Homeಮುಖಪುಟರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ: ಸಿದ್ದರಾಮಯ್ಯ

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ.

- Advertisement -
- Advertisement -

ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಜನದ್ರೋಹಿಯಾದ ಕೃಷಿ ಕಾಯ್ದೆಗಳನ್ನು ವಾಪಸ್ಸು ಪಡೆಯುವುದಾಗಿ ಹೇಳಿದ್ದಾರೆ. ಹಾಗಾಗಿ ರೈತರ ಹೋರಾಟವನ್ನು ಇಡೀ ದೇಶ ಇಂದು ಹೆಮ್ಮೆಯಿಂದ ಸ್ಮರಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹೇಳಿದ್ದಾರೆ.

ರೈತರ ದೀರ್ಘವಾದ ಹೋರಾಟಕ್ಕೆ ತಾತ್ಕಾಲಿಕ ಗೆಲವು ಲಭಿಸಿದೆ. ಇದು ತಾತ್ಕಾಲಿಕ ಗೆಲುವು ಯಾಕೆಂದರೆ ಕೇಂದ್ರ ಮತ್ತು ಹಲವು ರಾಜ್ಯಗಳಲ್ಲಿ ಚುನಾವಣೆಗಳ ಅಗ್ನಿ ಪರೀಕ್ಷೆ ಎದುರಾಗುತ್ತಿದೆ. ಹಿಟ್ಲರ್ ಶಾಹಿ ಆಡಳಿತ ಮಾಡಿದರೆ ಚುನಾವಣೆಗಳಲ್ಲಿ ನಾವು ಚಿಂದಿಯಾಗಿ ಹೋಗುತ್ತೇವೆ ಎಂದು ಮೋದಿ ಮತ್ತು ಅಮಿತ್ ಶಾ ಅವರಿಗೆ ಬಹುಶಃ ಇಂಟೆಲಿಜೆನ್ಸ್ ಮಾಹಿತಿ ದೊರೆತಿದೆ. ಹಾಗಾಗಿ ಚುನಾವಣೆಗಳು ಮುಗಿಯಲಿ ಆಮೇಲೆ ನೋಡೋಣ ಎಂದು ರೈತ ದ್ರೋಹಿ ಕಾಯ್ದೆಗಳನ್ನು ತಾತ್ಕಾಲಿಕವಾಗಿ ವಾಪಸ್ಸು ಪಡೆದಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಿದ್ದರಾಮಯ್ಯನವರು, “ಇವರು ಆಡಳಿತ ನಡೆಸುವುದು ಅಂಬಾನಿ, ಅದಾನಿ ಮುಂತಾದವರ ಹಿತಾಸಕ್ತಿಗೆ ಮಾತ್ರ ಆಗಿರುವುದರಿಂದ ಅವರ ಹಿತಾಸಕ್ತಿಯನ್ನು ರಕ್ಷಿಸುವುದು ಮೋದಿ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ರೈತ ದ್ರೋಹಿಯಾದ ಕಾನೂನುಗಳನ್ನು ವಾಪಸ್ಸು ಪಡೆದರೆ ಅಂಬಾನಿ, ಅದಾನಿ, ಧಮಾನಿ ಮುಂತಾದವರು ತುಸು ಬೇಜಾರು ಮಾಡಿಕೊಳ್ಳುತ್ತಾರೆ. ಹಾಗಾಗಿ ತಾತ್ಕಾಲಿಕವಾಗಿ ಹಿಂತೆಗೆದಂತೆ ಮಾಡಿ ಮತ್ತೆ ಇದಕ್ಕಿಂತಲೂ ಘೋರವಾದ ಕಾಯ್ದೆಗಳನ್ನು ದೇಶದ ಮೇಲೆ ಹೇರುತ್ತಾರೆ. ಈ ಕುರಿತು ದೇಶವಾಸಿಗಳು, ಅದರಲ್ಲೂ ರೈತರು ವಿಶೇಷ ಎಚ್ಚರಿಕೆ ವಹಿಸಬೇಕು” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಮ್ಮ ಹೆಮ್ಮೆಯ ರೈತರು ತಾವೂ ಗೆದ್ದು ದೇಶವನ್ನೂ ತುಸು ಮಟ್ಟಿಗೆ ಗೆಲ್ಲಿಸಿದ್ದಾರೆ. ಈ ದೇಶದ್ರೋಹಿ ಕಾನೂನುಗಳನ್ನು ದೇಶದ ಜನರ ಮೇಲೆ ಹೇರಿದಾಗಿನಿಂದಲೂ ಈ ಕಾನೂನುಗಳು ರೈತರ ವಿರೋಧಿಗಳು ಮಾತ್ರವಲ್ಲ, ಇವು ನಗರ, ಪಟ್ಟಣಗಳ ಬಡವರು, ಮಧ್ಯಮ ವರ್ಗದವರನ್ನು ನಾಶ ಮಾಡುವ ಕಾನೂನುಗಳು. ದೇಶದ ಕೃಷಿ ಅಂಬಾನಿ, ಅದಾನಿಗಳ ಕೈಗೆ ಹೋದರೆ, ಅವರು ಮೊನೊಪಲಿ ಸಾಧಿಸಿ ದೇಶದ ಜನರನ್ನು, ಅವರ ಆರ್ಥಿಕತೆಯನ್ನು ನಾಶ ಮಾಡಿ ಬಿಡುತ್ತಾರೆಂದು ನಾನು ಹೇಳುತ್ತಾ ಬಂದಿದ್ದೆ. ಇದರ ಜೊತೆಗೆ ರೈತ ಹೋರಾಟವನ್ನು ಬೆಂಬಲಿಸಿ ಎಂದು ಮನವಿ ಮಾಡಿದ್ದೆ. ಅದಕ್ಕಾಗಿ ಹಲವು ಮನವಿ ಪತ್ರಗಳನ್ನು ಬರೆದು ರಾಜ್ಯದ ಜನರ ಮುಂದೆ ಇಟ್ಟಿದ್ದೆ. ಹಾಗೂ“ ಬಿಜೆಪಿ ಸರ್ಕಾರಗಳ ಐದು ಕಾಯ್ದೆಗಳು; ಅಸಂಖ್ಯಾತ ಸುಳ್ಳುಗಳು” ಎಂಬ ಕಿರು ಪುಸ್ತಕ ಬರೆದು ಜನರ ಮುಂದೆ ಇಟ್ಟಿದ್ದೆ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯ ಹೋರಾಟದ ನಂತರ ಅಹಿಂಸೆಯ ಮಾರ್ಗದಲ್ಲಿ ನಡೆದ ಬೃಹತ್ ಹೋರಾಟವನ್ನು ನಮ್ಮ ರೈತರು ಚಳಿ, ಮಳೆ, ಸುಡುವ ಬಿಸಿಲು, ಕೊಲೆಗಡುಕ ಕೊರೋನ ಎಲ್ಲವನ್ನು ನಿಗ್ರಹಿಸಿ ದೇಶದ ಜನರಿಗೆ ಹೋರಾಟ ಮತ್ತು ಗೆಲುವಿನ ಮಹತ್ವವೇನು ಎಂದು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಈ ಹೋರಾಟದಲ್ಲಿ ಅಪಾರ ಸಾವು ನೋವುಗಳು ಸಂಭವಿಸಿವೆ. 700 ಕ್ಕೂ ಹೆಚ್ಚು ರೈತರು ಹುತಾತ್ಮರಾಗಿದ್ದಾರೆ. ಶಾಂತಿಯುತವಾಗಿ ಹೋರಾಟ ಮಾಡುತ್ತಿದ್ದ ರೈತರ ಮೇಲೆ ಗುಂಡು ಹಾರಿಸಿ, ವಾಹನಗಳನ್ನು ನುಗ್ಗಿಸಿ ಕೊಲ್ಲಲಾಯಿತು. ಪೋಲೀಸ್ ಮುಂತಾದ ಶಕ್ತಿಗಳನ್ನು ಬಳಸಿ ದಮನಿಸಲು ಪ್ರಯತ್ನಿಸಲಾಯಿತು. ಆದರೂ ಕೂಡ ರೈತರು ಉಕ್ಕಿನಂತೆ ನಿಂತು ಸರ್ವಾಧಿಕಾರಿ ಪ್ರಭುತ್ವವನ್ನು ಸೋಲಿಸಿದ್ದಾರೆ ಎಂದು ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ನಮ್ಮ ರೈತರು ತಾವೂ ಗೆದ್ದು ಬಾಬಾ ಸಾಹೇಬರ ಸಂವಿಧಾನವನ್ನು ಮತ್ತು ಮಹಾತ್ಮ ಗಾಂಧಿಯವರ ಅಹಿಂಸಾತ್ಮಕ ಹೋರಾಟದ ಮಾದರಿಯನ್ನೂ ಗೆಲ್ಲಿಸಿದ್ದಾರೆ ಮತ್ತು ಜೀವಂತಗೊಳಿಸಿದ್ದಾರೆ. ಇದರ ಮೂಲಕ ಸರ್ವಾಧಿಕಾರದ ಹಿಟ್ಲರ್ ಗಿರಿಯನ್ನು ಸೋಲಿಸಿ ಪ್ರಜಾಪ್ರಭುತ್ವವನ್ನು ಗೆಲ್ಲಿಸಿದ್ದಾರೆ. ಈ ದೃಷ್ಟಿಯಿಂದಲೂ ರೈತರು ನಡೆಸಿದ ಹೋರಾಟ ಅವಿಸ್ಮರಣೀಯವಾಗಿದೆ ಎಂದು ಹೇಳಿದ್ದಾರೆ.

