Homeಮುಖಪುಟಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

ಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

- Advertisement -
- Advertisement -

ಭಾರತೀಯ ರಕ್ಷಣಾ ಸಿಬ್ಬಂದಿಗಳು ದ್ವೀಪ ರಾಷ್ಟ್ರವನ್ನು ತೊರೆದ ಕೆಲವು ದಿನಗಳ ನಂತರ, ಭಾರತವು ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆ ಇದೆ ಎಂದು ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಒಪ್ಪಿಕೊಂಡಿದ್ದಾರೆ.

ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು ನಮ್ಮ ಸಿಬ್ಬಂದಿ ಪರವಾನಗಿ ಪಡೆದಿಲ್ಲ” ಎಂದು ಹೇಳಿದರು.

ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು, ಅನಿರ್ದಿಷ್ಟ ಕಾರಣಗಳಿಂದ ತಮ್ಮ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೌಮೂನ್ ವಿವರಿಸಿದರು.

ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದ ಭಾಗವಾಗಿ ಫೆಬ್ರವರಿಯಲ್ಲಿ ನಿಗದಿಪಡಿಸಲಾದ ಗಡುವನ್ನು ಅನುಸರಿಸಿ ಭಾರತೀಯ ಸಿಬ್ಬಂದಿ ಶುಕ್ರವಾರ ಮಾಲ್ಡೀವ್ಸ್‌ನಿಂದ ಹೊರಟರು. ಈ ಒಪ್ಪಂದವು ನವೆಂಬರ್ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸ್ವಲ್ಪ ಸಮಯದ ನಂತರ ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮಾಲ್ಡೀವಿಯನ್ ಅಧ್ಯಕ್ಷ ಮೊಹಮದ್ ಮುಯಿಜ್ಜು ಮಾಡಿದ ಬೇಡಿಕೆಯನ್ನು ಅನುಸರಿಸಿತು.

ಫೆಬ್ರವರಿ ತಿಂಗಳು ನವದೆಹಲಿಯಲ್ಲಿ ನಡೆದ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

ಭಾರತೀಯ ಸೇನಾ ಸಿಬ್ಬಂದಿಯನ್ನು ಬದಲಿಸುವ ಮಾಲ್ಡೀವ್ಸ್‌ ಕ್ರಮವು ತನ್ನ ದಕ್ಷಿಣದ ಆಯಕಟ್ಟಿನ ಸ್ಥಳದಲ್ಲಿ ಚೀನಾದ ಪ್ರಭಾವವನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಮುಯಿಜ್ಜು ಅಧಿಕಾರಕ್ಕೆ ಬಂದ ನಂತರ, ಅಲ್ಲಿನ ಸರ್ಕಾರವು ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಚೀನಾದೊಂದಿಗೆ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದೆ ಮತ್ತು ಹಲವಾರು ಯೋಜನೆಗಳಲ್ಲಿ ಭಾರತವನ್ನು ನಿರ್ಲಕ್ಷ್ಯ ಮಾಡುತ್ತಿದೆ.

ಮಾಲ್ಡೀವ್ಸ್ ಮಾರ್ಚ್‌ನಲ್ಲಿ ಚೀನಾದೊಂದಿಗೆ ಮಿಲಿಟರಿ ನೆರವು ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತದ ನೆರೆಯಲ್ಲಿರುವ ತನ್ನ ಬಂದರಿನಲ್ಲಿ ಚೀನೀ ಸಂಶೋಧನಾ ನೌಕೆಯನ್ನು ಡಾಕ್ ಮಾಡಲು ಸಹ ಅನುಮತಿಸಿದೆ.

ಹಿಂದಿನ ಆಡಳಿತದ ಅವಧಿಯಲ್ಲಿ ಮಾಲ್ಡೀವ್ಸ್‌ನ ರಾಜಧಾನಿಯಾದ ಮಾಲೆಯೊಂದಿಗೆ ನವದೆಹಲಿಯ ಸಂಬಂಧಗಳು ಗಮನಾರ್ಹವಾಗಿ ಬೆಳೆದರೆ, ಚೀನಾ ಪರವಾದ ಮುಯಿಜ್ಜು “ಇಂಡಿಯಾ ಔಟ್” ವೇದಿಕೆಯಲ್ಲಿ ಪ್ರಚಾರ ಮಾಡಿದರು. ದೇಶದಲ್ಲಿ ಭಾರತೀಯ ಮಿಲಿಟರಿ ಉಪಸ್ಥಿತಿಯು ಮಾಲ್ಡೀವ್ಸ್ ಸಾರ್ವಭೌಮತ್ವವನ್ನು ರಾಜಿ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ; ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...