Homeಕರ್ನಾಟಕನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

ನಮ್ಮ ಸಚಿವರಿವರು; ಸರಳ ರಾಜಕಾರಣಿ ರಹೀಂ ಖಾನ್ ಪೌರಾಡಳಿತ ಸಚಿವ ಮತ್ತು ಹಜ್ ಮುಖ್ಯಸ್ಥ

- Advertisement -
- Advertisement -

ಗಡಿ ಜಿಲ್ಲೆ, ಕರ್ನಾಟಕದ ಕಿರೀಟ ಎಂದೇ ಖ್ಯಾತವಾದ ಬೀದರ್‌ಗೆ ಎರಡೆರಡು ಸಚಿವ ಸ್ಥಾನ ನೀಡಲಾಗಿದೆ. ಭಾಲ್ಕಿ ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಬೀದರ್ ಶಾಸಕ ರಹೀಂ ಖಾನ್ ಇವರಿಬ್ಬರೂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟದಲ್ಲಿ ಸ್ಥಾನ ಪಡೆದಿದ್ದಾರೆ.

ರಹೀಂ ಖಾನ್ ಅವರು ರಾಜ್ಯ ರಾಜಕಾರಣಕ್ಕೆ ಪ್ರವೇಶ ಮಾಡಿದ ವಿದ್ಯಮಾನ ಬಹಳ ಕುತೂಹಲಕಾರಿಯಾದದ್ದು. ಏಕೆಂದರೆ ಬೀದರ್ ಹಾಗೂ ಕಲಬುರಗಿ ಭಾಗದ ಮುಸ್ಲಿಂ ಸಮುದಾಯ ಹೈದರಾಬಾದ್‌ನತ್ತ ಹೆಚ್ಚು ಒಲವು ಹೊಂದಿರುತ್ತಾರೆ. ಆ ಭಾಗದ ಜನರಿಗೆ ಬೆಂಗಳೂರಿಗಿಂತ ಹೈದರಾಬಾದ್ ಜೊತೆಗೆ ನಿಕಟ ಸಂಪರ್ಕವಿರುತ್ತದೆ. ಹಾಗಾಗಿ ವ್ಯಾಪಾರ-ವಹಿವಾಟುಗಳಿಗೆ ಆ ನಗರಕ್ಕೆ ಅವರ ಹೆಚ್ಚು ಅವಲಂಬನೆ. ಆದರೆ ರಹೀಂ ಖಾನ್ ಅವರ ತಂದೆಯ ಸೋದರ ಸಂಬಂಧಿಯೊಬ್ಬರು ಮಾತ್ರ ಬೆಂಗಳೂರಿನತ್ತ ಮುಖ ಮಾಡಿದ್ದರು. ಅವರು ವಿಧಾನಸೌಧದಲ್ಲಿ ಸರ್ಕಾರಿ ಉದ್ಯೋಗಿಯಾಗಿದ್ದರು. ಆ ವೇಳೆ ತನ್ನ ಸಂಬಂಧಿಗಳಿಗೆ ಕಾಲೇಜು ತೆರೆಯಲು ಸರ್ಕಾರದ ಮಟ್ಟದಲ್ಲಿ ಸಹಾಯ ಮಾಡಿದ್ದರು. ಆಗಲೇ ರಹೀಂ ಖಾನ್ ಹಾಗೂ ಅವರ ತಂದೆ ಹಲವು ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಿದರು.

