Homeಮುಖಪುಟರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಜನದ್ರೋಹಿಯಾದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ದೀರ್ಘವಾದ ಹೋರಾಟಕ್ಕೆ ತಾತ್ಕಾಲಿಕ ಗೆಲವು ಲಭಿಸಿದೆ. ಇದು ತಾತ್ಕಾಲಿಕ ಗೆಲುವು ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಇವರು ಆಡಳಿತ ನಡೆಸುವುದು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗೆ ಮಾತ್ರ ಆಗಿರುವುದರಿಂದ ಅವರ ಹಿತಾಸಕ್ತಿಯನ್ನು ರಕ್ಷಿಸುವುದು ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತ ದ್ರೋಹಿಯಾದ ಕಾನೂನುಗಳನ್ನು ವಾಪಸ್ಸು ಪಡೆದರೆ ಅಂಬಾನಿ, ಅದಾನಿ, ಧಮಾನಿ ಮುಂತಾದವರು ತುಸು ಬೇಜಾರು ಮಾಡಿಕೊಳ್ಳುತ್ತಾರೆ. ಹಾಗಾಗಿ ತಾತ್ಕಾಲಿಕವಾಗಿ ಹಿಂತೆಗೆದಂತೆ ಮಾಡಿ ಮತ್ತೆ ಇದಕ್ಕಿಂತಲೂ ಘೋರವಾದ ಕಾಯ್ದೆಗಳನ್ನು ದೇಶದ ಮೇಲೆ ಹೇರುತ್ತಾರೆ. ಈ ಕುರಿತು ದೇಶವಾಸಿಗಳು, ಅದರಲ್ಲೂ ರೈತರು ವಿಶೇಷ ಎಚ್ಚರಿಕೆ ವಹಿಸಬೇಕು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಮೊನೊಪಲಿ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ“ ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು” ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ. ಇದರ ಮೂಲಕ ಸರ್ವಾಧಿಕಾರದ ಹಿಟ್ಲರ್ ಗಿರಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ್ದಾರೆ. ಈ ದೃಷ್ಟಿಯಿಂದಲೂ ರೈತರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು “ ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ”. ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ. ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು ಅವರು ಒತ್ತಾಯಿಸಿದ್ದಾರೆ.

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ 10 ರೂಪಾಯಿಗೆ ಕೊಂಡು ಗ್ರಾಹಕರಿಗೆ 100 ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ರೈತರು ಬಳಸುವ ಬೀಜ, ಗೊಬ್ಬರ, ಔಷಧ ಮುಂತಾದವುಗಳ ವ್ಯಸ್ಥೆಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಕಪಿ ಮುಷ್ಟಿಯಿಂದ ಬಿಡಿಸಿ ಆರೋಗ್ಯಕರವಾದ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಿಸಿ ಕೇಂದ್ರ ಸರ್ಕಾರ ಅಡಿಷನಲ್ ಎಕ್ಸೈಜ್ ಡ್ಯೂಟಿಯ ಮೂಲಕ ಲೂಟಿ ಮಾಡುತ್ತಿರುವುದನ್ನು ಈ ಕೂಡಲೆ ನಿಲ್ಲಿಸಬೇಕು. ತೆರಿಗೆ ರಹಿತವಾಗಿ ಸರಬರಾಜು ಮಾಡಬೇಕು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಖಾಸಗೀಕರಿಸಲು ಹೊರಟಿರುವ ವಿದ್ಯುತ್, ಇಂಧನ, ಕಲ್ಲಿದ್ದಲು ಮುಂತಾದ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ರಂಗವನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು.

ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಕೂಡಲೆ ಆದೇಶಗಳನ್ನು ಹೊರಡಿಸಿ ವಾಪಸ್ಸು ಪಡೆಯಬೇಕು. ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೆ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೆ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು. ರೈತರನ್ನು, ಪ್ರತಿಭಟನಾಕಾರರನ್ನು, ವಿರೋಧ ಪಕ್ಷಗಳನ್ನು ಆಂದೋಲನ ಜೀವಿಗಳೆಂದು, ದೇಶದ್ರೋಹಿಗಳೆಂದು ಅಣಕಿಸಿದ ಬಿಜೆಪಿ ಸರ್ಕಾರಗಳು, ಬಿಜೆಪಿಯ ಮುಖಂಡರುಗಳು ದೇಶದ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತದ್ರೋಹಿಯಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆಗಳನ್ನು ಕೂಡಲೆ ಹಿಂಪಡೆಯಬೇಕೆದು ಆಗ್ರಹಿಸುತ್ತೇನೆ ಎಂದು  ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...

ಪ.ಬಂಗಾಳವನ್ನು ಗುರಿಯಾಗಿಸಲಾಗುತ್ತಿದೆ, ಅಸ್ಸಾಂನಲ್ಲಿ ಎಸ್‌ಐಆರ್‌ ಏಕಿಲ್ಲ? : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪಶ್ಚಿಮ ಬಂಗಾಳವನ್ನು ಗುರಿಯಾಗಿಸಲಾಗಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ (ಫೆ.4) ಆರೋಪಿಸಿದ್ದು, ಬಿಜೆಪಿ ಆಡಳಿತವಿರುವ ಅಸ್ಸಾಂನಲ್ಲಿ ಏಕೆ ಎಸ್‌ಐಆರ್ ನಡೆಸುತ್ತಿಲ್ಲ ಎಂಬುವುದಾಗಿ...

