Homeಕರ್ನಾಟಕನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

ನಮ್ಮ ಸಚಿವರಿವರು; ಕಾಂಗ್ರೆಸ್‌ ಪಕ್ಷದ ಕಟ್ಟಾಳು, ಛಲದಂಕಮಲ್ಲ ಆರ್.ಬಿ.ತಿಮ್ಮಾಪೂರಗೆ ಅಬಕಾರಿ ಖಾತೆ

- Advertisement -
- Advertisement -

ಯಡಿಯೂರಪ್ಪ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ಪ್ರಭಾವಿ ರಾಜಕಾರಣಿ ಗೋವಿಂದ ಕಾರಜೋಳ ಅವರನ್ನು ಸೋಲಿಸಿ ಬಾಗಲಕೋಟೆ ಜಿಲ್ಲೆಯ ಮುಧೋಳ ಮೀಸಲು ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಆರ್.ಬಿ.ತಿಮ್ಮಾಪೂರ ಅವರಿಗೆ ಮತ್ತೊಮ್ಮೆ ಮಂತ್ರಿ ಭಾಗ್ಯ ಒಲಿದುಬಂದಿದೆ. ಅಬಕಾರಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಸಿ.ಎಂ ಸಿದ್ದರಾಮಯ್ಯ ಆಪ್ತರಾಗಿರುವ ದಲಿತ ಮುಖಂಡ ತಿಮ್ಮಾಪೂರ ಅವರು, ಸೋತರೂ ಗೆದ್ದರೂ ಛಲ ಬಿಡದಂತೆ ಪಕ್ಷಕ್ಕಾಗಿ ನಿಷ್ಠೆಯಿಂದ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಈ ಹಿಂದೆ ಶಾಸಕರಾಗಿ ಆಯ್ಕೆಯಾದಾಗ ಇವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಸೋತಾಗಲೂ, ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ವಿಧಾನಪರಿಷತ್‌ಗೆ ಆಯ್ಕೆ ಮಾಡಿ ಸಚಿವ ಸ್ಥಾನ ನೀಡಲಾಗಿದೆ. ಹೀಗಾಗಿ ರಾಜ್ಯ ರಾಜಕಾರಣದಲ್ಲಿ ಆರ್.ಬಿ ತಿಮ್ಮಾಪೂರ್ ಅವರನ್ನು ಅದೃಷ್ಟವಂತ ರಾಜಕಾರಣಿ ಅಂತಲೇ ಕರೆಯುತ್ತಾರೆ.

ಎಸ್ಸಿ (ಎಡಗೈ) ಸಮುದಾಯದ ಪ್ರಬಲ ನಾಯಕ ಆರ್.ಬಿ. ತಿಮ್ಮಾಪೂರ (ರಾಮಣ್ಣ ಬಾಲಪ್ಪ ತಿಮ್ಮಾಪೂರ) ಅವರು ಮೂಲತಃ ಬಾದಾಮಿ ತಾಲೂಕಿನ ಕಾಡರಕೊಪ್ಪ ಗ್ರಾಮದವರು. ಬಿ.ಎ, ಎಲ್‌ಎಲ್‌ಬಿ ಪದವೀಧರರಾಗಿರುವ ಅವರು ಕಾಲೇಜು ದಿನಗಳಲ್ಲಿ ಕುಸ್ತಿಯ ಆಟದಲ್ಲಿ ಪೈಲ್ವಾನ್ ಎನಿಸಿಕೊಂಡವರು. ಈಗಲೂ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಪಟ್ಟುಗಳನ್ನು ಪ್ರಯೋಗಿಸುತ್ತ, ಸೋತರೂ ಗೆದ್ದರೂ ಛಲದಂಕ ಮಲ್ಲನಂತೆ ಕಣದಲ್ಲಿ ಪೈಪೋಟಿ ನೀಡುತ್ತಲೇ ಬಂದಿದ್ದಾರೆ.

ತಿಮ್ಮಾಪೂರರವರ ರಾಜಕೀಯ ಪಯಣ

1989ರಲ್ಲಿ ಆರ್.ಬಿ ತಿಮ್ಮಾಪೂರ ಅವರು ಮೊದಲ ಬಾರಿಗೆ ಮುಧೋಳ ಮೀಸಲು ಕ್ಷೇತ್ರದಿಂದ ಆಯ್ಕೆಯಾಗುವ ಮೂಲಕ, ಆಗ ರಾಜ್ಯದಲ್ಲೇ ಅತ್ಯಂತ ಕಿರಿಯ (27ನೇ ವಯಸ್ಸಿಗೆ) ಶಾಸಕರಾದ ಖ್ಯಾತಿ ಪಡೆದವರು. ಒಟ್ಟು ಏಳು ಬಾರಿ ಮುಧೋಳ ಕ್ಷೇತ್ರದಿಂದ ಸ್ಪರ್ಧಿಸಿ ಮೂರು ಬಾರಿ ಗೆಲುವು ಸಾಧಿಸಿದ್ದಾರೆ. ನಾಲ್ಕು ಬಾರಿ ಸೋಲು ಕಂಡಿದ್ದಾರೆ.

