Homeಮುಖಪುಟನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಸೂಚನೆ ಇರುವುದರಿಂದ, ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಇತ್ತೀಚೆಗೆ ದೆಹಲಿಯಿಂದ ಮರಳಿದ ಎಎಪಿಯ ಬಿಹಾರ ಮುಖ್ಯಸ್ಥ ಶತ್ರುಘನ್ ಸಾಹು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಎಲ್ಲಾ ಸ್ಥಾನಗಳಿಗೆ ಆಪ್‌ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು ಊಹಿಸಿದಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಉತ್ತಮ ಪ್ರದರ್ಶನ ನೀಡಿದರೆ, ಅದರ ಗೆಲುವು ಬಿಹಾರದ ಮೇಲೆ ನೇರ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ. ಅಲ್ಲಿ ತಾವು ಹೊಸ ಪರ್ಯಾಯವನ್ನು ನೀಡುವುದಾಗಿ ಘೋಷಿಸಿದ್ದಾರೆ.

2015 ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಸ್ಪರ್ಧಿಸದೆ ಬಿಜೆಪಿ ವಿರೋಧಿ ಗುಂಪನ್ನು ಬೆಂಬಲಿಸಿತ್ತು. ಮತ್ತು 2014 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಆದರೆ ಯಾವುದನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. 2019ರಲ್ಲಿಯೂ ಸಹ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆಪ್‌ ಸೋಲನ್ನು ಅನುಭವಿಸಿತ್ತು.

ಆದರೆ ದೆಹಲಿ ಚುನಾವಣೆಯ ನಂತರ ಬಿಹಾರದಲ್ಲಿ ನಡೆಯುತ್ತಿರುವ ‘ಜನ ಸಂವಾದ್ ಯಾತ್ರೆ’ ಮೂಲಕ ಪಕ್ಷವು ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಕೆಲಸ ಈಗಾಗಲೇ ಪ್ರಾರಂಭಿಸಿದೆ ಎಂದು ಸಾಹು ಹೇಳಿದ್ದಾರೆ.

“ನಮಗೆ ಹೆಚ್ಚಿನ ಮಾಧ್ಯಮಗಳು ಪ್ರಚಾರ ನೀಡಿಲ್ಲ, ಆದರೆ ಜನಸಾಮಾನ್ಯರ ಬೆಂಬಲ ಬಹಳ ಉತ್ತೇಜನಕಾರಿಯಾಗಿದೆ” ಎಂದು ಸಾಹು ಹೇಳಿದ್ದಾರೆ.

“ಜನರು ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಸಂತೋಷವಾಗಿಲ್ಲದ ಕಾರಣ ಬದಲಾವಣೆಯನ್ನು ಬಯಸುತ್ತಾರೆ. ಆದರೆ ಅವರು ಆರ್‌ಜೆಡಿಯ ತೇಜಸ್ವಿ ಯಾದವ್‌ರಲ್ಲಿ ಕಾರ್ಯಸಾಧ್ಯವಾದ ಪರ್ಯಾಯವನ್ನು ಕಾಣುವುದಿಲ್ಲ. ಹಳೆಯ ಆರ್‌ಜೆಡಿ ಆಡಳಿತದ ನೆನಪು ಜನರ ಮನಸ್ಸಿನಲ್ಲಿ ಇನ್ನೂ ಜೀವಂತವಾಗಿದೆ. ಆದರೆ ನಾವು ಹೊಸ ಮತ್ತು ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜನ ಸಂವಾದ ಯಾತ್ರೆ’ ಈಗಾಗಲೇ ರಾಜ್ಯದ 26 ಜಿಲ್ಲೆಗಳಲ್ಲಿ ನಡೆದಿದೆ ಮತ್ತು ಉಳಿದ ಪ್ರದೇಶಗಳನ್ನು ಒಳಗೊಳ್ಳಲು ಫೆಬ್ರವರಿ 20ರಿಂದ ಪುನರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎಎಪಿ ಸಾಮಾನ್ಯ ಜನರ ಜೀವನವನ್ನು ಬಾಧಿಸುವ ಸರಳ ಸಮಸ್ಯೆಗಳೊಂದಿಗೆ ಬಿಹಾರಕ್ಕೆ ತನ್ನದೇ ಆದ ಪ್ರವೇಶವನ್ನು ಮಾಡಲು ಬಯಸಿದೆ. ನಾವು ಯಾವುದೇ ರಾಜಕೀಯ ಸಮೀಕರಣಕ್ಕೆ ಬರುವುದಿಲ್ಲ ಅಥವಾ ಯಾವುದೇ ಮೈತ್ರಿಗೆ ಸೇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಉಸ್ತುವಾರಿ ಹೊತ್ತಿರುವ ಸಂಸದ ಸಂಜಯ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕೂಡ ಈ ವರ್ಷ ಬಿಹಾರದಲ್ಲಿ ಹೆಚ್ಚಿನ ಸಮಯ ಕಳೆಯುವ ನಿರೀಕ್ಷೆಯಿದೆ.

ಬಿಹಾರದ ಮೂವರು ಪ್ರಮುಖ ಪಕ್ಷಗಳಾದ ಜನತಾದಳ (ಯುನೈಟೆಡ್), ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಎಎಪಿ ವಿರುದ್ಧ ಹೋರಾಡಿದವು ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...