Homeಕರ್ನಾಟಕನಮ್ಮ 'ನಾಥ ಪರಂಪರೆ' ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ: ಆದಿತ್ಯ'ನಾಥ್' ಗುರಿಯಾಗಿಸಿ ಎಚ್‌ಡಿಕೆ ವಾಗ್ದಾಳಿ

ನಮ್ಮ ‘ನಾಥ ಪರಂಪರೆ’ ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ: ಆದಿತ್ಯ’ನಾಥ್’ ಗುರಿಯಾಗಿಸಿ ಎಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಾಥ ಪರಂಪರೆಗೆ ಸೇರಿದವರೆಂದು ಅವರನ್ನು ತೋರಿಸಿ ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ. ಆದರೆ, ಕರ್ನಾಟಕದ ನಾಥ ಪರಂಪರೆಗೂ, ಉತ್ತರಪ್ರದೇಶದ ನಾಥ ಪರಂಪರೆಗೂ ವ್ಯತ್ಯಾಸವಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ”ನಮ್ಮ ನಾಥ ಪರಂಪರೆ ಬುಲ್ಡೋಜರ್‌ (ನಾಶ) ಮಾಡುವಂಥದ್ದಲ್ಲ, ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ” ಎಂದು ಆದಿತ್ಯನಾಥ್‌ ಅವರನ್ನು ಗುರಿಯಾಗಿಸಿಕೊಂಡು ಹೇಳಿದರು.

”ಕರ್ನಾಟಕದಲ್ಲಿ ನಾಥ ಪರಂಪರೆಯ ರಾಜಕೀಯ ಆದಿಚುಂಚನಗಿರಿ ಮಠಕ್ಕೆ ಮಾತ್ರ ಸೀಮಿತವಾದುದು. ಜನರು ಉತ್ತರ ಪ್ರದೇಶದ ನಾಥ ಪರಂಪರೆ ನೋಡಿಕೊಂಡು ಮತ ಹಾಕುವುದಿಲ್ಲ. ಇಲ್ಲಿ ನಮ್ಮ ಸ್ವಾಮೀಜಿಗಳು ನಾಥಪರಂಪರೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಉತ್ತರಪ್ರದೇಶದ ನಾಥ ಪರಂಪರೆ ನಮಗೆ ಬೇಕಾಗಿಲ್ಲ” ಎಂದರು.

”ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಮುಖಂಡರು ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಆರೋಪ–ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಯಾರೂ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಕನ್ನಡ ಭಾಷೆ, ಬೆಳಗಾವಿ ಗಡಿ ಸಮಸ್ಯೆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದು ಕಿಡಿಕಾರಿದರು.

”ಚುನಾವಣೆ ವೇಳೆ ಇ.ಡಿ, ಐ.ಟಿಯನ್ನು ಜಾಗೃತಗೊಳಿಸಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿರುವುದು ನಿಜ. ಬಿಜೆಪಿಯಲ್ಲಿ ಇ.ಡಿ ಮೋರ್ಚಾ, ಐ.ಟಿ ಮೋರ್ಚಾ ಎಂಬ ವಿಭಾಗಗಳಿವೆ. ಈ ಮೋರ್ಚಾಗಳನ್ನು ಚುನಾವಣೆ ಸಂದರ್ಭದಲ್ಲಿ ಹೊರಗೆ ಬಿಡುತ್ತಿದ್ದಾರೆ” ಎಂದು ದೂರಿದರು.

”ಈ ಹಿಂದಿನ ಅವಧಿಯಲ್ಲಿ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದೆವು, ಮುಖ್ಯಮಂತ್ರಿ ಮಾಡಿದ್ದೆವು ಎಂದೆಲ್ಲಾ ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರೆ. ಹಾಗಾದರೆ 17 ಶಾಸಕರು ಹೊರಗೆ ಹೋಗಿದ್ದು ಏಕೆ? ಎಂದು ತಾವು ಉತ್ತರ ನೀಡಬೇಕು. ರೈತರ ಸಾಲ ಮನ್ನಾ ಮಾಡಿದ್ದೇ ತಪ್ಪಾ? ಕಾಂಗ್ರೆಸ್‌ ಶಾಸಕರಿಗೆ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೆ. ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನೂ ಮುಂದುವರಿಸಿದ್ದೆ. ಸಿದ್ದರಾಮಯ್ಯ ಕೊಟ್ಟ ಭಾಗ್ಯಗಳಿಂದ ಜನರು ಸಂಪತ್ಭರಿತರಾಗಿದ್ದಾರಾ?” ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...