Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

ನಮ್ಮ ಸಚಿವರಿವರು; ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿರುವ ಸೋಲಿಲ್ಲದ ಸರದಾರ ರಾಮಲಿಂಗಾರೆಡ್ಡಿ

- Advertisement -
- Advertisement -

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿರುವ ಎಂಟು ಶಾಸಕರಲ್ಲಿ ಬಿಟಿಎಂ ಲೇಔಟ್ ಕ್ಷೇತ್ರದಿಂದ ಗೆದ್ದಿರುವ ರಾಮಲಿಂಗಾ ರೆಡ್ಡಿ ಸಹ ಒಬ್ಬರು.

ಸೌಮ್ಯ ಸ್ವಭಾವದ ವ್ಯಕ್ತಿತ್ವದ ರಾಮಲಿಂಗಾ ರೆಡ್ಡಿಯವರು, ಕಳೆದ 20 ವರ್ಷಗಳಿಂದ ಬೆಂಗಳೂರು ರಾಜಕಾರಣದಲ್ಲಿ ಹಿಡಿತ ಸಾಧಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರಷ್ಟೇ ಶಕ್ತಿಯುತ ರಾಜಕಾರಣಿಯಾಗಿರುವ ರಾಮಲಿಂಗಾ ರೆಡ್ಡಿ ಅವರು, ತಮ್ಮ ರಾಜಕಾರಣದ ಪ್ರಾಬಲ್ಯವನ್ನು ಕೇವಲ ಬೆಂಗಳೂರಿಗೆ ಸೀಮಿತಗೊಳಿಸಿದ್ದಾರೆ. ಬೆಂಗಳೂರಿನ ಯಾವ ಕ್ಷೇತ್ರದಲ್ಲಾದರೂ ತಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವ ಸಾಮರ್ಥ್ಯ ಹೊಂದಿರುವಂತಹವರು.

ರಾಮಲಿಂಗಾ ರೆಡ್ಡಿ ಮೇಲಿರುವ ಗಂಭೀರವಾದ ಆರೋಪವೆಂದರೆ ಅದು ಹೊಂದಾಣಿಕೆ ರಾಜಕಾರಣಿ. ಈ ಹೊಂದಾಣಿಕೆ ರಾಜಕಾರಣವು ಬಿಜೆಪಿಯ ದಿ.ಅನಂತಕುಮಾರ್ ಕಾಲದಿಂದ ಈಗಿನ ಆರ್. ಆಶೋಕ್ ಅವರ ಕಾಲದವರೆಗೂ ಇದೆ ಎನ್ನುವ ಆರೋಪಗಳು ಕೇಳಿಬಂದಿವೆ. ಅನಂತ್‌ಕುಮಾರ್ ಹಾಗೂ ರಾಮಲಿಂಗಾ ರೆಡ್ಡಿ ಅವರ ಹೊಂದಾಣಿಕೆ ರಾಜಕಾರಣದಲ್ಲಿ ಅದೆಷ್ಟೋ ನಾಯಕರು ಸೋಲುಕಂಡಿದ್ದಾರೆ ಎನ್ನಲಾಗುತ್ತದೆ. ಈಗಲೂ ಆರ್. ಅಶೋಕ್ ಜೊತೆಗೆ ಅದೇ ಹೊಂದಾಣಿಕೆ ಮುಂದುವರಿಸಿದ್ದಾರೆ; ಇದು ಕಾಂಗ್ರೆಸ್‌ಗೆ ಒಂದು ರೀತಿಯಲ್ಲಿ ಒಳ್ಳೆಯದು ಹೌದು ಕೆಟ್ಟದ್ದು ಕೂಡಾ ಹೌದು ಎಂಬ ಚರ್ಚೆಗಳು ರಾಜಕೀಯ ಪಡಸಾಲೆಯಲ್ಲಿವೆ.

ರಾಮಲಿಂಗಾ ರೆಡ್ಡಿ ಅವರು ಈಗ ಎರಡು ಇಲಾಖೆಗಳನ್ನು ನಿರ್ವಹಿಸಲಿದ್ದಾರೆ. ಸಾರಿಗೆ ಮತ್ತು ಮುಜರಾಯಿ ಸಚಿವರಾಗಿ ಖಾತೆ ಹಂಚಿಕೆಯಾಗಿದ್ದರೂ ತಮ್ಮ ಹಿರಿತನಕ್ಕೆ ಇನ್ನೂ ದೊಡ್ಡ ಖಾತೆ ಸಿಗಬೇಕಿತ್ತು ಎಂಬ ಅಸಮಧಾನ ಹೊಂದಿದ್ದಾರೆಂಬ ವದಂತೆ ಮಾಧ್ಯಮಗಳಲ್ಲಿ ಚರ್ಚೆಯಾಗಿತ್ತು.

