Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

ನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಎಂಟು ಶಾಸಕರಲ್ಲಿ ಬಿಟಿಎಂ ಲೇಔಟ್ ಕ್ಷೇತ್ರದಿಂದ ಗೆದ್ದಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು.

ಸೌಮ್ಯ ಸ್ವಭಾವದ ವ್ಯಕ್ತಿತ್ವದ ರಾಮಲಿಂಗಾ ರೆಡ್ಡಿಯವರು, ಕಳೆದ 20 ವರ್ಷಗಳಿಂದ ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರಷ್ಟೇ ಶಕ್ತಿಯುತ ರಾಜಕಾರಣಿಯಾಗಿರುವ ರಾಮಲಿಂಗಾ ರೆಡ್ಡಿ ಅವರು, ತಮ್ಮ ರಾಜಕಾರಣದ ಪ್ರಾಬಲ್ಯವನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ಯಾವ ಕ್ಷೇತ್ರದಲ್ಲಾದರೂ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಹೊಂದಿರುವಂತಹವರು.

ರಾಮಲಿಂಗಾ ರೆಡ್ಡಿ ಮೇಲಿರುವ ಗಂಭೀರವಾದ ಆರೋಪವೆಂದರೆ ಅದು ಹೊಂದಾಣಿಕೆ ರಾಜಕಾರಣಿ. ಈ ಹೊಂದಾಣಿಕೆ ರಾಜಕಾರಣವು ಬಿಜೆಪಿಯ ದಿ.ಅನಂತಕುಮಾರ್ ಕಾಲದಿಂದ ಈಗಿನ ಆರ್. ಆಶೋಕ್ ಅವರ ಕಾಲದವರೆಗೂ ಇದೆ ಎನ್ನುವ ಆರೋಪಗಳು ಕೇಳಿಬಂದಿವೆ. ಅನಂತ್‌ಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೊಂದಾಣಿಕೆ ರಾಜಕಾರಣದಲ್ಲಿ ಅದೆಷ್ಟೋ ನಾಯಕರು ಸೋಲುಕಂಡಿದ್ದಾರೆ ಎನ್ನಲಾಗುತ್ತದೆ. ಈಗಲೂ ಆರ್. ಅಶೋಕ್ ಜೊತೆಗೆ ಅದೇ ಹೊಂದಾಣಿಕೆ ಮುಂದುವರಿಸಿದ್ದಾರೆ; ಇದು ಕಾಂಗ್ರೆಸ್‌ಗೆ ಒಂದು ರೀತಿಯಲ್ಲಿ ಒಳ್ಳೆಯದು ಹೌದು ಕೆಟ್ಟದ್ದು ಕೂಡಾ ಹೌದು ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿವೆ.

ರಾಮಲಿಂಗಾ ರೆಡ್ಡಿ ಅವರು ಈಗ ಎರಡು ಇಲಾಖೆಗಳನ್ನು ನಿರ್ವಹಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾಗಿ ಖಾತೆ ಹಂಚಿಕೆಯಾಗಿದ್ದರೂ ತಮ್ಮ ಹಿರಿತನಕ್ಕೆ ಇನ್ನೂ ದೊಡ್ಡ ಖಾತೆ ಸಿಗಬೇಕಿತ್ತು ಎಂಬ ಅಸಮಧಾನ ಹೊಂದಿದ್ದಾರೆಂಬ ವದಂತೆ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.

ರಾಜಕಾರಣದ ಹಿನ್ನೆಲೆ

ರಾಮಲಿಂಗಾ ರೆಡ್ಡಿ ಅವರು ಇಂದಿರಾ ಗಾಂಧಿ ಮತ್ತು ದೇವರಾಜ್ ಅರಸ್ ಅವರ ಬಡತನ ನಿರ್ಮೂಲನ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. 1973ರಲ್ಲಿ ಎನ್‌ಎಸ್‌ಯುಐಗೆ ಸೇರಿ, ಕೇರಳದ ತಿರುವನಂತಪುರದಲ್ಲಿ ಎನ್‌ಎಸ್‌ಯುಐ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದ ಒಲವು ಬೆಳೆಸಿಕೊಂಡಿದ್ದ ಅವರು 1973-74ರವರೆಗೆ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾದರು. 1977-78ರ ಅವಧಿಯಲ್ಲಿ ನಗರದ ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. 1980-83ರ ಸಮಯದಲ್ಲಿ ಬೆಂಗಳೂರು ವಿವಿಯಲ್ಲಿ ಸೆನೆಟ್ ಮತ್ತು ಹಣಕಾಸು ಸಮಿತಿ ಸದಸ್ಯರಾದರು. 1983ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆದರು. ಇದೇ ವೇಳೆ 1985-90ರವರೆಗೂ ಜಯನಗರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು. ಹೀಗೆ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕ ಜೀವನದಲ್ಲಿ ಹಂತಹಂತವಾಗಿ ಬೆಳೆದವರು.

ರಾಜ್ಯ ಚುನಾವಣಾ ರಾಜಕಾರಣ ಹಾದಿ

ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ರಾಮಲಿಂಗಾ ರೆಡ್ಡಿಯವರು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದಾರೆ. ಅವರು 1989ರಿಂದ ಈವರೆಗೂ ಎದುರಿಸಿದ 8 ವಿಧಾನಸಭಾ ಚುನಾವಣೆಗಳಲ್ಲೂ ಗೆಲುವು ಕಂಡಿದ್ದಾರೆ.