ಆ ಬಳಿಕ ಕಾಂಗ್ರೆಸ್ ನಾಯಕ ಡಿ.ಕೆ ಶಿವಕುಮಾರ್ ಅವರ ಸಂಪರ್ಕದೊಂದಿಗೆ ರಹೀಂ ಖಾನ್ ಅವರು ಹತ್ತಾರು ಕಾಲೇಜುಗಳನ್ನು ಸ್ಥಾಪನೆ ಮಾಡಿದರು. ಬೆಂಗಳೂರು, ಕಲಬುರಗಿ ಹಾಗೂ ಬೀದರ ಜಿಲ್ಲೆಗಳಲ್ಲಿ ಕಾಲೇಜುಗಳನ್ನು ತೆರೆದರು. ಅತಿ ಹೆಚ್ಚು ನರ್ಸಿಂಗ್ ಕಾಲೇಜುಗಳನ್ನು ತೆರೆದು, ಈ ಶಿಕ್ಷಣ ಸಂಸ್ಥೆಗಳನ್ನೇ ತಮ್ಮ ಆದಾಯದ ಮೂಲ ಮಾಡಿಕೊಂಡ ರಹೀಂ ಖಾನ್ ಆರ್ಥಿಕವಾಗಿ ಪ್ರಬಲರಾದರು.

ಈಶ್ವರ ಖಂಡ್ರೆ

ರಹೀಂ ಖಾನ್ ಅವರು ಎಸ್‌ಎಸ್‌ಎಲ್‌ಸಿವರೆಗೆ ಮಾತ್ರ ಓದಿದ್ದಾರೆ. ಶೈಕ್ಷಣಿಕವಾಗಿ ಯಾವುದೇ ಪದವಿ ಗಳಿಸಿಲ್ಲವಾದರೂ ರೂಹಿ ಹೆಸರಿನಲ್ಲಿ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಕಟ್ಟಿದ ಶ್ರೇಯಸ್ಸಿಗೆ ಪಾತ್ರರಾಗಿದ್ದಾರೆ. ಇವರಿಗೆ ಇಬ್ಬರು ಪತ್ನಿಯರು ಹಾಗೂ ಆರು ಮಕ್ಕಳು ಇದ್ದಾರೆ.

ಆರ್ಥಿಕವಾಗಿ ಸಾಕಷ್ಟು ಬಲಾಢ್ಯರಾಗಿ ಬೆಳೆದ ರಹೀಂ ಖಾನ್ ಅವರು ರಾಜಕೀಯದತ್ತ ಮುಖ ಮಾಡಿದರು. ಕಲ್ಯಾಣ ಕರ್ನಾಟಕ ಭಾಗದ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಿಂದ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅವರಿಗೆ ಎರಡನೇ ಬಾರಿಗೆ ಸಚಿವ ಸ್ಥಾನ ಒಲಿದು ಬಂದಿದೆ. ಈ ಹಿಂದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲೂ ಅವರಿಗೆ ಯುವಜನ ಮತ್ತು ಕ್ರೀಡಾ ಇಲಾಖೆ ಖಾತೆ ಕೊಡಲಾಗಿತ್ತು. ಈಗ ಸಿದ್ದರಾಮಯ್ಯ ಸರ್ಕಾರದಲ್ಲಿ ಮತ್ತೆ ಸಚಿವರಾಗಿದ್ದು ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರನ್ನಾಗಿ ಮಾಡಲಾಗಿದೆ.

ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ರಹೀಂ ಖಾನ್ ಅವರು ಗೆದ್ದಿದ್ದು ಪಕ್ಷದ ವರ್ಚಸ್ಸಿಗಿಂತ ಅವರ ಸ್ವಂತ ವರ್ಚಿಸ್ಸಿನ ಮೇಲೆ ಎಂದು ಹೇಳಬಹುದು. ಏಕೆಂದರೆ ಅವರು ಸರಳ ಸಜ್ಜನಿಕೆಯ ರಾಜಕಾರಣಿಯಾಗಿ ತಮ್ಮನ್ನು ತಾವು ಗುರುತಿಸಿಕೊಂಡವರು. ಎದುರಾಳಿ ಪಕ್ಷಗಳ ಮುಖಂಡರು ಅವರನ್ನು ಎಷ್ಟು ಕಟುವಾಗಿ ಟೀಕಿಸಿದರೂ ಅವರು ಎಂದಿಗೂ ತಾಳ್ಮೆ ಕಳೆದುಕೊಂಡು ಪ್ರತಿಕ್ರಿಯೆ ನೀಡಿದವರಲ್ಲ; ವಿವಾದಗಳಿಂದ ಯಾವಾಗಲೂ ದೂರವುಳಿಯುವ ರಹೀಂ ಖಾನ್, ರಾಜಕೀಯ ವಿರೋಧಿಗಳ ಜೊತೆ ಎಂದಿಗೂ ವೈರತ್ವ ಕಟ್ಟಿಕೊಂಡಿಲ್ಲ. ಹೀಗಾಗಿ, ಸಹಜವಾಗಿ ಅವರು ಕ್ಷೇತ್ರದಲ್ಲಿ ಬಹಳ ವರ್ಚಸ್ವಿ ನಾಯಕರಾಗಿ ಬೆಳೆದಿದ್ದಾರೆ.