ರಾಜಕಾರಣದ ಹಿನ್ನೆಲೆ

ರಾಮಲಿಂಗಾ ರೆಡ್ಡಿ ಅವರು ಇಂದಿರಾ ಗಾಂಧಿ ಮತ್ತು ದೇವರಾಜ್ ಅರಸ್ ಅವರ ಬಡತನ ನಿರ್ಮೂಲನ ಕಾರ್ಯಕ್ರಮಗಳಿಂದ ಪ್ರೇರಿತರಾಗಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಸೇರಿದರು. 1973ರಲ್ಲಿ ಎನ್‌ಎಸ್‌ಯುಐಗೆ ಸೇರಿ, ಕೇರಳದ ತಿರುವನಂತಪುರದಲ್ಲಿ ಎನ್‌ಎಸ್‌ಯುಐ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸಿದರು. ವಿದ್ಯಾರ್ಥಿ ದಿನಗಳಿಂದಲೇ ರಾಜಕೀಯದ ಒಲವು ಬೆಳೆಸಿಕೊಂಡಿದ್ದ ಅವರು 1973-74ರವರೆಗೆ ಬೆಂಗಳೂರಿನ ಸರ್ಕಾರಿ ವಿಜ್ಞಾನ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾದರು. 1977-78ರ ಅವಧಿಯಲ್ಲಿ ನಗರದ ಲಾ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿದ್ದರು. 1980-83ರ ಸಮಯದಲ್ಲಿ ಬೆಂಗಳೂರು ವಿವಿಯಲ್ಲಿ ಸೆನೆಟ್ ಮತ್ತು ಹಣಕಾಸು ಸಮಿತಿ ಸದಸ್ಯರಾದರು. 1983ರಲ್ಲಿ ಬೆಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಆದರು. ಇದೇ ವೇಳೆ 1985-90ರವರೆಗೂ ಜಯನಗರದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದರು. ಹೀಗೆ ರಾಮಲಿಂಗಾ ರೆಡ್ಡಿ ಅವರು ಸಾರ್ವಜನಿಕ ಜೀವನದಲ್ಲಿ ಹಂತಹಂತವಾಗಿ ಬೆಳೆದವರು.

ರಾಜ್ಯ ಚುನಾವಣಾ ರಾಜಕಾರಣ ಹಾದಿ

ಸೋಲಿಲ್ಲದ ಸರದಾರ ಎನಿಸಿಕೊಂಡಿರುವ ರಾಮಲಿಂಗಾ ರೆಡ್ಡಿಯವರು ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಪ್ರಭಾವಿ ನಾಯಕರಾಗಿದ್ದಾರೆ. ಅವರು 1989ರಿಂದ ಈವರೆಗೂ ಎದುರಿಸಿದ 8 ವಿಧಾನಸಭಾ ಚುನಾವಣೆಗಳಲ್ಲೂ ಗೆಲುವು ಕಂಡಿದ್ದಾರೆ.

1989ರಲ್ಲಿ ಜಯನಗರ ವಿಧಾನಸಭಾ ಕ್ಷೇತ್ರದಿಂದ ರಾಮಲಿಂಗಾ ರೆಡ್ಡಿ ಅವರು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗುತ್ತಾರೆ. ಬೆಂಗಳೂರಿನ ಹಳೆ ತಲೆಮಾರಿಗೆ ಈ ಚುನಾವಣೆಯು ಬಹಳ ನೆನಪಿನಲ್ಲಿ ಉಳಿದಿರುತ್ತದೆ. ಏಕೆಂದರೆ, ಈ ಸಮಯದಲ್ಲಿ ಭೂಗತ ಪಾತಕಿಯಾಗಿದ್ದ ಡಾನ್ ಜಯರಾಜ್ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಹುಲಿಯನ್ನು ಬೋನ್‌ನಲ್ಲಿಟ್ಟುಕೊಂಡು ಚುನಾವಣಾ ಪ್ರಚಾರ ಮಾಡಿದ್ದರು. ಆದರೆ ಚುನಾವಣೆಗೂ ಮುನ್ನವೇ ಅವರು ಲಾಲ್‌ಬಾಗ್ ಬಳಿ ಕೊಲೆಯಾಗಿ ಹೋದರು. ಆನಂತರ ಆ ಕ್ಷೇತ್ರದಲ್ಲಿ ಚುನಾವಣೆಯನ್ನೂ ಮುಂದೂಡಲಾಯಿತು. ಆ ಬಳಿಕ ನಡೆದ ಚುನಾವಣೆಯಲ್ಲಿ ರಾಮಲಿಂಗಾ ರೆಡ್ಡಿ ಅವರು ಗೆಲುವು ಕಂಡರು.

