Homeಮುಖಪುಟಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

ಭಾರತ ನೀಡಿದ ವಿಮಾನವನ್ನು ಹಾರಿಸಲು ನಮ್ಮ ಪೈಲಟ್‌ಗಳಿಗೆ ಸಾಧ್ಯವಾಗುತ್ತಿಲ್ಲ: ಮಾಲ್ಡೀವ್ಸ್

- Advertisement -
- Advertisement -

ಭಾರತೀಯ ರಕ್ಷಣಾ ಸಿಬ್ಬಂದಿಗಳು ದ್ವೀಪ ರಾಷ್ಟ್ರವನ್ನು ತೊರೆದ ಕೆಲವು ದಿನಗಳ ನಂತರ, ಭಾರತವು ಕೊಡುಗೆಯಾಗಿ ನೀಡಿದ ಮೂರು ವಿಮಾನಗಳನ್ನು ನಿರ್ವಹಿಸುವ ಸಾಮರ್ಥ್ಯವಿರುವ ಪೈಲಟ್‌ಗಳ ಕೊರತೆ ಇದೆ ಎಂದು ಮಾಲ್ಡೀವ್ಸ್‌ನ ರಕ್ಷಣಾ ಸಚಿವ ಘಾಸನ್ ಮೌಮೂನ್ ಒಪ್ಪಿಕೊಂಡಿದ್ದಾರೆ.

ಭಾನುವಾರ ಮಾಲೆಯಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಘಾಸನ್ ಮೌಮೂನ್, “ವಿಮಾನವನ್ನು ಹಾರಿಸಲು ನಮ್ಮ ಸಿಬ್ಬಂದಿ ಪರವಾನಗಿ ಪಡೆದಿಲ್ಲ” ಎಂದು ಹೇಳಿದರು.

ಹಿಂದಿನ ಆಡಳಿತದಲ್ಲಿ ವಿಮಾನವನ್ನು ಹಾರಿಸಲು ತರಬೇತಿಯನ್ನು ಪ್ರಾರಂಭಿಸಿದ ಮಾಲ್ಡೀವಿಯನ್ ಸೈನಿಕರು, ಅನಿರ್ದಿಷ್ಟ ಕಾರಣಗಳಿಂದ ತಮ್ಮ ತರಬೇತಿಯನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲ ಎಂದು ಮೌಮೂನ್ ವಿವರಿಸಿದರು.

ಉಭಯ ರಾಷ್ಟ್ರಗಳ ನಡುವಿನ ಒಪ್ಪಂದದ ಭಾಗವಾಗಿ ಫೆಬ್ರವರಿಯಲ್ಲಿ ನಿಗದಿಪಡಿಸಲಾದ ಗಡುವನ್ನು ಅನುಸರಿಸಿ ಭಾರತೀಯ ಸಿಬ್ಬಂದಿ ಶುಕ್ರವಾರ ಮಾಲ್ಡೀವ್ಸ್‌ನಿಂದ ಹೊರಟರು. ಈ ಒಪ್ಪಂದವು ನವೆಂಬರ್ 2023 ರಲ್ಲಿ ಅಧಿಕಾರ ವಹಿಸಿಕೊಂಡ ಸ್ವಲ್ಪ ಸಮಯದ ನಂತರ ಚೀನಾ ಪರ ನಿಲುವಿಗೆ ಹೆಸರುವಾಸಿಯಾದ ಮಾಲ್ಡೀವಿಯನ್ ಅಧ್ಯಕ್ಷ ಮೊಹಮದ್ ಮುಯಿಜ್ಜು ಮಾಡಿದ ಬೇಡಿಕೆಯನ್ನು ಅನುಸರಿಸಿತು.

