Homeಕರ್ನಾಟಕನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

ನಮ್ಮ ಸಚಿವರಿವರು; ಬೆಂಗಳೂರಿನ ಪ್ರಭಾವಿ ಮುಸ್ಲಿಂ ಶಾಸಕರಲ್ಲಿ ಒಬ್ಬರಾದ ಜಮೀರ್ ಅಹ್ಮದ್ ಖಾನ್

- Advertisement -
- Advertisement -

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಮಹಾರಾಷ್ಟ್ರದ ರಾಜ್ಯಪಾಲರಾಗಿ ನೇಮಕಗೊಂಡ ಸಂದರ್ಭ; ಎಂಟನೇ ತರಗತಿಯಷ್ಟೇ ಓದಿದ್ದ ಹಾಗೂ ಖ್ಯಾತ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಮಾಲೀಕರೂ ಆಗಿದ್ದಂತಹ ಉದ್ಯಮಿ ಜಮೀರ್ ಅಹ್ಮದ್ ಖಾನ್ ಎಂಬ ವ್ಯಕ್ತಿಯ ಬದುಕಲ್ಲಿ ಅತಿದೊಡ್ಡ ರಾಜಕೀಯ ತಿರುವು ಪಡೆಯಲಿದೆ ಎಂದು ಹೆಚ್ಚಿನ ಜನಕ್ಕೆ ಗೊತ್ತಿರಲಿಲ್ಲ. ಆದರೆ, ಅದು ಸಾಧ್ಯವಾಗಿತ್ತು.

ಅಸಲಿಗೆ ಬೆಂಗಳೂರಿನ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್‌ನ ಭದ್ರಕೋಟೆ. 2003ರ ಚುನಾವಣೆಯಲ್ಲಿ ಅಂದಿನ ಶಾಸಕ ಆರ್.ವಿ ದೇವರಾಜ್ ಈ ಕ್ಷೇತ್ರವನ್ನು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರಿಗಾಗಿ ಬಿಟ್ಟುಕೊಟ್ಟಿದ್ದರು. ಚುನಾವಣೆಯಲ್ಲಿ ಗೆದ್ದಿದ್ದ ಕೃಷ್ಣ ಅವರನ್ನು ಕಾಂಗ್ರೆಸ್ ಹೈಕಮಾಂಡ್ 2005ರಲ್ಲಿ ಮಹಾರಾಷ್ಟ್ರದ ರಾಜ್ಯಪಾಲರನ್ನಾಗಿ ನೇಮಕ ಮಾಡಿತ್ತು. ಕೃಷ್ಣ ಅವರ ರಾಜೀನಾಮೆಯಿಂದ ತೆರವಾಗಿದ್ದ ಚಾಮರಾಜಪೇಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ 36ರ ಹರೆಯದ ಜಮೀರ್ ಅಹ್ಮದ್ ಕಣಕ್ಕಿಳಿದಿದ್ದರು. ಅವರು ಅಲ್ಲಿಂದ ಮತ್ತೆ ಹಿಂತಿರುಗಿ ನೋಡಿದ್ದೇ ಇಲ್ಲ. ಜಮೀರ್ ಚಾಮರಾಜಪೇಟೆ ಕ್ಷೇತ್ರದಿಂದ ಈವರೆಗೆ ಒಟ್ಟು ಐದು ಬಾರಿ ಪುನರಾಯ್ಕೆಯಾಗಿದ್ದಾರೆ.

ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರನ್ನು ತಮ್ಮ ರಾಜಕೀಯ ಗುರು ಎಂದು ಹೇಳಿಕೊಳ್ಳುವ ಜಮೀರ್ ಅಹ್ಮದ್ ಆರಂಭದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಹೀಗಾಗಿ 2006ರ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದ ಇವರಿಗೆ ಹಜ್ ಮತ್ತು ವಕ್ಫ್ ಖಾತೆಯ ಸಚಿವ ಸ್ಥಾನ ನೀಡಲಾಗಿತ್ತು.

