Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಸಂದರ್ಭ; ಎಂಟನೇ ತರಗತಿಯಷ್ಟೇ ಓದಿದ್ದ ಹಾಗೂ ಖ್ಯಾತ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕರೂ ಆಗಿದ್ದಂತಹ ಉದ್ಯಮಿ ಜಮೀರ್ ಅಹ್ಮದ್ ಖಾನ್ ಎಂಬ ವ್ಯಕ್ತಿಯ ಬದುಕಲ್ಲಿ ಅತಿದೊಡ್ಡ ರಾಜಕೀಯ ತಿರುವು ಪಡೆಯಲಿದೆ ಎಂದು ಹೆಚ್ಚಿನ ಜನಕ್ಕೆ ಗೊತ್ತಿರಲಿಲ್ಲ. ಆದರೆ, ಅದು ಸಾಧ್ಯವಾಗಿತ್ತು.

ಅಸಲಿಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. 2003ರ ಚುನಾವಣೆಯಲ್ಲಿ ಅಂದಿನ ಶಾಸಕ ಆರ್.ವಿ ದೇವರಾಜ್ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಚುನಾವಣೆಯಲ್ಲಿ ಗೆದ್ದಿದ್ದ ಕೃಷ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ 2005ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 36ರ ಹರೆಯದ ಜಮೀರ್ ಅಹ್ಮದ್ ಕಣಕ್ಕಿಳಿದಿದ್ದರು. ಅವರು ಅಲ್ಲಿಂದ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಜಮೀರ್ ಚಾಮರಾಜಪೇಟೆ ಕ್ಷೇತ್ರದಿಂದ ಈವರೆಗೆ ಒಟ್ಟು ಐದು ಬಾರಿ ಪುನರಾಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೇಳಿಕೊಳ್ಳುವ ಜಮೀರ್ ಅಹ್ಮದ್ ಆರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೀಗಾಗಿ 2006ರ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಇವರಿಗೆ ಹಜ್ ಮತ್ತು ವಕ್ಫ್ ಖಾತೆಯ ಸಚಿವ ಸ್ಥಾನ ನೀಡಲಾಗಿತ್ತು.

2008, 2013ರಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದರು. ಆದರೆ, 2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣ ಜೆಡಿಎಸ್‌ನಿಂದ ಜಮೀರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಜಮೀರ್ ತಮ್ಮ ಇತರೆ ಬೆಂಬಲಿಗೆ ಶಾಸಕರು ಹಾಗೂ ನಾಯಕರ ಜೊತೆಗೂಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 2016ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅಂದಿನಿಂದ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

2018ರ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದ ಜಮೀರ್ ಅಹ್ಮದ್, ಕಳೆದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತದ ಸರ್ಕಾರ ರಚಿಸಿದ್ದು, ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ನಿರೀಕ್ಷೆಯಂತೆಯೇ ಸಚಿವ ಸ್ಥಾನ ದೊರೆತಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ರಾಜಕಾರಣ ಜೊತೆ ಜೊತೆಗೇ ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡು ಸುದ್ದಿಯಾಗುವುದೂ ಸಹ ಜಮೀರ್ ಅವರಿಗೆ ಮಾಮೂಲಿ. ಈ ಹಿಂದೆಯೂ ಸಹ ಜಮೀರ್ ಇಂಗ್ಲಿಷ್ ಭಾಷೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಕನ್ನಡಪರ ಹೋರಾಟಗಾರರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಕ್ಷಮೆ ಕೋರಿದ್ದ ಅವರು, “ನಾನು ಮೊದಲು ಕನ್ನಡಿಗ ನಂತರವೇ ಮುಸ್ಲಿಂ, ಮುಂದಿನ ಬಾರಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ” ಎಂದು ಮಾತು ನೀಡಿದ್ದರು. ಈಗ ಮತ್ತೊಮ್ಮೆ ಇಂಗ್ಲಿಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವ ಜಮೀರ್ ಪರವಾಗಿ ಮತ್ತು ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.

ಜಮೀರ್ ಅಹ್ಮದ್ ಎಷ್ಟೇ ವಿವಾದಗಳಿಗೆ ಈಡಾದರೂ, ಚಾಮರಾಜಪೇಟೆ ಕ್ಷೇತ್ರದ ಮತದಾರರ ಮಟ್ಟಿಗೆ ಮಾತ್ರ ಇವರು ಸಾಕಷ್ಟು ಜನಪ್ರಿಯ ಮತ್ತು ಜನಾನುರಾಗಿ ಎಂದೇ ಹೆಸರುವಾಸಿ. ಅಲ್ಲದೆ, ತಮ್ಮ ವ್ಯಂಗ್ಯಭರಿತ, ಉರ್ದು ಮಿಶ್ರಿತ ವಿಶಿಷ್ಟ ಕನ್ನಡದಲ್ಲಿ ಮಾಡುವ ಭಾಷಣದಿಂದಲೇ ಕರ್ನಾಟಕದಲ್ಲಿ ಚಿರಪರಿಚಿತರು ಮತ್ತು ಮುಸ್ಲಿಂ ಮುಖಂಡರುಗಳ ಪೈಕಿ ಮುಂಚೂಣಿ ಸಾಲಿನಲ್ಲಿ ನಿಲ್ಲುವ ನಾಯಕ.

ಸಿದ್ದರಾಮಯ್ಯ

ಇದರ ನಡುವೆಯೇ 2009ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಮೀರ್ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪಿ.ಸಿ ಮೋಹನ್ ಅವರ ಎದುರು ಸೋಲು ಅನುಭವಿಸಿದ್ದರು. ಆದರೂ ಸಹ ರಾಜಧಾನಿ ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಭಾರೀ ಪ್ರಾಬಲ್ಯ ಹೊಂದಿದ್ದಾರೆ ಎಂದೇ ಹೇಳಲಾಗುತ್ತದೆ. 2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿರಲಿಲ್ಲ. ಇದರ ಹಿಂದೆ ಜಮೀರ್ ಅಹ್ಮದ್ ಅವರ ತಂತ್ರ ಕಾರಣ ಎಂದು ಹೇಳಲಾಗಿತ್ತು.

ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಇ.ಡಿ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅವರ ಐಶಾರಾಮಿ ಬಂಗಲೆ ಸಾರ್ವಜನಿಕ ವಲಯದಲ್ಲಿ ಅವರಿಗಿಂತಲೂ ದೊಡ್ಡ ಮಟ್ಟದ ಸದ್ದು ಮಾಡಿತ್ತು ಎಂಬುದು ಉಲ್ಲೇಖಾರ್ಹ.

ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರು ಹಲವು ಮುಸ್ಲಿಂ ಸಮುದಾಯದ ಹಿರಿಯ ಶಾಸಕರನ್ನೂ ಹಿಂದಿಕ್ಕಿ ಸಂಪುಟದ ಮೊದಲ ಸಚಿವರ ಪಟ್ಟಿಯಲ್ಲಿಯೇ ಕಾಣಿಸಿಕೊಂಡಿರುವುದು ಕಾಂಗ್ರೆಸ್‌ನ ಒಂದು ಬಣದ ಹುಬ್ಬೇರಿಸಿದೆ ಎಂಬ ಚರ್ಚೆಗಳು ಪ್ರಚಲಿತದಲ್ಲಿವೆ. ಪ್ರಸಕ್ತ ಸಂಪುಟದಲ್ಲಿ ಜಮೀರ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾರ ವ್ಯವಹಾರಗಳ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...