ಇಷ್ಟೆಲ್ಲ ಆದರೂ ಹೋರಾಟವಿನ್ನೂ ಮುಗಿದಿಲ್ಲ ಎಂದು ಜನರಿಗೆ ಗೊತ್ತಿದೆ. ಯಾಕೆಂದರೆ ಪ್ರಧಾನಿ ಮೋದಿಯವರು “ ಕಾಯ್ದೆಗಳು ಸರಿಯಾಗಿದ್ದವು, ಆದರೆ ಅವುಗಳನ್ನು ಅರ್ಥಮಾಡಿಸುವಲ್ಲಿ ಸೋತೆವು ಎಂದು ಹೇಳಿದ್ದಾರೆ”. ತಾವು ಕೆಟ್ಟ ಮತ್ತು ಜನದ್ರೋಹಿಯಾದ ಕಾಯ್ದೆಗಳನ್ನು ತಂದಿದ್ದೆವು ಎಂದು ಅವರಿಗೆ ಗೊತ್ತಿದ್ದರೂ ಈ ಮಾತುಗಳನ್ನು ಹೇಳಿದ್ದಾರೆ. ಹಾಗಾಗಿ ಕಾಯ್ದೆಗಳ ಹಿಂತೆಗೆತವೆಂಬುದು ತಾತ್ಕಾಲಿಕ ಎನ್ನಿಸುತ್ತಿದೆ. ಈಗ ನಾವು ಒತ್ತಾಯಿಸಬೇಕಿರುವುದು ಕೂಡಲೆ ಸ್ವಾಮಿನಾಥನ್ ಅವರ ವರದಿಯನ್ನು ಅಂಗೀಕರಿಸಿ ವೈಜ್ಞಾನಿಕ ಬೆಲೆಗಳನ್ನು ಜಾರಿಗೊಳಿಸಬೇಕು. ನಾನು ಹಿಂದಿನಿಂದಲೂ ಒತ್ತಾಯಿಸುತ್ತಾ ಬಂದಿರುವ ವಿಚಾರವನ್ನು ಈಗಲೂ ಒತ್ತಾಯಿಸುತ್ತೇನೆ. ರೈತರು ಬೆಳೆವ ಪ್ರತಿ ಉತ್ಪನ್ನಕ್ಕೂ ವೈಜ್ಞಾನಿಕ ಬೆಲೆ ನಿಗಧಿಗೊಳಿಸಿ ಆ ಬೆಲೆಗಳನ್ನು ಕಾನೂನುಬದ್ಧಗೊಳಿಸಬೇಕು. ಸರ್ಕಾರ ನಿಗಧಿಗೊಳಿಸಿದ ಬೆಲೆಗಳಿಗಿಂತ ಕಡಿಮೆ ದರಕ್ಕೆ ಕೊಳ್ಳುವುದನ್ನು ನಿರ್ಬಂದಿಸಬೇಕು ಅವರು ಒತ್ತಾಯಿಸಿದ್ದಾರೆ.

ವೈಜ್ಞಾನಿಕ ದರವು ಕೊಳ್ಳುವ ಗ್ರಾಹಕರಿಗೂ ಅನ್ವಯಿಸಬೇಕು. ಅದಾನಿ, ಅಂಬಾನಿ, ದಮಾನಿ ಮುಂತಾದ ಬೃಹತ್ ಕಾರ್ಪೊರೇಟ್ ಮಧ್ಯವರ್ತಿಗಳನ್ನು ಮುಲಾಜಿಲ್ಲದೆ ನಿರ್ಬಂಧಿಸಬೇಕು. ಇವರೆಲ್ಲ ರೈತನಿಂದ 10 ರೂಪಾಯಿಗೆ ಕೊಂಡು ಗ್ರಾಹಕರಿಗೆ 100 ರೂಪಾಯಿಗೆ ಮಾರುವ ಜನ. ಇಂಥ ದರ ಪದ್ಧತಿಯನ್ನು ಕಾನೂನಾತ್ಮಕವಾಗಿ ನಿಷೇಧಿಸಬೇಕು. ರೈತರು ಮತ್ತು ಗ್ರಾಹಕರನ್ನು ಒಂದೆ ವೇದಿಕೆಗೆ ತರುವ ವ್ಯವಸ್ಥೆಗಳನ್ನು ರೂಪಿಸಬೇಕು. ಹೋಬಳಿ, ದೊಡ್ಡ ಗ್ರಾಮ ಪಂಚಾಯತ್ ಕೇಂದ್ರಗಳಲ್ಲೂ ಎಪಿಎಂಸಿ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ರೈತರು ಬಳಸುವ ಬೀಜ, ಗೊಬ್ಬರ, ಔಷಧ ಮುಂತಾದವುಗಳ ವ್ಯಸ್ಥೆಯನ್ನು ಬಹುರಾಷ್ಟ್ರೀಯ ಕಂಪೆನಿಗಳ ಕಪಿ ಮುಷ್ಟಿಯಿಂದ ಬಿಡಿಸಿ ಆರೋಗ್ಯಕರವಾದ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.

