Homeಕರ್ನಾಟಕನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

- Advertisement -
- Advertisement -

ಯಡಿಯೂರಪ್ಪ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪ್ರಭಾವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಸೋಲಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಆರ್.ಬಿ.ತಿಮ್ಮಾಪೂರ ಅವರಿಗೆ ಮತ್ತೊಮ್ಮೆ ಮಂತ್ರಿ ಭಾಗ್ಯ ಒಲಿದುಬಂದಿದೆ. ಅಬಕಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿ.ಎಂ ಸಿದ್ದರಾಮಯ್ಯ ಆಪ್ತರಾಗಿರುವ ದಲಿತ ಮುಖಂಡ ತಿಮ್ಮಾಪೂರ ಅವರು, ಸೋತರೂ ಗೆದ್ದರೂ ಛಲ ಬಿಡದಂತೆ ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದಾಗ ಇವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಸೋತಾಗಲೂ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಆರ್.ಬಿ ತಿಮ್ಮಾಪೂರ್ ಅವರನ್ನು ಅದೃಷ್ಟವಂತ ರಾಜಕಾರಣಿ ಅಂತಲೇ ಕರೆಯುತ್ತಾರೆ.

ಎಸ್ಸಿ (ಎಡಗೈ) ಸಮುದಾಯದ ಪ್ರಬಲ ನಾಯಕ ಆರ್.ಬಿ. ತಿಮ್ಮಾಪೂರ (ರಾಮಣ್ಣ ಬಾಲಪ್ಪ ತಿಮ್ಮಾಪೂರ) ಅವರು ಮೂಲತಃ ಬಾದಾಮಿ ತಾಲೂಕಿನ ಕಾಡರಕೊಪ್ಪ ಗ್ರಾಮದವರು. ಬಿ.ಎ, ಎಲ್‌ಎಲ್‌ಬಿ ಪದವೀಧರರಾಗಿರುವ ಅವರು ಕಾಲೇಜು ದಿನಗಳಲ್ಲಿ ಕುಸ್ತಿಯ ಆಟದಲ್ಲಿ ಪೈಲ್ವಾನ್ ಎನಿಸಿಕೊಂಡವರು. ಈಗಲೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಪಟ್ಟುಗಳನ್ನು ಪ್ರಯೋಗಿಸುತ್ತ, ಸೋತರೂ ಗೆದ್ದರೂ ಛಲದಂಕ ಮಲ್ಲನಂತೆ ಕಣದಲ್ಲಿ ಪೈಪೋಟಿ ನೀಡುತ್ತಲೇ ಬಂದಿದ್ದಾರೆ.

ತಿಮ್ಮಾಪೂರರವರ ರಾಜಕೀಯ ಪಯಣ

1989ರಲ್ಲಿ ಆರ್.ಬಿ ತಿಮ್ಮಾಪೂರ ಅವರು ಮೊದಲ ಬಾರಿಗೆ ಮುಧೋಳ ಮೀಸಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ, ಆಗ ರಾಜ್ಯದಲ್ಲೇ ಅತ್ಯಂತ ಕಿರಿಯ (27ನೇ ವಯಸ್ಸಿಗೆ) ಶಾಸಕರಾದ ಖ್ಯಾತಿ ಪಡೆದವರು. ಒಟ್ಟು ಏಳು ಬಾರಿ ಮುಧೋಳ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಸೋಲು ಕಂಡಿದ್ದಾರೆ.

ಸ್ಪರ್ಧಿಸಿದ ಪ್ರತಿ ಚುನಾವಣೆಯಲ್ಲೂ ಪ್ರಬಲ ಪೈಪೋಟಿಯನ್ನೇ ಕೊಟ್ಟಿರುವ ತಿಮ್ಮಾಪೂರ ಅವರು, ಕ್ಷೇತ್ರದಲ್ಲೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನಸಂಪರ್ಕದಿಂದ ಯಾವತ್ತೂ ದೂರ ಉಳಿದಿಲ್ಲ. ಇಷ್ಟೊಂದು ಸೋಲುಕಂಡ ಬಳಿಕವೂ ಛಲಬಿಡದೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಕಣಕ್ಕಿಳಿದಿದ್ದರು. ತಿಮ್ಮಾಪೂರ ಅವರಿಗೆ ಸತತ ಸೋಲುಗಳಿಂದಾಗಿ ಜನರ ಅನುಕಂಪವೂ ಇದ್ದದ್ದು ಈ ಬಾರಿ ಗೆಲುವಿಗೆ ಸಹಕಾರಿಯಾಗಿದೆ.

