Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...