Homeಚಳವಳಿತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

ತಾನು ಮಾಡಿದ ಕೆಲಸದ ವರದಿಯನ್ನು ತನ್ನ ಕ್ಷೇತ್ರದ 78ಸಾವಿರ ಮನೆಗೆ ತಲುಪಿಸಿದ ಶಾಸಕ!!

- Advertisement -
- Advertisement -

| ನಾನುಗೌರಿ ಡೆಸ್ಕ್ |

ನೀವು ಯಾವುದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ ಆಗಾಗ್ಗೆ ನಿಮ್ಮ ಕೆಲಸದ ವರದಿಯನ್ನು ಮ್ಯಾನೇಜರ್ ರವರಿಗೆ ಸಲ್ಲಿಸಬೇಕು. ಅದೇ ರೀತಿ ನಮ್ಮ ಎಂಪಿ, ಎಂಎಲ್‍ಎಗಳು ಸಹ ಎಷ್ಟು ಕೆಲಸ ಮಾಡಿದ್ದೇವೆ, ಮಾಡಿಲ್ಲ ಎಂಬುದರ ಕುರಿತು ಸಮಯಕ್ಕೆ ಸರಿಯಾಗಿ ತಮ್ಮ ವರದಿಯನ್ನು ಸಲ್ಲಿಸಬೇಕಲ್ಲವೆ? ಇದಕ್ಕೆ ಚುನಾವಣಾ ಆಯೋಗ ಒಂದು ವೆಬ್ ಸೈಟ್ ಅನ್ನು ಶುರು ಮಾಡಬೇಕು. ಅದೇನೂ ದೊಡ್ಡ ಕೆಲಸವಲ್ಲ. ದೇಶದ ಎಲ್ಲಾ ಎಂಪಿ, ಎಂ.ಎಲ್.ಎಗಳು ಅಲ್ಲಿ ತಮ್ಮ ವಾರ್ಷಿಕ ವರದಿಯನ್ನು ಅಪ್ ಲೋಡ್ ಮಾಡಬೇಕು. ಆ ವರದಿಯಲ್ಲಿ ಏನು ಬರೆದಿದೆ, ಸರಿ ಯಾವುದು, ತಪ್ಪು ಯಾವುದು ಎಂಬುದನ್ನು ಚುನಾವಣಾ ಆಯೋಗ ಪರಿಶೀಲಿಸುವ ಅಗತ್ಯವಿಲ್ಲ. ಆ ಕೆಲಸವನ್ನು ದೇಶದ ಜನತೆ ಮತ್ತು ಮಾಧ್ಯಮಗಳು ಮಾಡಲಿ.

ಹೇಗಿದೆ ಐಡಿಯಾ? ಇದನ್ನು ನಮ್ಮ ಪೇಟ್ರಿಯಾನ್‍ನ ಮೆಂಬರ್ ಸೂಚಿಸಿದ್ದಾರೆ. ಇದು ಚೆನ್ನಾಗಿದೆ. ನಮ್ಮ ರಾಜಕಾರಣಿಗಳ ಅಕೌಂಟಬಲಿಟಿ ತಿಳಿಯಲು ಇದೊಂದು ಶಕ್ತಿಶಾಲಿ ವಿಧಾನವಾಗಿದೆ. ಹಾಗಾಗಿ ಈ ಪಿಟಿಷನ್‍ಗೆ ಸಹಿ ಮಾಡಿ, ವೋಟ್ ಮಾಡಿ, ಷೇರ್ ಮಾಡಿ ಎಲೆಕ್ಷನ್ ಕಮಿಷನ್ ತಲುಪುವ ರೀತಿ ಮಾಡೋಣ.