ಸ್ಪರ್ಧಿಸಿದ ಪ್ರತಿ ಚುನಾವಣೆಯಲ್ಲೂ ಪ್ರಬಲ ಪೈಪೋಟಿಯನ್ನೇ ಕೊಟ್ಟಿರುವ ತಿಮ್ಮಾಪೂರ ಅವರು, ಕ್ಷೇತ್ರದಲ್ಲೂ ಒಳ್ಳೆಯ ಹೆಸರು ಗಳಿಸಿದ್ದಾರೆ. ಜನಸಂಪರ್ಕದಿಂದ ಯಾವತ್ತೂ ದೂರ ಉಳಿದಿಲ್ಲ. ಇಷ್ಟೊಂದು ಸೋಲುಕಂಡ ಬಳಿಕವೂ ಛಲಬಿಡದೇ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿ ಕಣಕ್ಕಿಳಿದಿದ್ದರು. ತಿಮ್ಮಾಪೂರ ಅವರಿಗೆ ಸತತ ಸೋಲುಗಳಿಂದಾಗಿ ಜನರ ಅನುಕಂಪವೂ ಇದ್ದದ್ದು ಈ ಬಾರಿ ಗೆಲುವಿಗೆ ಸಹಕಾರಿಯಾಗಿದೆ.

ಮುಧೋಳ ಮೀಸಲು ಕ್ಷೇತ್ರದಲ್ಲಿ ತಿಮ್ಮಾಪೂರ ಅವರು ಪ್ರತಿಬಾರಿಯೂ ದಲಿತ ಸಮುದಾಯದ ಮತಗಳನ್ನು ಗಟ್ಟಿಯಾಗಿ ಹಿಡಿದಿಟ್ಟುಕೊಳ್ಳುತ್ತಾ ಬಂದಿದ್ದಾರೆ. ಆದರೆ ರೆಡ್ಡಿ ಸಮುದಾಯದ ಮತಗಳನ್ನು ಸೆಳೆಯುವಲ್ಲಿ ಯಾವಾಗಲೂ ಹಿಂದೆ ಬಿದ್ದಿದ್ದರು. ಇದಕ್ಕೆ ಮುಖ್ಯ ಕಾರಣ, ಅವರು ಎಂದಿಗೂ ಮತಕ್ಕಾಗಿ ದೊಡ್ಡ ಜಾತಿಗಳ ವ್ಯಕ್ತಿಗಳ ಎದುರು ಕೈಕಟ್ಟಿ ನಿಲ್ಲಲಿಲ್ಲ, ಸ್ವಾಭಿಮಾನದಿಂದಲೇ ಚುನಾವಣೆಗಳನ್ನು ಎದುರಿಸುತ್ತಾ ಬಂದವರು ಎಂದು ಗುರುತಿಸಲಾಗುತ್ತದೆ. ಹಾಗಾಗಿ ದೊಡ್ಡ ಸಮುದಾಯಗಳ ಮತಗಳು ತಮ್ಮ ಎದುರಾಳಿಯ ಪಾಲಾಗುತ್ತಿದ್ದರಿಂದ ನಾಲ್ಕು ಬಾರಿ ಸೋಲು ಕಾಣಬೇಕಾಯಿತು. ಈ ಚುನಾವಣೆಯಲ್ಲಿ ಸಂಘಪರಿವಾರದ ಬೆಂಬಲದಿಂದ ಸ್ಪರ್ಧಿಸಿದ ಪಕ್ಷೇತರ ಅಭ್ಯರ್ಥಿಯು ಬಿಜೆಪಿಯ ಬುಟ್ಟಿಯಲ್ಲಿದ್ದ ಮತಗಳನ್ನು ಬಾಚಿಕೊಂಡಿದ್ದರಿಂದ ತಿಮ್ಮಾಪೂರ ಗೆಲುವು ಸುಲಭವಾಯಿತೆಂದು ವಿಶ್ಲೇಷಿಸಲಾಗುತ್ತಿದೆ.

