Homeಕರ್ನಾಟಕಪ್ರತಿ ನಾಮಫಲಕ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರಿಯಲಿದೆ: ಟಿ.ಎ. ನಾರಾಯಣಗೌಡ

ಪ್ರತಿ ನಾಮಫಲಕ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರಿಯಲಿದೆ: ಟಿ.ಎ. ನಾರಾಯಣಗೌಡ

- Advertisement -
- Advertisement -

ಕರ್ನಾಟಕ ರಕ್ಷಣಾ ವೇದಿಕೆ ಹಮ್ಮಿಕೊಂಡಿರುವ ‘ಕಡ್ಡಾಯ ಕನ್ನಡ ನಾಮಫಲಕ’ ಅಭಿಯಾನ ಇಂದು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆದಿದೆ. ಬೆಂಗಳೂರು ನಗರ ಭಾಗ ಸೇರಿದಂತೆ ಹೊರ ವಲಯದ ವಿಮಾನ ನಿಲ್ದಾಣ ರಸ್ತೆಯಲ್ಲಿ ಕನ್ನಡ ಕಾರ್ಯಕರ್ತರು ಇಂದು ಇಂಗ್ಲಿಷ್ ನಾಮಫಲಕಗಳನ್ನು ಧ್ವಂಸಗೊಳಿಸಿದ್ದಾರೆ. ‘ಪ್ರತಿಯೊಂದು ನಾಮಫಲಕವೂ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರೆಯಲಿದೆ’ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ‘ಕರ್ನಾಟಕ ರಕ್ಷಣಾ ವೇದಿಕೆ ಇಂದು ಬೆಂಗಳೂರು ಮಹಾನಗರದಲ್ಲಿ ಹಮ್ಮಿಕೊಂಡಿದ್ದ ಕನ್ನಡ ನಾಮಫಲಕ ಜಾಗೃತಿ ಆಂದೋಲನ ಅಭೂತಪೂರ್ವ ಯಶಸ್ಸು ಕಂಡಿದೆ. ಇದಕ್ಕಾಗಿ ನನ್ನೆಲ್ಲ ಸಮರ ಸೇನಾನಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ’ ಎಂದಿದ್ದಾರೆ.

‘ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ತಿರಸ್ಕಾರದಿಂದ ನೋಡುತ್ತಿದ್ದವರಿಗೆ ಕರ್ನಾಟಕ ರಕ್ಷಣಾ ವೇದಿಕೆ ಸ್ಪಷ್ಟ ಸಂದೇಶ ನೀಡಿದೆ. ಕನ್ನಡಿಗರ ತಾಳ್ಮೆಯನ್ನು ಕೆಣಕಿದರೆ ಏನಾಗುತ್ತದೆ ಎಂಬುದಕ್ಕೆ ಇವತ್ತಿನ ಪ್ರತಿಭಟನೆ ಉದಾಹರಣೆ. ಕರ್ನಾಟಕ ರಕ್ಷಣಾ ವೇದಿಕೆಯ ಸಹಸ್ರಾರು ಕಾರ್ಯಕರ್ತರು ರಾಜ್ಯದ ಮೂಲೆಮೂಲೆಯಿಂದ ಹರಿದು ಬಂದು ಕನ್ನಡಿಗರ ಶಕ್ತಿಯನ್ನು ತೋರಿಸಿದ್ದಾರೆ. ಸಾವಿರಾರು ಕನ್ನಡೇತರ ನಾಮಫಲಕಗಳನ್ನು ಕಿತ್ತುಹಾಕಿದ್ದಾರೆ’ ಎಂದು ಹೇಳಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣ ರಸ್ತೆಯಲ್ಲಿ ಜಮಾಯಿಸಿದ್ದ ರಕ್ಷಣಾ ವೇದಿಕೆ ಕಾರ್ಯಕರ್ತರು. (ಚಿತ್ರ: ಅರುಣ್ ಜಾವಗಲ್)

