Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...