Homeಕರ್ನಾಟಕನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

- Advertisement -
- Advertisement -

ಯಡಿಯೂರಪ್ಪ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪ್ರಭಾವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಸೋಲಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಆರ್.ಬಿ.ತಿಮ್ಮಾಪೂರ ಅವರಿಗೆ ಮತ್ತೊಮ್ಮೆ ಮಂತ್ರಿ ಭಾಗ್ಯ ಒಲಿದುಬಂದಿದೆ. ಅಬಕಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿ.ಎಂ ಸಿದ್ದರಾಮಯ್ಯ ಆಪ್ತರಾಗಿರುವ ದಲಿತ ಮುಖಂಡ ತಿಮ್ಮಾಪೂರ ಅವರು, ಸೋತರೂ ಗೆದ್ದರೂ ಛಲ ಬಿಡದಂತೆ ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದಾಗ ಇವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಸೋತಾಗಲೂ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಆರ್.ಬಿ ತಿಮ್ಮಾಪೂರ್ ಅವರನ್ನು ಅದೃಷ್ಟವಂತ ರಾಜಕಾರಣಿ ಅಂತಲೇ ಕರೆಯುತ್ತಾರೆ.

ಎಸ್ಸಿ (ಎಡಗೈ) ಸಮುದಾಯದ ಪ್ರಬಲ ನಾಯಕ ಆರ್.ಬಿ. ತಿಮ್ಮಾಪೂರ (ರಾಮಣ್ಣ ಬಾಲಪ್ಪ ತಿಮ್ಮಾಪೂರ) ಅವರು ಮೂಲತಃ ಬಾದಾಮಿ ತಾಲೂಕಿನ ಕಾಡರಕೊಪ್ಪ ಗ್ರಾಮದವರು. ಬಿ.ಎ, ಎಲ್‌ಎಲ್‌ಬಿ ಪದವೀಧರರಾಗಿರುವ ಅವರು ಕಾಲೇಜು ದಿನಗಳಲ್ಲಿ ಕುಸ್ತಿಯ ಆಟದಲ್ಲಿ ಪೈಲ್ವಾನ್ ಎನಿಸಿಕೊಂಡವರು. ಈಗಲೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಪಟ್ಟುಗಳನ್ನು ಪ್ರಯೋಗಿಸುತ್ತ, ಸೋತರೂ ಗೆದ್ದರೂ ಛಲದಂಕ ಮಲ್ಲನಂತೆ ಕಣದಲ್ಲಿ ಪೈಪೋಟಿ ನೀಡುತ್ತಲೇ ಬಂದಿದ್ದಾರೆ.

ತಿಮ್ಮಾಪೂರರವರ ರಾಜಕೀಯ ಪಯಣ

1989ರಲ್ಲಿ ಆರ್.ಬಿ ತಿಮ್ಮಾಪೂರ ಅವರು ಮೊದಲ ಬಾರಿಗೆ ಮುಧೋಳ ಮೀಸಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ, ಆಗ ರಾಜ್ಯದಲ್ಲೇ ಅತ್ಯಂತ ಕಿರಿಯ (27ನೇ ವಯಸ್ಸಿಗೆ) ಶಾಸಕರಾದ ಖ್ಯಾತಿ ಪಡೆದವರು. ಒಟ್ಟು ಏಳು ಬಾರಿ ಮುಧೋಳ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಸೋಲು ಕಂಡಿದ್ದಾರೆ.

ಸ್ಪರ್ಧಿಸಿದ ಪ್ರತಿ ಚುನಾವಣೆಯಲ್ಲೂ ಪ್ರಬಲ ಪೈಪೋಟಿಯನ್ನೇ ಕೊಟ್ಟಿರುವ ತಿಮ್ಮಾಪೂರ ಅವರು, ಕ್ಷೇತ್ರದಲ್ಲೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನಸಂಪರ್ಕದಿಂದ ಯಾವತ್ತೂ ದೂರ ಉಳಿದಿಲ್ಲ. ಇಷ್ಟೊಂದು ಸೋಲುಕಂಡ ಬಳಿಕವೂ ಛಲಬಿಡದೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಕಣಕ್ಕಿಳಿದಿದ್ದರು. ತಿಮ್ಮಾಪೂರ ಅವರಿಗೆ ಸತತ ಸೋಲುಗಳಿಂದಾಗಿ ಜನರ ಅನುಕಂಪವೂ ಇದ್ದದ್ದು ಈ ಬಾರಿ ಗೆಲುವಿಗೆ ಸಹಕಾರಿಯಾಗಿದೆ.

