Homeಮುಖಪುಟನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ನಮ್ಮ ಮುಂದಿನ ಗುರಿ ಬಿಹಾರ ವಿಧಾನ ಸಭಾ ಚುನಾವಣೆ: ಆಪ್‌

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲುವ ಸೂಚನೆ ಇರುವುದರಿಂದ, ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ.

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಇತ್ತೀಚೆಗೆ ದೆಹಲಿಯಿಂದ ಮರಳಿದ ಎಎಪಿಯ ಬಿಹಾರ ಮುಖ್ಯಸ್ಥ ಶತ್ರುಘನ್ ಸಾಹು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಹಾರದ ಎಲ್ಲಾ ಸ್ಥಾನಗಳಿಗೆ ಆಪ್‌ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಹೇಳಿದ್ದಾರೆ.

ಹೆಚ್ಚಿನ ಎಕ್ಸಿಟ್‌ ಪೋಲ್‌ಗಳು ಊಹಿಸಿದಂತೆ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಉತ್ತಮ ಪ್ರದರ್ಶನ ನೀಡಿದರೆ, ಅದರ ಗೆಲುವು ಬಿಹಾರದ ಮೇಲೆ ನೇರ ಪರಿಣಾಮ ಬೀರಬಹುದು ಎನ್ನಲಾಗುತ್ತಿದೆ.

ದೆಹಲಿ ವಿಧಾನಸಭಾ ಚುನಾವಣೆಯ ನಂತರ ಮುಂದಿನ ಏಳೆಂಟು ತಿಂಗಳಲ್ಲಿ ನಡೆಯಲಿರುವ ಬಿಹಾರ ರಾಜ್ಯ ಚುನಾವಣೆಯ ಮೇಲೆ ಅರವಿಂದ್ ಕೇಜ್ರಿವಾಲ್ ಅವರ ಪಕ್ಷ ಕಣ್ಣಿಟ್ಟಿದೆ. ಅಲ್ಲಿ ತಾವು ಹೊಸ ಪರ್ಯಾಯವನ್ನು ನೀಡುವುದಾಗಿ ಘೋಷಿಸಿದ್ದಾರೆ.

2015 ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಆಪ್‌ ಸ್ಪರ್ಧಿಸದೆ ಬಿಜೆಪಿ ವಿರೋಧಿ ಗುಂಪನ್ನು ಬೆಂಬಲಿಸಿತ್ತು. ಮತ್ತು 2014 ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಬಿಹಾರದ 40 ಸ್ಥಾನಗಳಲ್ಲಿ 39 ಸ್ಥಾನಗಳಲ್ಲಿ ಸ್ಪರ್ಧಿಸಿತ್ತು ಆದರೆ ಯಾವುದನ್ನೂ ಗೆಲ್ಲಲು ಸಾಧ್ಯವಾಗಲಿಲ್ಲ. 2019ರಲ್ಲಿಯೂ ಸಹ ಮೂರು ಸ್ಥಾನಗಳಲ್ಲಿ ಸ್ಪರ್ಧಿಸಿದ್ದ ಆಪ್‌ ಸೋಲನ್ನು ಅನುಭವಿಸಿತ್ತು.

ಆದರೆ ದೆಹಲಿ ಚುನಾವಣೆಯ ನಂತರ ಬಿಹಾರದಲ್ಲಿ ನಡೆಯುತ್ತಿರುವ ‘ಜನ ಸಂವಾದ್ ಯಾತ್ರೆ’ ಮೂಲಕ ಪಕ್ಷವು ತಳಮಟ್ಟದಲ್ಲಿ ಸಂಘಟನೆಯನ್ನು ಬಲಪಡಿಸುವ ಕೆಲಸ ಈಗಾಗಲೇ ಪ್ರಾರಂಭಿಸಿದೆ ಎಂದು ಸಾಹು ಹೇಳಿದ್ದಾರೆ.

