Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

ನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಎಂಟು ಶಾಸಕರಲ್ಲಿ ಬಿಟಿಎಂ ಲೇಔಟ್ ಕ್ಷೇತ್ರದಿಂದ ಗೆದ್ದಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು.

ಸೌಮ್ಯ ಸ್ವಭಾವದ ವ್ಯಕ್ತಿತ್ವದ ರಾಮಲಿಂಗಾ ರೆಡ್ಡಿಯವರು, ಕಳೆದ 20 ವರ್ಷಗಳಿಂದ ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರಷ್ಟೇ ಶಕ್ತಿಯುತ ರಾಜಕಾರಣಿಯಾಗಿರುವ ರಾಮಲಿಂಗಾ ರೆಡ್ಡಿ ಅವರು, ತಮ್ಮ ರಾಜಕಾರಣದ ಪ್ರಾಬಲ್ಯವನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ಯಾವ ಕ್ಷೇತ್ರದಲ್ಲಾದರೂ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಹೊಂದಿರುವಂತಹವರು.

ರಾಮಲಿಂಗಾ ರೆಡ್ಡಿ ಮೇಲಿರುವ ಗಂಭೀರವಾದ ಆರೋಪವೆಂದರೆ ಅದು ಹೊಂದಾಣಿಕೆ ರಾಜಕಾರಣಿ. ಈ ಹೊಂದಾಣಿಕೆ ರಾಜಕಾರಣವು ಬಿಜೆಪಿಯ ದಿ.ಅನಂತಕುಮಾರ್ ಕಾಲದಿಂದ ಈಗಿನ ಆರ್. ಆಶೋಕ್ ಅವರ ಕಾಲದವರೆಗೂ ಇದೆ ಎನ್ನುವ ಆರೋಪಗಳು ಕೇಳಿಬಂದಿವೆ. ಅನಂತ್‌ಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೊಂದಾಣಿಕೆ ರಾಜಕಾರಣದಲ್ಲಿ ಅದೆಷ್ಟೋ ನಾಯಕರು ಸೋಲುಕಂಡಿದ್ದಾರೆ ಎನ್ನಲಾಗುತ್ತದೆ. ಈಗಲೂ ಆರ್. ಅಶೋಕ್ ಜೊತೆಗೆ ಅದೇ ಹೊಂದಾಣಿಕೆ ಮುಂದುವರಿಸಿದ್ದಾರೆ; ಇದು ಕಾಂಗ್ರೆಸ್‌ಗೆ ಒಂದು ರೀತಿಯಲ್ಲಿ ಒಳ್ಳೆಯದು ಹೌದು ಕೆಟ್ಟದ್ದು ಕೂಡಾ ಹೌದು ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿವೆ.

ರಾಮಲಿಂಗಾ ರೆಡ್ಡಿ ಅವರು ಈಗ ಎರಡು ಇಲಾಖೆಗಳನ್ನು ನಿರ್ವಹಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾಗಿ ಖಾತೆ ಹಂಚಿಕೆಯಾಗಿದ್ದರೂ ತಮ್ಮ ಹಿರಿತನಕ್ಕೆ ಇನ್ನೂ ದೊಡ್ಡ ಖಾತೆ ಸಿಗಬೇಕಿತ್ತು ಎಂಬ ಅಸಮಧಾನ ಹೊಂದಿದ್ದಾರೆಂಬ ವದಂತೆ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.

ರಾಜಕಾರಣದ ಹಿನ್ನೆಲೆ

ರಾಮಲಿಂಗಾ ರೆಡ್ಡಿ ಅವರು ಇಂದಿರಾ ಗಾಂಧಿ ಮತ್ತು ದೇವರಾಜ್ ಅರಸ್ ಅವರ ಬಡತನ ನಿರ್ಮೂಲನ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. 1973ರಲ್ಲಿ ಎನ್‌ಎಸ್‌ಯುಐಗೆ ಸೇರಿ, ಕೇರಳದ ತಿರುವನಂತಪುರದಲ್ಲಿ ಎನ್‌ಎಸ್‌ಯುಐ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದ ಒಲವು ಬೆಳೆಸಿಕೊಂಡಿದ್ದ ಅವರು 1973-74ರವರೆಗೆ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾದರು. 1977-78ರ ಅವಧಿಯಲ್ಲಿ ನಗರದ ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. 1980-83ರ ಸಮಯದಲ್ಲಿ ಬೆಂಗಳೂರು ವಿವಿಯಲ್ಲಿ ಸೆನೆಟ್ ಮತ್ತು ಹಣಕಾಸು ಸಮಿತಿ ಸದಸ್ಯರಾದರು. 1983ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆದರು. ಇದೇ ವೇಳೆ 1985-90ರವರೆಗೂ ಜಯನಗರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು. ಹೀಗೆ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕ ಜೀವನದಲ್ಲಿ ಹಂತಹಂತವಾಗಿ ಬೆಳೆದವರು.

ರಾಜ್ಯ ಚುನಾವಣಾ ರಾಜಕಾರಣ ಹಾದಿ

ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ರಾಮಲಿಂಗಾ ರೆಡ್ಡಿಯವರು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದಾರೆ. ಅವರು 1989ರಿಂದ ಈವರೆಗೂ ಎದುರಿಸಿದ 8 ವಿಧಾನಸಭಾ ಚುನಾವಣೆಗಳಲ್ಲೂ ಗೆಲುವು ಕಂಡಿದ್ದಾರೆ.