ಈ ರೀತಿ ಹೇಳಿದವರು ಜನಪ್ರಿಯ ಯೂಟ್ಯೂಬ್ ಹೀರೋ, ಯುವ ಚಿಂತಕ ಧೃವ್ ರಾಠೀ. ಅವರು ಈ ವಿಡಿಯೋವನ್ನು ಟ್ವಿಟ್ಟರ್‍ನಲ್ಲಿ ಅಪ್‍ಲೋಡ್ ಮಾಡಿದ್ದಾರೆ. ಎಂದಿನಂತೆ ಈ ವಿಡಿಯೋಗೆ ಮೆಚ್ಚುಗೆಯ ಮಹಾಪೂರವೇ ಹರಿದುಬಂದಿದೆ. ಅಷ್ಟು ಮಾತ್ರವಲ್ಲ ಅದಕ್ಕೆ ಕೆಲ ಎಂ.ಎಲ್.ಎ ಗಳು ಪ್ರತಿಕ್ರಿಯೆ ನೀಡುವ ಮೂಲಕ ವಿಷಯಕ್ಕೆ ಮತ್ತಷ್ಟು ಗಂಭೀರತೆಯನ್ನು ತಂದುಕೊಟ್ಟಿದ್ದಾರೆ.

ಡಿಎಂಕೆ ಪಕ್ಷದಿಂದ ಮಧುರೈನ ಶಾಸಕರಾಗಿರುವ ಡಾ.ಪಿ ತ್ಯಾಗರಾಜನ್‍ರವರು “ಚುನಾವಣಾ ಪ್ರಚಾರದಲ್ಲಿ ಕೊಟ್ಟ ಭರವಸೆಯಂತೆ, ಒಬ್ಬ ಶಾಸಕನಾಗಿ ಪ್ರತಿ ಆರು ತಿಂಗಳಿಗೊಮ್ಮೆ ನಾನು ವರದಿಯನ್ನು ಪ್ರಕಟಿಸುತ್ತಿದ್ದೇನೆ. ಈಗಾಗಲೇ 5 ವರದಿಗಳು (6, 12, 18, 24, 30) ಆನ್‍ಲೈನ್‍ನಲ್ಲಿ ಪ್ರಕಟವಾಗಿವೆ. ಜೊತೆಗೆ ನನ್ನ ಕ್ಷೇತ್ರದ 78,000 ಮನೆಗಳಿಗೆ ವರದಿಯನ್ನು ತಲುಪಿಸಿದ್ದೇವೆ. ಆರನೇಯ ವರದಿ ತಯಾರಿ ಹಂತದಲ್ಲಿದೆ’ ಎಂದು ಟ್ವೀಟ್ ಮಾಡಿದ್ದಾರೆ. ಅಲ್ಲದೇ ಆ ವರದಿಯ ಲಿಂಕ್ ಅನ್ನು ಸಹ ಪ್ರಕಟಿಸಿದ್ದಾರೆ. ಇದಕ್ಕೆ ಬಹಳಷ್ಟು ಜನ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಡಾ.ಪಿ ತ್ಯಾಗರಾಜನ್‍ರವರ ವರದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೆಹಲಿಯ ತಿಲಕ್ ನಗರದ ಆಮ್ ಆದ್ಮಿ ಪಕ್ಷದ ಶಾಸಕರಾದ ಜರ್ನೈಲ್ ಸಿಂಗ್ ರವರು “ ನಿಮ್ಮ ಪ್ರಸ್ತಾಪಕ್ಕೆ 100% ನಮ್ಮ ಒಪ್ಪಿಗೆ ಇದೆ. ನಾವು ಈಗಾಗಲೇ ನಮ್ಮ ಆಮ್ ಆದ್ಮಿ ಪಕ್ಷಕ್ಕೆ ಈ ಕುರಿತು ವರದಿ ತಯಾರಿಸಲು ಸೂಚಿಸಿದ್ದೇವೆ, ಪ್ರತಿ ವರ್ಷವೂ ಸಾರ್ವಜನಿಕರ ಮುಂದೆ ಇದನ್ನು ಚರ್ಚಿಸುತ್ತೇವೆ ಎಂದು ರೀಟ್ವೀಟ್ ಮಾಡಿದ್ದಾರೆ.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Plz update my court system in India present population case’s present valuable time for any badi like fragment women, old age people police& related officers etc court starting timing also modified whole day concentrate for case shortage of judges, govt lawyers ,court hall , no expire date of any case’s so many genius senior judges are theare think some time plz you write this related articles

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...