2008, 2013ರಲ್ಲಿ ಚಾಮರಾಜಪೇಟೆ ಕ್ಷೇತ್ರದಿಂದ ಜೆಡಿಎಸ್ ಶಾಸಕರಾಗಿ ಜಮೀರ್ ಅಹಮದ್ ಖಾನ್ ಗೆಲುವು ಸಾಧಿಸಿದ್ದರು. ಆದರೆ, 2016ರಲ್ಲಿ ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭಾ ಸದಸ್ಯರ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾರಣ ಜೆಡಿಎಸ್‌ನಿಂದ ಜಮೀರ್ ಅವರನ್ನು ಅಮಾನತು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಜೆಡಿಎಸ್ ವಿರುದ್ಧ ಸಿಡಿದೆದ್ದಿದ್ದ ಜಮೀರ್ ತಮ್ಮ ಇತರೆ ಬೆಂಬಲಿಗೆ ಶಾಸಕರು ಹಾಗೂ ನಾಯಕರ ಜೊತೆಗೂಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 2016ರಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾದರು. ಅಂದಿನಿಂದ ಸಿದ್ದರಾಮಯ್ಯ ಅವರ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

2018ರ ಚುನಾವಣೆಯಲ್ಲಿ ಚಾಮರಾಜಪೇಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೆದ್ದು ಮತ್ತೊಮ್ಮೆ ವಿಧಾನಸಭೆ ಪ್ರವೇಶಿಸಿದ್ದ ಜಮೀರ್ ಅಹ್ಮದ್, ಕಳೆದ ಕಾಂಗ್ರೆಸ್-ಜೆಡಿಎಸ್ ಸಮಿಶ್ರ ಸರ್ಕಾರದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕಾಂಗ್ರೆಸ್ ಕರ್ನಾಟಕದಲ್ಲಿ ಬಹುಮತದ ಸರ್ಕಾರ ರಚಿಸಿದ್ದು, ಸಿದ್ದರಾಮಯ್ಯ ಮತ್ತೊಂದು ಅವಧಿಗೆ ಮುಖ್ಯಮಂತ್ರಿಯಾಗಿದ್ದಾರೆ. ಜಮೀರ್ ಅಹ್ಮದ್ ಅವರಿಗೆ ನಿರೀಕ್ಷೆಯಂತೆಯೇ ಸಚಿವ ಸ್ಥಾನ ದೊರೆತಿದೆ.

ಇದನ್ನೂ ಓದಿ: ಶಾಂತಿ ಕದಡಿದರೆ RSS ಅಥವಾ ಇನ್ನಾವುದೇ ಸಂಘಟನೆಯಾದರೂ ನಿಷೇಧ: ಪ್ರಿಯಾಂಕ್ ಖರ್ಗೆ

ರಾಜಕಾರಣ ಜೊತೆ ಜೊತೆಗೇ ಸದಾ ಒಂದಿಲ್ಲೊಂದು ವಿವಾದಗಳಲ್ಲಿ ಸಿಲುಕಿಕೊಂಡು ಸುದ್ದಿಯಾಗುವುದೂ ಸಹ ಜಮೀರ್ ಅವರಿಗೆ ಮಾಮೂಲಿ. ಈ ಹಿಂದೆಯೂ ಸಹ ಜಮೀರ್ ಇಂಗ್ಲಿಷ್ ಭಾಷೆಯಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈ ವೇಳೆ ಕನ್ನಡಪರ ಹೋರಾಟಗಾರರು ಅವರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅದಕ್ಕೆ ಕ್ಷಮೆ ಕೋರಿದ್ದ ಅವರು, “ನಾನು ಮೊದಲು ಕನ್ನಡಿಗ ನಂತರವೇ ಮುಸ್ಲಿಂ, ಮುಂದಿನ ಬಾರಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸುತ್ತೇನೆ” ಎಂದು ಮಾತು ನೀಡಿದ್ದರು. ಈಗ ಮತ್ತೊಮ್ಮೆ ಇಂಗ್ಲಿಷ್‌ನಲ್ಲಿಯೇ ಪ್ರಮಾಣ ವಚನ ಸ್ವೀಕರಿಸಿರುವ ಜಮೀರ್ ಪರವಾಗಿ ಮತ್ತು ವಿರುದ್ಧವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಹಲವು ಚರ್ಚೆಗಳು ನಡೆಯುತ್ತಿವೆ.