‘ನಮ್ಮ ಪ್ರತಿಭಟನೆ ಶಾಂತಿಯುತವಾಗಿಯೇ ನಡೆದಿದೆ. ಕಾರ್ಯಕರ್ತರ ಗುರಿ ಕೇವಲ ಕನ್ನಡೇತರ ನಾಮಫಲಕಗಳೇ ಆಗಿದ್ದವೇ ವಿನಃ ವ್ಯಕ್ತಿಗಳು, ಸಂಸ್ಥೆಗಳು ಆಗಿರಲಿಲ್ಲ. ಹೀಗಾಗಿ ಯಾವುದೇ ರೀತಿಯ ಹಿಂಸಾತ್ಮಕ ಚಳವಳಿ ನಾವು ನಡೆಸಿರುವುದಿಲ್ಲ. ರಾಜ್ಯ ಸರ್ಕಾರ ಫೆ.28ರೊಳಗೆ ನಾಮಫಲಕಗಳನ್ನು ಕನ್ನಡೀಕರಿಸಲು ಆದೇಶಿಸಿದೆ. ಹೀಗಾಗಿ ನಾವು ಫೆ.28ರವರೆಗೆ ಕಾಯುತ್ತೇವೆ. ಆಗಲೂ ಈ ನೆಲದ ಕಾನೂನಿಗೆ, ಈ ನೆಲದ ಭಾಷೆಗೆ ಗೌರವ ನೀಡದವರ ವಿರುದ್ಧ ನಾವು ಇನ್ನೂ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದ್ದಾರೆ.

‘ಇವತ್ತಿನ ಚಳವಳಿಯ ಸಂದರ್ಭದಲ್ಲಿ ಬೆಂಗಳೂರಿನ ನಾಗರಿಕರಿಗೆ ಆಗಿರಬಹುದಾದ ಸಣ್ಣಪುಟ್ಟ ತೊಂದರೆಗಳಿಗೆ ನಮಗೆ ಬೇಸರವಿದೆ. ಆದರೆ, ಬೆಂಗಳೂರಿನಲ್ಲಿ ಕನ್ನಡವನ್ನು, ಕನ್ನಡಿಗರನ್ನು ಉಳಿಸಿಕೊಳ್ಳಲು ಇಂಥ ದೊಡ್ಡ ಪ್ರಮಾಣದ ಚಳವಳಿ ಅಗತ್ಯವಿತ್ತು ಎಂಬುದನ್ನು ಅವರು ಅರ್ಥ ಮಾಡಿಕೊಳ್ಳುತ್ತಾರೆ ಎಂದು ಭಾವಿಸಿದ್ದೇನೆ’ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಪೊಲೀಸ್ ಇಲಾಖೆ ಇವತ್ತಿನ ಹೋರಾಟದ ಹಿನ್ನೆಲೆಯಲ್ಲಿ ನಮ್ಮ ಕಾರ್ಯಕರ್ತರ ವಿರುದ್ಧ ಸುಳ್ಳು ಮೊಕದ್ದಮೆ ಹೂಡುವುದು, ಕಿರುಕುಳ ನೀಡುವುದನ್ನು ಮಾಡಕೂಡದು. ಅಂಥದ್ದೇನಾದರೂ ನಡೆದರೆ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟಿಸಬೇಕಾಗುತ್ತದೆ’ ಎಂದು ಎಚ್ಚರಿಸಿದ್ದಾರೆ.

‘ಕನ್ನಡ ನಾಮಫಲಕ ಜಾಗೃತಿ ಆಂದೋಲನವನ್ನು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವಿಸ್ತರಿಸಲು ನಿರ್ಧರಿಸಿದ್ದು, ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಿಗೆ ದೊಡ್ಡ ಮಟ್ಟದ ‘ಕನ್ನಡ ಯಾತ್ರೆ’ಯನ್ನು ನಡೆಸಲಿದ್ದೇನೆ. ರಾಜ್ಯದ ಪ್ರತಿಯೊಂದು ನಾಮಫಲಕವೂ ಕನ್ನಡೀಕರಣಗೊಳ್ಳುವವರೆಗೆ ನಮ್ಮ ಆಂದೋಲನ ಮುಂದುವರೆಯಲಿದೆ’ ಎಂದು ಟಿ.ಎ. ನಾರಾಯಣಗೌಡ ಘೋಷಿಸಿದ್ದಾರೆ.

ಇದನ್ನೂ ಓದಿ; ಕಡ್ಡಾಯ ಕನ್ನಡ ನಾಮಫಲಕ ಅಭಿಯಾನ: ಬೆಂಗಳೂರಿನಲ್ಲಿ ತೀವ್ರಗೊಂಡ ಕನ್ನಡಪರ ಕಾರ್ಯಕರ್ತರ ಹೋರಾಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...