ಮುಧೋಳ ಮೀಸಲು ಕ್ಷೇತ್ರದಲ್ಲಿ ತಿಮ್ಮಾಪೂರ ಅವರು ಪ್ರತಿಬಾರಿಯೂ ದಲಿತ ಸಮುದಾಯದ ಮತಗಳನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುತ್ತಾ ಬಂದಿದ್ದಾರೆ. ಆದರೆ ರೆಡ್ಡಿ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಾವಾಗಲೂ ಹಿಂದೆ ಬಿದ್ದಿದ್ದರು. ಇದಕ್ಕೆ ಮುಖ್ಯ ಕಾರಣ, ಅವರು ಎಂದಿಗೂ ಮತಕ್ಕಾಗಿ ದೊಡ್ಡ ಜಾತಿಗಳ ವ್ಯಕ್ತಿಗಳ ಎದುರು ಕೈಕಟ್ಟಿ ನಿಲ್ಲಲಿಲ್ಲ, ಸ್ವಾಭಿಮಾನದಿಂದಲೇ ಚುನಾವಣೆಗಳನ್ನು ಎದುರಿಸುತ್ತಾ ಬಂದವರು ಎಂದು ಗುರುತಿಸಲಾಗುತ್ತದೆ. ಹಾಗಾಗಿ ದೊಡ್ಡ ಸಮುದಾಯಗಳ ಮತಗಳು ತಮ್ಮ ಎದುರಾಳಿಯ ಪಾಲಾಗುತ್ತಿದ್ದರಿಂದ ನಾಲ್ಕು ಬಾರಿ ಸೋಲು ಕಾಣಬೇಕಾಯಿತು. ಈ ಚುನಾವಣೆಯಲ್ಲಿ ಸಂಘಪರಿವಾರದ ಬೆಂಬಲದಿಂದ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿಯು ಬಿಜೆಪಿಯ ಬುಟ್ಟಿಯಲ್ಲಿದ್ದ ಮತಗಳನ್ನು ಬಾಚಿಕೊಂಡಿದ್ದರಿಂದ ತಿಮ್ಮಾಪೂರ ಗೆಲುವು ಸುಲಭವಾಯಿತೆಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

1989ರಲ್ಲಿ ಮೊದಲ ಬಾರಿಗೆ ಮುಧೋಳ ಕ್ಷೇತ್ರದಿಂದ ಆಯ್ಕೆಯಾದ ತಿಮ್ಮಾಪೂರ ಅವರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

1999ರ ಉಪ ಚುನಾವಣೆಯಲ್ಲಿ ಮರು ಆಯ್ಕೆಯಾಗಿ ಎಪಿಎಂಸಿ ಸಚಿವರಾಗಿ ಕಾರ್ಯನಿರ್ವಹಿಸಿದರು.

2002ರಲ್ಲಿ ಎಸ್.ಎಂ.ಕೃಷ್ಣ ಸಿ.ಎಂ ಆಗಿದ್ದ ಅವಧಿಯಲ್ಲಿ ಯೋಜನೆ, ಸಾಂಖ್ಯಿಕ ಖಾತೆ ಸಚಿವರಾದರು.

2003ರಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪಕ್ಷ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಿಷ್ಠೆಯಿಂದ ಪಾಲಿಸಿದ ಹೆಗ್ಗಳಿಕೆ ಅವರದ್ದಾಗಿದೆ.

2013ರಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳರ ವಿರುದ್ಧ ಸೋಲು ಕಂಡರೂ, ಆಗ ಕಾಂಗ್ರೆಸ್ ಪಕ್ಷದ ಮುಖಂಡರು ಪಕ್ಷದಲ್ಲಿ ಇವರ ಹಿರಿತನ ಮತ್ತು ಮಾಡಿದ ಕೆಲಸ ಗುರುತಿಸಿ 2016ರಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕಗೊಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷವಿಟ್ಟ ವಿಶ್ವಾಸದಿಂದ ತಿಮ್ಮಾಪೂರ ಮತ್ತೆ ಸಚಿವ ಸ್ಥಾನ ಪಡೆದರು.

2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವ ಸ್ಥಾನ ಒಲಿದು ಬಂದಿತು. ನಂತರ ಸಕ್ಕರೆ, ಬಂದರು ಹಾಗೂ ಒಳನಾಡು ಮೀನುಗಾರಿಕೆ ಖಾತೆ ದೊರೆಯಿತು.

2023ರ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ, ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಸೋಲಿಸುವ ಮೂಲಕ ತಿಮ್ಮಾಪೂರ ಶಾಸಕರಾಗಿ ಈಗ ಅಬಕಾರಿ ಮಂತ್ರಿಯೂ ಆಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಸರಕಾರಗಳ ಅವಧಿಯಲ್ಲಿ ಮುಧೋಳ ಕ್ಷೇತ್ರದಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನಿಶ್ಚಿತ ಎನ್ನುವ ವಾಡಿಕೆಯಿದೆ. ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಆರ್.ಬಿ.ತಿಮ್ಮಾಪೂರ ಪ್ರತಿ ಬಾರಿಯೂ ಸಚಿವ ಸ್ಥಾನ ಪಡೆದಿದ್ದಾರೆ. ಇದು ಈ ಬಾರಿಯೂ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...