1989ರಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ರಾಮಲಿಂಗಾ ರೆಡ್ಡಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುತ್ತಾರೆ. ಬೆಂಗಳೂರಿನ ಹಳೆ ತಲೆಮಾರಿಗೆ ಈ ಚುನಾವಣೆಯು ಬಹಳ ನೆನಪಿನಲ್ಲಿ ಉಳಿದಿರುತ್ತದೆ. ಏಕೆಂದರೆ, ಈ ಸಮಯದಲ್ಲಿ ಭೂಗತ ಪಾತಕಿಯಾಗಿದ್ದ ಡಾನ್ ಜಯರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹುಲಿಯನ್ನು ಬೋನ್‌ನಲ್ಲಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡಿದ್ದರು. ಆದರೆ ಚುನಾವಣೆಗೂ ಮುನ್ನವೇ ಅವರು ಲಾಲ್‌ಬಾಗ್ ಬಳಿ ಕೊಲೆಯಾಗಿ ಹೋದರು. ಆನಂತರ ಆ ಕ್ಷೇತ್ರದಲ್ಲಿ ಚುನಾವಣೆಯನ್ನೂ ಮುಂದೂಡಲಾಯಿತು. ಆ ಬಳಿಕ ನಡೆದ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಗೆಲುವು ಕಂಡರು.

1989ರಿಂದ 2008ರವರೆಗೂ ಅಂದರೆ 20ವರ್ಷಗಳ ಕಾಲ ಜಯನಗರದಲ್ಲಿ ಪಾರುಪತ್ಯ ಸ್ಥಾಪಿಸಿದ್ದರು. ಹೌದು 1989ರಲ್ಲಿ ಗೆಲುವಿನ ಓಟ ಆರಂಭಿಸಿದ ಅವರು, 1994, 1999, 2004ರವರೆಗೂ ಜಯನಗರದಲ್ಲಿ ಸ್ಪರ್ಧಿಸಿ ಗೆಲುವು ಕಂಡರು. ಆ ಬಳಿಕ 2008ರಲ್ಲಿ ಅವರು ಬಿಟಿಎಂ ಲೇಔಟ್ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಮೇಲೆ ಅಲ್ಲಿಗೆ ವಲಸೆ ಹೋದರು. ಈವರೆಗೆ ಇಲ್ಲಿ ಒಟ್ಟು ನಾಲ್ಕು (2008, 2013, 2018 ಮತ್ತು 2023) ಚುನಾವಣೆಗಳು ನಡೆದಿವೆ. ಇಲ್ಲಿಯೂ ರಾಮಲಿಂಗಾ ರೆಡ್ಡಿ ಅವರು ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. 2023ರ ಚುನವಾಣೆಯಲ್ಲಿ ಮರುಎಣಿಕೆಯ ಪ್ರಹಸನ ಎದುರಾಗಿ ಕೇವಲ 16 ವೋಟುಗಳಿಂದ ಸೌಮ್ಯಾ ಸೋಲುಂಡಿದ್ದಾರೆ.

ಅಧಿಕಾರದ ಮೈಲಿಗಲ್ಲುಗಳು

ರಾಮಲಿಂಗಾ ರೆಡ್ಡಿ ಅವರು ಮೊದಲು 1992ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಹಣಕಾಸು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಮತ್ತು ಎಪಿಎಂಸಿ ಸಚಿವರಾಗಿದ್ದರು. 1993-94ರವರೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿದ್ದರು.

2002ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಎನ್. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

2013ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ, ರಾಮಲಿಂಗಾ ರೆಡ್ಡಿ ಅವರು 18 ಮೇ 2013ರಿಂದ 2 ಸೆಪ್ಟೆಂಬರ್ 2017ವರೆಗೆ ಕರ್ನಾಟಕದ ಸಾರಿಗೆ ಸಚಿವರಾಗಿದ್ದರು ಮತ್ತು 2 ಸೆಪ್ಟೆಂಬರ್ 2017ರಿಂದ 17 ಮೇ 2018ರವರೆಗೆ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿದ್ದರು.

2021ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕಸ ವಿಲೇವಾರಿ ಉದ್ಯಮದಲ್ಲಿ ಹಿಡಿತ ಸಾಧಿಸಿರುವ ರಾಮಲಿಂಗಾರೆಡ್ಡಿಯವರು, ಪೌರಕಾರ್ಮಿಕರು ಮತ್ತು ಕಸ ಸಂಗ್ರಹಿಸುವ, ವಾಹನ ಚಲಾಯಿಸುವವರು ಕಾಯಂ ಆಗಲು ತಡೆಯಾಗಿದ್ದಾರೆ ಎಂಬ ಆರೋಪ ಸಹ ಅವರ ಮೇಲಿದೆ.

ಇನ್ನು ಬೆಂಗಳೂರಿನ ನಾಯಕರಾದ ಅವರಿಗೆ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟದಲ್ಲಿ ಉತ್ತಮ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...