ಕೂಡಲೆ ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ನಿಯಂತ್ರಿಸಿ ಕೇಂದ್ರ ಸರ್ಕಾರ ಅಡಿಷನಲ್ ಎಕ್ಸೈಜ್ ಡ್ಯೂಟಿಯ ಮೂಲಕ ಲೂಟಿ ಮಾಡುತ್ತಿರುವುದನ್ನು ಈ ಕೂಡಲೆ ನಿಲ್ಲಿಸಬೇಕು. ತೆರಿಗೆ ರಹಿತವಾಗಿ ಸರಬರಾಜು ಮಾಡಬೇಕು. ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಖಾಸಗೀಕರಿಸಲು ಹೊರಟಿರುವ ವಿದ್ಯುತ್, ಇಂಧನ, ಕಲ್ಲಿದ್ದಲು ಮುಂತಾದ ರಾಷ್ಟ್ರದ ಹಿತಾಸಕ್ತಿಯನ್ನು ಕಾಪಾಡುವ ಯಾವುದೇ ರಂಗವನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸಬೇಕು.

ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳದೆ, ಕೂಡಲೆ ಆದೇಶಗಳನ್ನು ಹೊರಡಿಸಿ ವಾಪಸ್ಸು ಪಡೆಯಬೇಕು. ಹುತಾತ್ಮ ರೈತರ ಕುಟುಂಬಗಳಿಗೆ ದೇಶ ಕಾಯುವ ಯೋಧರು ಹುತಾತ್ಮರಾದಾಗ ನೀಡುವ ಎಲ್ಲ ಸವಲತ್ತುಗಳನ್ನು ನೀಡಬೇಕು. ಮುಖ್ಯವಾಗಿ ಯೋಧರಿಗೆ ನೀಡಿದಷ್ಟೆ ಪರಿಹಾರ ನೀಡಬೇಕು. ಹುತಾತ್ಮರ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡಬೇಕು. ಅವರ ಮಕ್ಕಳ ಶಿಕ್ಷಣವನ್ನು ಸರ್ಕಾರವೆ ನೋಡಿಕೊಳ್ಳಬೇಕು. ವೃದ್ಧ ತಂದೆ ತಾಯಿಗಳಿದ್ದರೆ ಅವರನ್ನು ಸರ್ಕಾರವೆ ಪೋಷಿಸಬೇಕು. ರೈತರನ್ನು, ಪ್ರತಿಭಟನಾಕಾರರನ್ನು, ವಿರೋಧ ಪಕ್ಷಗಳನ್ನು ಆಂದೋಲನ ಜೀವಿಗಳೆಂದು, ದೇಶದ್ರೋಹಿಗಳೆಂದು ಅಣಕಿಸಿದ ಬಿಜೆಪಿ ಸರ್ಕಾರಗಳು, ಬಿಜೆಪಿಯ ಮುಖಂಡರುಗಳು ದೇಶದ ಮುಂದೆ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ.

ಕರ್ನಾಟಕ ರಾಜ್ಯದ ಬಿಜೆಪಿ ಸರ್ಕಾರವು ಜಾರಿಗೆ ತಂದಿರುವ ರೈತದ್ರೋಹಿಯಾದ ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿಗಳನ್ನು ರದ್ದು ಮಾಡಬೇಕು. ಜಾನುವಾರು ಹತ್ಯಾ ಪ್ರತಿಬಂಧಕ ಕಾಯ್ದೆಗಳನ್ನು ಕೂಡಲೆ ಹಿಂಪಡೆಯಬೇಕೆದು ಆಗ್ರಹಿಸುತ್ತೇನೆ ಎಂದು  ಸಿದ್ದರಾಮಯ್ಯ ತಿಳಿಸಿದ್ದಾರೆ.


ಇದನ್ನೂ ಓದಿ: ಬರೆದಿಟ್ಟುಕೊಳ್ಳಿ, ಒತ್ತಾಯದಿಂದ ಈ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆಯುತ್ತದೆ: ರಾಹುಲ್ ಗಾಂಧಿ ವಿಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...