆ ಹೆಚ್ಚಿನ ಮನ್ನಣೆ ನೀಡುತ್ತಾರೆ ಎನ್ನುತ್ತಾರೆ ಜನ. ಈ ಕಾರಣಕ್ಕಾಗಿ ರಹೀಂ ಖಾನ್ ಅವರ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನದ ಅಭಿಪ್ರಾಯವೂ ಇದೆ.

ರಾಜಕೀಯ ಹಾದಿ

2008ರಲ್ಲಿ ಬೀದರ್ ಉತ್ತರ ಮತಕ್ಷೇತ್ರದಲ್ಲಿ ರಹೀಂ ಖಾನ್ ಅವರು ಬಿಎಸ್‌ಪಿಯಿಂದ ಸ್ಪರ್ಧೆ ಮಾಡಿದ್ದರು. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು.

2009ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದರ್ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆಗ 2009ರಲ್ಲಿ ಉಪ ಚುನಾವಣೆಯಲ್ಲಿ ರಹೀಂ ಖಾನ್ ಅವರು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

2013ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಅವರು ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ರಹೀಂ ಖಾನ್ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಸೋಲು ಕಂಡರು.

ಗುರುಪಾದಪ್ಪ ನಾಗಮಾರಪಳ್ಳಿ

2013ರಲ್ಲಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅಕಾಲಿಕವಾಗಿ ನಿಧನರಾದರು. ಆಗ ನಡೆದ ಉಪಚುನಾವಣೆಯಲ್ಲಿ ರಹೀಂ ಖಾನ್ ಅವರು ಗೆಲುವು ಕಂಡರು.

2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತ್ತೆ ರಹೀಂ ಖಾನ್ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ರಹೀಮ್ ಖಾನ್ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಹೀಂ ಖಾನ್ ಅವರು ಡಿಸೆಂಬರ್ 22, 2018ರಿಂದ ಜುಲೈ 8, 2019ರವರೆಗೆ ಕರ್ನಾಟಕದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.

27 ಮೇ 2023ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಹೀಂ ಖಾನ್, ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರಾಗಿ ನೇತೃತ್ವ ವಹಿಸಿಕೊಂಡಿದ್ದಾರೆ.

ಹಜ್ ಮುಖ್ಯಸ್ಥರಾಗಿರುವ ರಹೀಂ ಖಾನ್ ಅವರು ಈಗ ತಮ್ಮ ಸಮುದಾಯಕ್ಕೆ ಯಾವೆಲ್ಲಾ ಕೊಡುಗೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಮುಸ್ಲಿಂ ಸಮುದಾಯದವರೇ ಕೇಳುತ್ತಿದ್ದಾರೆ. ಹಿಂದೂಗಳ ಮತಗಳಿಸಲು ತಮ್ಮ ಮುಸ್ಲಿಂ ಐಡೆಂಟಿಟಿಯನ್ನು ರಹೀಂ ಖಾನ್ ಮರೆಮಾಚುತ್ತಾರೆ ಎನ್ನುವ ಟೀಕೆಗಳನ್ನು ಕೆಲವು ಮುಸ್ಲಿಂ ನಾಯಕರು ಆಗಾಗ ಮಾಡುತ್ತಿರುತ್ತಾರೆ. ಏಕಕಾಲಕ್ಕೆ ಟೀಕೆ ಮತ್ತು ಹೊಗಳಿಕೆ ಎರಡನ್ನೂ ಪಡೆಯುವ ರಹೀಂ ಖಾನ್ ಅವರು ಈಗ ತಮ್ಮ ಮೇಲಿರುವ ಎರಡೂ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...