Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಸಂದರ್ಭ; ಎಂಟನೇ ತರಗತಿಯಷ್ಟೇ ಓದಿದ್ದ ಹಾಗೂ ಖ್ಯಾತ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕರೂ ಆಗಿದ್ದಂತಹ ಉದ್ಯಮಿ ಜಮೀರ್ ಅಹ್ಮದ್ ಖಾನ್ ಎಂಬ ವ್ಯಕ್ತಿಯ ಬದುಕಲ್ಲಿ ಅತಿದೊಡ್ಡ ರಾಜಕೀಯ ತಿರುವು ಪಡೆಯಲಿದೆ ಎಂದು ಹೆಚ್ಚಿನ ಜನಕ್ಕೆ ಗೊತ್ತಿರಲಿಲ್ಲ. ಆದರೆ, ಅದು ಸಾಧ್ಯವಾಗಿತ್ತು.

ಅಸಲಿಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. 2003ರ ಚುನಾವಣೆಯಲ್ಲಿ ಅಂದಿನ ಶಾಸಕ ಆರ್.ವಿ ದೇವರಾಜ್ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಚುನಾವಣೆಯಲ್ಲಿ ಗೆದ್ದಿದ್ದ ಕೃಷ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ 2005ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 36ರ ಹರೆಯದ ಜಮೀರ್ ಅಹ್ಮದ್ ಕಣಕ್ಕಿಳಿದಿದ್ದರು. ಅವರು ಅಲ್ಲಿಂದ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಜಮೀರ್ ಚಾಮರಾಜಪೇಟೆ ಕ್ಷೇತ್ರದಿಂದ ಈವರೆಗೆ ಒಟ್ಟು ಐದು ಬಾರಿ ಪುನರಾಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೇಳಿಕೊಳ್ಳುವ ಜಮೀರ್ ಅಹ್ಮದ್ ಆರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೀಗಾಗಿ 2006ರ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಇವರಿಗೆ ಹಜ್ ಮತ್ತು ವಕ್ಫ್ ಖಾತೆಯ ಸಚಿವ ಸ್ಥಾನ ನೀಡಲಾಗಿತ್ತು.

2008, 2013ರಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದರು. ಆದರೆ, 2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣ ಜೆಡಿಎಸ್‌ನಿಂದ ಜಮೀರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಜಮೀರ್ ತಮ್ಮ ಇತರೆ ಬೆಂಬಲಿಗೆ ಶಾಸಕರು ಹಾಗೂ ನಾಯಕರ ಜೊತೆಗೂಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 2016ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅಂದಿನಿಂದ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

2018ರ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದ ಜಮೀರ್ ಅಹ್ಮದ್, ಕಳೆದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತದ ಸರ್ಕಾರ ರಚಿಸಿದ್ದು, ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ನಿರೀಕ್ಷೆಯಂತೆಯೇ ಸಚಿವ ಸ್ಥಾನ ದೊರೆತಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ರಾಜಕಾರಣ ಜೊತೆ ಜೊತೆಗೇ ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡು ಸುದ್ದಿಯಾಗುವುದೂ ಸಹ ಜಮೀರ್ ಅವರಿಗೆ ಮಾಮೂಲಿ. ಈ ಹಿಂದೆಯೂ ಸಹ ಜಮೀರ್ ಇಂಗ್ಲಿಷ್ ಭಾಷೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಕನ್ನಡಪರ ಹೋರಾಟಗಾರರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಕ್ಷಮೆ ಕೋರಿದ್ದ ಅವರು, “ನಾನು ಮೊದಲು ಕನ್ನಡಿಗ ನಂತರವೇ ಮುಸ್ಲಿಂ, ಮುಂದಿನ ಬಾರಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ” ಎಂದು ಮಾತು ನೀಡಿದ್ದರು. ಈಗ ಮತ್ತೊಮ್ಮೆ ಇಂಗ್ಲಿಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವ ಜಮೀರ್ ಪರವಾಗಿ ಮತ್ತು ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.

ಜಮೀರ್ ಅಹ್ಮದ್ ಎಷ್ಟೇ ವಿವಾದಗಳಿಗೆ ಈಡಾದರೂ, ಚಾಮರಾಜಪೇಟೆ ಕ್ಷೇತ್ರದ ಮತದಾರರ ಮಟ್ಟಿಗೆ ಮಾತ್ರ ಇವರು ಸಾಕಷ್ಟು ಜನಪ್ರಿಯ ಮತ್ತು ಜನಾನುರಾಗಿ ಎಂದೇ ಹೆಸರುವಾಸಿ. ಅಲ್ಲದೆ, ತಮ್ಮ ವ್ಯಂಗ್ಯಭರಿತ, ಉರ್ದು ಮಿಶ್ರಿತ ವಿಶಿಷ್ಟ ಕನ್ನಡದಲ್ಲಿ ಮಾಡುವ ಭಾಷಣದಿಂದಲೇ ಕರ್ನಾಟಕದಲ್ಲಿ ಚಿರಪರಿಚಿತರು ಮತ್ತು ಮುಸ್ಲಿಂ ಮುಖಂಡರುಗಳ ಪೈಕಿ ಮುಂಚೂಣಿ ಸಾಲಿನಲ್ಲಿ ನಿಲ್ಲುವ ನಾಯಕ.

ಸಿದ್ದರಾಮಯ್ಯ

ಇದರ ನಡುವೆಯೇ 2009ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಮೀರ್ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪಿ.ಸಿ ಮೋಹನ್ ಅವರ ಎದುರು ಸೋಲು ಅನುಭವಿಸಿದ್ದರು. ಆದರೂ ಸಹ ರಾಜಧಾನಿ ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಭಾರೀ ಪ್ರಾಬಲ್ಯ ಹೊಂದಿದ್ದಾರೆ ಎಂದೇ ಹೇಳಲಾಗುತ್ತದೆ. 2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿರಲಿಲ್ಲ. ಇದರ ಹಿಂದೆ ಜಮೀರ್ ಅಹ್ಮದ್ ಅವರ ತಂತ್ರ ಕಾರಣ ಎಂದು ಹೇಳಲಾಗಿತ್ತು.

ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಇ.ಡಿ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅವರ ಐಶಾರಾಮಿ ಬಂಗಲೆ ಸಾರ್ವಜನಿಕ ವಲಯದಲ್ಲಿ ಅವರಿಗಿಂತಲೂ ದೊಡ್ಡ ಮಟ್ಟದ ಸದ್ದು ಮಾಡಿತ್ತು ಎಂಬುದು ಉಲ್ಲೇಖಾರ್ಹ.

ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರು ಹಲವು ಮುಸ್ಲಿಂ ಸಮುದಾಯದ ಹಿರಿಯ ಶಾಸಕರನ್ನೂ ಹಿಂದಿಕ್ಕಿ ಸಂಪುಟದ ಮೊದಲ ಸಚಿವರ ಪಟ್ಟಿಯಲ್ಲಿಯೇ ಕಾಣಿಸಿಕೊಂಡಿರುವುದು ಕಾಂಗ್ರೆಸ್‌ನ ಒಂದು ಬಣದ ಹುಬ್ಬೇರಿಸಿದೆ ಎಂಬ ಚರ್ಚೆಗಳು ಪ್ರಚಲಿತದಲ್ಲಿವೆ. ಪ್ರಸಕ್ತ ಸಂಪುಟದಲ್ಲಿ ಜಮೀರ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾರ ವ್ಯವಹಾರಗಳ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...