Homeಮುಖಪುಟರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಜನದ್ರೋಹಿಯಾದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ದೀರ್ಘವಾದ ಹೋರಾಟಕ್ಕೆ ತಾತ್ಕಾಲಿಕ ಗೆಲವು ಲಭಿಸಿದೆ. ಇದು ತಾತ್ಕಾಲಿಕ ಗೆಲುವು ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಇವರು ಆಡಳಿತ ನಡೆಸುವುದು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗೆ ಮಾತ್ರ ಆಗಿರುವುದರಿಂದ ಅವರ ಹಿತಾಸಕ್ತಿಯನ್ನು ರಕ್ಷಿಸುವುದು ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತ ದ್ರೋಹಿಯಾದ ಕಾನೂನುಗಳನ್ನು ವಾಪಸ್ಸು ಪಡೆದರೆ ಅಂಬಾನಿ, ಅದಾನಿ, ಧಮಾನಿ ಮುಂತಾದವರು ತುಸು ಬೇಜಾರು ಮಾಡಿಕೊಳ್ಳುತ್ತಾರೆ. ಹಾಗಾಗಿ ತಾತ್ಕಾಲಿಕವಾಗಿ ಹಿಂತೆಗೆದಂತೆ ಮಾಡಿ ಮತ್ತೆ ಇದಕ್ಕಿಂತಲೂ ಘೋರವಾದ ಕಾಯ್ದೆಗಳನ್ನು ದೇಶದ ಮೇಲೆ ಹೇರುತ್ತಾರೆ. ಈ ಕುರಿತು ದೇಶವಾಸಿಗಳು, ಅದರಲ್ಲೂ ರೈತರು ವಿಶೇಷ ಎಚ್ಚರಿಕೆ ವಹಿಸಬೇಕು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಮೊನೊಪಲಿ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ“ ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು” ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ. ಇದರ ಮೂಲಕ ಸರ್ವಾಧಿಕಾರದ ಹಿಟ್ಲರ್ ಗಿರಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ್ದಾರೆ. ಈ ದೃಷ್ಟಿಯಿಂದಲೂ ರೈತರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು “ ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ”. ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ. ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು ಅವರು ಒತ್ತಾಯಿಸಿದ್ದಾರೆ.

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ 10 ರೂಪಾಯಿಗೆ ಕೊಂಡು ಗ್ರಾಹಕರಿಗೆ 100 ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ರೈತರು ಬಳಸುವ ಬೀಜ, ಗೊಬ್ಬರ, ಔಷಧ ಮುಂತಾದವುಗಳ ವ್ಯಸ್ಥೆಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಕಪಿ ಮುಷ್ಟಿಯಿಂದ ಬಿಡಿಸಿ ಆರೋಗ್ಯಕರವಾದ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಿಸಿ ಕೇಂದ್ರ ಸರ್ಕಾರ ಅಡಿಷನಲ್ ಎಕ್ಸೈಜ್ ಡ್ಯೂಟಿಯ ಮೂಲಕ ಲೂಟಿ ಮಾಡುತ್ತಿರುವುದನ್ನು ಈ ಕೂಡಲೆ ನಿಲ್ಲಿಸಬೇಕು. ತೆರಿಗೆ ರಹಿತವಾಗಿ ಸರಬರಾಜು ಮಾಡಬೇಕು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಖಾಸಗೀಕರಿಸಲು ಹೊರಟಿರುವ ವಿದ್ಯುತ್, ಇಂಧನ, ಕಲ್ಲಿದ್ದಲು ಮುಂತಾದ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ರಂಗವನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು.

ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಕೂಡಲೆ ಆದೇಶಗಳನ್ನು ಹೊರಡಿಸಿ ವಾಪಸ್ಸು ಪಡೆಯಬೇಕು. ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೆ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೆ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು. ರೈತರನ್ನು, ಪ್ರತಿಭಟನಾಕಾರರನ್ನು, ವಿರೋಧ ಪಕ್ಷಗಳನ್ನು ಆಂದೋಲನ ಜೀವಿಗಳೆಂದು, ದೇಶದ್ರೋಹಿಗಳೆಂದು ಅಣಕಿಸಿದ ಬಿಜೆಪಿ ಸರ್ಕಾರಗಳು, ಬಿಜೆಪಿಯ ಮುಖಂಡರುಗಳು ದೇಶದ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತದ್ರೋಹಿಯಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆಗಳನ್ನು ಕೂಡಲೆ ಹಿಂಪಡೆಯಬೇಕೆದು ಆಗ್ರಹಿಸುತ್ತೇನೆ ಎಂದು  ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...