Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಸಂದರ್ಭ; ಎಂಟನೇ ತರಗತಿಯಷ್ಟೇ ಓದಿದ್ದ ಹಾಗೂ ಖ್ಯಾತ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕರೂ ಆಗಿದ್ದಂತಹ ಉದ್ಯಮಿ ಜಮೀರ್ ಅಹ್ಮದ್ ಖಾನ್ ಎಂಬ ವ್ಯಕ್ತಿಯ ಬದುಕಲ್ಲಿ ಅತಿದೊಡ್ಡ ರಾಜಕೀಯ ತಿರುವು ಪಡೆಯಲಿದೆ ಎಂದು ಹೆಚ್ಚಿನ ಜನಕ್ಕೆ ಗೊತ್ತಿರಲಿಲ್ಲ. ಆದರೆ, ಅದು ಸಾಧ್ಯವಾಗಿತ್ತು.

ಅಸಲಿಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. 2003ರ ಚುನಾವಣೆಯಲ್ಲಿ ಅಂದಿನ ಶಾಸಕ ಆರ್.ವಿ ದೇವರಾಜ್ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಚುನಾವಣೆಯಲ್ಲಿ ಗೆದ್ದಿದ್ದ ಕೃಷ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ 2005ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 36ರ ಹರೆಯದ ಜಮೀರ್ ಅಹ್ಮದ್ ಕಣಕ್ಕಿಳಿದಿದ್ದರು. ಅವರು ಅಲ್ಲಿಂದ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಜಮೀರ್ ಚಾಮರಾಜಪೇಟೆ ಕ್ಷೇತ್ರದಿಂದ ಈವರೆಗೆ ಒಟ್ಟು ಐದು ಬಾರಿ ಪುನರಾಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೇಳಿಕೊಳ್ಳುವ ಜಮೀರ್ ಅಹ್ಮದ್ ಆರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೀಗಾಗಿ 2006ರ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಇವರಿಗೆ ಹಜ್ ಮತ್ತು ವಕ್ಫ್ ಖಾತೆಯ ಸಚಿವ ಸ್ಥಾನ ನೀಡಲಾಗಿತ್ತು.

2008, 2013ರಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದರು. ಆದರೆ, 2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣ ಜೆಡಿಎಸ್‌ನಿಂದ ಜಮೀರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಜಮೀರ್ ತಮ್ಮ ಇತರೆ ಬೆಂಬಲಿಗೆ ಶಾಸಕರು ಹಾಗೂ ನಾಯಕರ ಜೊತೆಗೂಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 2016ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅಂದಿನಿಂದ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

2018ರ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದ ಜಮೀರ್ ಅಹ್ಮದ್, ಕಳೆದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತದ ಸರ್ಕಾರ ರಚಿಸಿದ್ದು, ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ನಿರೀಕ್ಷೆಯಂತೆಯೇ ಸಚಿವ ಸ್ಥಾನ ದೊರೆತಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ರಾಜಕಾರಣ ಜೊತೆ ಜೊತೆಗೇ ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡು ಸುದ್ದಿಯಾಗುವುದೂ ಸಹ ಜಮೀರ್ ಅವರಿಗೆ ಮಾಮೂಲಿ. ಈ ಹಿಂದೆಯೂ ಸಹ ಜಮೀರ್ ಇಂಗ್ಲಿಷ್ ಭಾಷೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಕನ್ನಡಪರ ಹೋರಾಟಗಾರರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಕ್ಷಮೆ ಕೋರಿದ್ದ ಅವರು, “ನಾನು ಮೊದಲು ಕನ್ನಡಿಗ ನಂತರವೇ ಮುಸ್ಲಿಂ, ಮುಂದಿನ ಬಾರಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ” ಎಂದು ಮಾತು ನೀಡಿದ್ದರು. ಈಗ ಮತ್ತೊಮ್ಮೆ ಇಂಗ್ಲಿಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವ ಜಮೀರ್ ಪರವಾಗಿ ಮತ್ತು ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.

ಜಮೀರ್ ಅಹ್ಮದ್ ಎಷ್ಟೇ ವಿವಾದಗಳಿಗೆ ಈಡಾದರೂ, ಚಾಮರಾಜಪೇಟೆ ಕ್ಷೇತ್ರದ ಮತದಾರರ ಮಟ್ಟಿಗೆ ಮಾತ್ರ ಇವರು ಸಾಕಷ್ಟು ಜನಪ್ರಿಯ ಮತ್ತು ಜನಾನುರಾಗಿ ಎಂದೇ ಹೆಸರುವಾಸಿ. ಅಲ್ಲದೆ, ತಮ್ಮ ವ್ಯಂಗ್ಯಭರಿತ, ಉರ್ದು ಮಿಶ್ರಿತ ವಿಶಿಷ್ಟ ಕನ್ನಡದಲ್ಲಿ ಮಾಡುವ ಭಾಷಣದಿಂದಲೇ ಕರ್ನಾಟಕದಲ್ಲಿ ಚಿರಪರಿಚಿತರು ಮತ್ತು ಮುಸ್ಲಿಂ ಮುಖಂಡರುಗಳ ಪೈಕಿ ಮುಂಚೂಣಿ ಸಾಲಿನಲ್ಲಿ ನಿಲ್ಲುವ ನಾಯಕ.

ಸಿದ್ದರಾಮಯ್ಯ

ಇದರ ನಡುವೆಯೇ 2009ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಮೀರ್ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪಿ.ಸಿ ಮೋಹನ್ ಅವರ ಎದುರು ಸೋಲು ಅನುಭವಿಸಿದ್ದರು. ಆದರೂ ಸಹ ರಾಜಧಾನಿ ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಭಾರೀ ಪ್ರಾಬಲ್ಯ ಹೊಂದಿದ್ದಾರೆ ಎಂದೇ ಹೇಳಲಾಗುತ್ತದೆ. 2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿರಲಿಲ್ಲ. ಇದರ ಹಿಂದೆ ಜಮೀರ್ ಅಹ್ಮದ್ ಅವರ ತಂತ್ರ ಕಾರಣ ಎಂದು ಹೇಳಲಾಗಿತ್ತು.

ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಇ.ಡಿ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅವರ ಐಶಾರಾಮಿ ಬಂಗಲೆ ಸಾರ್ವಜನಿಕ ವಲಯದಲ್ಲಿ ಅವರಿಗಿಂತಲೂ ದೊಡ್ಡ ಮಟ್ಟದ ಸದ್ದು ಮಾಡಿತ್ತು ಎಂಬುದು ಉಲ್ಲೇಖಾರ್ಹ.

ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರು ಹಲವು ಮುಸ್ಲಿಂ ಸಮುದಾಯದ ಹಿರಿಯ ಶಾಸಕರನ್ನೂ ಹಿಂದಿಕ್ಕಿ ಸಂಪುಟದ ಮೊದಲ ಸಚಿವರ ಪಟ್ಟಿಯಲ್ಲಿಯೇ ಕಾಣಿಸಿಕೊಂಡಿರುವುದು ಕಾಂಗ್ರೆಸ್‌ನ ಒಂದು ಬಣದ ಹುಬ್ಬೇರಿಸಿದೆ ಎಂಬ ಚರ್ಚೆಗಳು ಪ್ರಚಲಿತದಲ್ಲಿವೆ. ಪ್ರಸಕ್ತ ಸಂಪುಟದಲ್ಲಿ ಜಮೀರ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾರ ವ್ಯವಹಾರಗಳ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...