Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...