Homeಮುಖಪುಟನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಸೂಚನೆ ಇರುವುದರಿಂದ, ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಇತ್ತೀಚೆಗೆ ದೆಹಲಿಯಿಂದ ಮರಳಿದ ಎಎಪಿಯ ಬಿಹಾರ ಮುಖ್ಯಸ್ಥ ಶತ್ರುಘನ್ ಸಾಹು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಎಲ್ಲಾ ಸ್ಥಾನಗಳಿಗೆ ಆಪ್‌ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು ಊಹಿಸಿದಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಉತ್ತಮ ಪ್ರದರ್ಶನ ನೀಡಿದರೆ, ಅದರ ಗೆಲುವು ಬಿಹಾರದ ಮೇಲೆ ನೇರ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ. ಅಲ್ಲಿ ತಾವು ಹೊಸ ಪರ್ಯಾಯವನ್ನು ನೀಡುವುದಾಗಿ ಘೋಷಿಸಿದ್ದಾರೆ.

2015 ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಸ್ಪರ್ಧಿಸದೆ ಬಿಜೆಪಿ ವಿರೋಧಿ ಗುಂಪನ್ನು ಬೆಂಬಲಿಸಿತ್ತು. ಮತ್ತು 2014 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಆದರೆ ಯಾವುದನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. 2019ರಲ್ಲಿಯೂ ಸಹ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆಪ್‌ ಸೋಲನ್ನು ಅನುಭವಿಸಿತ್ತು.

ಆದರೆ ದೆಹಲಿ ಚುನಾವಣೆಯ ನಂತರ ಬಿಹಾರದಲ್ಲಿ ನಡೆಯುತ್ತಿರುವ ‘ಜನ ಸಂವಾದ್ ಯಾತ್ರೆ’ ಮೂಲಕ ಪಕ್ಷವು ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಕೆಲಸ ಈಗಾಗಲೇ ಪ್ರಾರಂಭಿಸಿದೆ ಎಂದು ಸಾಹು ಹೇಳಿದ್ದಾರೆ.

“ನಮಗೆ ಹೆಚ್ಚಿನ ಮಾಧ್ಯಮಗಳು ಪ್ರಚಾರ ನೀಡಿಲ್ಲ, ಆದರೆ ಜನಸಾಮಾನ್ಯರ ಬೆಂಬಲ ಬಹಳ ಉತ್ತೇಜನಕಾರಿಯಾಗಿದೆ” ಎಂದು ಸಾಹು ಹೇಳಿದ್ದಾರೆ.

“ಜನರು ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಸಂತೋಷವಾಗಿಲ್ಲದ ಕಾರಣ ಬದಲಾವಣೆಯನ್ನು ಬಯಸುತ್ತಾರೆ. ಆದರೆ ಅವರು ಆರ್‌ಜೆಡಿಯ ತೇಜಸ್ವಿ ಯಾದವ್‌ರಲ್ಲಿ ಕಾರ್ಯಸಾಧ್ಯವಾದ ಪರ್ಯಾಯವನ್ನು ಕಾಣುವುದಿಲ್ಲ. ಹಳೆಯ ಆರ್‌ಜೆಡಿ ಆಡಳಿತದ ನೆನಪು ಜನರ ಮನಸ್ಸಿನಲ್ಲಿ ಇನ್ನೂ ಜೀವಂತವಾಗಿದೆ. ಆದರೆ ನಾವು ಹೊಸ ಮತ್ತು ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜನ ಸಂವಾದ ಯಾತ್ರೆ’ ಈಗಾಗಲೇ ರಾಜ್ಯದ 26 ಜಿಲ್ಲೆಗಳಲ್ಲಿ ನಡೆದಿದೆ ಮತ್ತು ಉಳಿದ ಪ್ರದೇಶಗಳನ್ನು ಒಳಗೊಳ್ಳಲು ಫೆಬ್ರವರಿ 20ರಿಂದ ಪುನರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎಎಪಿ ಸಾಮಾನ್ಯ ಜನರ ಜೀವನವನ್ನು ಬಾಧಿಸುವ ಸರಳ ಸಮಸ್ಯೆಗಳೊಂದಿಗೆ ಬಿಹಾರಕ್ಕೆ ತನ್ನದೇ ಆದ ಪ್ರವೇಶವನ್ನು ಮಾಡಲು ಬಯಸಿದೆ. ನಾವು ಯಾವುದೇ ರಾಜಕೀಯ ಸಮೀಕರಣಕ್ಕೆ ಬರುವುದಿಲ್ಲ ಅಥವಾ ಯಾವುದೇ ಮೈತ್ರಿಗೆ ಸೇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಉಸ್ತುವಾರಿ ಹೊತ್ತಿರುವ ಸಂಸದ ಸಂಜಯ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕೂಡ ಈ ವರ್ಷ ಬಿಹಾರದಲ್ಲಿ ಹೆಚ್ಚಿನ ಸಮಯ ಕಳೆಯುವ ನಿರೀಕ್ಷೆಯಿದೆ.

ಬಿಹಾರದ ಮೂವರು ಪ್ರಮುಖ ಪಕ್ಷಗಳಾದ ಜನತಾದಳ (ಯುನೈಟೆಡ್), ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಎಎಪಿ ವಿರುದ್ಧ ಹೋರಾಡಿದವು ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...