ಜಿಲ್ಲಾ ಕೇಂದ್ರ ಬೀದರ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಸುಮಾರು 2,20,000 ಮತದಾರರಿದ್ದು ಅವರಲ್ಲಿ 80,000ದಷ್ಟು ಮುಸ್ಲಿಂ ಮತದಾರರಿದ್ದಾರೆ. ರಹೀಂ ಖಾನ್ ಅವರು ಕೇವಲ ಮುಸ್ಲಿಂ ಮತಗಳನ್ನು ನೆಚ್ಚಿಕೊಂಡು ಯಾವತ್ತೂ ರಾಜಕಾರಣ ಮಾಡಿದವರಲ್ಲ. ಅವರು ತಮ್ಮ ಸಮುದಾಯದ ಜನಗಳ ಜೊತೆಗಿರುವಷ್ಟೇ ಬಹುಸಂಖ್ಯಾತ ಹಿಂದೂಗಳೊಂದಿಗೆ ಉತ್ತಮ ಸಂಬಂಧ ಹೊಂದಿದ್ದಾರೆ. ಹಾಗೆಯೇ ಸಾರ್ವಜನಿಕವಾಗಿ ಧಾರ್ಮಿಕ ಆಚರಣೆಗಳಿಂದಲೂ ದೂರ ಉಳಿಯುವುದರಿಂದ, ಕೆಲವು ಸಂಪ್ರದಾಯವಾದಿ ಮುಸ್ಲಿಮರ ಟೀಕೆಗೆ ಗುರಿಯಾಗಿದ್ದೂ ಇದೆ. ಕ್ಷೇತ್ರದಲ್ಲಿ ಈ ಹಿಂದೆ ಕೋಮು ಗಲಭೆಗಳು ಘಟಿಸಿದ ಸಂದರ್ಭದಲ್ಲಿ ರಹೀಂ ಖಾನ್ ಅವರು ಎಂದಿಗೂ ಒಂದು ಧರ್ಮದ ಪಕ್ಷ ವಹಿಸಿದವರಲ್ಲ; ಬದಲಿಗೆ ಅಧಿಕಾರಿಗಳಿಗೆ ಪೂರ್ತಿ ಜವಾಬ್ದಾರಿ ಕಾನೂನಾತ್ಮಕ ಮತ್ತು ಸಂವಿಧಾನಾತ್ಮಕ ಕ್ರಮಗಳನ್ನು ಹೆಚ್ಚು ನೆಚ್ಚಿಕೊಳ್ಳುತ್ತಿದ್ದರು ಎಂಬ ಮಾತು ಸಾಮಾನ್ಯವಾಗಿದೆ. ಈ ನಿಟ್ಟನಲ್ಲಿ ಅವರು ಎಲ್ಲಾ ಸಮುದಾಯಗಳಿಗೂ ಸಲ್ಲುವ ನಾಯಕರಾಗಿದ್ದಾರೆ.