ಇದನ್ನೂ ಓದಿ: ನಮ್ಮ ಸಚಿವರಿವರು: ಸಭ್ಯ ರಾಜಕಾರಣಕ್ಕೆ ಮತ್ತೊಂದು ಹೆಸರೇ ‘ಕೆ.ವೆಂಕಟೇಶ್‌’

1989ರಲ್ಲಿ ಮೊದಲ ಬಾರಿಗೆ ಮುಧೋಳ ಕ್ಷೇತ್ರದಿಂದ ಆಯ್ಕೆಯಾದ ತಿಮ್ಮಾಪೂರ ಅವರು ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

1999ರ ಉಪ ಚುನಾವಣೆಯಲ್ಲಿ ಮರು ಆಯ್ಕೆಯಾಗಿ ಎಪಿಎಂಸಿ ಸಚಿವರಾಗಿ ಕಾರ್ಯನಿರ್ವಹಿಸಿದರು.

2002ರಲ್ಲಿ ಎಸ್.ಎಂ.ಕೃಷ್ಣ ಸಿ.ಎಂ ಆಗಿದ್ದ ಅವಧಿಯಲ್ಲಿ ಯೋಜನೆ, ಸಾಂಖ್ಯಿಕ ಖಾತೆ ಸಚಿವರಾದರು.

2003ರಲ್ಲಿ ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷರು, ರಾಜ್ಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದರು. ಪಕ್ಷ ಯಾವುದೇ ಜವಾಬ್ದಾರಿಯನ್ನು ವಹಿಸಿದರೂ ನಿಷ್ಠೆಯಿಂದ ಪಾಲಿಸಿದ ಹೆಗ್ಗಳಿಕೆ ಅವರದ್ದಾಗಿದೆ.

2013ರಲ್ಲಿ ಮಾಜಿ ಸಚಿವ ಗೋವಿಂದ ಕಾರಜೋಳರ ವಿರುದ್ಧ ಸೋಲು ಕಂಡರೂ, ಆಗ ಕಾಂಗ್ರೆಸ್ ಪಕ್ಷದ ಮುಖಂಡರು ಪಕ್ಷದಲ್ಲಿ ಇವರ ಹಿರಿತನ ಮತ್ತು ಮಾಡಿದ ಕೆಲಸ ಗುರುತಿಸಿ 2016ರಲ್ಲಿ ವಿಧಾನ ಪರಿಷತ್ ಸದಸ್ಯರನ್ನಾಗಿ ನೇಮಕಗೊಳಿಸಿದರು. ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಪಕ್ಷವಿಟ್ಟ ವಿಶ್ವಾಸದಿಂದ ತಿಮ್ಮಾಪೂರ ಮತ್ತೆ ಸಚಿವ ಸ್ಥಾನ ಪಡೆದರು.

2017ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಅಬಕಾರಿ ಸಚಿವ ಸ್ಥಾನ ಒಲಿದು ಬಂದಿತು. ನಂತರ ಸಕ್ಕರೆ, ಬಂದರು ಹಾಗೂ ಒಳನಾಡು ಮೀನುಗಾರಿಕೆ ಖಾತೆ ದೊರೆಯಿತು.

2023ರ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿ, ಮಾಜಿ ಉಪಮುಖ್ಯಮಂತ್ರಿ, ಬಿಜೆಪಿಯ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಸೋಲಿಸುವ ಮೂಲಕ ತಿಮ್ಮಾಪೂರ ಶಾಸಕರಾಗಿ ಈಗ ಅಬಕಾರಿ ಮಂತ್ರಿಯೂ ಆಗಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್, ಬಿಜೆಪಿ ಸರಕಾರಗಳ ಅವಧಿಯಲ್ಲಿ ಮುಧೋಳ ಕ್ಷೇತ್ರದಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನಿಶ್ಚಿತ ಎನ್ನುವ ವಾಡಿಕೆಯಿದೆ. ಕ್ಷೇತ್ರದಿಂದ ಆಯ್ಕೆಯಾದ ಬಿಜೆಪಿಯ ಗೋವಿಂದ ಕಾರಜೋಳ, ಕಾಂಗ್ರೆಸ್‌ನ ಆರ್.ಬಿ.ತಿಮ್ಮಾಪೂರ ಪ್ರತಿ ಬಾರಿಯೂ ಸಚಿವ ಸ್ಥಾನ ಪಡೆದಿದ್ದಾರೆ. ಇದು ಈ ಬಾರಿಯೂ ಮುಂದುವರಿದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...