Homeಮುಖಪುಟನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಸೂಚನೆ ಇರುವುದರಿಂದ, ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಇತ್ತೀಚೆಗೆ ದೆಹಲಿಯಿಂದ ಮರಳಿದ ಎಎಪಿಯ ಬಿಹಾರ ಮುಖ್ಯಸ್ಥ ಶತ್ರುಘನ್ ಸಾಹು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಎಲ್ಲಾ ಸ್ಥಾನಗಳಿಗೆ ಆಪ್‌ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು ಊಹಿಸಿದಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಉತ್ತಮ ಪ್ರದರ್ಶನ ನೀಡಿದರೆ, ಅದರ ಗೆಲುವು ಬಿಹಾರದ ಮೇಲೆ ನೇರ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ. ಅಲ್ಲಿ ತಾವು ಹೊಸ ಪರ್ಯಾಯವನ್ನು ನೀಡುವುದಾಗಿ ಘೋಷಿಸಿದ್ದಾರೆ.

2015 ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಸ್ಪರ್ಧಿಸದೆ ಬಿಜೆಪಿ ವಿರೋಧಿ ಗುಂಪನ್ನು ಬೆಂಬಲಿಸಿತ್ತು. ಮತ್ತು 2014 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಆದರೆ ಯಾವುದನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. 2019ರಲ್ಲಿಯೂ ಸಹ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆಪ್‌ ಸೋಲನ್ನು ಅನುಭವಿಸಿತ್ತು.

ಆದರೆ ದೆಹಲಿ ಚುನಾವಣೆಯ ನಂತರ ಬಿಹಾರದಲ್ಲಿ ನಡೆಯುತ್ತಿರುವ ‘ಜನ ಸಂವಾದ್ ಯಾತ್ರೆ’ ಮೂಲಕ ಪಕ್ಷವು ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಕೆಲಸ ಈಗಾಗಲೇ ಪ್ರಾರಂಭಿಸಿದೆ ಎಂದು ಸಾಹು ಹೇಳಿದ್ದಾರೆ.

“ನಮಗೆ ಹೆಚ್ಚಿನ ಮಾಧ್ಯಮಗಳು ಪ್ರಚಾರ ನೀಡಿಲ್ಲ, ಆದರೆ ಜನಸಾಮಾನ್ಯರ ಬೆಂಬಲ ಬಹಳ ಉತ್ತೇಜನಕಾರಿಯಾಗಿದೆ” ಎಂದು ಸಾಹು ಹೇಳಿದ್ದಾರೆ.

“ಜನರು ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಸಂತೋಷವಾಗಿಲ್ಲದ ಕಾರಣ ಬದಲಾವಣೆಯನ್ನು ಬಯಸುತ್ತಾರೆ. ಆದರೆ ಅವರು ಆರ್‌ಜೆಡಿಯ ತೇಜಸ್ವಿ ಯಾದವ್‌ರಲ್ಲಿ ಕಾರ್ಯಸಾಧ್ಯವಾದ ಪರ್ಯಾಯವನ್ನು ಕಾಣುವುದಿಲ್ಲ. ಹಳೆಯ ಆರ್‌ಜೆಡಿ ಆಡಳಿತದ ನೆನಪು ಜನರ ಮನಸ್ಸಿನಲ್ಲಿ ಇನ್ನೂ ಜೀವಂತವಾಗಿದೆ. ಆದರೆ ನಾವು ಹೊಸ ಮತ್ತು ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜನ ಸಂವಾದ ಯಾತ್ರೆ’ ಈಗಾಗಲೇ ರಾಜ್ಯದ 26 ಜಿಲ್ಲೆಗಳಲ್ಲಿ ನಡೆದಿದೆ ಮತ್ತು ಉಳಿದ ಪ್ರದೇಶಗಳನ್ನು ಒಳಗೊಳ್ಳಲು ಫೆಬ್ರವರಿ 20ರಿಂದ ಪುನರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎಎಪಿ ಸಾಮಾನ್ಯ ಜನರ ಜೀವನವನ್ನು ಬಾಧಿಸುವ ಸರಳ ಸಮಸ್ಯೆಗಳೊಂದಿಗೆ ಬಿಹಾರಕ್ಕೆ ತನ್ನದೇ ಆದ ಪ್ರವೇಶವನ್ನು ಮಾಡಲು ಬಯಸಿದೆ. ನಾವು ಯಾವುದೇ ರಾಜಕೀಯ ಸಮೀಕರಣಕ್ಕೆ ಬರುವುದಿಲ್ಲ ಅಥವಾ ಯಾವುದೇ ಮೈತ್ರಿಗೆ ಸೇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಉಸ್ತುವಾರಿ ಹೊತ್ತಿರುವ ಸಂಸದ ಸಂಜಯ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕೂಡ ಈ ವರ್ಷ ಬಿಹಾರದಲ್ಲಿ ಹೆಚ್ಚಿನ ಸಮಯ ಕಳೆಯುವ ನಿರೀಕ್ಷೆಯಿದೆ.

ಬಿಹಾರದ ಮೂವರು ಪ್ರಮುಖ ಪಕ್ಷಗಳಾದ ಜನತಾದಳ (ಯುನೈಟೆಡ್), ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಎಎಪಿ ವಿರುದ್ಧ ಹೋರಾಡಿದವು ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...