ಇದನ್ನೂ ಓದಿ: ಅನ್ನಭಾಗ್ಯಕ್ಕೆ ಕತ್ತರಿ ಹಾಕಲು ಮುಂದಾದ ಕೇಂದ್ರ: ಪ್ರತಿಭಟನಾ ಪತ್ರ ಬರೆಯುವ ಎಚ್ಚರಿಕೆ ನೀಡಿದ ಸಿಎಂ…

ಕ್ಷೇತ್ರದಲ್ಲಿ ಯಾರೇ ಹಣಕಾಸಿನ ಸಹಾಯ ಕೇಳಿ ಬಂದರೂ ಅವರನ್ನು ರಹೀಂ ಖಾನ್ ಬರಿಗೈಯಿಂದ ಮರಳಿ ಕಳುಹಿಸಿದ ಉದಾಹರಣೆಗಳಿಲ್ಲ ಎಂಬ ಮಾತಿದೆ. ಹಿಂದೆ ಈ ಭಾಗದಲ್ಲಿ ಬರಗಾಲ ಬಂದಾಗ ಕ್ಷೇತ್ರದ ಅನೇಕ ಹಳ್ಳಿಗಳಿಗೆ ತಮ್ಮ ಜಮೀನಿನಲ್ಲಿನ ಬಾವಿಗಳಿಂದ ನೀರು ತುಂಬಿಸಿ ಕುಡಿಯುವ ನೀರಿನ ವ್ಯವಸ್ಥೆ ಮಾಡಿದ್ದರು. ಅದಕ್ಕಾಗಿ ಈಗಲೂ ಅಲ್ಲಿಯ ಜನರು ರಹೀಂ ಖಾನ್ ಅವರನ್ನು ನೆನೆಯುತ್ತಾರೆ.

ಈ ಹಿಂದೆ ಬೀದರ್ ಜಿಲ್ಲಾಧಿಕಾರಿಯಾಗಿದ್ದ ಹರ್ಷ ಗುಪ್ತಾ ಅವರು 4,000 ಅಕ್ರಮ ಕಟ್ಟಡಗಳನ್ನು ನೆಲಸಮಗೊಳಿಸಿದ್ದರು. ಆ ಸಂದರ್ಭದಲ್ಲಿ ಜನರು ಬೃಹತ್ ಪ್ರತಿಭಟನೆ ನಡೆಸಿದ್ದರು. ಆದರೂ ರಹೀಂ ಖಾನ್ ಹರ್ಷ ಗುಪ್ತಾ ಅವರಿಗೆ ಪ್ರಶ್ನೆ ಮಾಡಲಿಲ್ಲ, ನಿಮಗೆ ಸರಿ ಅನಿಸಿದ್ದನ್ನು ಮಾಡಿ ಎಂದು ಹೇಳಿದರು. ಹೀಗೆ ಅಧಿಕಾರಿಗಳಿಗೆ ಹೆಚ್ಚಿನ ಮನ್ನಣೆ ನೀಡುತ್ತಾರೆ ಎನ್ನುತ್ತಾರೆ ಜನ. ಈ ಕಾರಣಕ್ಕಾಗಿ ರಹೀಂ ಖಾನ್ ಅವರ ಬಗ್ಗೆ ಜನಸಾಮಾನ್ಯರಲ್ಲಿ ಅಸಮಾಧಾನದ ಅಭಿಪ್ರಾಯವೂ ಇದೆ.

ರಾಜಕೀಯ ಹಾದಿ

2008ರಲ್ಲಿ ಬೀದರ್ ಉತ್ತರ ಮತಕ್ಷೇತ್ರದಲ್ಲಿ ರಹೀಂ ಖಾನ್ ಅವರು ಬಿಎಸ್‌ಪಿಯಿಂದ ಸ್ಪರ್ಧೆ ಮಾಡಿದ್ದರು. ಅವರ ಎದುರಾಳಿಯಾಗಿ ಸ್ಪರ್ಧಿಸಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅವರು ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆದ್ದರು.

