Homeಮುಖಪುಟಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

ಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

- Advertisement -
- Advertisement -

ಭಾರತೀಯ ರಕ್ಷಣಾ ಸಿಬ್ಬಂದಿಗಳು ದ್ವೀಪ ರಾಷ್ಟ್ರವನ್ನು ತೊರೆದ ಕೆಲವು ದಿನಗಳ ನಂತರ, ಭಾರತವು ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆ ಇದೆ ಎಂದು ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಒಪ್ಪಿಕೊಂಡಿದ್ದಾರೆ.

ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು ನಮ್ಮ ಸಿಬ್ಬಂದಿ ಪರವಾನಗಿ ಪಡೆದಿಲ್ಲ” ಎಂದು ಹೇಳಿದರು.

ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು, ಅನಿರ್ದಿಷ್ಟ ಕಾರಣಗಳಿಂದ ತಮ್ಮ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೌಮೂನ್ ವಿವರಿಸಿದರು.

ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದ ಭಾಗವಾಗಿ ಫೆಬ್ರವರಿಯಲ್ಲಿ ನಿಗದಿಪಡಿಸಲಾದ ಗಡುವನ್ನು ಅನುಸರಿಸಿ ಭಾರತೀಯ ಸಿಬ್ಬಂದಿ ಶುಕ್ರವಾರ ಮಾಲ್ಡೀವ್ಸ್‌ನಿಂದ ಹೊರಟರು. ಈ ಒಪ್ಪಂದವು ನವೆಂಬರ್ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸ್ವಲ್ಪ ಸಮಯದ ನಂತರ ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮಾಲ್ಡೀವಿಯನ್ ಅಧ್ಯಕ್ಷ ಮೊಹಮದ್ ಮುಯಿಜ್ಜು ಮಾಡಿದ ಬೇಡಿಕೆಯನ್ನು ಅನುಸರಿಸಿತು.

ಫೆಬ್ರವರಿ ತಿಂಗಳು ನವದೆಹಲಿಯಲ್ಲಿ ನಡೆದ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

ಭಾರತೀಯ ಸೇನಾ ಸಿಬ್ಬಂದಿಯನ್ನು ಬದಲಿಸುವ ಮಾಲ್ಡೀವ್ಸ್‌ ಕ್ರಮವು ತನ್ನ ದಕ್ಷಿಣದ ಆಯಕಟ್ಟಿನ ಸ್ಥಳದಲ್ಲಿ ಚೀನಾದ ಪ್ರಭಾವವನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಮುಯಿಜ್ಜು ಅಧಿಕಾರಕ್ಕೆ ಬಂದ ನಂತರ, ಅಲ್ಲಿನ ಸರ್ಕಾರವು ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಚೀನಾದೊಂದಿಗೆ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದೆ ಮತ್ತು ಹಲವಾರು ಯೋಜನೆಗಳಲ್ಲಿ ಭಾರತವನ್ನು ನಿರ್ಲಕ್ಷ್ಯ ಮಾಡುತ್ತಿದೆ.

ಮಾಲ್ಡೀವ್ಸ್ ಮಾರ್ಚ್‌ನಲ್ಲಿ ಚೀನಾದೊಂದಿಗೆ ಮಿಲಿಟರಿ ನೆರವು ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತದ ನೆರೆಯಲ್ಲಿರುವ ತನ್ನ ಬಂದರಿನಲ್ಲಿ ಚೀನೀ ಸಂಶೋಧನಾ ನೌಕೆಯನ್ನು ಡಾಕ್ ಮಾಡಲು ಸಹ ಅನುಮತಿಸಿದೆ.

ಹಿಂದಿನ ಆಡಳಿತದ ಅವಧಿಯಲ್ಲಿ ಮಾಲ್ಡೀವ್ಸ್‌ನ ರಾಜಧಾನಿಯಾದ ಮಾಲೆಯೊಂದಿಗೆ ನವದೆಹಲಿಯ ಸಂಬಂಧಗಳು ಗಮನಾರ್ಹವಾಗಿ ಬೆಳೆದರೆ, ಚೀನಾ ಪರವಾದ ಮುಯಿಜ್ಜು “ಇಂಡಿಯಾ ಔಟ್” ವೇದಿಕೆಯಲ್ಲಿ ಪ್ರಚಾರ ಮಾಡಿದರು. ದೇಶದಲ್ಲಿ ಭಾರತೀಯ ಮಿಲಿಟರಿ ಉಪಸ್ಥಿತಿಯು ಮಾಲ್ಡೀವ್ಸ್ ಸಾರ್ವಭೌಮತ್ವವನ್ನು ರಾಜಿ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ; ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...

ಇರಾನ್‌ನ ಕಿರೀಟ ರತ್ನ ಖಾರ್ಗ್ ದ್ವೀಪದ ಮೇಲೆ ಅಮೆರಿಕದಿಂದ ಬಾಂಬ್ ದಾಳಿ : ಟ್ರಂಪ್ ಹೇಳಿಕೆ

ಇರಾನ್‌ನ ಖಾರ್ಗ್ ದ್ವೀಪದ ಮೇಲೆ ಅಮೆರಿಕ 'ಅತ್ಯಂತ ಶಕ್ತಿಶಾಲಿ ಬಾಂಬ್ ದಾಳಿ' ನಡೆಸಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ದ್ವೀಪದಲ್ಲಿರುವ ತೈಲ ಮೂಲಸೌಕರ್ಯಗಳನ್ನು ನಾಶಪಡಿಸದೆ ಇರಲು ನಿರ್ಧರಿಸಿದ ಅಮೆರಿಕ ಪಡೆಗಳು, ಅಲ್ಲಿನ ಮಿಲಿಟರಿ ಕೇಂದ್ರಗಳನ್ನು...

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...