ಮುಧೋಳ ಮೀಸಲು ಕ್ಷೇತ್ರದಲ್ಲಿ ತಿಮ್ಮಾಪೂರ ಅವರು ಪ್ರತಿಬಾರಿಯೂ ದಲಿತ ಸಮುದಾಯದ ಮತಗಳನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುತ್ತಾ ಬಂದಿದ್ದಾರೆ. ಆದರೆ ರೆಡ್ಡಿ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಾವಾಗಲೂ ಹಿಂದೆ ಬಿದ್ದಿದ್ದರು. ಇದಕ್ಕೆ ಮುಖ್ಯ ಕಾರಣ, ಅವರು ಎಂದಿಗೂ ಮತಕ್ಕಾಗಿ ದೊಡ್ಡ ಜಾತಿಗಳ ವ್ಯಕ್ತಿಗಳ ಎದುರು ಕೈಕಟ್ಟಿ ನಿಲ್ಲಲಿಲ್ಲ, ಸ್ವಾಭಿಮಾನದಿಂದಲೇ ಚುನಾವಣೆಗಳನ್ನು ಎದುರಿಸುತ್ತಾ ಬಂದವರು ಎಂದು ಗುರುತಿಸಲಾಗುತ್ತದೆ. ಹಾಗಾಗಿ ದೊಡ್ಡ ಸಮುದಾಯಗಳ ಮತಗಳು ತಮ್ಮ ಎದುರಾಳಿಯ ಪಾಲಾಗುತ್ತಿದ್ದರಿಂದ ನಾಲ್ಕು ಬಾರಿ ಸೋಲು ಕಾಣಬೇಕಾಯಿತು. ಈ ಚುನಾವಣೆಯಲ್ಲಿ ಸಂಘಪರಿವಾರದ ಬೆಂಬಲದಿಂದ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿಯು ಬಿಜೆಪಿಯ ಬುಟ್ಟಿಯಲ್ಲಿದ್ದ ಮತಗಳನ್ನು ಬಾಚಿಕೊಂಡಿದ್ದರಿಂದ ತಿಮ್ಮಾಪೂರ ಗೆಲುವು ಸುಲಭವಾಯಿತೆಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

1989ರಲ್ಲಿ ಮೊದಲ ಬಾರಿಗೆ ಮುಧೋಳ ಕ್ಷೇತ್ರದಿಂದ ಆಯ್ಕೆಯಾದ ತಿಮ್ಮಾಪೂರ ಅವರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

1999ರ ಉಪ ಚುನಾವಣೆಯಲ್ಲಿ ಮರು ಆಯ್ಕೆಯಾಗಿ ಎಪಿಎಂಸಿ ಸಚಿವರಾಗಿ ಕಾರ್ಯನಿರ್ವಹಿಸಿದರು.

2002ರಲ್ಲಿ ಎಸ್.ಎಂ.ಕೃಷ್ಣ ಸಿ.ಎಂ ಆಗಿದ್ದ ಅವಧಿಯಲ್ಲಿ ಯೋಜನೆ, ಸಾಂಖ್ಯಿಕ ಖಾತೆ ಸಚಿವರಾದರು.

2003ರಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪಕ್ಷ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಿಷ್ಠೆಯಿಂದ ಪಾಲಿಸಿದ ಹೆಗ್ಗಳಿಕೆ ಅವರದ್ದಾಗಿದೆ.

2013ರಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳರ ವಿರುದ್ಧ ಸೋಲು ಕಂಡರೂ, ಆಗ ಕಾಂಗ್ರೆಸ್ ಪಕ್ಷದ ಮುಖಂಡರು ಪಕ್ಷದಲ್ಲಿ ಇವರ ಹಿರಿತನ ಮತ್ತು ಮಾಡಿದ ಕೆಲಸ ಗುರುತಿಸಿ 2016ರಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕಗೊಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷವಿಟ್ಟ ವಿಶ್ವಾಸದಿಂದ ತಿಮ್ಮಾಪೂರ ಮತ್ತೆ ಸಚಿವ ಸ್ಥಾನ ಪಡೆದರು.

2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವ ಸ್ಥಾನ ಒಲಿದು ಬಂದಿತು. ನಂತರ ಸಕ್ಕರೆ, ಬಂದರು ಹಾಗೂ ಒಳನಾಡು ಮೀನುಗಾರಿಕೆ ಖಾತೆ ದೊರೆಯಿತು.

2023ರ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ, ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಸೋಲಿಸುವ ಮೂಲಕ ತಿಮ್ಮಾಪೂರ ಶಾಸಕರಾಗಿ ಈಗ ಅಬಕಾರಿ ಮಂತ್ರಿಯೂ ಆಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಸರಕಾರಗಳ ಅವಧಿಯಲ್ಲಿ ಮುಧೋಳ ಕ್ಷೇತ್ರದಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನಿಶ್ಚಿತ ಎನ್ನುವ ವಾಡಿಕೆಯಿದೆ. ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಆರ್.ಬಿ.ತಿಮ್ಮಾಪೂರ ಪ್ರತಿ ಬಾರಿಯೂ ಸಚಿವ ಸ್ಥಾನ ಪಡೆದಿದ್ದಾರೆ. ಇದು ಈ ಬಾರಿಯೂ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...