ಜಮೀರ್ ಅಹ್ಮದ್ ಎಷ್ಟೇ ವಿವಾದಗಳಿಗೆ ಈಡಾದರೂ, ಚಾಮರಾಜಪೇಟೆ ಕ್ಷೇತ್ರದ ಮತದಾರರ ಮಟ್ಟಿಗೆ ಮಾತ್ರ ಇವರು ಸಾಕಷ್ಟು ಜನಪ್ರಿಯ ಮತ್ತು ಜನಾನುರಾಗಿ ಎಂದೇ ಹೆಸರುವಾಸಿ. ಅಲ್ಲದೆ, ತಮ್ಮ ವ್ಯಂಗ್ಯಭರಿತ, ಉರ್ದು ಮಿಶ್ರಿತ ವಿಶಿಷ್ಟ ಕನ್ನಡದಲ್ಲಿ ಮಾಡುವ ಭಾಷಣದಿಂದಲೇ ಕರ್ನಾಟಕದಲ್ಲಿ ಚಿರಪರಿಚಿತರು ಮತ್ತು ಮುಸ್ಲಿಂ ಮುಖಂಡರುಗಳ ಪೈಕಿ ಮುಂಚೂಣಿ ಸಾಲಿನಲ್ಲಿ ನಿಲ್ಲುವ ನಾಯಕ.

ಸಿದ್ದರಾಮಯ್ಯ

ಇದರ ನಡುವೆಯೇ 2009ರಲ್ಲಿ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಜಮೀರ್ ಸ್ಪರ್ಧಿಸಿದ್ದರು. ಆದರೆ, ಬಿಜೆಪಿಯ ಪಿ.ಸಿ ಮೋಹನ್ ಅವರ ಎದುರು ಸೋಲು ಅನುಭವಿಸಿದ್ದರು. ಆದರೂ ಸಹ ರಾಜಧಾನಿ ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಭಾರೀ ಪ್ರಾಬಲ್ಯ ಹೊಂದಿದ್ದಾರೆ ಎಂದೇ ಹೇಳಲಾಗುತ್ತದೆ. 2015ರಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆದಾಗ ಬಿಜೆಪಿ 100 ಸ್ಥಾನಗಳಲ್ಲಿ ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ, ಬಿಜೆಪಿಗೆ ಮೇಯರ್ ಪಟ್ಟ ಸಿಕ್ಕಿರಲಿಲ್ಲ. ಇದರ ಹಿಂದೆ ಜಮೀರ್ ಅಹ್ಮದ್ ಅವರ ತಂತ್ರ ಕಾರಣ ಎಂದು ಹೇಳಲಾಗಿತ್ತು.

ಮತ್ತೊಂದೆಡೆ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜಮೀರ್ ಅಹ್ಮದ್ ಅವರ ವಿರುದ್ಧ ಪ್ರಕರಣ ದಾಖಲಿಸಿ ವಿಚಾರಣೆ ನಡೆಸಲಾಗುತ್ತಿದೆ. ಇ.ಡಿ ಅಧಿಕಾರಿಗಳ ವಿಚಾರಣೆ ಸಂದರ್ಭದಲ್ಲಿ ಬೆಂಗಳೂರಿನ ಕಂಟೋನ್ಮೆಂಟ್ ಬಳಿ ಇರುವ ಜಮೀರ್ ಅವರ ಐಶಾರಾಮಿ ಬಂಗಲೆ ಸಾರ್ವಜನಿಕ ವಲಯದಲ್ಲಿ ಅವರಿಗಿಂತಲೂ ದೊಡ್ಡ ಮಟ್ಟದ ಸದ್ದು ಮಾಡಿತ್ತು ಎಂಬುದು ಉಲ್ಲೇಖಾರ್ಹ.

ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಜಮೀರ್ ಅವರು ಹಲವು ಮುಸ್ಲಿಂ ಸಮುದಾಯದ ಹಿರಿಯ ಶಾಸಕರನ್ನೂ ಹಿಂದಿಕ್ಕಿ ಸಂಪುಟದ ಮೊದಲ ಸಚಿವರ ಪಟ್ಟಿಯಲ್ಲಿಯೇ ಕಾಣಿಸಿಕೊಂಡಿರುವುದು ಕಾಂಗ್ರೆಸ್‌ನ ಒಂದು ಬಣದ ಹುಬ್ಬೇರಿಸಿದೆ ಎಂಬ ಚರ್ಚೆಗಳು ಪ್ರಚಲಿತದಲ್ಲಿವೆ. ಪ್ರಸಕ್ತ ಸಂಪುಟದಲ್ಲಿ ಜಮೀರ್ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾರ ವ್ಯವಹಾರಗಳ ಸಚಿವರಾಗಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...