2009ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಬೀದರ್ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದರು. ಆಗ 2009ರಲ್ಲಿ ಉಪ ಚುನಾವಣೆಯಲ್ಲಿ ರಹೀಂ ಖಾನ್ ಅವರು ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು.

2013ರಲ್ಲಿ ಗುರುಪಾದಪ್ಪ ನಾಗಮಾರಪಳ್ಳಿ ಅವರು ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರಿ ಸ್ಪರ್ಧಿಸಿದ್ದರು. ಆ ಚುನಾವಣೆಯಲ್ಲಿ ರಹೀಂ ಖಾನ್ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿ ಸೋಲು ಕಂಡರು.

ಗುರುಪಾದಪ್ಪ ನಾಗಮಾರಪಳ್ಳಿ

2013ರಲ್ಲಿ ಶಾಸಕರಾಗಿದ್ದ ಗುರುಪಾದಪ್ಪ ನಾಗಮಾರಪಳ್ಳಿ ಅಕಾಲಿಕವಾಗಿ ನಿಧನರಾದರು. ಆಗ ನಡೆದ ಉಪಚುನಾವಣೆಯಲ್ಲಿ ರಹೀಂ ಖಾನ್ ಅವರು ಗೆಲುವು ಕಂಡರು.

2018ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಮತ್ತೆ ರಹೀಂ ಖಾನ್ ಶಾಸಕರಾಗಿ ಆಯ್ಕೆಯಾಗಿದ್ದರು. 2023ರ ಚುನಾವಣೆಯಲ್ಲಿ ರಹೀಮ್ ಖಾನ್ ಗೆಲುವು ಸಾಧಿಸುವ ಮೂಲಕ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ರಹೀಂ ಖಾನ್ ಅವರು ಡಿಸೆಂಬರ್ 22, 2018ರಿಂದ ಜುಲೈ 8, 2019ರವರೆಗೆ ಕರ್ನಾಟಕದ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದವರಾಗಿದ್ದಾರೆ.

27 ಮೇ 2023ರಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಹೀಂ ಖಾನ್, ಪೌರಾಡಳಿತ ಇಲಾಖೆ ಮತ್ತು ಹಜ್ ಮುಖ್ಯಸ್ಥರಾಗಿ ನೇತೃತ್ವ ವಹಿಸಿಕೊಂಡಿದ್ದಾರೆ.

ಹಜ್ ಮುಖ್ಯಸ್ಥರಾಗಿರುವ ರಹೀಂ ಖಾನ್ ಅವರು ಈಗ ತಮ್ಮ ಸಮುದಾಯಕ್ಕೆ ಯಾವೆಲ್ಲಾ ಕೊಡುಗೆ ನೀಡುತ್ತಾರೆ ಎನ್ನುವ ಪ್ರಶ್ನೆಗಳನ್ನು ಮುಸ್ಲಿಂ ಸಮುದಾಯದವರೇ ಕೇಳುತ್ತಿದ್ದಾರೆ. ಹಿಂದೂಗಳ ಮತಗಳಿಸಲು ತಮ್ಮ ಮುಸ್ಲಿಂ ಐಡೆಂಟಿಟಿಯನ್ನು ರಹೀಂ ಖಾನ್ ಮರೆಮಾಚುತ್ತಾರೆ ಎನ್ನುವ ಟೀಕೆಗಳನ್ನು ಕೆಲವು ಮುಸ್ಲಿಂ ನಾಯಕರು ಆಗಾಗ ಮಾಡುತ್ತಿರುತ್ತಾರೆ. ಏಕಕಾಲಕ್ಕೆ ಟೀಕೆ ಮತ್ತು ಹೊಗಳಿಕೆ ಎರಡನ್ನೂ ಪಡೆಯುವ ರಹೀಂ ಖಾನ್ ಅವರು ಈಗ ತಮ್ಮ ಮೇಲಿರುವ ಎರಡೂ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...