ಫೆಬ್ರವರಿ ತಿಂಗಳು ನವದೆಹಲಿಯಲ್ಲಿ ನಡೆದ ಉಭಯ ದೇಶಗಳ ನಡುವಿನ ಒಪ್ಪಂದದ ನಂತರ ಮೇ 10 ರ ಗಡುವಿನ ಪ್ರಕಾರ ಹೆಲಿಕಾಪ್ಟರ್‌ಗಳು ಮತ್ತು ಡಾರ್ನಿಯರ್ ವಿಮಾನಗಳಿಗಾಗಿ ಎರಡು ಪ್ಲಾಟ್‌ಫಾರ್ಮ್‌ಗಳನ್ನು ನಿರ್ವಹಿಸಲು ಮಾಲ್ಡೀವ್ಸ್‌ನಲ್ಲಿ ನೆಲೆಸಿರುವ ಭಾರತೀಯ ಮಿಲಿಟರಿ ಸಿಬ್ಬಂದಿ ಮಾಲೆ ತೊರೆದು ಶುಕ್ರವಾರ ಭಾರತಕ್ಕೆ ಮರಳಿದ್ದರು.

ಭಾರತೀಯ ಸೇನಾ ಸಿಬ್ಬಂದಿಯನ್ನು ಬದಲಿಸುವ ಮಾಲ್ಡೀವ್ಸ್‌ ಕ್ರಮವು ತನ್ನ ದಕ್ಷಿಣದ ಆಯಕಟ್ಟಿನ ಸ್ಥಳದಲ್ಲಿ ಚೀನಾದ ಪ್ರಭಾವವನ್ನು ಎದುರಿಸಲು ಭಾರತದ ಪ್ರಯತ್ನಗಳಿಗೆ ಹಿನ್ನಡೆಯಾಗಿದೆ.

ಮುಯಿಜ್ಜು ಅಧಿಕಾರಕ್ಕೆ ಬಂದ ನಂತರ, ಅಲ್ಲಿನ ಸರ್ಕಾರವು ಆರ್ಥಿಕ ಸಂಬಂಧಗಳನ್ನು ಹೆಚ್ಚಿಸಲು ಚೀನಾದೊಂದಿಗೆ ಹಲವಾರು ಒಪ್ಪಂದಗಳನ್ನು ಮಾಡಿಕೊಂಡಿದೆ ಮತ್ತು ಹಲವಾರು ಯೋಜನೆಗಳಲ್ಲಿ ಭಾರತವನ್ನು ನಿರ್ಲಕ್ಷ್ಯ ಮಾಡುತ್ತಿದೆ.

ಮಾಲ್ಡೀವ್ಸ್ ಮಾರ್ಚ್‌ನಲ್ಲಿ ಚೀನಾದೊಂದಿಗೆ ಮಿಲಿಟರಿ ನೆರವು ಒಪ್ಪಂದಕ್ಕೆ ಸಹಿ ಹಾಕಿತು. ಇದು ಭಾರತದ ನೆರೆಯಲ್ಲಿರುವ ತನ್ನ ಬಂದರಿನಲ್ಲಿ ಚೀನೀ ಸಂಶೋಧನಾ ನೌಕೆಯನ್ನು ಡಾಕ್ ಮಾಡಲು ಸಹ ಅನುಮತಿಸಿದೆ.

ಹಿಂದಿನ ಆಡಳಿತದ ಅವಧಿಯಲ್ಲಿ ಮಾಲ್ಡೀವ್ಸ್‌ನ ರಾಜಧಾನಿಯಾದ ಮಾಲೆಯೊಂದಿಗೆ ನವದೆಹಲಿಯ ಸಂಬಂಧಗಳು ಗಮನಾರ್ಹವಾಗಿ ಬೆಳೆದರೆ, ಚೀನಾ ಪರವಾದ ಮುಯಿಜ್ಜು “ಇಂಡಿಯಾ ಔಟ್” ವೇದಿಕೆಯಲ್ಲಿ ಪ್ರಚಾರ ಮಾಡಿದರು. ದೇಶದಲ್ಲಿ ಭಾರತೀಯ ಮಿಲಿಟರಿ ಉಪಸ್ಥಿತಿಯು ಮಾಲ್ಡೀವ್ಸ್ ಸಾರ್ವಭೌಮತ್ವವನ್ನು ರಾಜಿ ಮಾಡಿದೆ ಎಂದು ಹೇಳಿದರು.

ಇದನ್ನೂ ಓದಿ; ಮತದಾನಕ್ಕೆ ಹಣ ನೀಡುವಂತೆ ಆಗ್ರಹಿಸಿ ಸ್ಥಳೀಯರಿಂದ ಪ್ರತಿಭಟನೆ: ವಿಚಿತ್ರ ಘಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...