1989ರಿಂದ 2008ರವರೆಗೂ ಅಂದರೆ 20ವರ್ಷಗಳ ಕಾಲ ಜಯನಗರದಲ್ಲಿ ಪಾರುಪತ್ಯ ಸ್ಥಾಪಿಸಿದ್ದರು. ಹೌದು 1989ರಲ್ಲಿ ಗೆಲುವಿನ ಓಟ ಆರಂಭಿಸಿದ ಅವರು, 1994, 1999, 2004ರವರೆಗೂ ಜಯನಗರದಲ್ಲಿ ಸ್ಪರ್ಧಿಸಿ ಗೆಲುವು ಕಂಡರು. ಆ ಬಳಿಕ 2008ರಲ್ಲಿ ಅವರು ಬಿಟಿಎಂ ಲೇಔಟ್ ಕ್ಷೇತ್ರ ಅಸ್ತಿತ್ವಕ್ಕೆ ಬಂದ ಮೇಲೆ ಅಲ್ಲಿಗೆ ವಲಸೆ ಹೋದರು. ಈವರೆಗೆ ಇಲ್ಲಿ ಒಟ್ಟು ನಾಲ್ಕು (2008, 2013, 2018 ಮತ್ತು 2023) ಚುನಾವಣೆಗಳು ನಡೆದಿವೆ. ಇಲ್ಲಿಯೂ ರಾಮಲಿಂಗಾ ರೆಡ್ಡಿ ಅವರು ನಿರಂತರವಾಗಿ ಗೆಲುವು ಸಾಧಿಸಿದ್ದಾರೆ. 2018ರಲ್ಲಿ ಜಯನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ರಾಮಲಿಂಗಾ ರೆಡ್ಡಿಯವರ ಪುತ್ರಿ ಸೌಮ್ಯಾ ರೆಡ್ಡಿ ಜಯಗಳಿಸಿದ್ದರು. 2023ರ ಚುನವಾಣೆಯಲ್ಲಿ ಮರುಎಣಿಕೆಯ ಪ್ರಹಸನ ಎದುರಾಗಿ ಕೇವಲ 16 ವೋಟುಗಳಿಂದ ಸೌಮ್ಯಾ ಸೋಲುಂಡಿದ್ದಾರೆ.

ಅಧಿಕಾರದ ಮೈಲಿಗಲ್ಲುಗಳು

ರಾಮಲಿಂಗಾ ರೆಡ್ಡಿ ಅವರು ಮೊದಲು 1992ರಲ್ಲಿ ವೀರಪ್ಪ ಮೊಯ್ಲಿ ಸರ್ಕಾರದಲ್ಲಿ ಹಣಕಾಸು, ಬೃಹತ್ ಮತ್ತು ಮಧ್ಯಮ ಪ್ರಮಾಣದ ಕೈಗಾರಿಕೆ ಮತ್ತು ಎಪಿಎಂಸಿ ಸಚಿವರಾಗಿದ್ದರು. 1993-94ರವರೆಗೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷರಾಗಿದ್ದರು.

2002ರಲ್ಲಿ ಎಸ್.ಎಂ.ಕೃಷ್ಣ ಅವರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಬೆಂಗಳೂರು ನಗರ ಅಭಿವೃದ್ಧಿ ಸಚಿವರಾಗಿದ್ದರು. 2004ರಲ್ಲಿ ಎನ್. ಧರ್ಮಸಿಂಗ್ ಅವರ ಸರ್ಕಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದರು.

2013ರಲ್ಲಿ ಸಿದ್ದರಾಮಯ್ಯನವರ ಸರ್ಕಾರದಲ್ಲಿ, ರಾಮಲಿಂಗಾ ರೆಡ್ಡಿ ಅವರು 18 ಮೇ 2013ರಿಂದ 2 ಸೆಪ್ಟೆಂಬರ್ 2017ವರೆಗೆ ಕರ್ನಾಟಕದ ಸಾರಿಗೆ ಸಚಿವರಾಗಿದ್ದರು ಮತ್ತು 2 ಸೆಪ್ಟೆಂಬರ್ 2017ರಿಂದ 17 ಮೇ 2018ರವರೆಗೆ ಗೃಹ ವ್ಯವಹಾರಗಳ ರಾಜ್ಯ ಸಚಿವರಾಗಿದ್ದರು.

2021ರಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ಬೆಂಗಳೂರಿನ ಕಸ ವಿಲೇವಾರಿ ಉದ್ಯಮದಲ್ಲಿ ಹಿಡಿತ ಸಾಧಿಸಿರುವ ರಾಮಲಿಂಗಾರೆಡ್ಡಿಯವರು, ಪೌರಕಾರ್ಮಿಕರು ಮತ್ತು ಕಸ ಸಂಗ್ರಹಿಸುವ, ವಾಹನ ಚಲಾಯಿಸುವವರು ಕಾಯಂ ಆಗಲು ತಡೆಯಾಗಿದ್ದಾರೆ ಎಂಬ ಆರೋಪ ಸಹ ಅವರ ಮೇಲಿದೆ.

ಇನ್ನು ಬೆಂಗಳೂರಿನ ನಾಯಕರಾದ ಅವರಿಗೆ ಬಿಬಿಎಂಪಿ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಂಪುಟದಲ್ಲಿ ಉತ್ತಮ ಸ್ಥಾನ ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಈಗ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...