1989ರಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ರಾಮಲಿಂಗಾ ರೆಡ್ಡಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುತ್ತಾರೆ. ಬೆಂಗಳೂರಿನ ಹಳೆ ತಲೆಮಾರಿಗೆ ಈ ಚುನಾವಣೆಯು ಬಹಳ ನೆನಪಿನಲ್ಲಿ ಉಳಿದಿರುತ್ತದೆ. ಏಕೆಂದರೆ, ಈ ಸಮಯದಲ್ಲಿ ಭೂಗತ ಪಾತಕಿಯಾಗಿದ್ದ ಡಾನ್ ಜಯರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹುಲಿಯನ್ನು ಬೋನ್‌ನಲ್ಲಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡಿದ್ದರು. ಆದರೆ ಚುನಾವಣೆಗೂ ಮುನ್ನವೇ ಅವರು ಲಾಲ್‌ಬಾಗ್ ಬಳಿ ಕೊಲೆಯಾಗಿ ಹೋದರು. ಆನಂತರ ಆ ಕ್ಷೇತ್ರದಲ್ಲಿ ಚುನಾವಣೆಯನ್ನೂ ಮುಂದೂಡಲಾಯಿತು. ಆ ಬಳಿಕ ನಡೆದ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಗೆಲುವು ಕಂಡರು.

1989ರಿಂದ 2008ರವರೆಗೂ ಅಂದರೆ 20ವರ್ಷಗಳ ಕಾಲ ಜಯನಗರದಲ್ಲಿ ಪಾರುಪತ್ಯ ಸ್ಥಾಪಿಸಿದ್ದರು. ಹೌದು 1989ರಲ್ಲಿ ಗೆಲುವಿನ ಓಟ ಆರಂಭಿಸಿದ ಅವರು, 1994, 1999, 2004ರವರೆಗೂ ಜಯನಗರದಲ್ಲಿ ಸ್ಪರ್ಧಿಸಿ ಗೆಲುವು ಕಂಡರು. ಆ ಬಳಿಕ 2008ರಲ್ಲಿ ಅವರು ಬಿಟಿಎಂ ಲೇಔಟ್ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಮೇಲೆ ಅಲ್ಲಿಗೆ ವಲಸೆ ಹೋದರು. ಈವರೆಗೆ ಇಲ್ಲಿ ಒಟ್ಟು ನಾಲ್ಕು (2008, 2013, 2018 ಮತ್ತು 2023) ಚುನಾವಣೆಗಳು ನಡೆದಿವೆ. ಇಲ್ಲಿಯೂ ರಾಮಲಿಂಗಾ ರೆಡ್ಡಿ ಅವರು ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. 2023ರ ಚುನವಾಣೆಯಲ್ಲಿ ಮರುಎಣಿಕೆಯ ಪ್ರಹಸನ ಎದುರಾಗಿ ಕೇವಲ 16 ವೋಟುಗಳಿಂದ ಸೌಮ್ಯಾ ಸೋಲುಂಡಿದ್ದಾರೆ.

ಅಧಿಕಾರದ ಮೈಲಿಗಲ್ಲುಗಳು

ರಾಮಲಿಂಗಾ ರೆಡ್ಡಿ ಅವರು ಮೊದಲು 1992ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಹಣಕಾಸು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಮತ್ತು ಎಪಿಎಂಸಿ ಸಚಿವರಾಗಿದ್ದರು. 1993-94ರವರೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿದ್ದರು.

2002ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಎನ್. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

2013ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ, ರಾಮಲಿಂಗಾ ರೆಡ್ಡಿ ಅವರು 18 ಮೇ 2013ರಿಂದ 2 ಸೆಪ್ಟೆಂಬರ್ 2017ವರೆಗೆ ಕರ್ನಾಟಕದ ಸಾರಿಗೆ ಸಚಿವರಾಗಿದ್ದರು ಮತ್ತು 2 ಸೆಪ್ಟೆಂಬರ್ 2017ರಿಂದ 17 ಮೇ 2018ರವರೆಗೆ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿದ್ದರು.

2021ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕಸ ವಿಲೇವಾರಿ ಉದ್ಯಮದಲ್ಲಿ ಹಿಡಿತ ಸಾಧಿಸಿರುವ ರಾಮಲಿಂಗಾರೆಡ್ಡಿಯವರು, ಪೌರಕಾರ್ಮಿಕರು ಮತ್ತು ಕಸ ಸಂಗ್ರಹಿಸುವ, ವಾಹನ ಚಲಾಯಿಸುವವರು ಕಾಯಂ ಆಗಲು ತಡೆಯಾಗಿದ್ದಾರೆ ಎಂಬ ಆರೋಪ ಸಹ ಅವರ ಮೇಲಿದೆ.

ಇನ್ನು ಬೆಂಗಳೂರಿನ ನಾಯಕರಾದ ಅವರಿಗೆ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟದಲ್ಲಿ ಉತ್ತಮ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...