Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...