“ನಮಗೆ ಹೆಚ್ಚಿನ ಮಾಧ್ಯಮಗಳು ಪ್ರಚಾರ ನೀಡಿಲ್ಲ, ಆದರೆ ಜನಸಾಮಾನ್ಯರ ಬೆಂಬಲ ಬಹಳ ಉತ್ತೇಜನಕಾರಿಯಾಗಿದೆ” ಎಂದು ಸಾಹು ಹೇಳಿದ್ದಾರೆ.

“ಜನರು ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಿಂದ ಸಂತೋಷವಾಗಿಲ್ಲದ ಕಾರಣ ಬದಲಾವಣೆಯನ್ನು ಬಯಸುತ್ತಾರೆ. ಆದರೆ ಅವರು ಆರ್‌ಜೆಡಿಯ ತೇಜಸ್ವಿ ಯಾದವ್‌ರಲ್ಲಿ ಕಾರ್ಯಸಾಧ್ಯವಾದ ಪರ್ಯಾಯವನ್ನು ಕಾಣುವುದಿಲ್ಲ. ಹಳೆಯ ಆರ್‌ಜೆಡಿ ಆಡಳಿತದ ನೆನಪು ಜನರ ಮನಸ್ಸಿನಲ್ಲಿ ಇನ್ನೂ ಜೀವಂತವಾಗಿದೆ. ಆದರೆ ನಾವು ಹೊಸ ಮತ್ತು ವಿಶ್ವಾಸಾರ್ಹ ಪರ್ಯಾಯವನ್ನು ನೀಡುತ್ತೇವೆ” ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

‘ಜನ ಸಂವಾದ ಯಾತ್ರೆ’ ಈಗಾಗಲೇ ರಾಜ್ಯದ 26 ಜಿಲ್ಲೆಗಳಲ್ಲಿ ನಡೆದಿದೆ ಮತ್ತು ಉಳಿದ ಪ್ರದೇಶಗಳನ್ನು ಒಳಗೊಳ್ಳಲು ಫೆಬ್ರವರಿ 20ರಿಂದ ಪುನರಾರಂಭಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಎಎಪಿ ಸಾಮಾನ್ಯ ಜನರ ಜೀವನವನ್ನು ಬಾಧಿಸುವ ಸರಳ ಸಮಸ್ಯೆಗಳೊಂದಿಗೆ ಬಿಹಾರಕ್ಕೆ ತನ್ನದೇ ಆದ ಪ್ರವೇಶವನ್ನು ಮಾಡಲು ಬಯಸಿದೆ. ನಾವು ಯಾವುದೇ ರಾಜಕೀಯ ಸಮೀಕರಣಕ್ಕೆ ಬರುವುದಿಲ್ಲ ಅಥವಾ ಯಾವುದೇ ಮೈತ್ರಿಗೆ ಸೇರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಸಿಎಂ ಅರವಿಂದ್ ಕೇಜ್ರಿವಾಲ್, ಬಿಹಾರ ಉಸ್ತುವಾರಿ ಹೊತ್ತಿರುವ ಸಂಸದ ಸಂಜಯ್ ಸಿಂಗ್ ಮತ್ತು ಪಕ್ಷದ ಇತರ ಹಿರಿಯ ನಾಯಕರು ಕೂಡ ಈ ವರ್ಷ ಬಿಹಾರದಲ್ಲಿ ಹೆಚ್ಚಿನ ಸಮಯ ಕಳೆಯುವ ನಿರೀಕ್ಷೆಯಿದೆ.

ಬಿಹಾರದ ಮೂವರು ಪ್ರಮುಖ ಪಕ್ಷಗಳಾದ ಜನತಾದಳ (ಯುನೈಟೆಡ್), ರಾಷ್ಟ್ರೀಯ ಜನತಾದಳ ಮತ್ತು ಕಾಂಗ್ರೆಸ್ ದೆಹಲಿಯಲ್ಲಿ ಎಎಪಿ ವಿರುದ್ಧ ಹೋರಾಡಿದವು ಎಂದು ಸಾಹು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...