ತಮಿಳುನಾಡು| ದಲಿತ ಯುವಕನನ್ನು ಪ್ರೀತಿಸುತ್ತಿದ್ದ ಯುವತಿ ಅನುಮಾನಾಸ್ಪದ ಸಾವು; ಮರ್ಯಾದೆಗೇಡು ಹತ್ಯೆ ಶಂಕೆ

ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯಲ್ಲಿ ಕಾಲೇಜು ವಿದ್ಯಾರ್ಥಿನಿ ಸಾವು ಮರ್ಯಾದಾ ಹತ್ಯೆಯ ಗಂಭೀರ ಆರೋಪಗಳನ್ನು ಹುಟ್ಟುಹಾಕಿದೆ. ಸಾವಿನ ಆರಂಭಿಕ ತನಿಖೆಯು ಆತ್ಮಹತ್ಯೆಯತ್ತ ಬೊಟ್ಟು ಮಾಡುತ್ತಿದ್ದು, ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ಸಾವಿಗೆ ಅಂತಿಮ ಕಾರಣ...

‘ರಾಜ್ಯವನ್ನು ನಿರ್ಲಕ್ಷಿಸಲಾಗಿದೆ’ : ಕೇಂದ್ರ ಬಜೆಟ್‌ ವಿರುದ್ಧ ನಿರ್ಣಯ ಅಂಗೀಕರಿಸಿದ ಕೇರಳ ವಿಧಾನಸಭೆ

ಕೇಂದ್ರ ಸರ್ಕಾರದ 2026-27ನೇ ಸಾಲಿನ ಬಜೆಟ್ ವಿರುದ್ದ ಕೇರಳ ವಿಧಾನಸಭೆ ನಿರ್ಣಯ ಅಂಗೀಕರಿಸಿದ್ದು, ರಾಜ್ಯವನ್ನು 'ನಿರ್ಲಕ್ಷಿಸಲಾಗಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದೆ. ಬಜೆಟ್‌ನಲ್ಲಿ ಕೇರಳದ ದೀರ್ಘಕಾಲದ ಬೇಡಿಕೆಗಳನ್ನು ಪರಿಗಣಿಸದೆ ಇರುವುದು ಮತ್ತು ರಾಜ್ಯಕ್ಕೆ ನೀಡಬೇಕಾದ ನ್ಯಾಯಯುತ...

ದೇವಾಲಯ-ಶಾಲೆಗಳ ಬಳಿ ಇರುವ ಮಾಂಸ ಮಳಿಗೆಗಳ ಕುರಿತು ಏಕರೂಪ ನೀತಿ ರೂಪಿಸಿ: ತೆಲಂಗಾಣ ಹೈಕೋರ್ಟ್

ಸಾರ್ವಜನಿಕ ಭಾವನೆ, ನೈರ್ಮಲ್ಯ, ಸಂಚಾರ ನಿರ್ವಹಣೆ, ಕಾನೂನು ಮತ್ತು ಸುವ್ಯವಸ್ಥೆಗೆ ಸಂಬಂಧಿಸಿದ ಕಳವಳಗಳನ್ನು ಉಲ್ಲೇಖಿಸಿ, ದೇವಾಲಯಗಳು, ಶಿಕ್ಷಣ ಸಂಸ್ಥೆಗಳು ಮತ್ತು ಆಸ್ಪತ್ರೆಗಳಿಂದ 100 ಮೀಟರ್ ಒಳಗೆ ಮಾಂಸ ಮತ್ತು ಮಾಂಸಾಹಾರಿ ಆಹಾರ ಮಾರಾಟವನ್ನು...

ಎಸ್‌ಐಆರ್ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌ನಲ್ಲಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ದ ಸಲ್ಲಿಸಿರುವ ಅರ್ಜಿಯ ವಿಚಾರಣೆ ಬುಧವಾರ (ಫೆ.4) ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ವತಃ ವಾದ ಮಂಡನೆ ಮಾಡುತ್ತಿದ್ದಾರೆ....

ಆರ್‌ಕಾಮ್ ಬ್ಯಾಂಕ್ ವಂಚನೆ ತನಿಖೆ: ಇಡಿ, ಸಿಬಿಐಗೆ ಸುಪ್ರೀಂ ಕೋರ್ಟ್ ಛೀಮಾರಿ; ದೇಶ ಬಿಟ್ಟು ಹೋಗದಂತೆ ಅನಿಲ್ ಅಂಬಾನಿಗೆ ತಾಕೀತು 

ರಿಲಯನ್ಸ್ ಕಮ್ಯುನಿಕೇಷನ್ಸ್, ಅದರ ಸಮೂಹ ಕಂಪನಿಗಳು ಮತ್ತು ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಒಳಗೊಂಡ ಬೃಹತ್ ಪ್ರಮಾಣದ ಬ್ಯಾಂಕ್ ವಂಚನೆ ಆರೋಪಗಳ ತನಿಖೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಜಾರಿ...

ಅಸ್ಸಾಂ ಮುಖ್ಯಮಂತ್ರಿಯಿಂದ ‘100 ಪ್ರಕರಣಗಳ ಬೆದರಿಕೆ’: ‘ಇದು ಮಾನವ ಹಕ್ಕುಗಳ ರಕ್ಷಕರನ್ನು ಮೌನಗೊಳಿಸುವ ಪ್ರಯತ್ನ’ ಎಂದ ಹರ್ಷ್ ಮಂದರ್ 

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಮಾನವ ಹಕ್ಕುಗಳ ಹೋರಾಟಗಾರ ಹರ್ಷ್ ಮಂದರ್ ಅವರ ವಿರುದ್ಧ "ಕನಿಷ್ಠ 100 ಪ್ರಕರಣಗಳು" ದಾಖಲಿಸುವುದಾಗಿ ಬೆದರಿಕೆ ಹಾಕಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಮಾನವ ಹಕ್ಕುಗಳ...

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...